CrimeNEWSನಮ್ಮರಾಜ್ಯಸಿನಿಪಥ

ಮಲ್ಲೇಶ್ವರಂ: ಸ್ಪಂದನಾರ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದ ಗಣ್ಯರು

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಸ್ಯಾಂಡಲ್​ವುಡ್​ನ ನಟ ವಿಜಯ್ ರಾಘವೇಂದ್ರ ಅವರ ಪತ್ನಿ ಸ್ಪಂದನ ಅವರ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ಮಲ್ಲೇಶ್ವರಂನ ನಿವಾಸದಲ್ಲಿ ಏರ್ಪಾಡು ಮಾಡಲಾಗಿದದ್ದು, ಈಗಾಗಲೇ ಸಂಬಂಧಿಕರು, ಸ್ನೇಹಿತರು, ಅಭಿಮಾನಿಗಳು ದರ್ಶನ ಪಡೆಯುತ್ತಿದ್ದಾರೆ.

ಇದೇ ವೇಳೆ ಹಿರಿಯ ನಟ ಶ್ರೀನಾಥ್, ಗಿರಿಜಾ ಲೋಕೇಶ್ ಹಾಗೂ ನಟ ರಾಘವೇಂದ್ರ ರಾಜ್​ಕುಮಾರ್, ಪುನೀತ್‌ರಾಜ್‌ ಕುಮಾರ್‌ ಪತ್ನಿ ಅಶ್ವಿನಿ ಸೇರಿದಂತೆ ನೂರಾರು ಗಣ್ಯರು ಅಂತಿಮ ದರ್ಶನ ಪಡೆದು ಕಂಬನಿ ಮಿಡಿದ್ದಾರೆ.

ಈ ವೇಳೆ ಮಾತನಾಡಿದ ನಟ ರಾಘವೇಂದ್ರ ರಾಜ್​ಕುಮಾರ್, ಕೆಲವೊಂದು ಸಮಯದಲ್ಲಿ ಎಲ್ಲ ಸ್ತಬ್ಧವಾಗಿಬಿಡುತ್ತೆ. ಇದಕ್ಕೆ ಏನು ಮಾತನಾಡಬೇಕೆಂದು ಗೊತ್ತಾಗಲ್ಲ. ಹೋಗುವವರು ಹೊರಟು ಹೋಗ್ತಾರೆ. ಇರೋರ ಕಷ್ಟ ನೋಡೋಕೆ ಆಗಲ್ಲ. ಸ್ಪಂದನ ಇನ್ನಿಲ್ಲವೆಂದು ತಂದೆಗೆ ಹೇಳೋದಾ, ಪತಿ ರಾಘುಗೆ ಹೇಳೋದಾ ಗೊತ್ತಾಗುತ್ತಿಲ್ಲ.

ರಾಘು, ಅಪ್ಪು ಎಲ್ಲ ನಮ್ಮ ಮನೆಯಲ್ಲಿ ಬೆಳೆದವರು. ಇಂತಹ ಚಿಕ್ಕವರಿಗೆ ಹೀಗೆ ಆಗುತ್ತೆ ಎಂದರೆ ತಡೆದುಕೊಳ್ಳಲು ಆಗಲ್ಲ. ನನ್ನ ಹೆಸರೇ ಇರುವ ರಾಘುನನ್ನ ಮನೆಯಲ್ಲಿ ಸಣ್ಣರಾಘು ಎಂದರೆ, ನನ್ನನ್ನು ದೊಡ್ಡ ರಾಘು ಎಂದು ಕರೆಯುತ್ತಾರೆ. ಅವರನ್ನ ತಬ್ಬಿಕೊಂಡು ಏನು ಹೇಳಬೇಕು ಎಂದು ತೋಚಲಿಲ್ಲ ಎಂದು ರಾಘವೇಂದ್ರ ರಾಜ್​ಕುಮಾರ್​ ದುಃಖಿತರಾದರು.

ನಟಿ ಗಿರಿಜಾ ಲೋಕೇಶ್ ಹಾಗೂ ಶ್ರೀನಾಥ್: ನಟಿ ಗಿರಿಜಾ ಲೋಕೇಶ್, ಸ್ಪಂದನಾ ಅವರ ಮುಖದಲ್ಲಿದ್ದ ಕಳೆ ಒಂದಿಷ್ಟು ಮಾಸೇಯಿಲ್ಲ. ಇನ್ನು ಬದುಕೆ ಇದ್ದಾಳೆ ಅನಿಸುತ್ತೆ. ದೇವರು ಎಂತ ಕ್ರೂರಿ, ಒಂದು ಸುಂದರ ಸಂಸಾರವನ್ನು ಹಾಳು ಮಾಡಿಬಿಟ್ಟ. ನಮ್ಮಂತವರಿಗೆ ಅಂತಹ ಸಾವು ಬಂದರೇ ಮಲಗಿದ್ದಲ್ಲಿ ಸುಖವಾಗಿ ಹೋಗುತ್ತೀವಿ. ಇಷ್ಟು ಪುಟ್ಟ ಮಕ್ಕಳಿಗೆ ಹೀಗಾದರೆ ಏನು ಮಾಡುವುದು ಎಂದು ಕಣ್ಣೀರು ಹಾಕಿದರು.

ಸ್ಪಂದನಾ ಅವರ ತಂದೆ, ತಾಯಿಗೆ ದೇವರು ಆಕೆಯ ಅಗಲಿಕೆಯನ್ನು ಸಹಿಸಿಕೊಳ್ಳುವ ಶಕ್ತಿ ನೀಡಲಿ. ನಮ್ಮ ರಾಘುನಾ, ಶೌರ್ಯನ ದೇವರು ಕಾಪಾಡಲಿ. ಇಂತಹ ಸಾವು ಯಾರಿಗೂ ಬರಬಾರದು ಎಂದು ಕಣ್ಣೀರು ಹಾಕಿದರು.

ಇನ್ನು ಹಿರಿಯ ನಟ ಶ್ರೀನಾಥ್ ಮಾತನಾಡಿ, ಆ ಮಗು ಆತ್ಮಕ್ಕೆ ಶಾಂತಿ ಸಿಗಲಿ. ನಮ್ಮ ರಾಘುಗೆ ದುಃಖ ತಡೆದುಕೊಳ್ಳುವ ಶಕ್ತಿ ಆ ದೇವರು ಕೊಡಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಹೇಳಿದರು.

Leave a Reply

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ಹಿಂದಿನಿಂದ ವೇಗವಾಗಿ ಬಂದ ಕಾರು ಮುಂದೆ ಹೋಗುತ್ತಿದ್ದ ಕಾರ್‌ ಮೇಲೇರಿತು! ರೈತ ನಾಯಕ ಕುರುಬೂರು ಶಾಂತಕುಮಾರ್‌ಗೆ ಬೆಂಗಳೂರಿನಲ್ಲಿ ಚಿಕಿತ್ಸೆ: ಸಿಎಂ ಸಿದ್ದರಾಮಯ್ಯ ಮಹಾಕುಂಭ ಮೇಳಕ್ಕೆ ತೆರಳುತ್ತಿದ್ದ 18 ಮಂದಿ ದೆಹಲಿ ರೈಲು ನಿಲ್ದಾಣದಲ್ಲಿ ಕಾಲ್ತುಳಿತಕ್ಕೆ ಸಿಲುಕಿ ಮೃತ ಮಳೆ ನೀರು ಕೊಯ್ಲಿನಿಂದ ಅಂತರ್ಜಲ ವೃದ್ಧಿ: ಕೃಷಿ ಇಲಾಖೆ ಉಪ ನಿರ್ದೇಶಕಿ ಗಾಯತ್ರಿ ಗ್ರಾಮೀಣ ಪುನರ್ವಸತಿ ಕಾರ್ಯಕರ್ತರ ನೇಮಕಕ್ಕೆ ಅರ್ಜಿ ಆಹ್ವಾನ ಬಿಬಿಎಂಪಿ: ಕಸ ಬಿಸಾಡುವ ಸ್ಥಳ ನಿರ್ಮೂಲನೆ ಜತೆ ಜೆತೆಗೆ ಸ್ವಚ್ಛತಾ ಅಭಿಯಾನ KSRTC ರಿಯಾಯಿತಿ ದರದ ಪಾಸ್‌ ಇದ್ದರೂ ತಾರತಮ್ಯತೆ: ನಿವೃತ್ತರಾದ ಮೇಲೆ ಅಧಿಕಾರಿಗಳಿಗೆ ಬಡತನ- ನೌಕರರಿಗೆ ಸಿರಿತನ !! ಪಂಜಾಬ್‌ನಲ್ಲಿ ಕುರುಬೂರು ಶಾಂತಕುಮಾರ್ ಇದ್ದ ಕಾರು ಅಪಘಾತ: ಆಸ್ಪತ್ರೆಗೆ ದಾಖಲು ಬಿಬಿಎಂಪಿ: 1.84 ಲಕ್ಷ ಬೀದಿ ನಾಯಿಗಳಿಗೆ "ಸಂಯುಕ್ತ ಲಸಿಕೆ" ಹಾಕುವ ಗುರಿ- ತುಷಾರ್ ಗಿರಿನಾಥ್ ಮೈಕ್ರೋಫೈನಾನ್ಸ್ ಸಂಸ್ಥೆಗಳ ಕಿರುಕುಳ ನಿಯಂತ್ರಣಕ್ಕೆ ಸರ್ಕಾರಿ ಆಧ್ಯಾದೇಶ ಜಾರಿ