NEWSಬೆಂಗಳೂರುರಾಜಕೀಯ

ಮೋದಿ ಭಾಷಣ ಎಲ್ಲ ಸಂತೆ ಭಾಷಣ, ಯಾವುದೂ ಜಾರಿಗೆ ಬರೊಲ್ಲ: ಮಾಜಿ ಸಿಎಂ ಎಚ್‌ಡಿಕೆ

ವಿಜಯಪಥ ಸಮಗ್ರ ಸುದ್ದಿ

ಬಾಗಲಕೋಟೆ: ಸರ್ಪದ ಸಹವಾಸ ಮಾಡುವುದು ಯಾರಿಗೆ ಒಳಿತಲ್ಲ ಎಂದು ಪ್ರಧಾನಿ ಮೋದಿ ಹೇಳಿಕೆಗೆ ಮಾಜಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಹೇಳಿದ್ದಾರೆ.

ಇಂದು ಮಾಧ್ಯಮಗಳ ಜೊತೆ ಮಾತನಾಡುವ ವೇಳೆ ಜನರ ಒಳಿತಿಗಾಗಿ ನಾನು ಸರ್ಪ ಆಗಲು ಸಿದ್ಧ ಎಂದು ಹೇಳಿರುವ ಮೋದಿ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಸರ್ಪ ಯಾವಾಗಲೂ ಡೇಂಜರ್ ಎಂದರು.

ಇನ್ನು ಸರ್ಪ, ವಿಷಕನ್ಯೆ ಬಗ್ಗೆ ಚರ್ಚೆ ಮಾಡುವುದಕ್ಕೆ ನಾನು ಹೋಗಲ್ಲ. ಇವತ್ತಿನ ರಾಜಕಾರಣದಲ್ಲಿ ಇವೆಲ್ಲ ಅವಶ್ಯಕತೆ ಇಲ್ಲ. ಮೋದಿ ಇಲ್ಲಿಗೆ ಬಂದು ಭ್ರಷ್ಟಾಚಾರದ ಬಗ್ಗೆ ಮಾತನಾಡುತ್ತಾರೆ. ಮೋದಿ ಬರೀ ಬುರುಡೆ ಭಾಷಣ ಮಾಡಿ ಹೋಗುತ್ತಾರೆ. ಈ ಡಬಲ್ ಇಂಜಿನ್ ಸರ್ಕಾರ ಎಂದರೆ ಲೂಟಿ ಹೊಡೆಯೋದು ಎಂದು ಬಿಜೆಪಿ ಸರ್ಕಾರಗಳ ವಿರುದ್ಧ ವಾಗ್ದಾಳಿ ನಡೆಸಿದರು.

ಮೋದಿ ಭಾಷಣ ಎಲ್ಲ ಸಂತೆ ಭಾಷಣ. ಯಾವುದೂ ಜಾರಿಗೆ ತರಲು ಗೊತ್ತಿಲ್ಲ. ಬರೀ ಬುರುಡೆ ಭಾಷಣ ಮಾಡಿ ಹೋಗುತ್ತಾರೆ ಎಂದು ವ್ಯಂಗ್ಯವಾಡಿದರು.

ಇನ್ನು ಬಿಜೆಪಿ ಮತ್ತು ಕಾಂಗ್ರೆಸ್ ರಾಷ್ಟ್ರ ನಾಯಕರೆಲ್ಲ 9ನೇ ತಾರೀಕಿನವರೆಗೂ ಇರುತ್ತಾರೆ. ಆ ಮೇಲೆ ಕರ್ನಾಟಕದಲ್ಲಿ ಏನಾಗಿದೆ ಎಂದು ಕೇಳಲು ಬರುತ್ತಾರಾ ಎಂದು ಪ್ರಶ್ನಿಸಿದ ಕುಮಾರಸ್ವಾಮಿ, ಚುನಾವಣೆ ಮುಗಿದ ಮೇಲೆ ಕರ್ನಾಟಕಕ್ಕೆ ಟಾಟಾ ಮಾಡಿ ಹೋಗುತ್ತಾರೆ ಮತ್ತೆ ಬರೋದು ಯಾವಾಗ ಎಂದ ಅವರು, ಈ ನಾಯಕರ ಬಗ್ಗೆ ನಾಡಿನ ಜನ ಯೋಚಿಸಿ ಎಂದು ಹೇಳಿದರು.

Leave a Reply

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ಕ್ರೀಡಾಪಟುಗಳಿಗೆ ಕೊಡುವ ಏಕಲವ್ಯ ಪ್ರಶಸ್ತಿ ಮುಂದುವರಿಸಲಿ: ಶೋಭಾ ನಾರಾಯಣ್ ಬಿಡದಿಯಿಂದ ಹೆದ್ದಾರಿಯಲ್ಲೇ ಮುಂದೆ ಬಂದರೆ ನಿಮಗೆ ಟೋಲ್‌ ಬರೆ ಗ್ಯಾರಂಟಿ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಹೊತ್ತಿ ಉರಿದ ಸ್ಕಾರ್ಪಿಯೋ ಕಾರು KSRTC ಕನಕಪುರ ಬಸ್‌ ನಿಲ್ದಾಣದಲ್ಲಿ ವಿಕಲ ಚೇತನರಿಂದ ₹700 ವಸೂಲಿ, ಕಂಡಕ್ಟರ್ಸ್‌ ಕೊಡಬೇಕು ₹10 : ಟಿಸಿಗೆ ಡಿಎಂ ಸಾಥ್... ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ BMTC: ಅಪಘಾತದಲ್ಲಿ ಮೃತಪಟ್ಟ ನೌಕರರ ಕುಟುಂಬಕ್ಕೆ ₹1 ಕೋಟಿ ಪರಿಹಾರ ಚೆಕ್‌ ವಿತರಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸಾರಿಗೆ ನಿವೃತ್ತ ನೌಕರರಿಗೆ ಮತ್ತೊಮ್ಮೆ ಮೊಗದೊಮ್ಮೆ ನಿರಾಸೆ: ಭಾರಿ ಆಕ್ರೋಶಗೊಂಡ EPS ನಿವೃತ್ತರು ಕಾರು ಡೋರ್‌ಗೆ ಬೈಕ್‌ ಗುದ್ದಿ ಕೆಳಗೆ ಬಿದ್ದ ಮಹಿಳೆ ಮೇಲೆ ಹರಿದ ಬಿಎಂಟಿಸಿ ಬಸ್‌ ನಾಟಿ ಕೋಳಿ ಸಾರಿನ ಜತೆ ರಾಗಿಮುದ್ದೆ ನುಂಗಿದವರಿಗೆ ಗೊತ್ತು ಅದರ ಗಮ್ಮತ್ತು