NEWSರಾಜಕೀಯಸಂಸ್ಕೃತಿ

ಮೈಸೂರು ದಸರಾ ಉದ್ಘಾಟನೆಯನ್ನು ರಾಜಕೀಕರಣಗೊಳಿಸುವುದು ಕೆಟ್ಟ ಸಂಪ್ರದಾಯ : ಎಎಪಿಯ ಜಗದೀಶ್ ವಿ ಸದಂ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ವಿಶ್ವ ಪ್ರಸಿದ್ಧ ಮೈಸೂರಿನ ದಸರಾ ಉದ್ಘಾಟನೆಗೆ ಸಾಂಸ್ಕೃತಿಕ ಕ್ಷೇತ್ರದ ಸಾಧಕರ ಬದಲು ರಾಜಕಾರಣಿ ಎಸ್‌.ಎಂ.ಕೃಷ್ಣ ಅವರನ್ನು ಆಯ್ಕೆ ಮಾಡಿರುವುದಕ್ಕೆ ಆಮ್‌ ಆದ್ಮಿ ಪಾರ್ಟಿಯ ರಾಜ್ಯ ಮಾಧ್ಯಮ ಸಂಚಾಲಕ ಜಗದೀಶ್‌ ವಿ. ಸದಂ ವಿರೋಧ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಟ್ವೀಟ್‌ ಮಾಡಿರುವ ಜಗದೀಶ್‌ ವಿ. ಸದಂ, “ದೇಶದಲ್ಲಿಯೇ ಸುಪ್ರಸಿದ್ಧ, ಪಾರಂಪರಿಕ, ಮಹೋನ್ನತ ಇತಿಹಾಸವುಳ್ಳ ದಸರಾ ಉತ್ಸವ ಉದ್ಘಾಟನೆಯನ್ನು ರಾಜಕೀಕರಣಗೊಳಿಸುತ್ತಿರುವ ನಿಮಗೆ ನಾಚಿಕೆಯಾಗುತ್ತಿಲ್ಲವೇ? ಕರ್ನಾಟಕ ಸಾಹಿತ್ಯಲೋಕದ ದಿಗ್ಗಜರುಗಳಿಗೆ ಮಾಡುತ್ತಿರುವ ಮಹಾ ಅಪಮಾನ” ಎಂದು ಆಕ್ಷೇಪ ವ್ಯಕ್ತಪಡಿಸಿದ್ದಾರೆ.

“ಮೈಸೂರು ದಸರಾ ಆಯ್ಕೆಗೆ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಗಣ್ಯರನ್ನು ಆಯ್ಕೆ ಮಾಡುವ ಪರಂಪರೆಯು ಹಲವು ದಶಕಗಳಿಂದ ನಡೆದುಕೊಂಡು ಬಂದಿದೆ. ಅನೇಕ ಸಾಹಿತಿಗಳು, ಸಮಾಜ ಸೇವಕರು, ಸಾಧಕರು ದಸರಾ ಉದ್ಘಾಟಿಸಿದ್ದಾರೆ.

ಆದರೆ ಈ ಬಾರಿ ರಾಜಕಾರಣಿಯನ್ನು ಆಯ್ಕೆ ಮಾಡುವ ಮೂಲಕ ಕೆಟ್ಟ ಸಂಪ್ರದಾಯಕ್ಕೆ ನಾಂದಿ ಹಾಡಲಾಗಿದೆ. ಇದನ್ನೇ ಮಾದರಿಯಾಗಿಟ್ಟುಕೊಂಡು ಮುಂದಿನ ಸರ್ಕಾರಗಳು ಕೂಡ ಸಾಧಕರ ಬದಲು ತಮ್ಮ ಪಕ್ಷದ ರಾಜಕಾರಣಿಗಳಿಗೆ ಮಣೆ ಹಾಕುವ ಅಪಾಯವಿದೆ” ಎಂದು ಜಗದೀಶ್‌ ಹೇಳಿದ್ದಾರೆ.

“ರಾಜಕೀಯ ಹೊರತು ಪಡಿಸಿದರೆ ಎಸ್‌.ಎಂ.ಕೃಷ್ಣ ಅವರ ಸಾಧನೆ ಶೂನ್ಯ. ಸಕ್ರಿಯ ರಾಜಕೀಯದಲ್ಲಿರುವ ಅವರು ಬಿಜೆಪಿ ಹಾಗೂ ಪ್ರಧಾನಿ ಮೋದಿಯವರನ್ನು ಹೊಗಳುತ್ತಾ, ಬೇರೆ ಪಕ್ಷಗಳನ್ನು ಟೀಕಿಸುತ್ತಾ ಕಾಲ ಕಳೆಯುತ್ತಿದ್ದಾರೆ. ಈ ಮೂಲಕ ರಾಜಕೀಯ ಕೆಸರೆರಚಾಟಕ್ಕೆ ಗುರಿಯಾಗುತ್ತಿದ್ದಾರೆ.

ಇನ್ನು ದಸರಾ ಉದ್ಘಾಟನೆಗೆ ಅವರನ್ನು ಆಯ್ಕೆ ಮಾಡಿರುವುದು ನಾಡಹಬ್ಬದ ಪಾವಿತ್ರ್ಯತೆಗೆ ಕಳಂಕವಾಗಿದೆ. ಸಿಎಂ ಬಸವರಾಜ ಬೊಮ್ಮಾಯಿಯವರು ತಕ್ಷಣವೇ ಉದ್ಘಾಟಕರನ್ನು ಬದಲಿಸಲು ಮುಂದಾಗಬೇಕು. ರಾಜಕೀಯದಿಂದ ದೂರವಿರುವ ಹಾಗೂ ನಾಡಿಗೆ ನಿಸ್ವಾರ್ಥ ಸೇವೆ ಸಲ್ಲಿಸಿರುವವರನ್ನು ಆಯ್ಕೆ ಮಾಡಬೇಕು” ಎಂದು ಜಗದೀಶ್‌ ವಿ. ಸದಂ ಆಗ್ರಹಿಸಿದ್ದಾರೆ.

Leave a Reply

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ಕ್ರೀಡಾಪಟುಗಳಿಗೆ ಕೊಡುವ ಏಕಲವ್ಯ ಪ್ರಶಸ್ತಿ ಮುಂದುವರಿಸಲಿ: ಶೋಭಾ ನಾರಾಯಣ್ ಬಿಡದಿಯಿಂದ ಹೆದ್ದಾರಿಯಲ್ಲೇ ಮುಂದೆ ಬಂದರೆ ನಿಮಗೆ ಟೋಲ್‌ ಬರೆ ಗ್ಯಾರಂಟಿ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಹೊತ್ತಿ ಉರಿದ ಸ್ಕಾರ್ಪಿಯೋ ಕಾರು KSRTC ಕನಕಪುರ ಬಸ್‌ ನಿಲ್ದಾಣದಲ್ಲಿ ವಿಕಲ ಚೇತನರಿಂದ ₹700 ವಸೂಲಿ, ಕಂಡಕ್ಟರ್ಸ್‌ ಕೊಡಬೇಕು ₹10 : ಟಿಸಿಗೆ ಡಿಎಂ ಸಾಥ್... ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ BMTC: ಅಪಘಾತದಲ್ಲಿ ಮೃತಪಟ್ಟ ನೌಕರರ ಕುಟುಂಬಕ್ಕೆ ₹1 ಕೋಟಿ ಪರಿಹಾರ ಚೆಕ್‌ ವಿತರಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸಾರಿಗೆ ನಿವೃತ್ತ ನೌಕರರಿಗೆ ಮತ್ತೊಮ್ಮೆ ಮೊಗದೊಮ್ಮೆ ನಿರಾಸೆ: ಭಾರಿ ಆಕ್ರೋಶಗೊಂಡ EPS ನಿವೃತ್ತರು ಕಾರು ಡೋರ್‌ಗೆ ಬೈಕ್‌ ಗುದ್ದಿ ಕೆಳಗೆ ಬಿದ್ದ ಮಹಿಳೆ ಮೇಲೆ ಹರಿದ ಬಿಎಂಟಿಸಿ ಬಸ್‌ ನಾಟಿ ಕೋಳಿ ಸಾರಿನ ಜತೆ ರಾಗಿಮುದ್ದೆ ನುಂಗಿದವರಿಗೆ ಗೊತ್ತು ಅದರ ಗಮ್ಮತ್ತು