CrimeNEWSನಮ್ಮಜಿಲ್ಲೆ

ಮುಷ್ಕರದ ವೇಳೆ ದಾಖಲಾಗಿದ್ದ ಪ್ರಕರಣ: ಇಂದು BMTCಯ 6 ಮಂದಿ ನೌಕರರ ಪರ ಕೋರ್ಟ್‌ ತೀರ್ಪು

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ನಾಲ್ಕೂ ನಿಗಮಗಳ ನೌಕರರು ಕಳೆದ 2021ರ ಏಪ್ರಿಲ್‌ನಲ್ಲಿ ನಡೆಸಿದ ಮುಷ್ಕರದ ವೇಳೆ ಪೊಲೀಸ್‌ ಪ್ರಕರಣ ದಾಖಲಿಸಿದ್ದ ಬಿಎಂಟಿಸಿ ಅಧಿಕಾರಿಗಳಿಗೆ ಕೋರ್ಟ್‌ನಲ್ಲಿ ಸೋಲಾಗಿದೆ.

ಕೆ.ಆರ್‌.ಪುರ ಪೊಲೀಸ್‌ ಠಾಣೆಯಲ್ಲಿ ಮುಷ್ಕರದ ವೇಳೆ ಬಿಎಂಟಿಸಿ ನೌಕರ ಬಸವರಾಜು ಸೇರಿದಂತೆ ಇತರ 6 ಮಂದಿ ನೌಕರರ ವಿರುದ್ಧ ದಾಖಲಾಗಿದ್ದ ಪ್ರಕರಣವನ್ನು ಇಂದು ಕೈಗೆತ್ತಿಕೊಂಡ ಮೆಯೋಹಾಲ್‌ನ 10ನೇ ಎಸಿಎಂಎಂ ನ್ಯಾಯಾಲಯದ ನ್ಯಾಯಧೀಶರು ವಾದ ಪ್ರತಿವಾದವನ್ನು ಆಲಿಸಿದ ಬಳಿಕ ಈ 6ಮಂದಿ ನೌಕರರನ್ನು ನಿರ್ದೋಷಿಗಳು ಎಂದು ತೀರ್ಪು ನೀಡಿದ್ದಾರೆ.

ಈ ಮೂಲಕ ನೌಕರರ ವಿರುದ್ಧ ಸುಖಾಸುಮ್ಮನೇ ಪೊಲೀಸ್‌ ಕೇಸ್‌ ದಾಖಲಿಸಿ ಕಿರುಕುಳ ನೀಡುತ್ತಿದ್ದ ಬಿಎಂಟಿಸಿ ಅಧಿಕಾರಿಗಳಿಗೆ ನ್ಯಾಯಾಲಯದಲ್ಲಿ ಸೋಲಾಗಿದೆ.

ಬಿಎಂಟಿಸಿ ನೌಕರರ ಪರವಾಗಿ ವಕಾಲತ್ತು ವಹಿಸಿದ್ದ ಸುಪ್ರೀಂ ಕೋರ್ಟ್‌ ಮತ್ತು ಹೈ ಕೋರ್ಟ್‌ ವಕೀಲ ಎಚ್‌.ಬಿ.ಶಿವರಾಜು ಅವರು ನೌಕರರು ಏನು ತಪ್ಪು ಮಾಡಿಲ್ಲ, ಆದರೂ ಅವರನ್ನು ಸೇವೆಯಿಂದ ವಜಾಗೊಳಿಸಿದ್ದು ಅಲ್ಲದೆ ಪೊಲೀಸ್‌ ಪ್ರಕರಣಗಳನ್ನು ದಾಖಲಿಸಿದ್ದಾರೆ ಹೀಗಾಗಿ ಅವರ ವಿರುದ್ಧ ಮಾಡಲಾಗಿರುವ ಆರೋಪ ಸತ್ಯಕ್ಕೆ ದೂರವಾದದ್ದು ಎಂದು ಪ್ರಬಲವಾಗಿ ವಾದ ಮಂಡಿಸಿದರು.

ಇದೇ ವೇಳೆ ಸರ್ಕಾರಿ ಅಭಿಯೋಜಕರು ಪ್ರತಿವಾದ ಮಂಡಿಸಿದರು. ಈ ಎರಡೂ ಕಡೆಯ ವಕೀಲರ ವಾದ ಪ್ರತಿವಾದವನ್ನು ಆಲಿಸಿದ ನ್ಯಾಯಾಧೀಶರು ಅಂತಿಮವಾಗಿ ನೌಕರರು ಯಾವುದೇ ತಪ್ಪು ಮಾಡಿಲ್ಲ ಅವರು ನಿರಪರಾಧಿಗಳು ಎಂದು ತೀರ್ಪು ನೀಡಿದ್ದಾರೆ.

Leave a Reply

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ನಾನು ಕಾದು ಕುಳಿತಿದ್ದರೂ ಬಸ್‌ ನಿಲ್ಲಿಸಿಲ್ಲ - ಚಾಲಕ, ಕಂಡಕ್ಟರ್‌ ತಿಂಗಳ ಸಂಬಳ ನನಗೆ ನಷ್ಟಪರಿಹಾರ ಕೊಡಿ: ವಕೀಲನ ಒತ್ತ... ಕೆಎಂಎಫ್ ಸಿಬ್ಬಂದಿಗೆ 7ನೇ ವೇತನ ಆಯೋಗ ಜಾರಿ- 2024ರ ಆ.1ರಿಂದಲೇ ಪೂರ್ವಾನ್ವಯ KSRTC ಏಕಸ್ವಾಮ್ಯಕ್ಕೆ ಮೂಗುದಾರ ಹಾಕಿ- ಸರ್ಕಾರದ ಕಾಯ್ದೆ ಸರಿ ಎಂದ ಕೋರ್ಟ್ ಸ್ಮಶಾನ ಜಾಗ ಭೂಗಳ್ಳನಿಗೆ ಬಿಟ್ಟುಕೊಡಲು ಟಿಪ್ಪಣಿ ಮಂಡಿಸಿರುವ ಭ್ರಷ್ಟ ಅಧಿಕಾರಿಗಳು: ಎನ್.ಆರ್.ರಮೇಶ್ ಆರೋಪ ಕ್ರೀಡಾಪಟುಗಳಿಗೆ ಕೊಡುವ ಏಕಲವ್ಯ ಪ್ರಶಸ್ತಿ ಮುಂದುವರಿಸಲಿ: ಶೋಭಾ ನಾರಾಯಣ್ ಬಿಡದಿಯಿಂದ ಹೆದ್ದಾರಿಯಲ್ಲೇ ಮುಂದೆ ಬಂದರೆ ನಿಮಗೆ ಟೋಲ್‌ ಬರೆ ಗ್ಯಾರಂಟಿ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಹೊತ್ತಿ ಉರಿದ ಸ್ಕಾರ್ಪಿಯೋ ಕಾರು KSRTC ಕನಕಪುರ ಬಸ್‌ ನಿಲ್ದಾಣದಲ್ಲಿ ವಿಕಲ ಚೇತನರಿಂದ ₹700 ವಸೂಲಿ, ಕಂಡಕ್ಟರ್ಸ್‌ ಕೊಡಬೇಕು ₹10 : ಟಿಸಿಗೆ ಡಿಎಂ ಸಾಥ್... ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ