NEWSನಮ್ಮರಾಜ್ಯರಾಜಕೀಯವಿಜ್ಞಾನ

ಮರಳು ನೀತಿ ಜಾರಿಗೆ ರೂಪುರೇಷೆ

ಗಣಿ ಮತ್ತು ಭೂ ವಿಜ್ಞಾನ ಸಚಿವ ಸಿ.ಸಿ. ಪಾಟೀಲ್

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು:  ರಾಜ್ಯದಲ್ಲಿ ಮರಳುನೀತಿ ಜಾರಿಗೆ ತರುವ ಕುರಿತು ರೂಪುರೇಷೆಗಳನ್ನು ಸಿದಗದ್ದಪಡಿಸಲಾಗುತ್ತಿದೆ ಎಂದು ಗಣಿ ಮತ್ತು ಭೂ ವಿಜ್ಞಾನ ಸಚಿವ ಸಿ.ಸಿ. ಪಾಟೀಲ್   ತಿಳಿಸಿದರು.

ಶುಕ್ರವಾರ  ವಿಧಾನಸಭೆಯ ಪ್ರಶ್ನೋತ್ತರ ವೇಳೆಯಲ್ಲಿ ಪುತ್ತೂರಿನ ಶಾಸಕ ಸಂಜೀವ್ ಮಠಂದೂರು ಅವರ ಪ್ರಶ್ನೆಗೆ ಉತ್ತರಿಸಿ ಮಾತನಾಡಿದರು.

ಕರಾವಳಿ ಭಾಗದಲ್ಲಿ ಮರಳು ಗಣಿಗಾರಿಕೆ ಅತ್ಯಂತ ಮುಖ್ಯವಾದ ವಿಷಯವಾಗಿದ್ದು ಸುಸ್ಥಿರ ಮರಳು ಗಣಿಗಾರಿಕೆ ನಿರ್ವಹಣೆ ಮಾರ್ಗಸೂಚಿಗಳ ಅನ್ವಯ ಮರಳನ್ನು ತೆರವುಗೊಳಿಸಲು ಹಾಗೂ ಜಲಾಶಯ, ಆಣೆಕಟ್ಟು, ಬ್ಯಾರೇಜ್,  ಕಿಂಡಿ ಆಣೆಕಟ್ಟಿನ ಹಿನ್ನೀರಿನ ಪ್ರದೇಶಗಳಲ್ಲಿ ಹೂಳಿನೊಂದಿಗೆ ಸಂಗ್ರಹವಾಗಿರುವ ಮರಳನ್ನು ತೆರವುಗೊಳಿಸಲು ಅವಕಾಶಗಳನ್ನು ಕಲ್ಪಿಸಲಾಗಿದೆ ಎಂದು ಸಧನದಲ್ಲಿ ವಿವರಿಸಿದರು.

2019ರ ಸರ್ಕಾರದ ಆದೇಶದ ಮೇರೆಗೆ ಪ್ರವಾಹದಿಂದ ನದಿಗಳ ಪಕ್ಕದ ಕೃಷಿ ಜಮೀನುಗಳಲ್ಲಿ ಸಂಗ್ರಹವಾಗುವ ಮರಳನ್ನು ತೆರವುಗೊಳಿಸಲು ಸಹ ಅವಕಾಶ ಕಲ್ಪಿಸಲಾಗಿದೆ ಎಂದು ಹೇಳಿದರು.

ಈ ಸಮಯದಲ್ಲಿ ಅನೇಕ ಸದಸ್ಯರು ರಾಜ್ಯದಲ್ಲಿ ಸಮಗ್ರ ಮರಳು ನೀತಿಯ ಜಾರಿಗೆ ಒತ್ತಾಯಿಸಿದರು.

mgid.com, 613802, DIRECT, d4c29acad76ce94f
mgid.com, 613802, DIRECT, d4c29acad76ce94f

Leave a Reply

error: Content is protected !!