NEWSಆರೋಗ್ಯ

ಮದ್ಯ ಪ್ರಿಯರಿಗೆ ಚೀಯರ್‌ ಎಂದ ಸರ್ಕಾರ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಮದ್ಯಪ್ರಿಯರಿಗೆ ಸರ್ಕಾರ ಮುಕ್ತ ಅವಕಾಶ ನೀಡಿದ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ವೈನ್‌ಶಾಪ್‌ ಮುಂದೆ ಕುಡುಕರು ಸರತಿ ಸಾಲಿನಲ್ಲಿ ನಿಂತು ಮದ್ಯಖರೀದಿಯಲ್ಲಿ ತೊಡಗಿದ್ದಾರೆ.

ಇನ್ನು ಕೆಲಕಡೆ ನೂಕುನುಗ್ಗಲು ಉಂಟಾಗಿ ಪೊಲೀಸರು ಲಾಠಿಯನ್ನು ಬೀಸಿರುವ ಘಟನೆಯು ನಡೆದಿದೆ. ಬೆಂಗಳೂರಿನ ಆನೇಕಲ್‌ನಲ್ಲಿ ಕೆಲ ಮದ್ಯಪ್ರಿಯರು ಸರತಿ ಸಾಲಿನಲ್ಲಿ ನಿಲ್ಲುವ ಬದಲು ಗುಂಪುಗುಂಪಾಗಿ ಬಂದಿದ್ದರಿಂದ ಪೊಲೀಸರು ಲಾಠಿಗೆ ಕೆಲಸ ಕೊಡಬೇಕಾಯಿತು.

ಒಬ್ಬರಿಗೆ ಒಂದು ಪುಲ್‌ಬಾಟಲ್‌ ಕೊಡುತ್ತಿದ್ದಾರೆ. ಆದರೆ ಕೆಲವರು ಇನ್ನು ಹೆಚ್ಚು ಬೇಕು ಎಂದು ಕೇಳುತ್ತಿದ್ದರೆ. ಇನ್ನು ಕೆಲವರು ಕೋಟ್ರುಬಾಟಲ್‌ ಸಾಕು ನಮ್ಮಲ್ಲಿ ಹಣ ಇಲ್ಲ ಎಂದು ಹೇಳುತ್ತಿದ್ದಾರೆ.

ನಾವು ಕುಡಿಯದಿದ್ದರೆ ಮೈಂಡ್‌ ಬ್ಲಾಕ್‌ ಆಗುತ್ತದೆ. ಇಲ್ಲಂದರೆ ಕೆಲಸ ಮಾಡುವುದಕ್ಕೂಆಗುವುದಿಲ್ಲ. ನಾವು ಬೆಳಗ್ಗೆ ಎದ್ದ ಕೂಡಲೇ ಕುಡಿಯಲೇ ಬೇಕು. ಇದೇ ನಮಗೆ ಕಾಫಿ ಟೀ ಎಂದು ಹೇಳುತ್ತಿದ್ದಾರೆ.

ಒಟ್ಟಾರೆ ಮದ್ಯದಂಗಡಿ ತೆರೆದು 41ದಿನಗಳಿಂದ ನೆಮ್ಮದಿಯಾಗಿದ್ದ ಹಲವು ಕುಟುಂಬಗಳಲ್ಲಿ ಮತ್ತೆ ಗಲಾಟೆ ಗದ್ದಲ ಅಶಾಂತಿ ನೀಡುವುದಕ್ಕೆ ಸರ್ಕಾರ ಉತ್ತೇಜನ ನೀಡಿದಂತ್ತಾಗಿದೆ. ಕುಡುಕರಿರುವ ಶೇ.90ರಷ್ಟು ಕುಟುಂಬಗಳು ಮದ್ಯ ನಿಲ್ಲಿಸಿಬಿಡಿ ಎಂದು ಎಷ್ಟೇ ಹೇಳಿದರು ಕೇಳಿಸಿಕೊಳ್ಳದ ಸರ್ಕಾರ ತನ್ನ ಬೊಕ್ಕಸ ತುಂಬಿಸಿಕೊಳ್ಳಲು ಮುಂದಾಗಿರುವುದು ಬಡವರ ನೆಮ್ಮದಿಗೆ ತಣ್ಣೀರೆರಚಿದಂತೆ ಆಗುತ್ತಿದೆ.

Leave a Reply

error: Content is protected !!
LATEST
ಮೈತ್ರಿ ತೆಕ್ಕೆಗೆ ಬನ್ನೂರು ಪುರಸಭೆ: ಜೆಡಿಎಸ್‌ಗೆ ಅಧ್ಯಕ್ಷ ಗದ್ದುಗೆ, ಬಿಜೆಪಿಗೆ ಉಪಾಧ್ಯಕ್ಷ ಗಾದಿ ರಾಜ್ಯದ ಆರು ಪ್ರತ್ಯೇಕ ಸ್ಥಳಗಳಲ್ಲಿ ಅಪಘಾತ: 13 ಮಂದಿ ಸಾವು, ಹಲವರಿಗೆ ಗಾಯ ಯಡಿಯೂರು ಕೆರೆ: ಗಣಪತಿ ವಿಸರ್ಜನಾ ಕಲ್ಯಾಣಿಗೆ ನೀರು ತುಂಬಿಸಿದ ಬಿಬಿಎಂಪಿ ತಂದೆ ನಿಧನರಾದ ದುಃಖದಲ್ಲಿರುವ ನೌಕರನಿಗೆ ರಜೆ ಕೊಡದೆ ಗೈರು ತೋರಿಸಿದ್ದು ಅಲ್ಲದೆ ಕಾರಣ ಕೇಳಿ ನೋಟಿಸ್‌ ಕೊಟ್ಟ ಅಧಿಕಾರಿ... KKRTC ಬಸ್‌-ಶಾಲಾ ಬಸ್‌ ಮುಖಾಮುಖಿ ಡಿಕ್ಕಿ: ಇಬ್ಬರು ಮೃತ- 25ಕ್ಕೂ ಹೆಚ್ಚು ಮಕ್ಕಳಿಗೆ ಗಾಯ KSRTC: 38 ತಿಂಗಳ ವೇತನ ಹೆಚ್ಚಳ ಹಿಂಬಾಕಿಗೆ ಆಗ್ರಹಿಸಿ BMS ಪ್ರತಿಭಟನೆ- ಸರ್ಕಾರದ ವಿರುದ್ಧ ಕಿಡಿ MSRTC: ನೌಕರರ ಮುಷ್ಕರಕ್ಕೆ ಮಣಿದು 6500 ರೂ. ವೇತನ ಹೆಚ್ಚಳಕ್ಕೆ ಒಪ್ಪಿದ ಸರ್ಕಾರ- ಧರಣಿ ವಾಪಸ್‌ MSRTC: ತೀವ್ರಗೊಂಡ ನೌಕರರ ಮುಷ್ಕರ- 11 ಸಂಘಟನೆಗಳ ಒಗ್ಗಟ್ಟು- ನಿಗಮಕ್ಕೆ ನಡುಕ ಚಾಮುಂಡಿಬೆಟ್ಟದಲ್ಲಿ ಧೂಮಪಾನ, ಮದ್ಯಪಾನ, ಗುಟ್ಕಾ ನಿಷೇಧ: ಸಿಎಂ ಘೋಷಣೆ ಪೋಡಿ ಮುಕ್ತ ಅಭಿಯಾನ, ಪೌತಿ ಖಾತೆ ಆಂದೋಲನಕ್ಕೆ ಕ್ರಮ: ಕಂದಾಯ ಸಚಿವ ಕೃಷ್ಣ ಬೈರೇಗೌಡ