Please assign a menu to the primary menu location under menu

NEWS

ಮದ್ಯ ಪ್ರಿಯರಿಂದಲೇ ಸರ್ಕಾರಕ್ಕೆ ಹೆಚ್ಚು ಆದಾಯ ಪಡೆಯುವ ನಿರೀಕ್ಷೆಯಲ್ಲಿ ಸಚಿವರು

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು:  ಎರಡು-ಮೂರು  ತಿಂಗಳಿನಿಂದ   ಉಂಟಾಗಿರುವ ನಷ್ಟದಲ್ಲಿ ಶೇ.50 ರಷ್ಟು ತುಂಬಿಕೊಳ್ಳುವಷ್ಟು ಮದ್ಯದಾಸ್ತಾನು ಇದೆ ಎಂದು  ಅಬಕಾರಿ ಸಚಿವ ಎಚ್‌.ನಾಗೇಶ್‌ ಹೇಳಿದ್ದಾರೆ.

ಮದ್ಯದಿಂದ ಬರಬೇಕಿದ್ದ ಆದಾಯಕ್ಕೆ ಕೊರೊನಾ ಸೋಂಕಿನಿಂದ ಕತ್ತರಿ ಬಿದ್ದಿತ್ತು. ಅದನ್ನು ತುಂಬಿಕೊಳ್ಳುವ ನಿಟ್ಟಿನಲ್ಲಿ ಸರ್ಕಾರ ಮುಂದಾಗಿದ್ದು, ಅದರಂತೆ ಗ್ರೀನ್‌‌, ಆರೆಂಜ್‌ ಮತ್ತು ರೆಡ್‌ ಜೋನ್‌ಗಳಲ್ಲಿ ಕೆಲ ನಿಯಮಗಳನ್ನು ಹೇರುವ ಮೂಲಕ ಮದ್ಯ ಮಾರಾಟಕ್ಕೆ ಅವಕಾಶ ಮಾಡಿಕೊಟ್ಟಿದೆ. ಈ ನಿಟ್ಟಿನಲ್ಲಿ ಮಾತನಾಡಿರುವ ಸಚಿವರು ಈ ಹಿಂದಿನಿಂದ ಆಗಿರುವ ನಷ್ಟವನ್ನು ತುಂಬಿಕೊಳ್ಳುವ ನಿಟ್ಟಿನಲ್ಲಿ ಅಧಿಕಾರಿಗಳು ಮತ್ತು ಇಲಾಖೆ ಶ್ರಮಿಸುತ್ತಿದೆ ಎಂದು ತಿಳಿಸಿದ್ದಾರೆ.

ಇನ್ನು ಇದರ ಮಧ್ಯೆ ಮದ್ಯಕ್ಕೆ ಬೆಲೆ ಏರಿಕೆ ಮಾಡಿದ್ದು, ಅದು ನಾಳೆಯಿಂದಲೇ ಜಾರಿಗೆ ಬರಲಿದೆ ಎಂದು ಸರ್ಕಾರ ತಿಳಿಸಿದೆ. ಇದರಿಂದ ಕುಡುಕರಿಗೆ ಶಾಕ್‌ ಆಗಿದ್ದು, ಆದರೂ ಪರವಾಗಿಲ್ಲ ಒಟ್ಟಾರೆ ಮದ್ಯದಂಗಡಿಗಳನ್ನು ತೆರೆಯಲು ಅನುಮತಿ ಸಿಕ್ಕಿದೆಯಲ್ಲ ಈಗ ಬ್ಲಾಕ್‌ ನಲ್ಲಿ ದುಬಾರಿ ಬೆಲೆ ತೆತ್ತು ಪಡೆಯುತ್ತಿದ್ದಕ್ಕಿಂತ ಕೊಂಚ ಬೆಲೆ ಹೆಚ್ಚಾದರೂ ಕೊಂಡುಕೊಳ್ಳೋಣ ಎಂಬ ಲೆಕ್ಕಚಾರದಲ್ಲಿದ್ದಾರೆ.

 

Leave a Reply

error: Content is protected !!
LATEST
ನಮ್ಮ ಕ್ಲಿನಿಕ್ ಹೆಸರಲ್ಲಿ ನೂರಾರು ಕೋಟಿ ಗುಳುಂ: ಎಎಪಿ ಉಷಾ ಮೋಹನ್ KSRTC- ಫೋನ್‌ ಪೇ ಹಗರಣ- ₹20 ಸಾವಿರ ಲಂಚ ಕೊಟ್ಟ ಡಿಸಿ, ಡಿಟಿಒ ಅಮಾನತುಮಾಡಿ: ಎಂಡಿ ಭೇಟಿ ಮಾಡಿದ ನಾಗರಾಜ್‌ ಇಂದು ಸಾರಿಗೆ ನಿಗಮಗಳಲ್ಲಿ ಚಾಲಕರ ದಿನದ ಸಂಭ್ರಮ - ಘಟಕಗಳಲ್ಲಿ ಹೂಗುಚ್ಛ ನೀಡಿ ಶುಭ ಕೋರಿದ ಸಹೋದ್ಯೋಗಿಗಳು KSRTC ಬಸ್ ನಿಲ್ದಾಣದ ಅವ್ಯವಸ್ಥೆ ಕಂಡು ಡಿಸಿ ಬೆವರಿಳಿಸಿದ  ಉಪಲೋಕಾಯುಕ್ತರು BMTC: ಅತೀ ಶೀಘ್ರದಲ್ಲೇ ಸಂಸ್ಥೆಯ ನೌಕರರಿಗೆ ನಗದು ರಹಿತ ವೈದ್ಯಕೀಯ ಚಿಕಿತ್ಸಾ ಸೌಲಭ್ಯ- ಎಂಡಿ ರಾಮಚಂದ್ರನ್‌ KKRTC ಬಸ್‌-ಟ್ರ್ಯಾಕ್ಟರ್‌ ನಡುವೆ ಡಿಕ್ಕಿ: ಯುವತಿ ಸಾವು, 18ಮಂದಿಗೆ ಗಾಯ KSRTC: ಭ್ರಷ್ಟಾಚಾರ ಬಯಲು ಮಾಡದಂತೆ ದೂರುದಾರನ ಬಾಯಿ ಮುಚ್ಚಿಸಲು ATI ಮೂಲಕ ₹20 ಸಾವಿರ ಕೊಟ್ಟರೇ ಡಿಸಿ, ಡಿಟಿಒ! ಮಗನ ಎದುರೇ ಪೆಟ್ರೋಲ್‌ ಸುರಿದು ಪತ್ನಿಗೆ ಬೆಂಕಿ ಹಚ್ಚಿದ KSRTC ಮೆಕ್ಯಾನಿಕ್‌ ಚಾಲಕನ ನಿಯಂತ್ರಣ ತಪ್ಪಿ ಹಣ್ಣು ತರಕಾರಿ ತುಂಬಿದ ಲಾರಿ ಪಲ್ಟಿ: 14 ಜನ ಮೃತ 2026ಕ್ಕೆ ರಾಜ್ಯ ಸರ್ಕಾರಿ ನೌಕರರಿಗೆ ಕೇಂದ್ರ ಮಾದರಿ ವೇತನ ಜಾರಿ ಸಾಧ್ಯತೆ: ರಾಜ್ಯಾಧ್ಯಕ್ಷ ಷಡಾಕ್ಷರಿ