NEWSನಮ್ಮಜಿಲ್ಲೆ

ಮೈಸೂರು ಜಿಲ್ಲೆ ಬನ್ನೂರಿನ ವ್ಯಕ್ತಿಯಲ್ಲಿ ಕೊರೊನಾ

ನ್ಯೂಡೆಲ್ಲಿಯ ಜಮಾತ್ ಗೆ ಹೋಗಿ ಬಂದಿದ್ದ ವರ್ತಕ l ಹಲವು ಹಳ್ಳಿಗಳ ಜನರಲ್ಲಿ ಆತಂಕ

ವಿಜಯಪಥ ಸಮಗ್ರ ಸುದ್ದಿ

ಮೈಸೂರು: ಜಿಲ್ಲೆಯ ತಿ.ನರಸೀಪುರ ತಾಲೂಕಿನ ಬನ್ನೂರು ಸಂತೇಮಾಳದ ದಿನಸಿ ಅಂಗಡಿಯೊಂದರ ವರ್ತಕರೊಬ್ಬರಲ್ಲಿ ಕೊರೊನಾ ಸೋಂಕು ಇರುವುದು ದೃಢಪಟ್ಟಿದೆ.

ಈ ವರ್ತಕ ನ್ಯೂಡೆಲ್ಲಿಯ ಜಮಾತ್ ಗೆ ಹೋಗಿ ಬಂದಿದ್ದರು ಎಂದು ಹೇಳಲಾಗುತ್ತಿದ್ದು, ಅಲ್ಲಿಂದ ಬಂದ ಬಳಿಕ ಆರೋಗ್ಯ ಇಲಾಖೆ ಸಿಬ್ಬಂದಿ ಬಂದು ಕರೆದುಕೊಂಡು ಹೋಗುವವರೆಗೂ ಸಹಜವಾಗಿಯೇ ಓಡಾಡುವುದರ ಜತೆಗೆ, ಅಂಗಡಿಯಲ್ಲಿ ವ್ಯಾಪಾರವನ್ನೂ ಮಾಡಿಕೊಂಡಿದ್ದರು.

ಹೀಗಾಗಿ ಆ ವ್ಯಕ್ತಿಯ ಜತೆ ಸಂಪರ್ಕ ಹೊಂದಿದ್ದ ಸುತ್ತಮುತ್ತಲ ಗ್ರಾಮಗಳ ನಿವಾಸಿಗಳು ಮುಂಜಾಗ್ರತಾ ಕ್ರಮವಾಗಿ ಜ್ವರ ಕೆಮ್ಮು, ಗಂಟಲೂ ನೋವು ಕಾಣಿಸಿಕೊಳ್ಳುತ್ತಿದ್ದರೆ ವೈದ್ಯರನ್ನು ಸಂಪರ್ಕಿಸಿ ಸ್ವ ಕಾಳಜಿ ಹೊಂದಬೇಕಿದೆ. ಈ ಹಿಂದೆ ಸಂಪರ್ಕ ಹೊಂದಿದೆ ವ್ಯಕ್ತಿಗಳು ಆರೋಗ್ಯವಾಗಿದ್ದರೆ ವೈದ್ಯರನ್ನು ಭೇಟಿ ಮಾಡುವ ಅಗತ್ಯವಿಲ್ಲ.

 ಕೊರೊನಾ ಸೋಂಕು  ದೃಢ

ನ್ಯೂಡೆಲ್ಲಿಯಿಂದ ಮಳವಳ್ಳಿ – ಬನ್ನೂರು ಮಾರ್ಗವಾಗಿ ಬಂದಿದ್ದ 10 ಮಂದಿಯಲ್ಲಿ ಈಗಾಗಲೇ ಐವರಲ್ಲಿ ಸೋಂಕು ಇರುವುದು ದೃಢಪಟ್ಟಿತ್ತು. ಅವರ ಜತೆಗೆ ಮತ್ತೊಬ್ಬರಿಗೂ ಸೋಂಕು ಇರುವುದು ದೃಢಪಟ್ಟಿರುವುದರಿಂದ ಆತ ಬನ್ನೂರು ಸಂತೇಮಾಳದ ವರ್ತಕನೆಂದು ಜನರಲ್ಲಿ ಆತಂಕ ಮೂಡಿದೆ. ಈ ಬಗ್ಗೆ ಜಿಲ್ಲಾಮಟ್ಟದ ಅಧಿಕಾರಿಗಳು ಸೂಕ್ತ ಮಾಹಿತಿ ನೀಡಬೇಕಿದೆ.

ಸುತ್ತಮುತ್ತಲಿನ ಹತ್ತಾರು ಹಳ್ಳಿಗಳ ಜನರು ಅಗತ್ಯವಸ್ತುಗಳ ಖರೀದಿಗಾಗಿ ಓಡಾಡಿರುವ ಜಾಗ ಇದಾಗಿದ್ದು, ಈಗ ಗ್ರಾಮಗಳಿಗೂ ಸೋಂಕಿನ ಭಯ ಆವರಿಸಿದೆ. ಆದ್ದರಿಂದ ಸಂಬಂಧ ಪಟ್ಟ ಅಧಿಕಾರಿಗಳು ಗ್ರಾಮಸ್ಥರ ಆತಂಕವನ್ನು ಹೋಗಲಾಡಿಸುವ ದೃಷ್ಟಿಯಲ್ಲಿ ಕ್ರಮಕೈಗೊಳ್ಳಬೇಕಿದೆ.

ಇಂದು ಕೊರೊನಾಗೆ ಇಬ್ಬರು ಬಲಿ

ಭಾರತದಲ್ಲಿ ಇಂದು ಇಬ್ಬರು ಮೃತಪಟ್ಟಿದ್ದು,  302 ಮಂದಿಯಲ್ಲಿ ಹೊಸದಾಗಿ ಸೋಂಕು ಹರಡಿರುವುದು ದೃಢಪಟ್ಟದೆ, 54 ಮಂದಿ ಸೋಂಕಿನಿಂದ ಗುಣಮುಖರಾಗಿದ್ದಾರೆ.

ಅದರಂತೆ ರಾಜ್ಯದಲ್ಲಿ ಈವರೆಗೆ ಕೊರೊನಾಗೆ ನಾಲ್ವರು ಬಲಿಯಾಗಿದ್ದು 136 ಜನರಿಗೆ ಸೋಂಕು ಇರುವುದು ದೃಢಪಟ್ಟಿದೆ.

ಇನ್ನು ದೇಶದಲ್ಲಿ ಈವರೆಗೆ 3374 ಮಂದಿಯಲ್ಲಿ ಸೋಂಕಿದ್ದು, ಅವರಲ್ಲಿ 77 ಮಂದಿ ಮೃತಪಟ್ಟಿದ್ದಾರೆ, 267ಮಂದಿ ಗುಣಮುಖರಾಗಿದ್ದಾರೆ, ಇನ್ನೂ 3030 ಸೋಂಕಿತರಲ್ಲಿ ಆಸ್ಪತ್ರೆಯಲ್ಲೇ ಇರಿಸಿಕೊಂಡು ಸಿಕಿತ್ಸೆ ನೀಡಲಾಗುತ್ತಿದೆ.

ವಿಶ್ವಾದ್ಯಂತ 1203099 ಮಂದಿಗೆ ಸೋಂಕು

ವಿಶ್ವಾದ್ಯಂತ 1203099 ಮಂದಿಯಲ್ಲಿ ಕೊರೊನಾ ಸೋಂಕು ಇರುವುದು ದೃಢಪಟ್ಟಿದ್ದು, ಅವರಲ್ಲಿ 246893 ಸೋಂಕಿತರು ಗುಣಮುಖರಾಗಿದ್ದಾರೆ, ಇನ್ನು 64774 ಮಂದಿ ಮೃತಪಟ್ಟಿದ್ದಾರೆ.

Leave a Reply

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ BMTC: ಅಪಘಾತದಲ್ಲಿ ಮೃತಪಟ್ಟ ನೌಕರರ ಕುಟುಂಬಕ್ಕೆ ₹1 ಕೋಟಿ ಪರಿಹಾರ ಚೆಕ್‌ ವಿತರಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸಾರಿಗೆ ನಿವೃತ್ತ ನೌಕರರಿಗೆ ಮತ್ತೊಮ್ಮೆ ಮೊಗದೊಮ್ಮೆ ನಿರಾಸೆ: ಭಾರಿ ಆಕ್ರೋಶಗೊಂಡ EPS ನಿವೃತ್ತರು ಕಾರು ಡೋರ್‌ಗೆ ಬೈಕ್‌ ಗುದ್ದಿ ಕೆಳಗೆ ಬಿದ್ದ ಮಹಿಳೆ ಮೇಲೆ ಹರಿದ ಬಿಎಂಟಿಸಿ ಬಸ್‌ ನಾಟಿ ಕೋಳಿ ಸಾರಿನ ಜತೆ ರಾಗಿಮುದ್ದೆ ನುಂಗಿದವರಿಗೆ ಗೊತ್ತು ಅದರ ಗಮ್ಮತ್ತು ನೀವು ಗಬಗಬನೆ ಊಟ ಮಾಡುವವರಿದ್ದೀರಾ? ಹಾಗಿದ್ದರೆ ನಿಮಗೆ ಈ ಸಮಸ್ಯೆ ಕಾಡದಿರದು! BMTC ನೌಕರರಿಗೆ ಆನ್-ಲೈನ್ ಮೂಲಕ ವೇತನ ಚೀಟಿ ಪಡೆಯುವ ವ್ಯವಸ್ಥೆ- ಜಾರಿ ಸ್ಕೂಟರ್‌ಗೆ ಕಾರು ಡಿಕ್ಕಿ- ಮೊಪೆಡ್‌ನಲ್ಲಿ ತೆರಳುತ್ತಿದ್ದ ಮಾವ-ಸೊಸೆ ದಾರುಣ ಸಾವು ಪೊಲೀಸ್‌ ಠಾಣೆ ಮೆಟ್ಟಿಲೇರಿದ ಹಿಟ್‌ ಧಾರಾವಾಹಿಗಳ ನಿರ್ದೇಶಕ, ನಿರ್ಮಾಪಕ ರಾಮ್​ಜೀ