CrimeNEWSದೇಶ-ವಿದೇಶಸಿನಿಪಥ

ಮಾಳವಿಕಾ ಅವಿನಾಶ್ ಬಂಧನಕ್ಕೆ ಬಲೆ ಬೀಸಿದ್ದ ಮುಂಬೈ ಪೊಲೀಸರು- ಸತ್ಯ ತಿಳಿದು ದೂರು ನೀಡಲು ಸಲಹೆ ಇತ್ತರು

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಯಶ್ ನಟನೆಯ ಕೆಜಿಎಫ್ ಸಿನಿಮಾದಲ್ಲಿ ಪತ್ರಕರ್ತೆ ದೀಪಾ ಹೆಗಡೆ ಪಾತ್ರ ಮಾಡಿದ್ದ ಮಾಳವಿಕಾ ಅವಿನಾಶ್ ಅವರ ಆಧಾರ್ ಕಾರ್ಡ್ಅನ್ನು ಅಪರಿಚಿತರು ದುರುಪಯೋಗ ಪಡಿಸಿಕೊಂಡು ಮೊಬೈಲ್‌ ಸಿಮ್‌ ಖರೀದಿಸಿ ಅದರಲ್ಲಿ ಅಶ್ಲೀಲ ಮೆಸೇಜ್‌ ಕಳುಹಿಸಿದ್ದ ವಿಷಯ ಬಹಿರಂಗವಾಗಿದೆ.

ಈ ಮಾಹಿತಿಯನ್ನು ಸ್ವತಃ ಮಾಳವಿಕಾ ಅವರೇ ವಿಡಿಯೋ ಮಾಡಿ, ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಅವರ ಆಧಾರ್ ಕಾರ್ಡ್ ದುರ್ಬಳಕೆ ಆಗಿರುವ ಕುರಿತು ಮಾಹಿತಿ ನೀಡಿರುವ ಅವರು, ನನ್ನ ಹೆಸರಿನಲ್ಲಿ ಅಪರಿಚಿತರು ಸಿಮ್‌ ಖರೀದಿಸಿದ್ದಾರೆ ಎಂದು ತಿಳಿಸಿದ್ದಾರೆ.

ಇನ್ನು ಈ ಖರೀದಿಸಿದ ಸಿಮ್‌ ಮೂಲಕ ಅಶ್ಲೀಲ ಮೆಸೇಜ್‌, ವಿಡಿಯೋ ಕಳುಹಿಸುತ್ತಿದ್ದಾರೆ ಎಂದು ಮಾಳವಿಕಾ ಅವಿನಾಶ್ ಹೆಸರಿನಲ್ಲಿ ಮುಂಬೈನ ಪೊಲೀಸ್ ಠಾಣೆಯಲ್ಲಿ ದೂರು ಸಲ್ಲಿಕೆಯಾಗಿದೆ. ಹಾಗಾಗಿ ಮಾಳವಿಕಾ ಅವರಿಗೆ ಮುಂಬೈ ಪೊಲೀಸರು ಕರೆ ಮಾಡಿ, ವಿಚಾರಿಸಿದ್ದಾರೆ.

ಮುಂಬೈ ಪೊಲೀಸರು ಕರೆ ಮಾಡಿ ಕೇಸ್‌ ದಾಖಲಾಗಿರುವ ಬಗ್ಗೆ ತಿಳಿಸಿದ್ದಾಗ ಮಾಳವಿಕಾ ಅವರು ಅಚ್ಚರಿ ಮತ್ತು ಆತಂಕಕ್ಕೆ ಒಂದು ಕ್ಷಣ ಒಳಗಾಗಿದ್ದಾರೆ. ಬಳಿಕ ಸುಧಾರಿಸಿಕೊಂಡು ವಂಚನೆ ಬಗ್ಗೆ ಪೊಲೀಸರಿಗೆ ತಿಳಿಸಿದ್ದಾರೆ.

ಮುಂಬೈನಿಂದ ಕರೆ ಮಾಡಿದ್ದ ಪೊಲೀಸ್ ಅಧಿಕಾರಿಗಳು ಮಾಳವಿಕಾ ಅವಿನಾಶ್ ಅವರ ಬಂಧನಕ್ಕೆ ಸಿದ್ಧತೆ ಮಾಡಿಕೊಂಡಿದ್ದರು. ಅಷ್ಟರಲ್ಲಿ ಸ್ವತಃ ಮಾಳವಿಕಾ ಅವರೇ ಪೊಲೀಸರಿಗೆ ಕರೆ ಮಾಡಿ, ತಮ್ಮ ಆಧಾರ್ ಕಾರ್ಡ್ ಅನ್ನು ಸೈಬರ್ ವಂಚಕರು ದುರ್ಬಳಕೆ ಮಾಡಿಕೊಂಡಿದ್ದಾರೆ ಎನ್ನುವ ಮಾಹಿತಿಯನ್ನು ನೀಡಿದ್ದಾರೆ.

ಮುಂಬೈ ಪೊಲೀಸರಿಗೆ ಮಾಳವಿಕಾ ವಿಡಿಯೋ ಕಾಲ್ ಮಾಡಿದಾಗ, ಪೊಲೀಸರೇ ಬೆಚ್ಚಿ ಬಿದ್ದಿದ್ದಾರೆ. ನೀವು ಕೆಜಿಎಫ್ ನಟಿ ಅಲ್ಲವಾ ಮೇಡಂ ಎಂದು ಗುರುತು ಹಿಡಿದಿದ್ದಾರೆ. ನಂತರ ಈ ಬಗ್ಗೆ ದೂರು ದಾಖಲಿಸುವಂತೆ ಪೊಲೀಸರೇ ಸೂಚಿಸಿದ್ದಾರಂತೆ. ಈ ಎಲ್ಲ ಮಾಹಿತಿಯನ್ನೂ ಸೋಷಿಯಲ್ ಮೀಡಿಯಾ ಮೂಲಕ ಮಾಳವಿಕಾ ಹಂಚಿಕೊಂಡಿದ್ದಾರೆ. ಆಧಾರ್ ಕಾರ್ಡ್ ಹೇಗೆ ದುರುಪಯೋಗ ಆಯಿತು ಎಂಬುವುದು ಈವರೆಗೂ ತಿಳಿಯಲಾಗದೆ ತಲೆ ಕೆಡಿಸಿಕೊಂಡಿರುವುದಾಗಿ ತಿಳಿಸಿದ್ದಾರೆ.

Leave a Reply

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ BMTC: ಅಪಘಾತದಲ್ಲಿ ಮೃತಪಟ್ಟ ನೌಕರರ ಕುಟುಂಬಕ್ಕೆ ₹1 ಕೋಟಿ ಪರಿಹಾರ ಚೆಕ್‌ ವಿತರಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸಾರಿಗೆ ನಿವೃತ್ತ ನೌಕರರಿಗೆ ಮತ್ತೊಮ್ಮೆ ಮೊಗದೊಮ್ಮೆ ನಿರಾಸೆ: ಭಾರಿ ಆಕ್ರೋಶಗೊಂಡ EPS ನಿವೃತ್ತರು ಕಾರು ಡೋರ್‌ಗೆ ಬೈಕ್‌ ಗುದ್ದಿ ಕೆಳಗೆ ಬಿದ್ದ ಮಹಿಳೆ ಮೇಲೆ ಹರಿದ ಬಿಎಂಟಿಸಿ ಬಸ್‌ ನಾಟಿ ಕೋಳಿ ಸಾರಿನ ಜತೆ ರಾಗಿಮುದ್ದೆ ನುಂಗಿದವರಿಗೆ ಗೊತ್ತು ಅದರ ಗಮ್ಮತ್ತು ನೀವು ಗಬಗಬನೆ ಊಟ ಮಾಡುವವರಿದ್ದೀರಾ? ಹಾಗಿದ್ದರೆ ನಿಮಗೆ ಈ ಸಮಸ್ಯೆ ಕಾಡದಿರದು! BMTC ನೌಕರರಿಗೆ ಆನ್-ಲೈನ್ ಮೂಲಕ ವೇತನ ಚೀಟಿ ಪಡೆಯುವ ವ್ಯವಸ್ಥೆ- ಜಾರಿ ಸ್ಕೂಟರ್‌ಗೆ ಕಾರು ಡಿಕ್ಕಿ- ಮೊಪೆಡ್‌ನಲ್ಲಿ ತೆರಳುತ್ತಿದ್ದ ಮಾವ-ಸೊಸೆ ದಾರುಣ ಸಾವು ಪೊಲೀಸ್‌ ಠಾಣೆ ಮೆಟ್ಟಿಲೇರಿದ ಹಿಟ್‌ ಧಾರಾವಾಹಿಗಳ ನಿರ್ದೇಶಕ, ನಿರ್ಮಾಪಕ ರಾಮ್​ಜೀ