NEWSನಮ್ಮಜಿಲ್ಲೆ

ಮದ್ಯ ಮಾರಾಟ ಬೇಡವೇ ಬೇಡ ಎಂದ ರಮೇಶ್ ಜಾರಕಿಹೊಳಿ

ಕೊರೊನಾ ಸಂಪೂರ್ಣ ನಿಯಂತ್ರಣಕ್ಕೆ ಬರುವರೆಗೆ ಮಾರಾಟಕ್ಕೆ ಕಡಿವಾಣ

ವಿಜಯಪಥ ಸಮಗ್ರ ಸುದ್ದಿ

ಬೆಳಗಾವಿ: ಜಿಲ್ಲೆಯಲ್ಲಿ ಯಾವುದೇ ಕಾರಣಕ್ಕೂ ಮದ್ಯ ಮಾರಾಟಕ್ಕೆ ಅನುಮತಿ ನೀಡಬಾರದು ಎಂದು ಸಚಿವ ರಮೇಶ್ ಜಾರಕಿಹೊಳಿ ಹೇಳಿದರು.

ಕೊವೀಡ್ -19 ನಿಯಂತ್ರಣಕ್ಕೆ ಕೈಗೊಳ್ಳಲಾಗಿರುವ ಕ್ರಮಗಳ ಕುರಿತು ನಗರದ ಪ್ರವಾಸಿಮಂದಿರದಲ್ಲಿ ಶನಿವಾರ ಅಧಿಕಾರಿಗಳ ಜತೆ ಚರ್ಚೆ ನಡೆಸಿದರು.

ಸದ್ಯಕ್ಕೆ ಮದ್ಯ ಮಾರಾಟಕ್ಕೆ ಕಡಿವಾಣ ಹಾಕಿರುವುದರಿಂದ ಯಾವುದೇ ಸಮಸ್ಯೆಗಳು ಕಂಡುಬಂದಿಲ್ಲ. ಆದ್ದರಿಂದ ಕೊರೊನಾ ಸಂಪೂರ್ಣ ನಿಯಂತ್ರಣಕ್ಕೆ ಬರುವರೆಗೆ ಮಾರಾಟ ಆರಂಭಿಸಬಾರದು ಎಂದರು.

ಯಾವುದೇ ಒತ್ತಡಕ್ಕೂ ಮಣಿಯದೇ ಸೂಕ್ತ ವ್ಯವಸ್ಥೆ ಇರುವ ಹೋಟೆಲ್ ಗಳನ್ನು ಮಾತ್ರ ಕ್ವಾರಂಟೈನ್ ಗೆ ಪಡೆದುಕೊಳ್ಳಬೇಕು. ಸಹಕಾರಿ ಬ್ಯಾಂಕುಗಳು ತೆರೆದು ಗ್ರಾಹಕರಿಗೆ ಸೇವೆ ಒದಗಿಸುವ ಬಗ್ಗೆ ಪರಿಶೀಲಿಸುವಂತೆ ಅಧಿಕಾರಿಗಳಿಗೆ ತಿಳಿಸಿದರು.

ಪಿಪಿಇ ಕಿಟ್ ಗಳನ್ನು ಕೂಡ ಹೆಚ್ಚುವರಿಯಾಗಿ ಪಡೆದುಕೊಳ್ಳಲು ಸಚಿವರು ಕ್ರಮವಹಿಸಬೇಕು ಎಂದು ಮನವಿ ಮಾಡಿಕೊಂಡರು. ಚೈನಾದಿಂದ ಒಟ್ಟಾರೆ ರಾಜ್ಯಕ್ಕೆ ಒಂದು ಲಕ್ಷ ರ್ಯಾಪಿಡ್ ಟೆಸ್ಟಿಂಗ್ ಕಿಟ್ ಗೂ ಆದೇಶ ನೀಡಲಾಗಿದೆ. ಅದೇ ರೀತಿ ಕೇಂದ್ರ ಸರ್ಕಾರ ಒದಗಿಸಿರುವ ಕಿಟ್ ಗಳನ್ನು ಜಿಲ್ಲೆಗೆ ಪೂರೈಸಲು ಕೋರಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಎಲ್.ಕೆ.ಅತೀಕ್ ತಿಳಿಸಿದರು.

ಕ್ವಾರಂಟೈನ್ ನಲ್ಲಿ ಇರುವವರಲ್ಲಿ ಸೋಂಕು ದೃಢಪಟ್ಟಿದ್ದು, ಇದು ಸಮುದಾಯದಲ್ಲಿ ಹರಡದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಎಸ್.ಬಿ.ಬೊಮ್ಮನಹಳ್ಳಿ ವಿವರಿಸಿದರು.

ಪ್ರಾಥಮಿಕ ಸಂಪರ್ಕ ಕ್ಕೆ ಬಂದವರನ್ನು ಹೋಟೆಲ್ ಗಳಲ್ಲಿ ಕ್ವಾರಂಟೈನ್ ನಲ್ಲಿ ಇರಿಸಲಾಗಿದೆ. ಜಿಲ್ಲೆಯಲ್ಲಿ 43 ಹೋಟೆಲ್ ಗಳನ್ನು ಪಡೆದುಕೊಂಡು ಕ್ವಾರಂಟೈನ್ ಕೇಂದ್ರಗಳಾಗಿ ಪರಿವರ್ತಿಸಲಾಗಿದೆ. ದ್ವಿತೀಯ ಹಂತದ ಸಂಪರ್ಕಕ್ಕೆ ಬಂದವರನ್ನು ಅವರವರ ಮನೆಗಳಲ್ಲಿ ಕ್ವಾರಂಟೈನ್ ನಲ್ಲಿ ಇರಿಸಲಾಗಿದೆ ಎಂದರು.

ಶಾಸಕರಾದ ಅನಿಲ್ ಬೆನಕೆ, ಅಭಯ್ ಪಾಟೀಲ, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಎಲ್.ಕೆ.ಅತೀಕ್,  ಕೋವಿಡ್-೧೯ ನಿಯಂತ್ರಣಾ ಕ್ರಮಗಳ ಉಸ್ತುವಾರಿಯಾಗಿರುವ ವಾಯವ್ಯ ಸಾರಿಗೆ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ರಾಜೇಂದ್ರ ಚೋಳನ್, ಪೊಲಿಸ್ ಆಯುಕ್ತರಾದ ಬಿ.ಎಸ್.ಲೋಕೇಶ್ ಕುಮಾರ್, ಪೊಲಿಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ ಮತ್ತಿತರರು ಉಪಸ್ಥಿತರಿದ್ದರು.

Leave a Reply

error: Content is protected !!
LATEST
ಚಾಮುಂಡಿ ಹುಟ್ಟುಹಬ್ಬ: ಬೆಳ್ಳಿ ಪಲ್ಲಕ್ಕಿ ಉತ್ಸವಕ್ಕೆ ರಾಜವಂಶಸ್ಥ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಚಾಲನೆ ನಾಡ ಅಧಿದೇವತೆ ಚಾಮುಂಡಿ ತಾಯಿಯ ವರ್ಧಂತಿ ಸಂಭ್ರಮ: ಬೆಟ್ಟಕ್ಕೆ ಹರಿದು ಬರುತ್ತಿದೆ ಭಕ್ತ ಸಾಗರ KRSನಿಂದ ಕಾವೇರಿ ನದಿಗೆ 1.30 ಲಕ್ಷ ಕ್ಯುಸೆಕ್ ನೀರು ಬಿಡುಗಡೆ ಪತ್ನಿ ಜೊತೆ 40 ವರ್ಷಗಳ ಹಿಂದೆ ಕೋಪ ಮಾಡಿಕೊಂಡಿದ್ದ ಪತಿ- ಸಾಯುವ ವೇಳೆಯೂ ಮಾತಾಡಲಿಲ್ಲ ! ಬೆಳಗಾವಿ: ಸವದತ್ತಿ ಯಲ್ಲಮ್ಮ ದೇವಿಯ ಹುಂಡಿಯಲ್ಲಿ 2 ತಿಂಗಳಲ್ಲೇ₹ 1.96 ಕೋಟಿ ಕಾಣಿಕೆ ಸಂಗ್ರಹ ಕಡ್ಡಾಯವಾಗಿ ಮಣ್ಣಿನ ಪರೀಕ್ಷೆ ಮಾಡಿಸಿ: ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಪ್ರಸಾದ್ ಕೆ.ಆರ್‌.ಪೇಟೆ: ಚೌಡೇಶ್ವರಿ ಅಮ್ಮನವರ ದೇಗುಲದಲ್ಲಿ ಆಷಾಢ ಶುಕ್ರವಾರ ಸಂಭ್ರಮ ಸಂಸತ್‌ನಲ್ಲಿ ಕನ್ನಡಿಗರ ಪರ ಧ್ವನಿ ಎತ್ತಿ: ರಾಜ್ಯದ ಎನ್‌ಡಿಎ ಸಂಸದರಿಗೆ ಎಎಪಿಯ ಡಾ. ಮುಖ್ಯಮಂತ್ರಿ ಚಂದ್ರು ಆಗ್ರಹ “ಶಕ್ತಿ" ಯೋಜನೆಯಿಂದ ಸಾರಿಗೆ ನಿಗಮಗಳ ಆದಾಯ ಹೆಚ್ಚಾಗಿದೆ- ಆದರೆ ನೌಕರರಿಗೆ ವೇತನಕೊಡಲು ಹಣವಿಲ್ಲ- ಎಂಥಾ ಹೇಳಿಕೆ ಇದು ಸಾ... KRS ಭರ್ತಿ: ಅಣೆಕಟ್ಟೆಯಿಂದ ಒಂದು ಲಕ್ಷ ಕ್ಯುಸೆಕ್‌ಗೂ ಅಧಿಕ ಪ್ರಮಾಣದ ನೀರು ಬಿಡುಗಡೆ- ಕಾವೇರಿ ಕೊಳ್ಳದ ಜನರಿಗೆ ಎಚ್ಚರಿ...