NEWSನಮ್ಮಜಿಲ್ಲೆನಮ್ಮರಾಜ್ಯ

ಮೈಸೂರು-ಬೆಂಗಳೂರು ದಶಪಥ ಸಂಚಾರ ಮತ್ತಷ್ಟು ದುಬಾರಿ: ನಾಳೆಯಿಂದ ಶೇ. 22ರಷ್ಟು ಟೋಲ್ ದರ ಹೆಚ್ಚಳ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಇತ್ತೀಚೆಗಷ್ಟೇ ಪ್ರಧಾನಿ ನರೇಂದ್ರ ಮೋದಿ ಅವರಿಂದ ಉದ್ಘಾಟನೆಯಾದ ಮೈಸೂರು-ಬೆಂಗಳೂರು ದಶಪಥ ಹೆದ್ದಾರಿಯಲ್ಲಿ ಸಂಚಾರ ಇದೀಗ ಮತ್ತಷ್ಟು ದುಬಾರಿಯಾಗಲಿದೆ.

ಮೈಸೂರು-ಬೆಂಗಳೂರು ದಶಪಥ ಹೆದ್ದಾರಿಯಲ್ಲಿ ಸಂಚಾರಕ್ಕೆ ನಾಳೇಯಿಂದ ಶೇ.22 ರಷ್ಟು ಟೋಲ್ ದರ ಹೆಚ್ಚಳವಾಗಲಿದೆ. ಟೋಲ್ ದರ ಹೆಚ್ಚಿಸಿ NHAI ಆದೇಶ ಹೊರಡಿಸಿದೆ.

ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇನಲ್ಲಿ ಟೋಲ್‌ ಸಂಗ್ರಹ ಆರಂಭವಾದ 17 ದಿನದಲ್ಲೇ ಟೋಲ್‌ ಮೊತ್ತ ಹೆಚ್ಚಿಸಲು ಹೆದ್ದಾರಿ ಸಚಿವಾಲಯ ನಿರ್ಧರಿಸಿದೆ. ಈ ಹೊಸ ಟೋಲ್‌ ದರವು ಶನಿವಾರ (ಏಪ್ರಿಲ್‌ 1)ದಿಂದ ಜಾರಿ ಆಗಲಿದೆ.

ಟೋಲ್‌ ದರದಲ್ಲಿ ಶೇ.22ರಷ್ಟು ಹೆಚ್ಚಳ ಮಾಡುತ್ತಿದ್ದು, ಇದು ವಾಹನ ಸವಾರರ ಕೆಂಗಣ್ಣಿಗೆ ಗುರಿಯಾಗಲಿದೆ ಎನ್ನುವ ಮಾತುಗಳು ಕೇಳಿಬರುತ್ತಿವೆ.

ಹೊಸ ಟೋಲ್ ದರದ ವಿವರ – ಕಾರು, ವ್ಯಾನ್‌, ಜೀಪ್‌: 165 ರೂಪಾಯಿ, ದ್ವಿಮುಖ ಸಂಚಾರ 250 ರೂಪಾಯಿ ಮತ್ತು ಒಂದು ಬಾರಿ 30 ರೂಪಾಯಿ, ಮತ್ತೊಂದು ಬಾರಿ 45 ರೂಪಾಯಿ ಹೆಚ್ಚಳ ಮಾಡಲಾಗಿದೆ.

 ಟ್ರಕ್‌, ಬಸ್‌, ಟ್ಯಾಕ್ಸಿ: 565 ರೂಪಾಯಿ, ದ್ವಿಮುಖ ಸಂಚಾರಕ್ಕೆ 850 ರೂಪಾಯಿ. ಹಾಗೆಯೇ ಒಂದು ಬಾರಿ 165 ರೂಪಾಯಿ, ಮತ್ತೊಂದು ಬಾರಿ 160 ರೂಪಾಯಿ ಹೆಚ್ಚಳ ಮಾಡಲಾಗಿದೆ.

ಲಘು ವಾಹನಗಳು, ಮಿನಿ ಬಸ್‌: 270 ರೂಪಾಯಿ, ದ್ವಿಮುಖ ಸಂಚಾರಕ್ಕೆ 405 ರೂಪಾಯಿ ಆಗಿದೆ. ಅಲ್ಲದೇ ಒಂದು ಬಾರಿ 50 ರೂಪಾಯಿ ಎರಡನೇ ಬಾರಿ 75 ರೂಪಾಯಿ ಹೆಚ್ಚಳ ಮಾಡಲಾಗಿದೆ.

ತ್ರಿ ಆಕ್ಸೆಲ್‌ ವಾಣಿಜ್ಯ ವಾಹನಗಳು: 615 ರೂಪಾಯಿ, ದ್ವಿಮುಖ ಸಂಚಾರಕ್ಕೆ 925 ರೂಪಾಯಿ ಆಗಿದೆ. ಮೊದಲ ಬಾರಿ 115 ರೂಪಾಯಿ ಹೆಚ್ಚಳ ಮಾಡಿದ್ದು, ಎರಡನೇ ಬಾರಿ 225 ರೂಪಾಯಿ ಹೆಚ್ಚಳ ಮಾಡಲಾಗಿದೆ.

ಭಾರಿ ವಾಹನಗಳು: 885 ರೂಪಾಯಿ, ದ್ವಿಮುಖ ಸಂಚಾರಕ್ಕೆ 1,330 ರೂಪಾಯಿ ಆಗಿದೆ. ಹಾಗೆಯೇ ಮೊದಲ ಬಾರಿ 165 ರೂಪಾಯಿ ಎರಡನೇ ಬಾರಿ 250 ರೂಪಾಯಿ ಹೆಚ್ಚಳ ಮಾಡಲಾಗಿದೆ.

7 ಅಥವಾ ಎಕ್ಸೆಲ್‌ ವಾಹನಗಳು:  ಇನ್ನು 7 ಅಥವಾ ಎಕ್ಸೆಲ್‌ ವಾಹನಗಳಿಗೆ 1,080 ರೂಪಾಯಿ, ದ್ವಿಮುಖ ಸಂಚಾರಕ್ಕೆ 1,620 ರೂಪಾಯಿ ಆಗಿದೆ. ಮೊದಲ ಬಾರಿ 200 ರೂಪಾಯಿ ಎರಡನೇ ಬಾರಿ 305 ರೂಪಾಯಿ ಹೆಚ್ಚಳ ಮಾಡಲಾಗಿದೆ.

ಟೋಲ್‌ ಆರಂಭವಾದಾಗಿನಿಂದ ವಾಹನ ಸವಾರರು ಟೋಲ್‌ ಸಿಬ್ಬಂದಿಗಳ ವಿರುದ್ಧ ತಿರುಗಿಬಿಳುತ್ತಲೇ ಇದ್ದಾರೆ. ಈಗ ಮತ್ತೆ ಟೋಲ್‌ ಶುಲ್ಕವನ್ನು ಹೆಚ್ಚಿಸಿರುವುದರಿಂದ ವಾಹನ ಸವಾರರು ಹೇಗೆ ಪ್ರತಿಕ್ರಿಯೆ ನೀಡುತ್ತಾರೆ ಎಂಬುದನ್ನು ಇನ್ನಷ್ಟೇ ಕಾದುನೋಡಬೇಕಿದೆ.

Leave a Reply

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ಕ್ರೀಡಾಪಟುಗಳಿಗೆ ಕೊಡುವ ಏಕಲವ್ಯ ಪ್ರಶಸ್ತಿ ಮುಂದುವರಿಸಲಿ: ಶೋಭಾ ನಾರಾಯಣ್ ಬಿಡದಿಯಿಂದ ಹೆದ್ದಾರಿಯಲ್ಲೇ ಮುಂದೆ ಬಂದರೆ ನಿಮಗೆ ಟೋಲ್‌ ಬರೆ ಗ್ಯಾರಂಟಿ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಹೊತ್ತಿ ಉರಿದ ಸ್ಕಾರ್ಪಿಯೋ ಕಾರು KSRTC ಕನಕಪುರ ಬಸ್‌ ನಿಲ್ದಾಣದಲ್ಲಿ ವಿಕಲ ಚೇತನರಿಂದ ₹700 ವಸೂಲಿ, ಕಂಡಕ್ಟರ್ಸ್‌ ಕೊಡಬೇಕು ₹10 : ಟಿಸಿಗೆ ಡಿಎಂ ಸಾಥ್... ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ BMTC: ಅಪಘಾತದಲ್ಲಿ ಮೃತಪಟ್ಟ ನೌಕರರ ಕುಟುಂಬಕ್ಕೆ ₹1 ಕೋಟಿ ಪರಿಹಾರ ಚೆಕ್‌ ವಿತರಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸಾರಿಗೆ ನಿವೃತ್ತ ನೌಕರರಿಗೆ ಮತ್ತೊಮ್ಮೆ ಮೊಗದೊಮ್ಮೆ ನಿರಾಸೆ: ಭಾರಿ ಆಕ್ರೋಶಗೊಂಡ EPS ನಿವೃತ್ತರು ಕಾರು ಡೋರ್‌ಗೆ ಬೈಕ್‌ ಗುದ್ದಿ ಕೆಳಗೆ ಬಿದ್ದ ಮಹಿಳೆ ಮೇಲೆ ಹರಿದ ಬಿಎಂಟಿಸಿ ಬಸ್‌ ನಾಟಿ ಕೋಳಿ ಸಾರಿನ ಜತೆ ರಾಗಿಮುದ್ದೆ ನುಂಗಿದವರಿಗೆ ಗೊತ್ತು ಅದರ ಗಮ್ಮತ್ತು