CrimeNEWSಮೈಸೂರು

ಮೈಸೂರು – ಬೆಂಗಳೂರು ಹೆದ್ದಾರಿಯಲ್ಲಿ ಕಾರು ಅಡ್ಡಗಟ್ಟಿ ದರೋಡೆ

ವಿಜಯಪಥ ಸಮಗ್ರ ಸುದ್ದಿ

ಮಂಡ್ಯ: ಇತ್ತೀಚೆಗಷ್ಟೆ ಎಡಿಜಿಪಿ ಅಲೋಕ್ ಕುಮಾರ್ ಮೈಸೂರು- ಬೆಂಗಳೂರು ಹೆದ್ದಾರಿ ಪರಿಶೀಲನೆ ಮಾಡಿದ್ದರು. ಹೆದ್ದಾರಿ ನ್ಯೂನತೆ, ಅಪಘಾತ, ಕ್ರೈಂ ನಡೆಯುವುದಕ್ಕೆ ಕಡಿವಾಣ ಹಾಕಲು ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದರು.

ಆದರೆ ಅವರು ಬಂದು ಹೋದ ದಿನವೇ ದರೋಡೆ ನಡೆದಿದೆ. ಪೊಲೀಸರೆಂದು ಹೇಳಿಕೊಂಡು ದರೋಡೆ ನಡೆಸಿದ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ಹೀಗಾಗಿ ಈ ಹೆದ್ದಾರಿಯಲ್ಲಿ ಸಂಚಾರ ಮಾಡುವ ವಾಹನ ಸವಾರರು ಎಚ್ಚರ ವಹಿಸಬೇಕು.

ಕಾರು ಅಡ್ಡಗಟ್ಟಿ ದರೋಡೆ: ಮಂಡ್ಯದ ಮದ್ದೂರಿನ ಐಶ್ವರ್ಯ ಕಾನ್ವೆಂಟ್ ಬಳಿಯ ಹೆದ್ದಾರಿಯಲ್ಲಿ ಮೂವರು ದುಷ್ಕರ್ಮಿಗಳು ಕಾರು ಅಡ್ಡ ಹಾಕಿ ಮಾರಕಾಸ್ತ್ರ ತೋರಿಸಿ ದರೋಡೆ ಮಾಡಿದ್ದಾರೆ. ಮಡಿಕೇರಿ ಮೂಲದ ಮುತ್ತಪ್ಪ ಎಂಬ ಯುವಕನ ಕಾರು ಅಡ್ಡಗಟ್ಟಿ ಕುತ್ತಿಗೆಗೆ ಮಾರಕಾಸ್ತ್ರ ಇಟ್ಟು ಚಿನ್ನದ ಸರ ಕಿತ್ತು ಪರಾರಿಯಾಗಿದ್ದಾರೆ.

ಎಡಿಜಿಪಿ ಭೇಟಿ ದಿನವೇ ಘಟನೆ: ‌ಮೊನ್ನೆಯಷ್ಟೆ ಎಡಿಜಿಪಿ ಅಲೋಕ್ ಕುಮಾರ್ ಅವರು ಮೈಸೂರು-ಬೆಂಗಳೂರು ಹೆದ್ದಾರಿಯನ್ನು ಪರಿಶೀಲನೆ ನಡೆಸಿದರು. ಹೆದ್ದಾರಿಯ ನ್ಯೂನತೆ, ಅಪಘಾತ ಹಾಗೂ ಕ್ರೈಂ ಪ್ರಕರಣಗಳಿಗೆ ಕಡಿವಾಣ ಹಾಕಲು ಎಡಿಜಿಪಿ ಸೂಚನೆ ನೀಡಿದ್ದರು. ಆದರೆ, ಎಡಿಜಿಪಿ ಬಂದು ಹೋದ ದಿನವೇ ದರೋಡೆ ನಡೆದಿದೆ.

ಚಿನ್ನದ ಸರ: ಪೊಲೀಸರೆಂದು ಹೇಳಿಕೊಂಡು ಕಿರಾತಕರು ಕಾರು ಅಡ್ಡ ಹಾಕಿ, ಮಾರಕಾಸ್ತ್ರಗಳನ್ನು ತೋರಿಸಿ ದರೋಡೆ ಮಾಡಿದ್ದಾರೆ. ಈ ಘಟನೆ ಮಂಡ್ಯದ ಮದ್ದೂರಿನ ಐಶ್ವರ್ಯ ಕಾನ್ವೆಂಟ್ ಬಳಿಯ ಹೆದ್ದಾರಿಯಲ್ಲಿ ನಡೆದಿದೆ. ಮಡಿಕೇರಿ ಮೂಲದ ಯುವಕ ಮುತ್ತಪ್ಪ ಎಂಬುವವರ ಕಾರು ಅಡ್ಡ ಹಾಕಿ, ಕುತ್ತಿಗೆಗೆ ಮಾರಕಾಸ್ತ್ರ ಇಟ್ಟು, ಚಿನ್ನದ ಸರವನ್ನು ಕರಾತಕರು ಕಿತ್ತುಕೊಂಡಿದ್ದಾರೆ.

ಪೊಲೀಸರು ಎಂದು ಧಮ್ಕಿ: ಸುಮಾರು 3.50 ಲಕ್ಷ ರೂ. ಮೌಲ್ಯದ 65 ಗ್ರಾಂ ಚಿನ್ನದ ಸರವನ್ನು ಕಿತ್ತುಕೊಂಡು ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. ಮುತ್ತಪ್ಪ ಅವರು ಬೆಂಗಳೂರಿನಿಂದ ಮಡಿಕೇರಿಗೆ ಇನೋವಾ ಕ್ರಿಸ್ಟಾ ಕಾರಿನಲ್ಲಿ ತೆರಳುತ್ತಿದ್ದರು. ಮಧ್ಯರಾತ್ರಿ 2 ಗಂಟೆಯಲ್ಲಿ ಸರ್ವಿಸ್ ರಸ್ತೆಯಲ್ಲಿ ಕಾರನ್ನ ನಿಲ್ಲಿಸಿ ವಿಶ್ರಾಂತಿ ಪಡೆಯುವ ವೇಳೆ ಮೂವರು ದುಷ್ಕರ್ಮಿಗಳು ನಾವು ಪೊಲೀಸರು ಎಂದು ಧಮ್ಕಿ ಹಾಕಿ ದರೋಡೆ ಮಾಡಿದ್ದಾರೆ.

ತಪಾಸಣೆಯ ನೆಪವೊಡ್ಡಿ ಮಾರಕಾಸ್ತ್ರವನ್ನು ಕುತ್ತಿಗೆಗೆ ಇಟ್ಟು ಗಾಯಗೊಳಿಸಿ ದರೋಡೆ ಮಾಡಿದ್ದಾರೆ. ಬಳಿಕ ಘಟನಾ ಸ್ಥಳಕ್ಕೆ ಹೆದ್ದಾರಿ ಗಸ್ತು ಪೊಲೀಸರು ಆಗಮಿಸಿ, ಮುತ್ತಪ್ಪ ಅವರನ್ನು ಮದ್ದೂರು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದಾರೆ. ಅಲ್ಲದೆ, ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಮದ್ದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ನಾನು ಕಾದು ಕುಳಿತಿದ್ದರೂ ಬಸ್‌ ನಿಲ್ಲಿಸಿಲ್ಲ - ಚಾಲಕ, ಕಂಡಕ್ಟರ್‌ ತಿಂಗಳ ಸಂಬಳ ನನಗೆ ನಷ್ಟಪರಿಹಾರ ಕೊಡಿ: ವಕೀಲನ ಒತ್ತ... ಕೆಎಂಎಫ್ ಸಿಬ್ಬಂದಿಗೆ 7ನೇ ವೇತನ ಆಯೋಗ ಜಾರಿ- 2024ರ ಆ.1ರಿಂದಲೇ ಪೂರ್ವಾನ್ವಯ KSRTC ಏಕಸ್ವಾಮ್ಯಕ್ಕೆ ಮೂಗುದಾರ ಹಾಕಿ- ಸರ್ಕಾರದ ಕಾಯ್ದೆ ಸರಿ ಎಂದ ಕೋರ್ಟ್ ಸ್ಮಶಾನ ಜಾಗ ಭೂಗಳ್ಳನಿಗೆ ಬಿಟ್ಟುಕೊಡಲು ಟಿಪ್ಪಣಿ ಮಂಡಿಸಿರುವ ಭ್ರಷ್ಟ ಅಧಿಕಾರಿಗಳು: ಎನ್.ಆರ್.ರಮೇಶ್ ಆರೋಪ ಕ್ರೀಡಾಪಟುಗಳಿಗೆ ಕೊಡುವ ಏಕಲವ್ಯ ಪ್ರಶಸ್ತಿ ಮುಂದುವರಿಸಲಿ: ಶೋಭಾ ನಾರಾಯಣ್ ಬಿಡದಿಯಿಂದ ಹೆದ್ದಾರಿಯಲ್ಲೇ ಮುಂದೆ ಬಂದರೆ ನಿಮಗೆ ಟೋಲ್‌ ಬರೆ ಗ್ಯಾರಂಟಿ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಹೊತ್ತಿ ಉರಿದ ಸ್ಕಾರ್ಪಿಯೋ ಕಾರು KSRTC ಕನಕಪುರ ಬಸ್‌ ನಿಲ್ದಾಣದಲ್ಲಿ ವಿಕಲ ಚೇತನರಿಂದ ₹700 ವಸೂಲಿ, ಕಂಡಕ್ಟರ್ಸ್‌ ಕೊಡಬೇಕು ₹10 : ಟಿಸಿಗೆ ಡಿಎಂ ಸಾಥ್... ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ