ನಮ್ಮರಾಜ್ಯ

ಮದ್ಯಪ್ರಿಯರಿಗೂ ಯಮನಾದ ಕೊರೊನಾ

ವೈನ್‌ ಸಿಗುತ್ತಿಲ್ಲ ಎಂದು ಆತ್ಮಹತ್ಯೆ ಮಾಡಿಕೊಂಡರೆ ವ್ಯಸನಿಗಳು?

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಮದ್ಯ ಸರಬರಾಜು ಮಾಡಿ ಎಂದು ಮದ್ಯಪ್ರಿಯರು ಸರ್ಕಾರಕ್ಕೆ ದುಂಬಾಲು ಬೀಳುತ್ತಿದ್ದು, ಇನ್ನೊಂದೆಡೆ ಆತ್ಮಹತ್ಯೆಗೂ ಶರಣಾಗಿದ್ದಾರೆ ಎಂದು ಹೇಳಲಾಗುತ್ತದೆ.

ಇಡೀ ವಿಶ್ವವನ್ನೇ ಕೊರೊನಾ ಎಂಬ ಹೆಮ್ಮಾರಿ ಕಾಡುತ್ತಿದ್ದರೆ ಇತ್ತ ನಮಗೆ ವೈನ್‌ಕೊಡಿ ಎಂದು ಮದ್ಯವ್ಯಸನಿಗಳು ಕುಡಿತವನ್ನು ತಾತ್ಕಾಲಿಕವಾಗಿ ತ್ಯೆಜಿಸಲಾರದೆ. ಹುಚ್ಚರಂತೆ ನಡೆದುಕೊಳ್ಳುತ್ತಿದ್ದಾರೆ. ಇತ್ತ ಕೊರೊನಾ ಭೀತಿ ದೇಶ ಮತ್ತು ರಾಜ್ಯವನ್ನು ಕಾಡುತ್ತಿದ್ದು, ಜನರು ಮನೆಯಿಂದ ಹೊರ ಬಾರದಂತೆ ಸರ್ಕಾರ ಕರ್ಫ್ಯೂ ವಿಧಿಸಿದೆ.

ಆದರೂ ಮದ್ಯವೆಸನಿಗಳು ನಮಗೆ ಮದ್ಯಬೇಕು ಎಂದು ಪತ್ರವನ್ನು ಬರೆದಿದ್ದಾರೆ. ಇನ್ನೊಂದೆಡೆ ಕೊರೊನಾ ವೈರಸ್‌ಗೆ ತುತ್ತಾಗುತ್ತಿರುವವರ ಸಂಖ್ಯೆ ಏರುತ್ತಿರುವುದು ದೇಶವನ್ನು ಇನ್ನಿಲ್ಲದಂತೆ ಕಾಡುತ್ತಿದೆ.

ಮಂಗಳಮುಖಿಯರ ಕಣ್ಣೀರು

ಕೊರೊನಾ ಬಾಧೆಯಿಂದ ಮನೆಯಿಂದ ಹೊರಬಾರದಂತೆ ರಾಜ್ಯ ಸರ್ಕಾರ ಕೇಂದ್ರ ಸರ್ಕಾರ ನೀಡಿರುವ ಆದೇಶವನ್ನು ಪಾಲಿಸುತ್ತಿದೆ. ಅದಕ್ಕೆ ರಾಜ್ಯದ ಜನತೆಯು ಬೆಂಬಲ ನೀಡಿದ್ದಾರೆ. ಈ ನಡುವೆ ಮಂಗಳಮುಖಿಯರು ನಮಗೆ ಆಹಾರ ಸಿಗುತ್ತಿಲ್ಲ. ನಮಗೆ ಹಣಬೇಡ ಅನ್ನಹಾಕಿ ಎಂದು ಸರ್ಕಾರದ ಮೊರೆ ಹೋಗುತ್ತಿದ್ದಾರೆ. ಇನ್ನು ಭಿಕ್ಷುಕರನ್ನು ಹಲವು ಸಂಘಸಂಸ್ಥೆಗಳು ಗುರುತಿಸಿ ಆಹಾರವನ್ನು ನೀಡುತ್ತಿದ್ದು, ಅವರ ಆರೋಗ್ಯದ ದೃಷ್ಟಿಯಿಂದ ಎಲ್ಲಾ ಸೌಲಭ್ಯವನ್ನು ಒದಗಿಸುತ್ತಿವೆ.

ಸರ್ಕಾರವು ಸಂಘಸಂಸ್ಥೆಗಳ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದು, ಹಲವು ಉದ್ಯಮಿಗಳು, ಸಿನಿಮಾ ತಾರೆಯರು, ನಾಗರಿಕರು ಸರ್ಕಾರಕ್ಕೆ ದೇಣಿಗೆಯನ್ನು ನೀಡುತ್ತಿದ್ದಾರೆ. ಆದರೆ ಒಂದಿಬ್ಬರು ರಾಜಕಾರಣಿಗಳನ್ನು ಬಿಟ್ಟರೆ ಉಳಿದ ರಾಜಕಾರಣಿಗಳು ಯಾವುದೇ ಸಹಾಯ ಮಾಡಲು ಮುಂದಾಗುತ್ತಿಲ್ಲ. ಇದು ರಾಜ್ಯದ ಜನತೆಯ ದೌರ್ಭಾಗ್ಯ. ಇನ್ನು ಮೇಲಾದರು ತಮ್ಮ ಕ್ಷೇತ್ರಗಳಲ್ಲಾದರೂ ನಿರ್ಗತಿಕ ಜನರಿಗೆ ನೆರವಾಗಬೇಕಿದೆ.

 

Leave a Reply

error: Content is protected !!
LATEST
ಪತ್ನಿ ಜೊತೆ 40 ವರ್ಷಗಳ ಹಿಂದೆ ಕೋಪ ಮಾಡಿಕೊಂಡಿದ್ದ ಪತಿ- ಸಾಯುವ ವೇಳೆಯೂ ಮಾತಾಡಲಿಲ್ಲ ! ಬೆಳಗಾವಿ: ಸವದತ್ತಿ ಯಲ್ಲಮ್ಮ ದೇವಿಯ ಹುಂಡಿಯಲ್ಲಿ 2 ತಿಂಗಳಲ್ಲೇ₹ 1.96 ಕೋಟಿ ಕಾಣಿಕೆ ಸಂಗ್ರಹ ಕಡ್ಡಾಯವಾಗಿ ಮಣ್ಣಿನ ಪರೀಕ್ಷೆ ಮಾಡಿಸಿ: ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಪ್ರಸಾದ್ ಕೆ.ಆರ್‌.ಪೇಟೆ: ಚೌಡೇಶ್ವರಿ ಅಮ್ಮನವರ ದೇಗುಲದಲ್ಲಿ ಆಷಾಢ ಶುಕ್ರವಾರ ಸಂಭ್ರಮ ಸಂಸತ್‌ನಲ್ಲಿ ಕನ್ನಡಿಗರ ಪರ ಧ್ವನಿ ಎತ್ತಿ: ರಾಜ್ಯದ ಎನ್‌ಡಿಎ ಸಂಸದರಿಗೆ ಎಎಪಿಯ ಡಾ. ಮುಖ್ಯಮಂತ್ರಿ ಚಂದ್ರು ಆಗ್ರಹ “ಶಕ್ತಿ" ಯೋಜನೆಯಿಂದ ಸಾರಿಗೆ ನಿಗಮಗಳ ಆದಾಯ ಹೆಚ್ಚಾಗಿದೆ- ಆದರೆ ನೌಕರರಿಗೆ ವೇತನಕೊಡಲು ಹಣವಿಲ್ಲ- ಎಂಥಾ ಹೇಳಿಕೆ ಇದು ಸಾ... KRS ಭರ್ತಿ: ಅಣೆಕಟ್ಟೆಯಿಂದ ಒಂದು ಲಕ್ಷ ಕ್ಯುಸೆಕ್‌ಗೂ ಅಧಿಕ ಪ್ರಮಾಣದ ನೀರು ಬಿಡುಗಡೆ- ಕಾವೇರಿ ಕೊಳ್ಳದ ಜನರಿಗೆ ಎಚ್ಚರಿ... ಪೊಲೀಸರ ಮೇಲೆ ಹಲ್ಲೆ ಮಾಡಿ ಪರಾರಿಗೆ ಯತ್ನ: ಕಳ್ಳನ ಹೆಡೆಮುರಿಕಟ್ಟಿದ ಮಹಿಳಾ ಎಸ್‌ಐ ಕೃಷ್ಣರಾಜಪೇಟೆ: ಶ್ರೀ ಚೌಡೇಶ್ವರಿ ಅಮ್ಮನವರ ಕರಗ ಮಹೋತ್ಸವ ಅದ್ದೂರಿ ಬೆಳಗಾವಿ: ಸವದತ್ತಿ ಯಲ್ಲಮ್ಮ ದೇವಿಯ ಹುಂಡಿಗೆ ಹರಿದು ಬಂತು ಕೋಟಿ ಕೋಟಿ ಹಣ