NEWSನಮ್ಮರಾಜ್ಯಸಿನಿಪಥ

ಮೋಹಕ ತಾರೆ ರಮ್ಯಾ ಮತ್ತೆ ಬಣ್ಣಹಚ್ಚುವರೆ….

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಮೋಹಕ ತಾರೆ ನಟಿ ರಮ್ಯಾ ಅವರು ಮತ್ತೆ ಬಣ್ಣ ಹಚ್ಚುವರೆ ಎಂಬ ಸುದ್ದಿ ಗಾಂಧಿನಗದಲ್ಲಿ ಹರಿದಾಡುತ್ತಿದೆ.

ಹೌದು! ಅವರಿಗೆ ಕನ್ನಡ ಚಿತ್ರರಂಗದಲ್ಲಿಯೂ ಇಂದಿಗೂ ಬೇಡಿಕೆ ಇದೆ. ಅವರು ಸಮ್ಮತಿ ಸೂಚಿಸಿದರೆ ಹತ್ತಾರು ಸಿನಿಮಾಗಳ ಆಫರ್‌ಗಳು ಅವರತ್ತ ಹರಿದು ಬರುತ್ತವೆ. ಇದುವರೆಗೆ ಮೋಹಕ ತಾರೆ ರಮ್ಯಾ ಮಾತ್ರ ಮತ್ತೆ ಬಣ್ಣ ಹಚ್ಚುವುದರ ಕುರಿತು ಸ್ಪಷ್ಟವಾದ ನಿಲುವು ಪ್ರಕಟಿಸಿರಲಿಲ್ಲ. ಆದರೆ, ಇದೀಗ ಬೆಳ್ಳಿ ಪರದೆ ಮೇಲೆ ಮಿಂಚುವ ತುಡಿತ ಹೊರ ಹಾಕಿದ್ದಾರೆ.

ರಮ್ಯಾ ಅವರು ರಾಜಕೀಯಕ್ಕೆ ಕಾಲಿಟ್ಟ ಬಳಿಕ ಬಣ್ಣದ ಲೋಕದ ನಂಟು ಕಡಿಮೆ ಮಾಡಿಕೊಂಡಿದ್ದರು. ಕೆಲ ದಿನಗಳಿಂದ ರಾಜಕೀಯದಿಂದಲೂ ದೂರ ಉಳಿದಿರುವ ಅವರು ಇದೀಗ ಸಿನಿಮಾಗಳಲ್ಲಿ ನಟಿಸುವ ಸೂಚನೆ ನೀಡಿದ್ದಾರೆ.

ಇತ್ತೀಚಿಗೆ ಪತ್ರಿಕೆಗೆ ನೀಡಿರುವ ಸಂದರ್ಶನದಲ್ಲಿ ಮತ್ತೆ ಅಭಿನಯಿಸುವ ಬಗ್ಗೆ ಹೇಳಿಕೊಂಡಿದ್ದಾರೆ ರಮ್ಯಾ. ನಾನು ಸಿನಿಮಾ ಮಾಡಲು ಒಪ್ಪಿಕೊಳ್ಳುವೆ ಎಂದು ಹೇಳಿದರೆ ಸಾಕಷ್ಟು ಜನರಿಗೆ ಖುಷಿಯಾಗುತ್ತದೆ. ನನ್ನ ಬಳಿ ಕೆಲ ಆಫರ್‌ಗಳು ಬಂದಿವೆ, ಅವುಗಳಿಗೆ ನಾನು ಹೇಳಬೇಕು ಎಂದು ಯೋಚನೆ ಮಾಡುತ್ತಿದ್ದೇನೆ.

ಆದರೆ, ನಿಜ ಹೇಳಬೇಕೆಂದರೆ ನೋಡೋಣ ಅಂತ ಹೇಳಬೇಕಾಗುತ್ತದೆ, ನಾನು ಆಗಲ್ಲ ಎಂದು ಹೇಳಿದರೆ ಅನೇಕರು ಬೇಸರ ಮಾಡಿಕೊಳ್ಳುತ್ತಾರೆ ಎನ್ನುವ ಮೂಲಕ ಪರೋಕ್ಷವಾಗಿ ಮತ್ತೆ ಚಿತ್ರರಂಗದತ್ತ ಮುಖಮಾಡುವ ಸೂಚನೆ ನೀಡಿದ್ದಾರೆ.

ಇನ್ನು ಅಭಿ ಸಿನಿಮಾದ ಮೂಲಕ ಕನ್ನಡ ಚಿತ್ರರಂಗಕ್ಕೆ ಪದಾರ್ಪಣೆ ಮಾಡಿದ ರಮ್ಯಾ ಅವರು ಬಹುಬೇಡಿಕೆಯ ನಟಿಯಾಗಿ ಖ್ಯಾತಿ ಪಡೆದರು. ಈ ನಡುವೆ ರಾಜಕೀಯಕ್ಕೆ ಕಾಲಿಟ್ಟು ಮಂಡ್ಯ ಸಂಸದೆಯಾದ್ದರು.

Leave a Reply

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ಕ್ರೀಡಾಪಟುಗಳಿಗೆ ಕೊಡುವ ಏಕಲವ್ಯ ಪ್ರಶಸ್ತಿ ಮುಂದುವರಿಸಲಿ: ಶೋಭಾ ನಾರಾಯಣ್ ಬಿಡದಿಯಿಂದ ಹೆದ್ದಾರಿಯಲ್ಲೇ ಮುಂದೆ ಬಂದರೆ ನಿಮಗೆ ಟೋಲ್‌ ಬರೆ ಗ್ಯಾರಂಟಿ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಹೊತ್ತಿ ಉರಿದ ಸ್ಕಾರ್ಪಿಯೋ ಕಾರು KSRTC ಕನಕಪುರ ಬಸ್‌ ನಿಲ್ದಾಣದಲ್ಲಿ ವಿಕಲ ಚೇತನರಿಂದ ₹700 ವಸೂಲಿ, ಕಂಡಕ್ಟರ್ಸ್‌ ಕೊಡಬೇಕು ₹10 : ಟಿಸಿಗೆ ಡಿಎಂ ಸಾಥ್... ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ BMTC: ಅಪಘಾತದಲ್ಲಿ ಮೃತಪಟ್ಟ ನೌಕರರ ಕುಟುಂಬಕ್ಕೆ ₹1 ಕೋಟಿ ಪರಿಹಾರ ಚೆಕ್‌ ವಿತರಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸಾರಿಗೆ ನಿವೃತ್ತ ನೌಕರರಿಗೆ ಮತ್ತೊಮ್ಮೆ ಮೊಗದೊಮ್ಮೆ ನಿರಾಸೆ: ಭಾರಿ ಆಕ್ರೋಶಗೊಂಡ EPS ನಿವೃತ್ತರು ಕಾರು ಡೋರ್‌ಗೆ ಬೈಕ್‌ ಗುದ್ದಿ ಕೆಳಗೆ ಬಿದ್ದ ಮಹಿಳೆ ಮೇಲೆ ಹರಿದ ಬಿಎಂಟಿಸಿ ಬಸ್‌ ನಾಟಿ ಕೋಳಿ ಸಾರಿನ ಜತೆ ರಾಗಿಮುದ್ದೆ ನುಂಗಿದವರಿಗೆ ಗೊತ್ತು ಅದರ ಗಮ್ಮತ್ತು