NEWSನಮ್ಮರಾಜ್ಯರಾಜಕೀಯ

ಮಲೈಮಹದೇಶ್ವರ ಬೆಟ್ಟಕ್ಕೆ ಹವಾನಿಯಂತ್ರಿತ ಬಸ್ ಸೌಲಭ್ಯ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಮಲೈಮಹದೇಶ್ವರ ಬೆಟ್ಟಕ್ಕೆ ವೋಲ್ವೋ ಬಸ್ ಬದಲಾಗಿ ಇತರೆ ಮಾದರಿಯ ಹವನಿಯಂತ್ರಿತ ಬಸ್ ಸೌಲಭ್ಯ ಕಲ್ಪಿಸಲು ಕ್ರಮಕೈಗೊಳ್ಳಲಾಗುವುದು ಎಂದು ಸಾರಿಗೆ ಸಚಿವ ಲಕ್ಷ್ಮಣ ಸಂಗಪ್ಪ ಸವದಿ ತಿಳಿಸಿದರು.

ವಿಧಾನಪರಿಷತ್ತಿನಲ್ಲಿ ನಡೆದ ಪ್ರಶ್ನೋತ್ತರ ವೇಳೆ ಮರೀತಿಬ್ಬೇಗೌಡ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಶ್ರೀ ಮಲೈಮಹದೇಶ್ವರ ಬೆಟ್ಟದ ರಸ್ತೆಯು ತಿರುವುಗಳನ್ನು ಹೊಂದಿರುವ ಕಡಿದಾದ ರಸ್ತೆಯಾಗಿರುವುದರಿಂದ ಸದರಿ ರಸ್ತೆಗಳಲ್ಲಿ ಬೆಂಗಳೂರು ಮತ್ತು ಮೈಸೂರಿನಿಂದ ಹವಾನಿಯಂತ್ರಿತ ವೋಲ್ವೋ (ಐರಾವತ) ಬಸ್‍ಗಳ ಕಾರ್ಯಾಚರಣೆ ಮಾಡುವುದು ಕಷ್ಟಸಾಧ್ಯವಾಗಿರುವುದರಿಂದ ಕೆ.ಎಸ್.ಆರ್.ಟಿ.ಸಿಯಿಂದ ಹವಾನಿಯಂತ್ರಿತ ವೋಲ್ವೋ ಬಸ್ (ಐರಾವತ) ಬಸ್‍ಗಳ ಸೌಲಭ್ಯ ಕಲ್ಪಿಸಿಲ್ಲ ಎಂದರು.

ಪ್ರತಿನಿತ್ಯ ಬೆಂಗಳೂರಿನಿಂದ   ಮಲೈಮಹದೇಶ್ವರ ಬೆಟ್ಟಕ್ಕೆ 15 ವೇಗದೂತ ಸಾರಿಗೆ  ಕಾರ್ಯಾಚರಣೆಯಲ್ಲಿದೆ. ಮೈಸೂರಿನಿಂದ 20 ವೇಗದೂತ ಬಸ್‍ಗಳು ಕಾರ್ಯಾಚರಣೆಯಲ್ಲಿವೆ. ಮೈಸೂರು, ಬೆಂಗಳೂರು, ಚಾಮರಾಜನಗರ, ರಾಮನಗರ, ಮಂಡ್ಯ, ಕೋಲಾರ, ಶಿವಮೊಗ್ಗ ಮುಂತಾದ ಸ್ಥಳಗಳಿಗೆ ಒಟ್ಟಾರೆ 73 ವೇಗದೂತ ಸಾರಿಗೆಗಳನ್ನು ಪ್ರತಿನಿತ್ಯ ಕಾರ್ಯಚರಣೆ ಮಾಡಲಾಗುತಿದೆ. ಬೆಟ್ಟದಲ್ಲಿ ನಡೆಯುವ ವಿವಿಧ ಜಾತ್ರೆಗಳು, ಅಮಾಸ್ಯೆ, ಹುಣ್ಣಿಮೆ ಮುಂತಾದ ದಿನಗಳಲ್ಲಿ ಜನದಟ್ಟಣೆಗೆ ಅನುಗುಣವಾಗಿ ಹೆಚ್ಚುವರಿ ಸಾರಿಗೆಗಳನ್ನು ಆಚರಣೆ ಮಾಡಲಾಗುತ್ತಿದೆ ಎಂದು ತಿಳಿಸಿದರು.

ಮುಂದಿನ ದಿನಗಳಲ್ಲಿ ರಸ್ತೆಗಳನ್ನು ಪರಿಶೀಲಿಸಿ ವೋಲ್ವೋ ಬಸ್‍ಗಳ ಬದಲಾಗಿ ಬೇರೆ ಮಾದರಿಯ ಹವಾನಿಯಂತ್ರಿತ ಬಸ್ ಸೌಲಭ್ಯ ಕಲ್ಪಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವರು ಸದನದಲ್ಲಿ ತಿಳಿಸಿದರು.

Leave a Reply

error: Content is protected !!
LATEST
ಮೈತ್ರಿ ತೆಕ್ಕೆಗೆ ಬನ್ನೂರು ಪುರಸಭೆ: ಜೆಡಿಎಸ್‌ಗೆ ಅಧ್ಯಕ್ಷ ಗದ್ದುಗೆ, ಬಿಜೆಪಿಗೆ ಉಪಾಧ್ಯಕ್ಷ ಗಾದಿ ರಾಜ್ಯದ ಆರು ಪ್ರತ್ಯೇಕ ಸ್ಥಳಗಳಲ್ಲಿ ಅಪಘಾತ: 13 ಮಂದಿ ಸಾವು, ಹಲವರಿಗೆ ಗಾಯ ಯಡಿಯೂರು ಕೆರೆ: ಗಣಪತಿ ವಿಸರ್ಜನಾ ಕಲ್ಯಾಣಿಗೆ ನೀರು ತುಂಬಿಸಿದ ಬಿಬಿಎಂಪಿ ತಂದೆ ನಿಧನರಾದ ದುಃಖದಲ್ಲಿರುವ ನೌಕರನಿಗೆ ರಜೆ ಕೊಡದೆ ಗೈರು ತೋರಿಸಿದ್ದು ಅಲ್ಲದೆ ಕಾರಣ ಕೇಳಿ ನೋಟಿಸ್‌ ಕೊಟ್ಟ ಅಧಿಕಾರಿ... KKRTC ಬಸ್‌-ಶಾಲಾ ಬಸ್‌ ಮುಖಾಮುಖಿ ಡಿಕ್ಕಿ: ಇಬ್ಬರು ಮೃತ- 25ಕ್ಕೂ ಹೆಚ್ಚು ಮಕ್ಕಳಿಗೆ ಗಾಯ KSRTC: 38 ತಿಂಗಳ ವೇತನ ಹೆಚ್ಚಳ ಹಿಂಬಾಕಿಗೆ ಆಗ್ರಹಿಸಿ BMS ಪ್ರತಿಭಟನೆ- ಸರ್ಕಾರದ ವಿರುದ್ಧ ಕಿಡಿ MSRTC: ನೌಕರರ ಮುಷ್ಕರಕ್ಕೆ ಮಣಿದು 6500 ರೂ. ವೇತನ ಹೆಚ್ಚಳಕ್ಕೆ ಒಪ್ಪಿದ ಸರ್ಕಾರ- ಧರಣಿ ವಾಪಸ್‌ MSRTC: ತೀವ್ರಗೊಂಡ ನೌಕರರ ಮುಷ್ಕರ- 11 ಸಂಘಟನೆಗಳ ಒಗ್ಗಟ್ಟು- ನಿಗಮಕ್ಕೆ ನಡುಕ ಚಾಮುಂಡಿಬೆಟ್ಟದಲ್ಲಿ ಧೂಮಪಾನ, ಮದ್ಯಪಾನ, ಗುಟ್ಕಾ ನಿಷೇಧ: ಸಿಎಂ ಘೋಷಣೆ ಪೋಡಿ ಮುಕ್ತ ಅಭಿಯಾನ, ಪೌತಿ ಖಾತೆ ಆಂದೋಲನಕ್ಕೆ ಕ್ರಮ: ಕಂದಾಯ ಸಚಿವ ಕೃಷ್ಣ ಬೈರೇಗೌಡ