NEWSನಮ್ಮರಾಜ್ಯಸಂಸ್ಕೃತಿ

ಮೈಸೂರು ದಸರಾ ಸಂಭ್ರಮ: ಸಾಂಸ್ಕೃತಿಕ ಉಪ ಸಮಿತಿ ಪೋಸ್ಟರ್ ಬಿಡುಗಡೆ

ಕಡಿಮೆ ವೆಚ್ಚದಲ್ಲಿ ಸಾಂಪ್ರದಾಯಿಕವಾಗಿ ದಸರಾ ಆಚರಣೆ l ಸಚಿವ ಮಹದೇವಪ್ಪ

ವಿಜಯಪಥ ಸಮಗ್ರ ಸುದ್ದಿ

ಮೈಸೂರು: ಬರಗಾಲದ ಹಿನ್ನಲೆಯಲ್ಲಿ ಕಳೆದ ಬಾರಿಗಿಂತ ಕಡಿಮೆ ವೆಚ್ಚದಲ್ಲಿ ಸಾಂಪ್ರದಾಯಿಕವಾಗಿ ದಸರಾ ಆಚರಣೆ ಮಾಡಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ.ಮಹದೇವಪ್ಪ ಹೇಳಿದ್ದಾರೆ.

ಅರಮನೆ ಮಂಡಳಿ ಕಚೇರಿಯಲ್ಲಿ ಈ ಬಾರಿಯ ದಸರಾ ಮಹೋತ್ಸವ, ಯುವ ಸಂಭ್ರಮ, ಸಾಂಸ್ಕೃತಿಕ ಉಪ ಸಮಿತಿಯ ಪೋಸ್ಟರ್ ಬಿಡುಗಡೆ ಮಾಡಿ ಮಾತನಾಡಿದ ಅವರು, ದಸರಾ ಉನ್ನತ ಮಟ್ಟದ ಸಭೆಯಲ್ಲಿ ಈ ಬಾರಿ ವೈಭವದಿಂದ ದಸರಾ ಆಚರಣೆ ಮಾಡಲು ತೀರ್ಮಾನಿಸಲಾಗಿತ್ತು. ಆದರೆ ಬದಲಾದ ಪರಿಸ್ಥಿತಿಯಲ್ಲಿ ಪ್ರಕೃತಿ ನಮ್ಮ ಪರವಾಗಿರದೆ ಬರಗಾಲ ಎದುರಾಗಿರುವ ಹಿನ್ನೆಲೆಯಲ್ಲಿ ಸರಳವೂ ಅಲ್ಲದ ಅದ್ದೂರಿಯೂ ಅಲ್ಲದ ಸಾಂಪ್ರದಾಯಿಕ ದಸರಾ ಆಚರಣೆ ಮಾಡಲಾಗುತ್ತಿದೆ ಎಂದರು.

ಈ ಬಾರಿ ದಸರಾ ವೇಳೆ ಅನಗತ್ಯ ವೆಚ್ಚಗಳಿಗೆ ಕಡಿವಾಣ ಹಾಕಿ ಕಡಿಮೆ ವೆಚ್ಚದಲ್ಲಿ ದಸರಾ ಆಚರಿಸಲು ನಿರ್ಧರಿಸಲಾಗಿದೆ. ಜತೆಗೆ ಕೆಲ ಕಾರ್ಯಕ್ರಮಗಳನ್ನು ಪ್ರಾಯೋಜಕತ್ವದಲ್ಲಿ ಆಯೋಜನೆ ಮಾಡಲಾಗುತ್ತಿದೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ 15 ಕೋಟಿ ಬಿಡುಗಡೆಯಾಗಿದೆ ಎಂದು ಹೇಳಿದರು.

18 ಉಪ ಸಮಿತಿ ರಚನೆ: ಈ ಬಾರಿಯ ದಸರಾ ಮಹೋತ್ಸವಕ್ಕೆ 18 ಉಪಸಮಿತಿ ರಚಿಸಲಾಗಿದೆ. ದಸರಾ ವೆಬ್‌ಸೈಟ್, ಯುವ ಸಂಭ್ರಮ, ಸಾಂಸ್ಕೃತಿಕ ವೇದಿಕೆ ಕಾರ್ಯಕ್ರಮಗಳ ಪಟ್ಟಿ ಬಿಡುಗಡೆ ಮಾಡಲಾಗಿದೆ. ಯುವಜನತೆ, ಸಮಾಜಕ್ಕೆ ಒಳ್ಳೆಯ ಸಂದೇಶ ಕೊಡುವ ನಿಟ್ಟಿನಲ್ಲಿ ಸ್ತಬ್ಧಚಿತ್ರ, ಕಾರ್ಯಕ್ರಮಗಳು ರೂಪುಗೊಳ್ಳಲಿವೆ. ಸದಬಿರುಚಿಯಡಿ ಯುವ ಜನರನ್ನು ಸಂಭ್ರಮಿಸಲು ಕಾರ್ಯಕ್ರಮ ಆಯೋಜಿಸಲಾಗಿದೆ.

ಈ ಸಂಬಂಧ 31 ಜಿಲ್ಲೆಗಳ ಕಲಾವಿದರು, ಅಧಿಕಾರಿಗಳ ಸಭೆ ನಡೆಸಿದ್ದು, ಕಾರ್ಯಕ್ರಮಗಳನ್ನು ಶಿಸ್ತುಬದ್ಧವಾಗಿ ಆಯೋಜಿಸುವಂತೆ ಸೂಚಿಸಿದ್ದೇನೆ. ಪ್ರತಿ ವರ್ಷದಂತೆ ಈ ಬಾರಿಯೂ ರೈತ ದಸರಾ, ಯುವ ದಸರಾ ಇರಲಿದೆ. ಹೊರಗಿನ ಕಲಾವಿದರೂ ಯುವ ದಸರಾದಲ್ಲಿ ಭಾಗವಹಿಸಲಿದ್ದು, ಸ್ಥಳೀಯರಿಗೆ ಹೆಚ್ಚಿನ ಆದ್ಯತೆ ನೀಡಲಾಗುವುದು ಎಂದ ಅವರು, ಆಹಾರ ಮೇಳವನ್ನು ಒಂದು ಕಡೆ ಮಾತ್ರ ಆಯೋಜಿಸಲಾಗುತ್ತದೆ ಎಂದರು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ತಂಗಡಗಿ, ಅಪರ ಮುಖ್ಯ ಕಾರ್ಯದರ್ಶಿ ಮಂಜುಳಾ, ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ, ಜಿ.ಪಂ ಸಿಇಒ ಕೆ.ಎಂ.ಗಾಯತ್ರಿ, ಪಾಲಿಕೆ ಆಯುಕ್ತ ಅಸಾದ್ ಉರ್ ರೆಹಮಾನ್ ಷರೀಫ್, ನಗರ ಪೊಲೀಸ್ ಆಯುಕ್ತ ರಮೇಶ್.ಬಿ, ಎಸ್‌ಪಿ ಸೀಮಾ ಲಾಟ್ಕರ್ ಸೇರಿದಂತೆ ಹಲವರು ಇದ್ದರು.

Leave a Reply

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ಕ್ರೀಡಾಪಟುಗಳಿಗೆ ಕೊಡುವ ಏಕಲವ್ಯ ಪ್ರಶಸ್ತಿ ಮುಂದುವರಿಸಲಿ: ಶೋಭಾ ನಾರಾಯಣ್ ಬಿಡದಿಯಿಂದ ಹೆದ್ದಾರಿಯಲ್ಲೇ ಮುಂದೆ ಬಂದರೆ ನಿಮಗೆ ಟೋಲ್‌ ಬರೆ ಗ್ಯಾರಂಟಿ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಹೊತ್ತಿ ಉರಿದ ಸ್ಕಾರ್ಪಿಯೋ ಕಾರು KSRTC ಕನಕಪುರ ಬಸ್‌ ನಿಲ್ದಾಣದಲ್ಲಿ ವಿಕಲ ಚೇತನರಿಂದ ₹700 ವಸೂಲಿ, ಕಂಡಕ್ಟರ್ಸ್‌ ಕೊಡಬೇಕು ₹10 : ಟಿಸಿಗೆ ಡಿಎಂ ಸಾಥ್... ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ BMTC: ಅಪಘಾತದಲ್ಲಿ ಮೃತಪಟ್ಟ ನೌಕರರ ಕುಟುಂಬಕ್ಕೆ ₹1 ಕೋಟಿ ಪರಿಹಾರ ಚೆಕ್‌ ವಿತರಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸಾರಿಗೆ ನಿವೃತ್ತ ನೌಕರರಿಗೆ ಮತ್ತೊಮ್ಮೆ ಮೊಗದೊಮ್ಮೆ ನಿರಾಸೆ: ಭಾರಿ ಆಕ್ರೋಶಗೊಂಡ EPS ನಿವೃತ್ತರು ಕಾರು ಡೋರ್‌ಗೆ ಬೈಕ್‌ ಗುದ್ದಿ ಕೆಳಗೆ ಬಿದ್ದ ಮಹಿಳೆ ಮೇಲೆ ಹರಿದ ಬಿಎಂಟಿಸಿ ಬಸ್‌ ನಾಟಿ ಕೋಳಿ ಸಾರಿನ ಜತೆ ರಾಗಿಮುದ್ದೆ ನುಂಗಿದವರಿಗೆ ಗೊತ್ತು ಅದರ ಗಮ್ಮತ್ತು