NEWSನಮ್ಮಜಿಲ್ಲೆ

ಮನೆಯಲ್ಲಿಯೇ ಸುರಕ್ಷಿತವಾಗಿರಿ : ಡಾ.ಚನ್ನವೀರ ಕಣವಿ ಮನವಿ

ವಿಜಯಪಥ ಸಮಗ್ರ ಸುದ್ದಿ

ಧಾರವಾಡ: ಕೊರೊನಾ ವೈರಾಣು ಅತ್ಯಂತ ಪ್ರಬಲವಾಗಿರುವ ಈ ಸಂದರ್ಭದಲ್ಲಿ ಯಾರು ಮನೆ ಬಿಟ್ಟು, ಹೊರ ಬರದೇ ಸುರಕ್ಷಿತವಾಗಿ ಮನೆಯಲ್ಲಿಯೇ ಇರಬೇಕು ಎಂದು ನಾಡೋಜ ಡಾ.ಚನ್ನವೀರ ಕಣವಿ ಸಂದೇಶ ನೀಡಿದ್ದಾರೆ.

ಧಾರವಾಡ ಜಿಲ್ಲೆಯ ಅಧಿಕಾರಿಗಳು ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡಿದ್ದಾರೆ. ಅವರಿಗೆ ನಾವೆಲ್ಲರೂ ಬೆಂಬಲವನ್ನು ನೀಡಬೇಕು. ಬೀದಿ ಬೀದಿಯಲ್ಲಿ ತಿರುಗುವುದಾಗಲಿ, ಮಾರುಕಟ್ಟೆಗೆ ಹೋಗುವುದಾಗಲಿ, ಗುಂಪಾಗಿ ಸೇರುವುದರಿಂದ ಕೊರೊನಾ ವೈರಾಣು ಸೋಂಕು ತೀವ್ರವಾಗಿ ಹರಡುತ್ತದೆ.ಇದರಿಂದ ಜೀವ ಹಾನಿ ಸಂಭವಿಸುತ್ತವೆ. ಕೇಂದ್ರ ಮತ್ತು ರಾಜ್ಯ  ಸರ್ಕಾರಗಳು  ಸಾಕಷ್ಟು ಕ್ರಮಗಳನ್ನು ಕೈಗೊಂಡಿದೆ. ಅದಕ್ಕೆ ನಾವೆಲ್ಲರೂ ಬೆಂಬಲ ನೀಡಬೇಕು ಎಂದು ಮನವಿ ಮಾಡಿಕೊಂಡಿದ್ದಾರೆ.

ಏ.14ರವರೆಗೆ ಮದ್ಯ ಮಾರಾಟ ನಿಷೇಧ  

ಕೊರೊನಾ ವೈರಸ್ ಸೋಂಕು ಹರಡದಂತೆ ಸಾರ್ವಜನಿಕರ ಆರೋಗ್ಯ ಕಾಪಾಡುವ ದೃಷ್ಟಿಯಿಂದ ಈಗಾಗಲೇ ಜಾರಿಯಲ್ಲಿರುವ ಮದ್ಯಪಾನ, ಮದ್ಯ ಮಾರಾಟ ಹಾಗೂ ಮದ್ಯಸಾಗಾಣಿಕೆಯನ್ನು ನಿಷೇಧವನ್ನು ಎಪ್ರೀಲ್ 14ರ ಮಧ್ಯರಾತ್ರಿ 12 ಗಂಟೆಯವರೆಗೆ ಮುಂದುವರೆಸಿ  ಜಿಲ್ಲಾಧಿಕಾರಿ ದೀಪಾ ಚೋಳನ್ ಆದೇಶ ಹೊರಡಿಸಿದ್ದಾರೆ.

ಆದೇಶ ಉಲ್ಲಂಘಿಸುವವರ ವಿರುದ್ಧ ಕರ್ನಾಟಕ ಅಬಕಾರಿ ಕಾಯ್ದೆ 1965ರ ಕಲಂ 21(2)ರನ್ವಯ ಸೂಕ್ತ ಕ್ರಮಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

Leave a Reply

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ BMTC: ಅಪಘಾತದಲ್ಲಿ ಮೃತಪಟ್ಟ ನೌಕರರ ಕುಟುಂಬಕ್ಕೆ ₹1 ಕೋಟಿ ಪರಿಹಾರ ಚೆಕ್‌ ವಿತರಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸಾರಿಗೆ ನಿವೃತ್ತ ನೌಕರರಿಗೆ ಮತ್ತೊಮ್ಮೆ ಮೊಗದೊಮ್ಮೆ ನಿರಾಸೆ: ಭಾರಿ ಆಕ್ರೋಶಗೊಂಡ EPS ನಿವೃತ್ತರು ಕಾರು ಡೋರ್‌ಗೆ ಬೈಕ್‌ ಗುದ್ದಿ ಕೆಳಗೆ ಬಿದ್ದ ಮಹಿಳೆ ಮೇಲೆ ಹರಿದ ಬಿಎಂಟಿಸಿ ಬಸ್‌ ನಾಟಿ ಕೋಳಿ ಸಾರಿನ ಜತೆ ರಾಗಿಮುದ್ದೆ ನುಂಗಿದವರಿಗೆ ಗೊತ್ತು ಅದರ ಗಮ್ಮತ್ತು ನೀವು ಗಬಗಬನೆ ಊಟ ಮಾಡುವವರಿದ್ದೀರಾ? ಹಾಗಿದ್ದರೆ ನಿಮಗೆ ಈ ಸಮಸ್ಯೆ ಕಾಡದಿರದು! BMTC ನೌಕರರಿಗೆ ಆನ್-ಲೈನ್ ಮೂಲಕ ವೇತನ ಚೀಟಿ ಪಡೆಯುವ ವ್ಯವಸ್ಥೆ- ಜಾರಿ ಸ್ಕೂಟರ್‌ಗೆ ಕಾರು ಡಿಕ್ಕಿ- ಮೊಪೆಡ್‌ನಲ್ಲಿ ತೆರಳುತ್ತಿದ್ದ ಮಾವ-ಸೊಸೆ ದಾರುಣ ಸಾವು ಪೊಲೀಸ್‌ ಠಾಣೆ ಮೆಟ್ಟಿಲೇರಿದ ಹಿಟ್‌ ಧಾರಾವಾಹಿಗಳ ನಿರ್ದೇಶಕ, ನಿರ್ಮಾಪಕ ರಾಮ್​ಜೀ