NEWSಕೃಷಿನಮ್ಮರಾಜ್ಯ

ಮೈಸೂರಿನ ಎಪಿಎಂಸಿ ರೌಂಡ್ಸ್ ಹಾಕಿದ ಸಚಿವರು

ರೈತರು, ವರ್ತಕರ ಅಹವಾಲು ಆಲಿಸಿದ ಉಸ್ತುವಾರಿ ಸಚಿವ ಸೋಮಶೇಖರ್

ವಿಜಯಪಥ ಸಮಗ್ರ ಸುದ್ದಿ

ಮೈಸೂರು:  ಎಪಿಎಂಸಿಗೆ ಭೇಟಿ ನೀಡಿ ರೈತರು ಹಾಗೂ ವರ್ತಕರ ಅಹವಾಲನ್ನು ಜಿಲ್ಲಾ ಉಸ್ತುವಾರಿ, ಸಹಕಾರ ಸಚಿವ ಎಸ್.ಟಿ.ಸೋಮಶೇಖರ್ ಆಲಿಸಿದರು.

ಶನಿವಾರ ಮುಂಜಾನೆಯೇ ನಗರ ಪ್ರದಕ್ಷಿಣೆ ಹಾಕಿದ ಸಚಿವರು, ಕೊರೊನಾ ಸೋಂಕು ನಿವಾರಕ ಟನಲ್ ನಲ್ಲೆ ಆಗಮಿಸಿ ಎಲ್ಲರೂ ನಿಯಮವನ್ನು ಕಡ್ಡಾಯವಾಗಿ ಪಾಲಿಸಬೇಕು ಎಂಬ ಸಂದೇಶ ನೀಡಿದರು.

ಎಪಿಎಂಸಿಗೆ ಭೇಟಿ ನೀಡಿ ಕೈಗೊಳ್ಳಲಾದ ವ್ಯವಸ್ಥೆಗಳನ್ನು ಪರಿಶೀಲಿಸಿದರು. ಬಳಿಕ ವರ್ತಕರಿಂದಲೇ ಕೈಗೊಳ್ಳಲಾಗಿರುವ ವ್ಯವಸ್ಥೆ ಸಮರ್ಪಕವಾಗಿದೆಯೇ ಎಂದು ಖುದ್ದು ತಿಳಿದುಕೊಂಡರು. ಎಲ್ಲ ಸಮಸ್ಯೆಗಳಿಗೂ ತಕ್ಷಣವೇ ಸ್ಪಂದನೆ ಸಿಗಲಿದೆ, ಆತಂಕ ಪಡುವ ಅಗತ್ಯವಿಲ್ಲ ಎಂದು ಅಭಯ ನೀಡಿದರು.

ತರಕಾರಿಗಳನ್ನು ಮಾರುಕಟ್ಟೆಗೆ ಸಾಗಿಸುವ ವೇಳೆ ಚೆಕ್ ಪೋಸ್ಟ್ ಸೇರಿದಂತೆ ಎಲ್ಲೂ ಯಾವುದೇ ತೊಂದರೆಯಾಗಿಲ್ಲವೇ? ಸೂಕ್ತ ಬೆಲೆ ಸಿಗುತ್ತಿದೆಯೇ ಎಂದು ರೈತರನ್ನು ಪ್ರಶ್ನಿಸಿದ ಸಚಿವರು, ಸಮಸ್ಯೆ ಇದ್ದರೆ ತಕ್ಷಣ ಗಮನಕ್ಕೆ ತರುವಂತೆ ಸೂಚಿಸಿದರು.

ಶೀಘ್ರ ಕೋಲ್ಡ್ ಸ್ಟೋರೇಜ್

ಎಲ್ಲ ಎಪಿಎಂಸಿ ಗೆ ಭೇಟಿ ನೀಡಿದಂತೆ ಇಲ್ಲೂ ಭೇಟಿ ನೀಡಿ ಪರಿಶೀಲಿಸುತ್ತಿದ್ದೇನೆ. ಸಮಸ್ಯೆಗಳ ಪರಿಹಾರವೇ ನನ್ನ ಮೊದಲ ಆದ್ಯತೆ. ಪೊಲೀಸರಿಂದ ಸೇರಿ ಯಾರಿಂದಲೂ ಸಮಸ್ಯೆ ಆಗಬಾರದು ಎಂಬುದು ಮುಖ್ಯಮಂತ್ರಿಗಳ ಉದ್ದೇಶ ಸಹ. ಹೀಗಾಗಿ ಖುದ್ದು ನಾನೇ ಭೇಟಿ ಮಾಡಿ ಸಮಸ್ಯೆಗೆ ಪರಿಹಾರ ಸೂಚಿಸುತ್ತಿದ್ದೇನೆ ಎಂದು ಸಚಿವರು ಸುದ್ದಿಗಾರರಿಗೆ ತಿಳಿಸಿದರು.

ಎಪಿಎಂಸಿಗೆ ಕೋಲ್ಡ್ ಸ್ಟೋರೇಜ್ ಸಿಸ್ಟಮ್ ಅಳವಡಿಸಬೇಕಿದೆ. ಆ ಬಗ್ಗೆ ಅಧಿಕಾರಿಗಳ ಬಳಿ ಮಾಹಿತಿ ಪಡೆದು ಕ್ರಮ‌ ಕೈಗೊಳ್ಳುತ್ತೇನೆ. ಕೋಲ್ಡ್ ಸ್ಟೋರೆಜ್ ಇದ್ದರೆ ತರಕಾರಿ ಇಟ್ಟು ಮಾರಲು ರೈತರಿಗೆ ಅನುಕೂಲ ಆಗಲಿದೆ. ಇದರಿಂದ ತರಕಾರಿ ಕೊಳೆಯುವಿಕೆಗೆ ಬ್ರೇಕ್ ಬೀಳಲಿದೆ ಎಂದು ತಿಳಿಸಿದರು.

ರೈತರಿಗೆ ಸರಿಯಾದ ಬೆಂಬಲ ಬೆಲೆ ಸಿಗದೆ ತರಕಾರಿ ನಾಶಪಡಿಸುತ್ತಿರುವ ವಿಚಾರ, ಅದನ್ನು ಸರ್ಕಾರದಿಂದಲೇ ಖರೀದಿ ಮಾಡುವ ಬಗ್ಗೆ ಯೋಚನೆ ಮಾಡುತ್ತೇವೆ. ಕೆಲವೆಡೆ ಈಗಾಗಲೇ ಆ ಕೆಲಸ‌ ಆಗುತ್ತಿದೆ. ರೈತರಿಂದ ಪಡೆದು ಹಾಪ್ ಕಾಮ್ಸ್ ಮೂಲಕ ಮಾರಾಟದ ಬಗ್ಗೆ ಚಿಂತನೆ ಇದೆ. ಜನಪ್ರತಿನಿಧಿಗಳು ಅಧಿಕಾರಿಗಳ ಬಳಿ ಈ ಬಗ್ಗೆ ಚರ್ಚಿಸಿ ಕ್ರಮ‌ ಕೈಗೊಳ್ಳುತ್ತೇನೆ ಎಂದು ತಿಳಿಸಿದರು.

Leave a Reply

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ BMTC: ಅಪಘಾತದಲ್ಲಿ ಮೃತಪಟ್ಟ ನೌಕರರ ಕುಟುಂಬಕ್ಕೆ ₹1 ಕೋಟಿ ಪರಿಹಾರ ಚೆಕ್‌ ವಿತರಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸಾರಿಗೆ ನಿವೃತ್ತ ನೌಕರರಿಗೆ ಮತ್ತೊಮ್ಮೆ ಮೊಗದೊಮ್ಮೆ ನಿರಾಸೆ: ಭಾರಿ ಆಕ್ರೋಶಗೊಂಡ EPS ನಿವೃತ್ತರು ಕಾರು ಡೋರ್‌ಗೆ ಬೈಕ್‌ ಗುದ್ದಿ ಕೆಳಗೆ ಬಿದ್ದ ಮಹಿಳೆ ಮೇಲೆ ಹರಿದ ಬಿಎಂಟಿಸಿ ಬಸ್‌ ನಾಟಿ ಕೋಳಿ ಸಾರಿನ ಜತೆ ರಾಗಿಮುದ್ದೆ ನುಂಗಿದವರಿಗೆ ಗೊತ್ತು ಅದರ ಗಮ್ಮತ್ತು ನೀವು ಗಬಗಬನೆ ಊಟ ಮಾಡುವವರಿದ್ದೀರಾ? ಹಾಗಿದ್ದರೆ ನಿಮಗೆ ಈ ಸಮಸ್ಯೆ ಕಾಡದಿರದು! BMTC ನೌಕರರಿಗೆ ಆನ್-ಲೈನ್ ಮೂಲಕ ವೇತನ ಚೀಟಿ ಪಡೆಯುವ ವ್ಯವಸ್ಥೆ- ಜಾರಿ ಸ್ಕೂಟರ್‌ಗೆ ಕಾರು ಡಿಕ್ಕಿ- ಮೊಪೆಡ್‌ನಲ್ಲಿ ತೆರಳುತ್ತಿದ್ದ ಮಾವ-ಸೊಸೆ ದಾರುಣ ಸಾವು ಪೊಲೀಸ್‌ ಠಾಣೆ ಮೆಟ್ಟಿಲೇರಿದ ಹಿಟ್‌ ಧಾರಾವಾಹಿಗಳ ನಿರ್ದೇಶಕ, ನಿರ್ಮಾಪಕ ರಾಮ್​ಜೀ