NEWS

ಮದ್ಯ ಪ್ರಿಯರಿಂದಲೇ ಸರ್ಕಾರಕ್ಕೆ ಹೆಚ್ಚು ಆದಾಯ ಪಡೆಯುವ ನಿರೀಕ್ಷೆಯಲ್ಲಿ ಸಚಿವರು

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು:  ಎರಡು-ಮೂರು  ತಿಂಗಳಿನಿಂದ   ಉಂಟಾಗಿರುವ ನಷ್ಟದಲ್ಲಿ ಶೇ.50 ರಷ್ಟು ತುಂಬಿಕೊಳ್ಳುವಷ್ಟು ಮದ್ಯದಾಸ್ತಾನು ಇದೆ ಎಂದು  ಅಬಕಾರಿ ಸಚಿವ ಎಚ್‌.ನಾಗೇಶ್‌ ಹೇಳಿದ್ದಾರೆ.

ಮದ್ಯದಿಂದ ಬರಬೇಕಿದ್ದ ಆದಾಯಕ್ಕೆ ಕೊರೊನಾ ಸೋಂಕಿನಿಂದ ಕತ್ತರಿ ಬಿದ್ದಿತ್ತು. ಅದನ್ನು ತುಂಬಿಕೊಳ್ಳುವ ನಿಟ್ಟಿನಲ್ಲಿ ಸರ್ಕಾರ ಮುಂದಾಗಿದ್ದು, ಅದರಂತೆ ಗ್ರೀನ್‌‌, ಆರೆಂಜ್‌ ಮತ್ತು ರೆಡ್‌ ಜೋನ್‌ಗಳಲ್ಲಿ ಕೆಲ ನಿಯಮಗಳನ್ನು ಹೇರುವ ಮೂಲಕ ಮದ್ಯ ಮಾರಾಟಕ್ಕೆ ಅವಕಾಶ ಮಾಡಿಕೊಟ್ಟಿದೆ. ಈ ನಿಟ್ಟಿನಲ್ಲಿ ಮಾತನಾಡಿರುವ ಸಚಿವರು ಈ ಹಿಂದಿನಿಂದ ಆಗಿರುವ ನಷ್ಟವನ್ನು ತುಂಬಿಕೊಳ್ಳುವ ನಿಟ್ಟಿನಲ್ಲಿ ಅಧಿಕಾರಿಗಳು ಮತ್ತು ಇಲಾಖೆ ಶ್ರಮಿಸುತ್ತಿದೆ ಎಂದು ತಿಳಿಸಿದ್ದಾರೆ.

ಇನ್ನು ಇದರ ಮಧ್ಯೆ ಮದ್ಯಕ್ಕೆ ಬೆಲೆ ಏರಿಕೆ ಮಾಡಿದ್ದು, ಅದು ನಾಳೆಯಿಂದಲೇ ಜಾರಿಗೆ ಬರಲಿದೆ ಎಂದು ಸರ್ಕಾರ ತಿಳಿಸಿದೆ. ಇದರಿಂದ ಕುಡುಕರಿಗೆ ಶಾಕ್‌ ಆಗಿದ್ದು, ಆದರೂ ಪರವಾಗಿಲ್ಲ ಒಟ್ಟಾರೆ ಮದ್ಯದಂಗಡಿಗಳನ್ನು ತೆರೆಯಲು ಅನುಮತಿ ಸಿಕ್ಕಿದೆಯಲ್ಲ ಈಗ ಬ್ಲಾಕ್‌ ನಲ್ಲಿ ದುಬಾರಿ ಬೆಲೆ ತೆತ್ತು ಪಡೆಯುತ್ತಿದ್ದಕ್ಕಿಂತ ಕೊಂಚ ಬೆಲೆ ಹೆಚ್ಚಾದರೂ ಕೊಂಡುಕೊಳ್ಳೋಣ ಎಂಬ ಲೆಕ್ಕಚಾರದಲ್ಲಿದ್ದಾರೆ.

 

Leave a Reply

error: Content is protected !!
LATEST
ಪತ್ನಿ ಜೊತೆ 40 ವರ್ಷಗಳ ಹಿಂದೆ ಕೋಪ ಮಾಡಿಕೊಂಡಿದ್ದ ಪತಿ- ಸಾಯುವ ವೇಳೆಯೂ ಮಾತಾಡಲಿಲ್ಲ ! ಬೆಳಗಾವಿ: ಸವದತ್ತಿ ಯಲ್ಲಮ್ಮ ದೇವಿಯ ಹುಂಡಿಯಲ್ಲಿ 2 ತಿಂಗಳಲ್ಲೇ₹ 1.96 ಕೋಟಿ ಕಾಣಿಕೆ ಸಂಗ್ರಹ ಕಡ್ಡಾಯವಾಗಿ ಮಣ್ಣಿನ ಪರೀಕ್ಷೆ ಮಾಡಿಸಿ: ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಪ್ರಸಾದ್ ಕೆ.ಆರ್‌.ಪೇಟೆ: ಚೌಡೇಶ್ವರಿ ಅಮ್ಮನವರ ದೇಗುಲದಲ್ಲಿ ಆಷಾಢ ಶುಕ್ರವಾರ ಸಂಭ್ರಮ ಸಂಸತ್‌ನಲ್ಲಿ ಕನ್ನಡಿಗರ ಪರ ಧ್ವನಿ ಎತ್ತಿ: ರಾಜ್ಯದ ಎನ್‌ಡಿಎ ಸಂಸದರಿಗೆ ಎಎಪಿಯ ಡಾ. ಮುಖ್ಯಮಂತ್ರಿ ಚಂದ್ರು ಆಗ್ರಹ “ಶಕ್ತಿ" ಯೋಜನೆಯಿಂದ ಸಾರಿಗೆ ನಿಗಮಗಳ ಆದಾಯ ಹೆಚ್ಚಾಗಿದೆ- ಆದರೆ ನೌಕರರಿಗೆ ವೇತನಕೊಡಲು ಹಣವಿಲ್ಲ- ಎಂಥಾ ಹೇಳಿಕೆ ಇದು ಸಾ... KRS ಭರ್ತಿ: ಅಣೆಕಟ್ಟೆಯಿಂದ ಒಂದು ಲಕ್ಷ ಕ್ಯುಸೆಕ್‌ಗೂ ಅಧಿಕ ಪ್ರಮಾಣದ ನೀರು ಬಿಡುಗಡೆ- ಕಾವೇರಿ ಕೊಳ್ಳದ ಜನರಿಗೆ ಎಚ್ಚರಿ... ಪೊಲೀಸರ ಮೇಲೆ ಹಲ್ಲೆ ಮಾಡಿ ಪರಾರಿಗೆ ಯತ್ನ: ಕಳ್ಳನ ಹೆಡೆಮುರಿಕಟ್ಟಿದ ಮಹಿಳಾ ಎಸ್‌ಐ ಕೃಷ್ಣರಾಜಪೇಟೆ: ಶ್ರೀ ಚೌಡೇಶ್ವರಿ ಅಮ್ಮನವರ ಕರಗ ಮಹೋತ್ಸವ ಅದ್ದೂರಿ ಬೆಳಗಾವಿ: ಸವದತ್ತಿ ಯಲ್ಲಮ್ಮ ದೇವಿಯ ಹುಂಡಿಗೆ ಹರಿದು ಬಂತು ಕೋಟಿ ಕೋಟಿ ಹಣ