NEWSನಮ್ಮಜಿಲ್ಲೆವಿಜ್ಞಾನ-ತಂತ್ರಜ್ಞಾನ

ಮಾಸ್ಕ್, ಸ್ಯಾನಿಟೈಸರ್ ಅಧಿಕ ಬೆಲೆಗೆ ಮಾರಾಟ ಮಾಡುತ್ತಿದ್ದವರ ವಿರುದ್ಧ ಸಮರ

1,82 ಲಕ್ಷ ರೂ.ದಂಡ ವಸೂಲಿ l ಕಾನೂನು ಮಾಪನಶಾಸ್ತ್ರ ಸಹಾಯಕ ನಿಯಂತ್ರಕ ಮಹದೇವಸ್ವಾಮಿ ಹೇಳಿಕೆ

ವಿಜಯಪಥ ಸಮಗ್ರ ಸುದ್ದಿ

ಮೈಸೂರು: ಕೋವಿಡ್-19 ತಡೆಗಟ್ಟುವ ಹಿನ್ನೆಲೆಯಲ್ಲಿ ದೇಶದದ್ಯಾಂತ ಲಾಕ್‍ಡೌನ್ ಇರುವ ಸಂಬಂಧ ಮೈಸೂರು ಕಾನೂನೂ ಮಾಪನಶಾಸ್ತ್ರ ಇಲಾಖೆಯು ಜಿಲ್ಲಾದ್ಯಂತ ಮೆಡಿಕಲ್ ಸ್ಟೋರ್‌ಗಳಲ್ಲಿ ಮಾಸ್ಕ್ ಮತ್ತು ಸ್ಯಾನಿಟೈಸರ್‌ಗಳನ್ನು ನಿಗದಿತ ಬೆಲೆಗಿಂತ ಅಧಿಕ ಬೆಲೆಗೆ ಮಾರಾಟ ಮಾಡುತ್ತಿದ್ದ 330 ಸ್ಟೋರ್‌ಗಳನ್ನು ತಪಾಸಣೆ ಮಾಡಿ, ಆಧಿಕ ಬೆಲೆಗೆ ಮಾರಾಟ ಮಾಡುತ್ತಿದ್ದ ಒಟ್ಟು 34 ಮೆಡಿಕಲ್ ಸ್ಟೋರ್‌ಗಳ ವಿರುದ್ಧ ಮೊಕದಮ್ಮೆ ಹೊಡಿ 1,82,000 ರೂ. ದಂಡ  ವಸೂಲಿ ಮಾಡಲಾಗಿದೆ ಎಂದು ಕಾನೂನು ಮಾಪನಶಾಸ್ತ್ರ ಸಹಾಯಕ ನಿಯಂತ್ರಕ ಕೆ.ಎಂ.ಮಹದೇವಸ್ವಾಮಿ ತಿಳಿಸಿದ್ದಾರೆ.

ಪಡಿತದಾರರಿಗೆ ನ್ಯಾಯಬೆಲೆ ಅಂಗಡಿಗಳ ಮೂಲಕ ಪಡಿತರ ವಿತರಣೆ ಮಾಡುವ ವೇಳೆಯಲ್ಲಿ ಒಟ್ಟು 299 ನ್ಯಾಯಬೆಲೆ ಅಂಗಡಿಗಳ ಮೇಲೆ ತಪಾಸಣೆ ನಡೆಸಿ ತೂಕದಲ್ಲಿ ಕಡಿಮೆ ಪಡಿತರವನ್ನು ವಿತರಣೆ ಮಾಡಿದ 14 ನ್ಯಾಯಬೆಲೆ ಅಂಗಡಿಗಳ ಮೇಲೆ ಮೊಕದ್ದಮ್ಮೆ ಹೂಡಿ 58,000 ರೂ.ಗಳ ದಂಡ ವಸೂಲಿ ಮಾಡಲಾಗಿದೆ.

ಅಂಗಡಿ ಮಾಲೀಕರ ವಿರುದ್ಧ ಕ್ರಮಕ್ಕಾಗಿ ಜಂಟಿ ನಿರ್ದೇಶಕರು, ಆಹಾರ ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಇಲಾಖೆಗೆ ವರದಿಯನ್ನು ನೀಡಲಾಗಿದ್ದು, ಉಳಿದ ನ್ಯಾಯಬೆಲೆ ಅಂಗಡಿಗಳ ತಪಾಸಣೆ ನಡೆಸಿ 94 ನ್ಯಾಯಬೆಲೆ ಅಂಗಡಿಗಳ  ವಿರುದ್ದ ಮೊಕದ್ದಮೆ ದಾಖಲಾಸಿ 81,500 ರೂ.ಗಳ ದಂಡ ವಿಧಿಸಲಾಗಿದೆ ಎಂದರು.

ದಿನಸಿ ಪದಾರ್ಥ ಹಾಗೂ ಇತರೆ ದಿನನಿತ್ಯದ ವಸ್ತುಗಳನ್ನು ಪ್ರಾವಿಜನ್ ಸ್ಟೋರ್, ಮಾಲ್‍ಗಳಲ್ಲಿ ಹೆಚ್ಚಿನ ಬೆಲೆಗೆ ಮಾರಾಟ ಮಾಡುತ್ತಿದ್ದ 85 ಅಂಗಡಿಗಳ ತಪಾಸಣೆ ನಡೆಸಿ 7 ಅಂಗಡಿಗಳ ವಿರುದ್ದ ಮೊಕದ್ದಮೆ ದಾಖಲಿಸಿ 38,500 ರೂಪಾಯಿ ದಂಡವನ್ನು ವಿಧಿಸಲಾಗಿದೆ ಎಂದು ಹೇಳಿದರು.

ನ್ಯಾಯಬೆಲೆ ಅಂಗಡಿಗಳಲ್ಲಿ ಕಡಿಮೆ ತೂಕ ವಿತರಣೆ ಮಾಡುತ್ತಿದ್ದರೆ ಮತ್ತು ಪೂಟ್ಟಣ ರೂಪದಲ್ಲಿರುವ ಯಾವುದೇ ಆಹಾರ ಪದಾರ್ಥಗಳನ್ನು ಅಧಿಕ ಬೆಲೆಗೆ ಮಾರಾಟ ಮಾಡಿದರೆ ಕಾನೂನು ಮಾಪನಶಾಸ್ತ್ರ ನಿರೀಕ್ಷಕರಾದ ಜಿ.ಮಹಂತೇಶ್ 8884442580 ಅನ್ನು ಸಂಪರ್ಕಿಸಬಹುದು ಎಂದು ತಿಳಿಸಿದ್ದಾರೆ.

Leave a Reply

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ BMTC: ಅಪಘಾತದಲ್ಲಿ ಮೃತಪಟ್ಟ ನೌಕರರ ಕುಟುಂಬಕ್ಕೆ ₹1 ಕೋಟಿ ಪರಿಹಾರ ಚೆಕ್‌ ವಿತರಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸಾರಿಗೆ ನಿವೃತ್ತ ನೌಕರರಿಗೆ ಮತ್ತೊಮ್ಮೆ ಮೊಗದೊಮ್ಮೆ ನಿರಾಸೆ: ಭಾರಿ ಆಕ್ರೋಶಗೊಂಡ EPS ನಿವೃತ್ತರು ಕಾರು ಡೋರ್‌ಗೆ ಬೈಕ್‌ ಗುದ್ದಿ ಕೆಳಗೆ ಬಿದ್ದ ಮಹಿಳೆ ಮೇಲೆ ಹರಿದ ಬಿಎಂಟಿಸಿ ಬಸ್‌ ನಾಟಿ ಕೋಳಿ ಸಾರಿನ ಜತೆ ರಾಗಿಮುದ್ದೆ ನುಂಗಿದವರಿಗೆ ಗೊತ್ತು ಅದರ ಗಮ್ಮತ್ತು ನೀವು ಗಬಗಬನೆ ಊಟ ಮಾಡುವವರಿದ್ದೀರಾ? ಹಾಗಿದ್ದರೆ ನಿಮಗೆ ಈ ಸಮಸ್ಯೆ ಕಾಡದಿರದು! BMTC ನೌಕರರಿಗೆ ಆನ್-ಲೈನ್ ಮೂಲಕ ವೇತನ ಚೀಟಿ ಪಡೆಯುವ ವ್ಯವಸ್ಥೆ- ಜಾರಿ ಸ್ಕೂಟರ್‌ಗೆ ಕಾರು ಡಿಕ್ಕಿ- ಮೊಪೆಡ್‌ನಲ್ಲಿ ತೆರಳುತ್ತಿದ್ದ ಮಾವ-ಸೊಸೆ ದಾರುಣ ಸಾವು ಪೊಲೀಸ್‌ ಠಾಣೆ ಮೆಟ್ಟಿಲೇರಿದ ಹಿಟ್‌ ಧಾರಾವಾಹಿಗಳ ನಿರ್ದೇಶಕ, ನಿರ್ಮಾಪಕ ರಾಮ್​ಜೀ