NEWSನಮ್ಮಜಿಲ್ಲೆ

ಮೈಸೂರು ಜಿಲ್ಲೆಯವರೇ ಆಗಿದ್ದರೆ ಕಟ್ಟಡ ಕೆಲಸಕ್ಕೆ ಅನುಮತಿ

ಜಿಲ್ಲಾ ಉಸ್ತುವಾರಿ ಸಚಿವ ಸೋಮಶೇಖರ್‌ ಹೇಳಿಕೆ

ವಿಜಯಪಥ ಸಮಗ್ರ ಸುದ್ದಿ

ಮೈಸೂರು: ಕಟ್ಟಡ ಕಾರ್ಮಿಕರು ಮೈಸೂರು ಜಿಲ್ಲೆಯವರಾಗಿದ್ದು, ಇಲ್ಲೇ ಇದ್ದರೆ ಮಾತ್ರ ಕೆಲಸ ಮಾಡಬಹುದು. ಹೊರ ಜಿಲ್ಲೆ ಅಥವಾ ರಾಜ್ಯಗಳಿಂದ ಈ ಸಂದರ್ಭದಲ್ಲಿ ಇಲ್ಲಿಗೆ ಬಂದು ಕೆಲಸ ಮಾಡಲು ಅನುಮತಿ ಇಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ತಿಳಿಸಿದರು.

ನಿನ್ನೆ ಮೈಸೂರಿನಲ್ಲಿ ಮಾತನಾಡಿ, ಕೃಷಿ ಚಟುವಟಿಕೆಗೆ ಈಗಾಗಲೇ ಅನುಮತಿ ಕೊಡಲಾಗಿದೆ. ಉಳಿದಂತೆ ಈ ಹಿಂದಿನ ಕ್ರಮವೇ ಮುಂದುವರಿಯುತ್ತದೆ. ಐಟಿ-ಬಿಟಿಗೆ ಅಗತ್ಯವಿರುವಷ್ಟು ಮಾತ್ರ ಅನುಮತಿ ಕೊಡಲಾಗಿದ್ದು, ಪರಿಸ್ಥಿತಿಗೆ ಅನುಗುಣವಾಗಿ ಕ್ರಮ ತೆಗೆದುಕೊಳ್ಳಲಾಗುತ್ತದೆ ಎಂದು ತಿಳಿಸಿದರು.

ಮೈಸೂರು ರೆಡ್ ಝೋನ್ ಎಂದು ಪರಿಗಣಿಸಿರುವ ಹಿನ್ನೆಲೆ ಜಿಲ್ಲೆಯಲ್ಲಿ ಸಡಿಲಿಕೆ ಇಲ್ಲ. ವೈದ್ಯಕೀಯ ತುರ್ತು ಪರಿಸ್ಥಿತಿಗಳಿಗೆ ಮಾತ್ರ ಓಡಾಟಕ್ಕೆ ಅನುಮತಿ ಕೊಡಲಾಗಿದೆ. ಇನ್ನು ಕಟ್ಟಡ ಕಾಮಗಾರಿಗಳಿಗೆ ಸಂಬಂಧಪಟ್ಟಂತೆ ತೀರಾ ತುರ್ತು ಇದ್ದವರು ಅನುಮತಿ ಪಡೆದು ಕೆಲಸ ಮಾಡಿಸಿಕೊಳ್ಳಬಹುದು ಎಂದರು.

ಕಬ್ಬಿಣ ಹಾರ್ಡ್‍ವೇರ್ ಅಂಗಡಿಗಳು ತೆರೆಯುವಂತಿಲ್ಲ. ಪ್ಲಂಬರ್ ಎಲೆಕ್ಟ್ರಿಕ್ ಕೆಲಸಗಳಿಗೆ ಪೊಲೀಸ್ ಅನುಮತಿ ಅವಶ್ಯಕ. ಉಳಿದ ವಿಷಯಗಳಿಗೆ ಮೇ 3 ರವರೆಗೆ ಯಾವುದೇ ಕಾರಣಕ್ಕೂ ಅನುಮತಿ ಇಲ್ಲ. ಈ ಬಗ್ಗೆ ಪರಿಶೀಲನೆ ನಡೆಸಿ ಮುಂದೆ ಏನು ಮಾಡಬಹುದು ಎಂದು ತೀರ್ಮಾನ ಮಾಡಲಾಗುವುದು ಎಂದು ತಿಳಿಸಿದರು.

ಮೈಸೂರಲ್ಲಿ ಇಷ್ಟು ಸೋಂಕು ಜ್ಯೂಬಿಲಿಯೆಂಟ್ ಹಾಗೂ ತಬ್ಲಿಘೀ ಜಮಾತ್‍ನವರಿಂದ ಹೆಚ್ಚಾಗಿ ಬಂದಿದೆ. ಆದರೆ, ಇಲ್ಲಿಗೆ ಬಂದಿರುವುದು ಕೇವಲ 3 ರಿಂದ 4 ಮಾತ್ರ. ಹೀಗಾಗಿ ಇಲ್ಲಿಯವರೆಗೆ ಸಹಕಾರ ನೀಡಿದ ಮಾನ್ಯ ಜನತೆ ಮುಂದೆಯೂ ಇದೇರೀತಿ ಸಹಕಾರ ನೀಡಲಿ ಎಂದು ಕೋರಿಕೊಳ್ಳುವೆ ಎಂದರು.

ರೈತರು ತಮ್ಮ ಹಳೇ ಸಾಲವನ್ನು ತೀರಿಸುವ ಸಲುವಾಗಿ ಸುಸ್ತಿ ಮನ್ನಾ ಮಾಡಲಾಗುವುದು. ಇದಕ್ಕೆ ಮಾರ್ಚ್ 31ರ ವರೆಗೆ ಗಡುವು ನೀಡಲಾಗಿತ್ತು. ಈ ಗಡುವನ್ನು ಮತ್ತೆ ಮೂರು ತಿಂಗಳ ಅವಧಿಗೆ ವಿಸ್ತರಿಸಲಾಗುವುದು. ಅವಧಿ ವಿಸ್ತರಣೆಯಿಂದ 14 ಕೋಟಿ ರೂ. ಬಡ್ಡಿ ಹೊರೆ ಬರುತ್ತದೆ. ಅದನ್ನು ನಾವೇ ಭರಿಸುವುದಾಗಿ ಮುಖ್ಯಮಂತ್ರಿಗಳು ಹೇಳಿದ್ದಾರೆ ಎಂದು ಸಚಿವರು ತಿಳಿಸಿದರು.

ನಾಗರಿಕರು ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು, ಯಾವುದೇ ಕಾರಣಕ್ಕೂ ಅನಾವಶ್ಯಕವಾಗಿ ಮನೆಯಿಂದ ಆಚೆ ಬರಕೂಡದು ಎಂದು ಮನವಿ ಮಾಡಿದರು.

Leave a Reply

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ BMTC: ಅಪಘಾತದಲ್ಲಿ ಮೃತಪಟ್ಟ ನೌಕರರ ಕುಟುಂಬಕ್ಕೆ ₹1 ಕೋಟಿ ಪರಿಹಾರ ಚೆಕ್‌ ವಿತರಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸಾರಿಗೆ ನಿವೃತ್ತ ನೌಕರರಿಗೆ ಮತ್ತೊಮ್ಮೆ ಮೊಗದೊಮ್ಮೆ ನಿರಾಸೆ: ಭಾರಿ ಆಕ್ರೋಶಗೊಂಡ EPS ನಿವೃತ್ತರು ಕಾರು ಡೋರ್‌ಗೆ ಬೈಕ್‌ ಗುದ್ದಿ ಕೆಳಗೆ ಬಿದ್ದ ಮಹಿಳೆ ಮೇಲೆ ಹರಿದ ಬಿಎಂಟಿಸಿ ಬಸ್‌ ನಾಟಿ ಕೋಳಿ ಸಾರಿನ ಜತೆ ರಾಗಿಮುದ್ದೆ ನುಂಗಿದವರಿಗೆ ಗೊತ್ತು ಅದರ ಗಮ್ಮತ್ತು ನೀವು ಗಬಗಬನೆ ಊಟ ಮಾಡುವವರಿದ್ದೀರಾ? ಹಾಗಿದ್ದರೆ ನಿಮಗೆ ಈ ಸಮಸ್ಯೆ ಕಾಡದಿರದು! BMTC ನೌಕರರಿಗೆ ಆನ್-ಲೈನ್ ಮೂಲಕ ವೇತನ ಚೀಟಿ ಪಡೆಯುವ ವ್ಯವಸ್ಥೆ- ಜಾರಿ ಸ್ಕೂಟರ್‌ಗೆ ಕಾರು ಡಿಕ್ಕಿ- ಮೊಪೆಡ್‌ನಲ್ಲಿ ತೆರಳುತ್ತಿದ್ದ ಮಾವ-ಸೊಸೆ ದಾರುಣ ಸಾವು ಪೊಲೀಸ್‌ ಠಾಣೆ ಮೆಟ್ಟಿಲೇರಿದ ಹಿಟ್‌ ಧಾರಾವಾಹಿಗಳ ನಿರ್ದೇಶಕ, ನಿರ್ಮಾಪಕ ರಾಮ್​ಜೀ