NEWSನಮ್ಮಜಿಲ್ಲೆನಮ್ಮರಾಜ್ಯ

ಮೂರು ನಾಲ್ಕು ತಿಂಗಳಲ್ಲಿ ಕೆಎಸ್‌ಆರ್‌ಟಿಸಿ ಸ್ಥಗಿತಕೊಳ್ಳುವ ಆತಂಕ : ಶೋಭಾ ಕರಂದ್ಲಾಜೆ

ವಿಜಯಪಥ ಸಮಗ್ರ ಸುದ್ದಿ

ಉಡುಪಿ: ರಾಜ್ಯದಲ್ಲಿ ಕಾಂಗ್ರೆಸ್‌ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಗ್ಯಾರಂಟಿ ಜಾರಿಯಿಂದಾಗಿ ಮೂರು ನಾಲ್ಕು ತಿಂಗಳಲ್ಲಿ ಕೆಎಸ್‌ಆರ್‌ಟಿಸಿ ಸ್ಥಗಿತಕೊಳ್ಳುವ ಆತಂಕ ಇದೆ ಎಂದು ಕೇಂದ್ರದ ರಾಜ್ಯ ಕೃಷಿ ಸಚಿವರಾದ ಶೋಭಾ ಕರಂದ್ಲಾಜೆ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೆಎಸ್‌ಅರ್‌ಟಿಸಿಗೆ ಬಜೆಟ್‌ನಲ್ಲಿ ವಿಶೇಷ ಅನುದಾನ ಕೊಟ್ಟಿಲ್ಲ. 200 ಯೂನಿಟ್ ಉಚಿತ ವಿದ್ಯುತ್ ಇವತ್ತಿನ ತನಕ ಕಾರ್ಯರೂಪಕ್ಕೆ ಬಂದಿಲ್ಲ. ಗೃಹಲಕ್ಷ್ಮೀ ಮತ್ತು ನಿರುದ್ಯೋಗಿ ಭತ್ಯೆ ಮುಂದೂಡುತ್ತಿದ್ದಾರೆ ಎಂದರು.

ಇನ್ನು ಮೂರು ನಾಲ್ಕು ಯೋಜನೆಗಳಿಗೆ ನೋಂದಣಿ ಪ್ರಕ್ರಿಯೆ ನಡೆಯುತ್ತಿರಬಹುದು. ಆದರೆ ಬಜೆಟ್‌ನಲ್ಲಿ ಎಷ್ಟು ಅನುದಾನ ಇಡಲಾಗಿದೆ ಎಂದು  ಪ್ರಶ್ನಿಸಿದ ಅವರು, ರಾಜ್ಯದಲ್ಲಿ ಎಲ್ಲ ಗ್ಯಾರಂಟಿ ವಿಚಾರದಲ್ಲಿ ಗೊಂದಲ ಕಾಡುತ್ತಿದೆ ಎಂದು ತಿಳಿಸಿದರು.

ಕೇಂದ್ರ ಸರ್ಕಾರ ಕರೆದಿರುವ ಅಕ್ಕಿ ಟೆಂಡರ್‌ನಲ್ಲಿ ಬಿಡ್ ಮಾಡುತ್ತಿಲ್ಲ. ಆದರೆ, ನಮ್ಮ ಪ್ರಧಾನಿ ನರೇಂದ್ರ ಮೋದಿಯವರನ್ನು ಮಾತ್ರ ದೂರುವ ಚಾಳಿ ಮುಂದುವರಿಸಿದ್ದಾರೆ. ಗ್ಯಾರಂಟಿ ಜಾರಿಯಾದ ನಂತರ ಸಂಬಂಧಪಟ್ಟ ಇಲಾಖೆಯ ನಷ್ಟ ಹೇಗೆ ತುಂಬಲಾಗುತ್ತದೆ ಎಂದು ಪ್ರಶ್ನಿಸಿದರು.

ಇನ್ನು ರಾಜ್ಯದ ನಾಲ್ಕೂ ಸಾರಿಗೆ ನಿಗಮಗಳ ಬಸ್‌ಗಳಲ್ಲೂ ಮಹಿಳೆಯರು ಪ್ರಯಾಣಿಸುತ್ತಿದ್ದಾರೆ. ಆದರೆ, ಕಳೆದ ತಿಂಗಳ ಹಣವನ್ನು ನಿಗಮಗಳಿಗೆ ಇನ್ನೂ ಬಿಡುಗಡೆ ಮಾಡದೆ ಹಣ ಹೊಂದಿಸಲು ಹೆಣಗಾಡುತ್ತಿದ್ದಾರೆ. ಇದನ್ನೆಲ್ಲ ನೋಡಿದರೆ ಗೊತ್ತಾಗುತ್ತದೆ ಇವರು ಎಷ್ಟರ ಮಟ್ಟಿಗೆ ಹೇಳಿದಂತೆ ನಡೆದುಕೊಳ್ಳುತ್ತಿದ್ದಾರೆ ಎಂದು ಹೇಳಿದರು.

Leave a Reply

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ಹಿಂದಿನಿಂದ ವೇಗವಾಗಿ ಬಂದ ಕಾರು ಮುಂದೆ ಹೋಗುತ್ತಿದ್ದ ಕಾರ್‌ ಮೇಲೇರಿತು! ರೈತ ನಾಯಕ ಕುರುಬೂರು ಶಾಂತಕುಮಾರ್‌ಗೆ ಬೆಂಗಳೂರಿನಲ್ಲಿ ಚಿಕಿತ್ಸೆ: ಸಿಎಂ ಸಿದ್ದರಾಮಯ್ಯ ಮಹಾಕುಂಭ ಮೇಳಕ್ಕೆ ತೆರಳುತ್ತಿದ್ದ 18 ಮಂದಿ ದೆಹಲಿ ರೈಲು ನಿಲ್ದಾಣದಲ್ಲಿ ಕಾಲ್ತುಳಿತಕ್ಕೆ ಸಿಲುಕಿ ಮೃತ ಮಳೆ ನೀರು ಕೊಯ್ಲಿನಿಂದ ಅಂತರ್ಜಲ ವೃದ್ಧಿ: ಕೃಷಿ ಇಲಾಖೆ ಉಪ ನಿರ್ದೇಶಕಿ ಗಾಯತ್ರಿ ಗ್ರಾಮೀಣ ಪುನರ್ವಸತಿ ಕಾರ್ಯಕರ್ತರ ನೇಮಕಕ್ಕೆ ಅರ್ಜಿ ಆಹ್ವಾನ ಬಿಬಿಎಂಪಿ: ಕಸ ಬಿಸಾಡುವ ಸ್ಥಳ ನಿರ್ಮೂಲನೆ ಜತೆ ಜೆತೆಗೆ ಸ್ವಚ್ಛತಾ ಅಭಿಯಾನ KSRTC ರಿಯಾಯಿತಿ ದರದ ಪಾಸ್‌ ಇದ್ದರೂ ತಾರತಮ್ಯತೆ: ನಿವೃತ್ತರಾದ ಮೇಲೆ ಅಧಿಕಾರಿಗಳಿಗೆ ಬಡತನ- ನೌಕರರಿಗೆ ಸಿರಿತನ !! ಪಂಜಾಬ್‌ನಲ್ಲಿ ಕುರುಬೂರು ಶಾಂತಕುಮಾರ್ ಇದ್ದ ಕಾರು ಅಪಘಾತ: ಆಸ್ಪತ್ರೆಗೆ ದಾಖಲು ಬಿಬಿಎಂಪಿ: 1.84 ಲಕ್ಷ ಬೀದಿ ನಾಯಿಗಳಿಗೆ "ಸಂಯುಕ್ತ ಲಸಿಕೆ" ಹಾಕುವ ಗುರಿ- ತುಷಾರ್ ಗಿರಿನಾಥ್ ಮೈಕ್ರೋಫೈನಾನ್ಸ್ ಸಂಸ್ಥೆಗಳ ಕಿರುಕುಳ ನಿಯಂತ್ರಣಕ್ಕೆ ಸರ್ಕಾರಿ ಆಧ್ಯಾದೇಶ ಜಾರಿ