NEWSನಮ್ಮರಾಜ್ಯರಾಜಕೀಯ

ಮಲೈಮಹದೇಶ್ವರ ಬೆಟ್ಟಕ್ಕೆ ಹವಾನಿಯಂತ್ರಿತ ಬಸ್ ಸೌಲಭ್ಯ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಮಲೈಮಹದೇಶ್ವರ ಬೆಟ್ಟಕ್ಕೆ ವೋಲ್ವೋ ಬಸ್ ಬದಲಾಗಿ ಇತರೆ ಮಾದರಿಯ ಹವನಿಯಂತ್ರಿತ ಬಸ್ ಸೌಲಭ್ಯ ಕಲ್ಪಿಸಲು ಕ್ರಮಕೈಗೊಳ್ಳಲಾಗುವುದು ಎಂದು ಸಾರಿಗೆ ಸಚಿವ ಲಕ್ಷ್ಮಣ ಸಂಗಪ್ಪ ಸವದಿ ತಿಳಿಸಿದರು.

Loading poll ...
KSRTC ನೌಕರರಿಗೆ ಸರಿಸಮಾನ ವೇತನ OR ಅಗ್ರಿಮೆಂಟ್‌ ನಿಮ್ಮ ಆಯ್ಕೆ ಯಾವುದು?

ವಿಧಾನಪರಿಷತ್ತಿನಲ್ಲಿ ನಡೆದ ಪ್ರಶ್ನೋತ್ತರ ವೇಳೆ ಮರೀತಿಬ್ಬೇಗೌಡ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಶ್ರೀ ಮಲೈಮಹದೇಶ್ವರ ಬೆಟ್ಟದ ರಸ್ತೆಯು ತಿರುವುಗಳನ್ನು ಹೊಂದಿರುವ ಕಡಿದಾದ ರಸ್ತೆಯಾಗಿರುವುದರಿಂದ ಸದರಿ ರಸ್ತೆಗಳಲ್ಲಿ ಬೆಂಗಳೂರು ಮತ್ತು ಮೈಸೂರಿನಿಂದ ಹವಾನಿಯಂತ್ರಿತ ವೋಲ್ವೋ (ಐರಾವತ) ಬಸ್‍ಗಳ ಕಾರ್ಯಾಚರಣೆ ಮಾಡುವುದು ಕಷ್ಟಸಾಧ್ಯವಾಗಿರುವುದರಿಂದ ಕೆ.ಎಸ್.ಆರ್.ಟಿ.ಸಿಯಿಂದ ಹವಾನಿಯಂತ್ರಿತ ವೋಲ್ವೋ ಬಸ್ (ಐರಾವತ) ಬಸ್‍ಗಳ ಸೌಲಭ್ಯ ಕಲ್ಪಿಸಿಲ್ಲ ಎಂದರು.

ಪ್ರತಿನಿತ್ಯ ಬೆಂಗಳೂರಿನಿಂದ   ಮಲೈಮಹದೇಶ್ವರ ಬೆಟ್ಟಕ್ಕೆ 15 ವೇಗದೂತ ಸಾರಿಗೆ  ಕಾರ್ಯಾಚರಣೆಯಲ್ಲಿದೆ. ಮೈಸೂರಿನಿಂದ 20 ವೇಗದೂತ ಬಸ್‍ಗಳು ಕಾರ್ಯಾಚರಣೆಯಲ್ಲಿವೆ. ಮೈಸೂರು, ಬೆಂಗಳೂರು, ಚಾಮರಾಜನಗರ, ರಾಮನಗರ, ಮಂಡ್ಯ, ಕೋಲಾರ, ಶಿವಮೊಗ್ಗ ಮುಂತಾದ ಸ್ಥಳಗಳಿಗೆ ಒಟ್ಟಾರೆ 73 ವೇಗದೂತ ಸಾರಿಗೆಗಳನ್ನು ಪ್ರತಿನಿತ್ಯ ಕಾರ್ಯಚರಣೆ ಮಾಡಲಾಗುತಿದೆ. ಬೆಟ್ಟದಲ್ಲಿ ನಡೆಯುವ ವಿವಿಧ ಜಾತ್ರೆಗಳು, ಅಮಾಸ್ಯೆ, ಹುಣ್ಣಿಮೆ ಮುಂತಾದ ದಿನಗಳಲ್ಲಿ ಜನದಟ್ಟಣೆಗೆ ಅನುಗುಣವಾಗಿ ಹೆಚ್ಚುವರಿ ಸಾರಿಗೆಗಳನ್ನು ಆಚರಣೆ ಮಾಡಲಾಗುತ್ತಿದೆ ಎಂದು ತಿಳಿಸಿದರು.

ಮುಂದಿನ ದಿನಗಳಲ್ಲಿ ರಸ್ತೆಗಳನ್ನು ಪರಿಶೀಲಿಸಿ ವೋಲ್ವೋ ಬಸ್‍ಗಳ ಬದಲಾಗಿ ಬೇರೆ ಮಾದರಿಯ ಹವಾನಿಯಂತ್ರಿತ ಬಸ್ ಸೌಲಭ್ಯ ಕಲ್ಪಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವರು ಸದನದಲ್ಲಿ ತಿಳಿಸಿದರು.

Leave a Reply

error: Content is protected !!
LATEST
BMTC: 2020 ಜ.1ರಿಂದ 2023 ಮಾ.31ರ ನಡುವೆ ನಿವೃತ್ತರಾದ ನೌಕರರ ಉಪಧನ, ನಿವೃತ್ತಿ ಗಳಿಕೆ ರಜೆ ನಗದೀಕರಣ ಲೆಕ್ಕಾಚಾರ ಮಾಡ... 4ನಿಗಮಗಳ ಅಧಿಕಾರಿಗಳು-ನೌಕರರಿಗೂ ಸರಿಸಮಾನ ವೇತನ ಕೊಡಿ: ಸಾರಿಗೆ ಸಚಿವರು, ಅಧಿಕಾರಿಗಳಿಗೆ KSRTC ಸಿಬ್ಬಂದಿ, ಲೆಕ್ಕ ಪತ್... ಮಾಧ್ಯಮ ಮಾನ್ಯತೆ ಹೊಂದಿರುವ ಪತ್ರಕರ್ತರಿಗೆ “ಮೀಡಿಯಾ ಕಿಟ್” ವಿತರಣೆಗೆ ಅರ್ಜಿ ಆಹ್ವಾನ ಅ.28ರಂದು ಇಪಿಎಸ್ ಪಿಂಚಣಿದಾರರ ಬೃಹತ್ ಪ್ರತಿಭಟನೆ: BMTC ‍& KSRTC ಸಂಘದ ಕಾರ್ಯಾಧ್ಯಕ್ಷ ನಂಜುಂಡೇಗೌಡ BMTC ಕಂಡಕ್ಟರ್‌ಗೆ ಕಲ್ಲಿನಿಂದ ಹೊಡೆದ ಕಿರಾತಕ: ಆತಂಕದಲ್ಲೇ ಡ್ಯೂಟಿ, ಚಾಲನಾ ಸಿಬ್ಬಂದಿಗಳಿಗಿಲ್ಲ ಜೀವ ರಕ್ಷಣೆ KKRTC ಬಸ್‌ ಪಲ್ಟಿ ಮಹಿಳೆ ಸಾವು- ಒಬ್ಬರ ಸ್ಥಿತಿ ಗಂಭೀರ, 20ಕ್ಕೂ ಹೆಚ್ಚು ಮಂದಿಗೆ ಗಾಯ ವಿಜಯಪಥ ವರದಿ ಪರಿಣಾಮ-KSRTC ಚಾಲಕನಿಗೆ ಕೊಟ್ಟಿದ್ದ ಮೆಮೋ ವಾಪಸ್‌ ಪಡೆದು 20ದಿನಗಳ ರಜೆ ಮಂಜೂರು ಮಾಡಿದ ಡಿಸಿ ಸಾರಿಗೆ ನೌಕರರಿಂದ ಚುನಾಯಿತರಾಗದ ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ ಸರಿ ಸಮಾನ... KSRTC ನೌಕರರ ಸಂಬಳ ಅ.30ರಂದೇ ಬ್ಯಾಂಕ್ ಖಾತೆಗೆ ಜಮೆ: ಸಂಸ್ಥೆ ನಿರ್ದೇಶಕರು ಬೆಳಗಾವಿಯಲ್ಲಿ ವಿಧಾನಮಂಡಲದ ಜಂಟಿ ಅಧಿವೇಶನಕ್ಕೆ ಬರಾಕ್ ಓಬಾಮಾ ಆಹ್ವಾನಕ್ಕೆ ಚಿಂತನೆ : ಸಚಿವ ಎಚ್.ಕೆ. ಪಾಟೀಲ