CrimeNEWSನಮ್ಮಜಿಲ್ಲೆ

ಮೈಸೂರು: ಬೆಳ್ಳಂಬೆಳಗ್ಗೆ ಗ್ಯಾಸ್ ಸಿಲಿಂಡರ್ ಸ್ಫೋಟ – 10 ಮಂದಿ ಆಸ್ಪತ್ರೆಗೆ ದಾಖಲು

ವಿಜಯಪಥ ಸಮಗ್ರ ಸುದ್ದಿ

ಮೈಸೂರು: ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಸುಮಾರು 10 ಮಂದಿ ಗಾಯಗೊಂಡಿರುವ ಘಟನೆ ನಗರದ ಬನ್ನಿಮಂಟಪದ ಅಗ್ನಿಶಾಮಕ ವಸತಿ ಗೃಹದಲ್ಲಿ ಇಂದು ಬೆಳ್ಳಂಬೆಳಗ್ಗೆ ಸಂಬವಿಸಿದೆ.

ವಸತಿಗೃಹದ ಮನೆಯೊಂದರಲ್ಲಿ ಗ್ಯಾಸ್ ಲೀಕೇಜ್‍ ಆಗಿದ್ದು, ಬೆಳಗ್ಗೆ ಎದ್ದು ಹಾಲು ಕಾಯಿಸಲು ಬೆಂಕಿ ಹಚ್ಚುವ ವೇಳೆ ಸಿಲಿಂಡರ್ ಸ್ಫೋಟಗೊಂಡಿದೆ. ಈ ವೇಳೆ ಅಕ್ಕಪಕ್ಕದ ಮನೆಯವರಿಗೂ ಬೆಂಕಿ ತಗುಲಿ ಭಾರಿ ಹಾಲಿಯಾಗಿದೆ.

ಘಟನೆಯಲ್ಲಿ ಒಂದೇ ಮನೆಯ ನಾಲ್ವರು ಹಾಗೂ ಅಕ್ಕಪಕ್ಕದ 6 ಮಂದಿ ಗಾಯಗೊಂಡಿದ್ದಾರೆ. ಅವರಲ್ಲಿ ಇಬ್ಬರು ಮಕ್ಕಳಿದ್ದು, ಓರ್ವ 6 ವರ್ಷ ಹಾಗೂ ಇನ್ನೋರ್ವ 10 ವರ್ಷದ ಬಾಲಕನಾಗಿದ್ದಾನೆ. 6 ಮಂದಿ ಗಾಯಳು ಪೈಕಿ ಓರ್ವನಿಗೆ ಗಂಭೀರ ಗಾಯಗಳಾಗಿದ್ದು, ದೇಹದ ಕೆಲ ಭಾಗ ಸುಟ್ಟುಹೋಗಿದೆ.  [wp-rss-aggregator limit=”1″]

ಗಾಯಗೊಂಡವರನ್ನು ಸಮೀಪದ ಸೇಂಟ್‌ ಜೋಸೆಫ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಸದ್ಯ ಅವರೆಲ್ಲರೂ ವೆಂಟಿಲೆಟರ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಉಳಿದವರಿಗೆ ಸಣ್ಣಪುಟ್ಟ ಗಾಯವಾಗಿದೆ ಎಂದು ಘಟನೆ ಬಗ್ಗೆ ಆಸ್ಪತ್ರೆ ಬಳಿ ನೆರೆದಿದ್ದ ಸ್ಥಳೀಯರು ಮಾಹಿತಿ ನೀಡಿದ್ದಾರೆ. ಎನ್‌.ಆರ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸುತ್ತಿದ್ದಾರೆ.

Leave a Reply

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ಕ್ರೀಡಾಪಟುಗಳಿಗೆ ಕೊಡುವ ಏಕಲವ್ಯ ಪ್ರಶಸ್ತಿ ಮುಂದುವರಿಸಲಿ: ಶೋಭಾ ನಾರಾಯಣ್ ಬಿಡದಿಯಿಂದ ಹೆದ್ದಾರಿಯಲ್ಲೇ ಮುಂದೆ ಬಂದರೆ ನಿಮಗೆ ಟೋಲ್‌ ಬರೆ ಗ್ಯಾರಂಟಿ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಹೊತ್ತಿ ಉರಿದ ಸ್ಕಾರ್ಪಿಯೋ ಕಾರು KSRTC ಕನಕಪುರ ಬಸ್‌ ನಿಲ್ದಾಣದಲ್ಲಿ ವಿಕಲ ಚೇತನರಿಂದ ₹700 ವಸೂಲಿ, ಕಂಡಕ್ಟರ್ಸ್‌ ಕೊಡಬೇಕು ₹10 : ಟಿಸಿಗೆ ಡಿಎಂ ಸಾಥ್... ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ BMTC: ಅಪಘಾತದಲ್ಲಿ ಮೃತಪಟ್ಟ ನೌಕರರ ಕುಟುಂಬಕ್ಕೆ ₹1 ಕೋಟಿ ಪರಿಹಾರ ಚೆಕ್‌ ವಿತರಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸಾರಿಗೆ ನಿವೃತ್ತ ನೌಕರರಿಗೆ ಮತ್ತೊಮ್ಮೆ ಮೊಗದೊಮ್ಮೆ ನಿರಾಸೆ: ಭಾರಿ ಆಕ್ರೋಶಗೊಂಡ EPS ನಿವೃತ್ತರು ಕಾರು ಡೋರ್‌ಗೆ ಬೈಕ್‌ ಗುದ್ದಿ ಕೆಳಗೆ ಬಿದ್ದ ಮಹಿಳೆ ಮೇಲೆ ಹರಿದ ಬಿಎಂಟಿಸಿ ಬಸ್‌ ನಾಟಿ ಕೋಳಿ ಸಾರಿನ ಜತೆ ರಾಗಿಮುದ್ದೆ ನುಂಗಿದವರಿಗೆ ಗೊತ್ತು ಅದರ ಗಮ್ಮತ್ತು