NEWSಸಂಸ್ಕೃತಿ

ಮಾಧ್ಯಮಗಳಲ್ಲಿ ಕನ್ನಡಭಾಷೆ ಬಳಕೆಗೆ ಹೆಚ್ಚು ಒತ್ತುಕೊಡಿ

ಕನ್ನಡ ಪ್ರಾಧಿಕಾರದ ಅಧ್ಯಕ್ಷ ಟಿ.ಎಸ್. ನಾಗಭರಣ ಮನವಿ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ವಿದ್ಯುನ್ಮಾನ ಮಾಧ್ಯಮಗಳು ಸದಭಿರುಚಿ ಶಿಷ್ಟಾಚಾರವುಳ್ಳ ಶುದ್ಧ ಕನ್ನಡ ಭಾಷಾ ಪ್ರಯೋಗಕ್ಕೆ ಒತ್ತು ನೀಡುವ ದೃಷ್ಠಿಯಿಂದ ಫೆಬ್ರವರಿ 11, 2020ರಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಾಗೂ ಕರ್ನಾಟಕ ಮಾಧ್ಯಮ ಅಕಾಡೆಮಿಯ ಸಹಯೋಗದಲ್ಲಿ ಕನ್ನಡ ಭಾಷಾ ಬಳಕೆ ಕುರಿತು ಸಂವಾದ ನಡೆದಿರುವುದು ತಮಗೆ ತಿಳಿದ ವಿಷವೇ ಸರಿ.

ಸಂವಾದದ ಸಂದರ್ಭದಲ್ಲಿ ಸದಭಿರುಚಿಯ ಪ್ರಚಲಿತ ಶುದ್ಧ ಕನ್ನಡ ಪದಗಳನ್ನು ಬಳಸುವಂತೆ ಎಲ್ಲಾ ಮಾಧ್ಯಮಗಳ ಸಂಪಾದಕರುಗಳ ಗಮನ ಸೆಳೆಯುವುದು ಸೂಕ್ತವೆಂದು ಭಾವಿಸುತ್ತಾ ಈ ಪತ್ರ ಬರೆಯುತ್ತಿದ್ದೇನೆ.

ಪ್ರಸ್ತುತ ರಾಜ್ಯ ಎದುರಿಸುತ್ತಿರುವ ಕೊರೋನಾ ಸಾಂಕ್ರಾಮಿಕ ರೋಗದ ಸನ್ನಿವೇಶದಲ್ಲಿ ಮಾಧ್ಯಮಗಳು ಅದರಲ್ಲೂ ವಿಶೇಷವಾಗಿ ವಿದ್ಯುನ್ಮಾನ ಮಾಧ್ಯಮಗಳು ಸಾರ್ವಜನಿಕರಿಗೆ ಮಾಹಿತಿ ತಲುಪಿಸುವಲ್ಲಿ ಅರ್ಥಪೂರ್ಣ ಕೆಲಸ ಮಾಡುತ್ತಿರುವುದು ಅಭಿನಂದನೀಯ.

ಇದೇ ಹೊತ್ತಿನಲ್ಲಿ ಪ್ರಸಾರ / ಮುದ್ರಣದಲ್ಲಿ ಬಳಸುವ ಕನ್ನಡ ಭಾಷೆಯ ಬಗ್ಗೆಯೂ ಅಷ್ಟೇ ಕಾಳಜಿ ವಹಿಸಿದರೆ ತಾವು ಇನ್ನೂ ಹೆಚ್ಚಿನ ಜನರನ್ನು ತಲುಪುವಂತಾಗುತ್ತಿತ್ತು ಎನ್ನುವುದು ನನ್ನ ಅಭಿಪ್ರಾಯ. ತಾವು ದಿನದ 24 ಗಂಟೆಯು ಕ್ಷಣ ಕ್ಷಣದ ಬೆಳವಣಿಗೆಯ ಮಾಹಿತಿಯನ್ನು ಸುದ್ದಿ ರೂಪದಲ್ಲಿ ಸಿದ್ದಪಡಿಸಿಕೊಳ್ಳಲು ಸಮಯವೇ ಇರುವುದಿಲ್ಲ ಒತ್ತಡದಲ್ಲಿ ಕೆಲಸ ಮಾದುವುದು ಅನಿವಾರ್ಯವಾಗುತ್ತದೆ.

ಆದರೂ ಸುಲಭವಾಗಿ ಕನ್ನಡ ಪದಗಳನ್ನು ಬಳಸಬಹುದಾದ ಸಂದರ್ಭದಲ್ಲೂ ಹೆಚ್ಚಿನವರು ಆಂಗ್ಲ ಪದಗಳನ್ನು ಬಳಸುವುದು ಕಂಡುಬಂದಿದೆ. ಇದು ಕನ್ನಡ ಭಾಷಾ ಬೆಳವಣಿಗೆಗೆ ಮಾರಕವಾಗುತ್ತದೆ. ಸಮೂಹ ಮಾಧ್ಯಮವನ್ನೇ ಹೆಚ್ಚಾಗಿ ನಂಬಿರುವ ಜನರು ಮಾಹಿತಿಯ ಜೊತೆಗೆ ಭಾಷೆಯನ್ನು ಕಲಿಯುತ್ತಾರೆ ಎನ್ನುವುದನ್ನು ತಾವು ಅರ್ಥಮಾಡಿಕೊಳ್ಳುವಿರಾಗಿ ಭಾವಿಸುತ್ತೇನೆ.

ವಿದ್ಯನ್ಮಾನ ಮಾಧ್ಯಮಗಳು ಬಳಸುವ ಭಾಷೆಯ ಬಗ್ಗೆ ಬಳಸುವ ಪದಪುಂಜಗಳ ಬಗ್ಗೆ ಸಾರ್ವಜನಿಕರಿಂದ ಬಹಳಷ್ಟು ಸಲಹೆಗಳನ್ನು ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಮಾಧ್ಯಮಗಳ ಪರವಾಗಿ ವಿವಿಧ ಸಾಮಾಜಿಕ ಜಾಲತಾಣಗಳಲ್ಲಿಯೇ ಗ್ರಾಹಕರನ್ನು ಕೇಳಿ ಮಾಧ್ಯಮಗಳಲ್ಲಿ ಬಳಸಬಹುದಾದ ಕನ್ನಡ ಸದಭಿರುಚಿಯ ಪದಗಳನ್ನು ಸಂಗ್ರಹಿಸಲಾಗಿದ್ದು ತಮಗೆ ಕಳುಹಿಸಿ ಕೊಡಲಾಗುತ್ತಿದ್ದು ಈ ಪದಗಳನ್ನು ಮುದ್ರಣ / ವಿದ್ಯುನ್ಮಾನ ಮಾಧ್ಯಮಗಳಲ್ಲಿ ಬಳಸುವ ಮೂಲಕ ಕನ್ನಡ ಭಾಷಾ ಬೆಳವಣಿಗೆ, ಕನ್ನಡದ ಅಸ್ಮಿತೆ ಉಳಿಸಿಕೊಳ್ಳಲು ತಮ್ಮ ಸಹಕಾರ ಸದಾ ನಮ್ಮೊಡನಿರುತ್ತದೆ ಎಂದು ಭಾವಿದಲಾಗಿದೆ ಎಂದು ಕನ್ನಡ ಪ್ರಾಧಿಕಾರದ ಅಧ್ಯಕ್ಷ ಟಿ.ಎಸ್. ನಾಗಭರಣ ತಿಳಿಸಿದ್ದಾರೆ.

Leave a Reply

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ BMTC: ಅಪಘಾತದಲ್ಲಿ ಮೃತಪಟ್ಟ ನೌಕರರ ಕುಟುಂಬಕ್ಕೆ ₹1 ಕೋಟಿ ಪರಿಹಾರ ಚೆಕ್‌ ವಿತರಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸಾರಿಗೆ ನಿವೃತ್ತ ನೌಕರರಿಗೆ ಮತ್ತೊಮ್ಮೆ ಮೊಗದೊಮ್ಮೆ ನಿರಾಸೆ: ಭಾರಿ ಆಕ್ರೋಶಗೊಂಡ EPS ನಿವೃತ್ತರು ಕಾರು ಡೋರ್‌ಗೆ ಬೈಕ್‌ ಗುದ್ದಿ ಕೆಳಗೆ ಬಿದ್ದ ಮಹಿಳೆ ಮೇಲೆ ಹರಿದ ಬಿಎಂಟಿಸಿ ಬಸ್‌ ನಾಟಿ ಕೋಳಿ ಸಾರಿನ ಜತೆ ರಾಗಿಮುದ್ದೆ ನುಂಗಿದವರಿಗೆ ಗೊತ್ತು ಅದರ ಗಮ್ಮತ್ತು ನೀವು ಗಬಗಬನೆ ಊಟ ಮಾಡುವವರಿದ್ದೀರಾ? ಹಾಗಿದ್ದರೆ ನಿಮಗೆ ಈ ಸಮಸ್ಯೆ ಕಾಡದಿರದು! BMTC ನೌಕರರಿಗೆ ಆನ್-ಲೈನ್ ಮೂಲಕ ವೇತನ ಚೀಟಿ ಪಡೆಯುವ ವ್ಯವಸ್ಥೆ- ಜಾರಿ ಸ್ಕೂಟರ್‌ಗೆ ಕಾರು ಡಿಕ್ಕಿ- ಮೊಪೆಡ್‌ನಲ್ಲಿ ತೆರಳುತ್ತಿದ್ದ ಮಾವ-ಸೊಸೆ ದಾರುಣ ಸಾವು ಪೊಲೀಸ್‌ ಠಾಣೆ ಮೆಟ್ಟಿಲೇರಿದ ಹಿಟ್‌ ಧಾರಾವಾಹಿಗಳ ನಿರ್ದೇಶಕ, ನಿರ್ಮಾಪಕ ರಾಮ್​ಜೀ