NEWSನಮ್ಮರಾಜ್ಯಮೈಸೂರುಸಂಸ್ಕೃತಿ

ಮೈಸೂರು ದಸರಾ: ಸಾಮಾಜಿಕ ಸಂದೇಶ ಸಾರುವ ಸ್ತಬ್ಧಚಿತ್ರಗಳಿಗೆಆದ್ಯತೆ- ಸಚಿವ ಎಚ್‌ಸಿಎಂ

ವಿಜಯಪಥ ಸಮಗ್ರ ಸುದ್ದಿ

ಮೈಸೂರು: ದಸರಾ ಜಂಬೂಸವಾರಿಯಲ್ಲಿ ಸಮಾಜದಲ್ಲಿ ಸಾಮರಸ್ಯ, ಸೌಹರ್ದತೆ ಬೀರುವ ಮತ್ತು ಸಾಂವಿಧಾನಿಕ ಹಕ್ಕು ಮತ್ತು ಕರ್ತವ್ಯಗಳ ಬಗ್ಗೆ ಅರಿವು ಮೂಡಿಸಿ ಸಾಮಾಜಿಕ ಸಂದೇಶ ಸಾರುವ ಅರ್ಥಪೂರ್ಣ ಸ್ತಬ್ಧಚಿತ್ರಗಳನ್ನು ಸಿದ್ಧಪಡಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ.ಮಹದೇವಪ್ಪ ಹೇಳಿದ್ದಾರೆ.

ಜಿಲ್ಲಾ ಪಂಚಾಯಿತಿ ಸಭಾಂಗದಲ್ಲಿ ದಸರಾ ಮೆರವಣಿಗೆಯಲ್ಲಿ ಭಾಗವಹಿಸುವ ಸ್ತಬ್ಧಚಿತ್ರಗಳ ಸಿದ್ಧತೆ ಸಂಬಂಧ ವಿವಿಧ ಜಿಲ್ಲೆಗಳ ನೋಡೆಲ್ ಅಧಿಕಾರಿಗಳು ಹಾಗೂ ಕಲಾವಿದರೊಂದಿಗೆ ನಡೆದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಸಚಿವರು, ಸಮಾಜದ ಪರಿವರ್ತನೆಗೆ ಅನುಕೂಲವಾಗುವಂತಹ ಪರಿಕಲ್ಪನೆ ಅಡಿಯಲ್ಲಿ ಸ್ತಬ್ಧಚಿತ್ರಗಳನ್ನು ರೂಪಿಸಿ ಎಂದು ಸಲಹೆ ನೀಡಿದರು.

ನಾರಾಯಣ ಗುರು ಸಮಾನತೆಗಾಗಿ ಶ್ರಮಿಸಿದರು. ದೇಶದಲ್ಲೇ ಮೊದಲು ಮಹಿಳೆಯರಿಗೆ ಶಿಕ್ಷಣವನ್ನು ಸಾವಿತ್ರಿ ಬಾಯಿ ಫುಲೆ ನೀಡಿದರು. ಸಮೃದ್ಧ ಭಾರತ ನಿರ್ಮಾಣಕ್ಕೆ ಡಾ.ಬಿ.ಆರ್.ಅಂಬೇಡ್ಕರ್ ಸಂವಿಧಾನ ರಚಿಸಿದರು. ನಾಲ್ವಡಿ ಕೃಷ್ಣರಾಜ ಒಡೆಯರ್ ಅವರು ಶಿಕ್ಷಣ, ನೀರಾವರಿ, ಕೃಷಿ ಕ್ಷೇತ್ರಕ್ಕೆ ಕೊಡುಗೆ ನೀಡಿ ಸಾಮಾಜಿಕ ನ್ಯಾಯದ ಪರ ಆಡಳಿತ ನಡೆಸಿದರು. ಹೀಗೆ ದೇಶದ ಹಲವಾರು ಮಹಾನ್ ಸಮಾಜ ಸುಧಾರಕರ ಬದುಕು, ಹೋರಾಟ ತಿಳಿಸಿಕೊಡುವ ಕೆಲಸವಾಗಬೇಕು ಎಂದರು.

ಪ್ರತಿ ಜಿಲ್ಲೆಗೆ ಅದರದೇ ಆದ ಐತಿಹಾಸಿಕ ಘಟನೆಗಳು ಇರುತ್ತವೆ. ವಿಭಿನ್ನ ಆಚಾರ, ವಿಚಾರಗಳು, ಕಲೆ, ಸಂಸ್ಕೃತಿಗಳನ್ನು ಒಳಗೊಂಡಿರುತ್ತವೆ. ಐತಿಹಾಸಿಕ ಮಾಹಿತಿ ಜತೆಗೆ ಜೀವಂತವಾಗಿ ನಡೆದಿರುವಂತೆ ಘಟನೆಗಳನ್ನು ಬಿಂಬಿಸುವ ಶಿಸ್ತುಬದ್ಧ ಎಲ್ಲರ ಕಣ್ಮನ ಸೆಳೆಯುವ ಕಲಾಕೃತಿ ಒಳಗೊಂಡಿರಲಿ ಎಂದು ತಿಳಿಸಿದರು.

ಕಲಾವಿದರು ಸಂಪೂರ್ಣವಾಗಿ ತೊಡಗಿಸಿಕೊಂಡು ಸೃಜನಶೀಲತೆಯಿಂದ ಉತ್ತಮವಾದ ಸ್ತಬ್ಧಚಿತ್ರಗಳನ್ನು ಸಿದ್ಧಪಡಿಸಿ. ನಿಮಗೆ ಅಗತ್ಯವಿರುವ ಎಲ್ಲಾ ಸೌಕರ್ಯಗಳನ್ನು ಒದಗಿಸಿಕೊಡಲಾಗುವುದು. ಪ್ರಶಸ್ತಿ ಪತ್ರವನ್ನು ವಿಭಾಗೀಯ ಮಟ್ಟದಲ್ಲಿ ನೀಡುವುದು ಹಾಗೂ ಕಲಾವಿದರಿಗೂ ಪ್ರತ್ಯೇಕ ಪ್ರಶಸ್ತಿ ನೀಡುವ ಕುರಿತು ಅಧಿಕಾರಿಗಳೊಂದಿಗೆ ಚರ್ಚಿಸಲಾಗುವುದು ಎಂದು ಹೇಳಿದರು.

ಸ್ತಬ್ಧಚಿತ್ರದ ಜೊತೆಗೆ ಆಯಾ ಜಿಲ್ಲೆಯ ಕಲಾತಂಡಗಳನ್ನು ನಿಯೋಜಿಸುವುದು. ಅಕ್ಕಪಕ್ಕದಲ್ಲಿ ಸಂಬಂಧಿಸಿದ ಅಧಿಕಾರಿಗಳು ಮತ್ತು ಸಿಬ್ಬಂದಿ ಮಾತ್ರ ಇರಬೇಕು. ಅನವಶ್ಯಕವಾಗಿ ಯಾರಿಗೂ ಅವಕಾಶ ನೀಡಬಾರದು. ಸ್ತಬ್ಧಚಿತ್ರದ ಅಳತೆಯಲ್ಲಿ ಯಾವುದೇ ಕಾರಣಕ್ಕೂ ವ್ಯತ್ಯಾಸ ಇರಬಾರದು. ಅಗಲ, ಎತ್ತರ, ಉದ್ದ ಜಿಲ್ಲಾಡಳಿತ ನಿಗದಿಪಡಿಸಿದ ಅಳತೆಯನ್ನು ಮೀರಬಾರದು ಎಂದು ಸೂಚಿಸಿದರು.

ಸಭೆಯಲ್ಲಿ ವಿಧಾನ ಪರಿಷತ್ ಸದಸ್ಯ ಡಾ.ಡಿ.ತಿಮ್ಮಯ್ಯ, ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ, ಜಿಲ್ಲಾ ಪಂಚಾಯತ್ ಸಿಇಒ ಕೆ.ಎಂ.ಗಾಯಿತ್ರಿ, ಉಪ ಕಾರ್ಯದರ್ಶಿ ಡಾ.ಎಂ.ಕೃಷ್ಣರಾಜು ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು.

Leave a Reply

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ಕ್ರೀಡಾಪಟುಗಳಿಗೆ ಕೊಡುವ ಏಕಲವ್ಯ ಪ್ರಶಸ್ತಿ ಮುಂದುವರಿಸಲಿ: ಶೋಭಾ ನಾರಾಯಣ್ ಬಿಡದಿಯಿಂದ ಹೆದ್ದಾರಿಯಲ್ಲೇ ಮುಂದೆ ಬಂದರೆ ನಿಮಗೆ ಟೋಲ್‌ ಬರೆ ಗ್ಯಾರಂಟಿ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಹೊತ್ತಿ ಉರಿದ ಸ್ಕಾರ್ಪಿಯೋ ಕಾರು KSRTC ಕನಕಪುರ ಬಸ್‌ ನಿಲ್ದಾಣದಲ್ಲಿ ವಿಕಲ ಚೇತನರಿಂದ ₹700 ವಸೂಲಿ, ಕಂಡಕ್ಟರ್ಸ್‌ ಕೊಡಬೇಕು ₹10 : ಟಿಸಿಗೆ ಡಿಎಂ ಸಾಥ್... ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ BMTC: ಅಪಘಾತದಲ್ಲಿ ಮೃತಪಟ್ಟ ನೌಕರರ ಕುಟುಂಬಕ್ಕೆ ₹1 ಕೋಟಿ ಪರಿಹಾರ ಚೆಕ್‌ ವಿತರಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸಾರಿಗೆ ನಿವೃತ್ತ ನೌಕರರಿಗೆ ಮತ್ತೊಮ್ಮೆ ಮೊಗದೊಮ್ಮೆ ನಿರಾಸೆ: ಭಾರಿ ಆಕ್ರೋಶಗೊಂಡ EPS ನಿವೃತ್ತರು ಕಾರು ಡೋರ್‌ಗೆ ಬೈಕ್‌ ಗುದ್ದಿ ಕೆಳಗೆ ಬಿದ್ದ ಮಹಿಳೆ ಮೇಲೆ ಹರಿದ ಬಿಎಂಟಿಸಿ ಬಸ್‌ ನಾಟಿ ಕೋಳಿ ಸಾರಿನ ಜತೆ ರಾಗಿಮುದ್ದೆ ನುಂಗಿದವರಿಗೆ ಗೊತ್ತು ಅದರ ಗಮ್ಮತ್ತು