ನಮ್ಮರಾಜ್ಯ

ಮದ್ಯಪ್ರಿಯರಿಗೂ ಯಮನಾದ ಕೊರೊನಾ

ವೈನ್‌ ಸಿಗುತ್ತಿಲ್ಲ ಎಂದು ಆತ್ಮಹತ್ಯೆ ಮಾಡಿಕೊಂಡರೆ ವ್ಯಸನಿಗಳು?

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಮದ್ಯ ಸರಬರಾಜು ಮಾಡಿ ಎಂದು ಮದ್ಯಪ್ರಿಯರು ಸರ್ಕಾರಕ್ಕೆ ದುಂಬಾಲು ಬೀಳುತ್ತಿದ್ದು, ಇನ್ನೊಂದೆಡೆ ಆತ್ಮಹತ್ಯೆಗೂ ಶರಣಾಗಿದ್ದಾರೆ ಎಂದು ಹೇಳಲಾಗುತ್ತದೆ.

Loading poll ...
KSRTC ನೌಕರರಿಗೆ ಸರಿಸಮಾನ ವೇತನ OR ಅಗ್ರಿಮೆಂಟ್‌ ನಿಮ್ಮ ಆಯ್ಕೆ ಯಾವುದು?

ಇಡೀ ವಿಶ್ವವನ್ನೇ ಕೊರೊನಾ ಎಂಬ ಹೆಮ್ಮಾರಿ ಕಾಡುತ್ತಿದ್ದರೆ ಇತ್ತ ನಮಗೆ ವೈನ್‌ಕೊಡಿ ಎಂದು ಮದ್ಯವ್ಯಸನಿಗಳು ಕುಡಿತವನ್ನು ತಾತ್ಕಾಲಿಕವಾಗಿ ತ್ಯೆಜಿಸಲಾರದೆ. ಹುಚ್ಚರಂತೆ ನಡೆದುಕೊಳ್ಳುತ್ತಿದ್ದಾರೆ. ಇತ್ತ ಕೊರೊನಾ ಭೀತಿ ದೇಶ ಮತ್ತು ರಾಜ್ಯವನ್ನು ಕಾಡುತ್ತಿದ್ದು, ಜನರು ಮನೆಯಿಂದ ಹೊರ ಬಾರದಂತೆ ಸರ್ಕಾರ ಕರ್ಫ್ಯೂ ವಿಧಿಸಿದೆ.

ಆದರೂ ಮದ್ಯವೆಸನಿಗಳು ನಮಗೆ ಮದ್ಯಬೇಕು ಎಂದು ಪತ್ರವನ್ನು ಬರೆದಿದ್ದಾರೆ. ಇನ್ನೊಂದೆಡೆ ಕೊರೊನಾ ವೈರಸ್‌ಗೆ ತುತ್ತಾಗುತ್ತಿರುವವರ ಸಂಖ್ಯೆ ಏರುತ್ತಿರುವುದು ದೇಶವನ್ನು ಇನ್ನಿಲ್ಲದಂತೆ ಕಾಡುತ್ತಿದೆ.

ಮಂಗಳಮುಖಿಯರ ಕಣ್ಣೀರು

ಕೊರೊನಾ ಬಾಧೆಯಿಂದ ಮನೆಯಿಂದ ಹೊರಬಾರದಂತೆ ರಾಜ್ಯ ಸರ್ಕಾರ ಕೇಂದ್ರ ಸರ್ಕಾರ ನೀಡಿರುವ ಆದೇಶವನ್ನು ಪಾಲಿಸುತ್ತಿದೆ. ಅದಕ್ಕೆ ರಾಜ್ಯದ ಜನತೆಯು ಬೆಂಬಲ ನೀಡಿದ್ದಾರೆ. ಈ ನಡುವೆ ಮಂಗಳಮುಖಿಯರು ನಮಗೆ ಆಹಾರ ಸಿಗುತ್ತಿಲ್ಲ. ನಮಗೆ ಹಣಬೇಡ ಅನ್ನಹಾಕಿ ಎಂದು ಸರ್ಕಾರದ ಮೊರೆ ಹೋಗುತ್ತಿದ್ದಾರೆ. ಇನ್ನು ಭಿಕ್ಷುಕರನ್ನು ಹಲವು ಸಂಘಸಂಸ್ಥೆಗಳು ಗುರುತಿಸಿ ಆಹಾರವನ್ನು ನೀಡುತ್ತಿದ್ದು, ಅವರ ಆರೋಗ್ಯದ ದೃಷ್ಟಿಯಿಂದ ಎಲ್ಲಾ ಸೌಲಭ್ಯವನ್ನು ಒದಗಿಸುತ್ತಿವೆ.

ಸರ್ಕಾರವು ಸಂಘಸಂಸ್ಥೆಗಳ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದು, ಹಲವು ಉದ್ಯಮಿಗಳು, ಸಿನಿಮಾ ತಾರೆಯರು, ನಾಗರಿಕರು ಸರ್ಕಾರಕ್ಕೆ ದೇಣಿಗೆಯನ್ನು ನೀಡುತ್ತಿದ್ದಾರೆ. ಆದರೆ ಒಂದಿಬ್ಬರು ರಾಜಕಾರಣಿಗಳನ್ನು ಬಿಟ್ಟರೆ ಉಳಿದ ರಾಜಕಾರಣಿಗಳು ಯಾವುದೇ ಸಹಾಯ ಮಾಡಲು ಮುಂದಾಗುತ್ತಿಲ್ಲ. ಇದು ರಾಜ್ಯದ ಜನತೆಯ ದೌರ್ಭಾಗ್ಯ. ಇನ್ನು ಮೇಲಾದರು ತಮ್ಮ ಕ್ಷೇತ್ರಗಳಲ್ಲಾದರೂ ನಿರ್ಗತಿಕ ಜನರಿಗೆ ನೆರವಾಗಬೇಕಿದೆ.

 

Leave a Reply

error: Content is protected !!
LATEST
BMTC: 2020 ಜ.1ರಿಂದ 2023 ಮಾ.31ರ ನಡುವೆ ನಿವೃತ್ತರಾದ ನೌಕರರ ಉಪಧನ, ನಿವೃತ್ತಿ ಗಳಿಕೆ ರಜೆ ನಗದೀಕರಣ ಲೆಕ್ಕಾಚಾರ ಮಾಡ... 4ನಿಗಮಗಳ ಅಧಿಕಾರಿಗಳು-ನೌಕರರಿಗೂ ಸರಿಸಮಾನ ವೇತನ ಕೊಡಿ: ಸಾರಿಗೆ ಸಚಿವರು, ಅಧಿಕಾರಿಗಳಿಗೆ KSRTC ಸಿಬ್ಬಂದಿ, ಲೆಕ್ಕ ಪತ್... ಮಾಧ್ಯಮ ಮಾನ್ಯತೆ ಹೊಂದಿರುವ ಪತ್ರಕರ್ತರಿಗೆ “ಮೀಡಿಯಾ ಕಿಟ್” ವಿತರಣೆಗೆ ಅರ್ಜಿ ಆಹ್ವಾನ ಅ.28ರಂದು ಇಪಿಎಸ್ ಪಿಂಚಣಿದಾರರ ಬೃಹತ್ ಪ್ರತಿಭಟನೆ: BMTC ‍& KSRTC ಸಂಘದ ಕಾರ್ಯಾಧ್ಯಕ್ಷ ನಂಜುಂಡೇಗೌಡ BMTC ಕಂಡಕ್ಟರ್‌ಗೆ ಕಲ್ಲಿನಿಂದ ಹೊಡೆದ ಕಿರಾತಕ: ಆತಂಕದಲ್ಲೇ ಡ್ಯೂಟಿ, ಚಾಲನಾ ಸಿಬ್ಬಂದಿಗಳಿಗಿಲ್ಲ ಜೀವ ರಕ್ಷಣೆ KKRTC ಬಸ್‌ ಪಲ್ಟಿ ಮಹಿಳೆ ಸಾವು- ಒಬ್ಬರ ಸ್ಥಿತಿ ಗಂಭೀರ, 20ಕ್ಕೂ ಹೆಚ್ಚು ಮಂದಿಗೆ ಗಾಯ ವಿಜಯಪಥ ವರದಿ ಪರಿಣಾಮ-KSRTC ಚಾಲಕನಿಗೆ ಕೊಟ್ಟಿದ್ದ ಮೆಮೋ ವಾಪಸ್‌ ಪಡೆದು 20ದಿನಗಳ ರಜೆ ಮಂಜೂರು ಮಾಡಿದ ಡಿಸಿ ಸಾರಿಗೆ ನೌಕರರಿಂದ ಚುನಾಯಿತರಾಗದ ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ ಸರಿ ಸಮಾನ... KSRTC ನೌಕರರ ಸಂಬಳ ಅ.30ರಂದೇ ಬ್ಯಾಂಕ್ ಖಾತೆಗೆ ಜಮೆ: ಸಂಸ್ಥೆ ನಿರ್ದೇಶಕರು ಬೆಳಗಾವಿಯಲ್ಲಿ ವಿಧಾನಮಂಡಲದ ಜಂಟಿ ಅಧಿವೇಶನಕ್ಕೆ ಬರಾಕ್ ಓಬಾಮಾ ಆಹ್ವಾನಕ್ಕೆ ಚಿಂತನೆ : ಸಚಿವ ಎಚ್.ಕೆ. ಪಾಟೀಲ