ಸಂಸ್ಕೃತಿ

ಮಹದೇಶ್ವರ ಬೆಟ್ಟದಲ್ಲಿ ಸರಳ ಯುಗಾದಿ ಜಾತ್ರೆ : ಸಚಿವ ಸುರೇಶ್ ಕುಮಾರ್

ವಿಜಯಪಥ ಸಮಗ್ರ ಸುದ್ದಿ

ಚಾಮರಾಜನಗರ: ಜಿಲ್ಲೆಯ ಪ್ರಸಿದ್ಧ ಶ್ರೀಕ್ಷೇತ್ರ ಶ್ರೀ ಮಲೆಮಹದೇಶ್ವರ ಬೆಟ್ಟದ ಈ ವರ್ಷದ ಯುಗಾದಿ ಜಾತ್ರೆ ಸರಳ ಹಾಗೂ ಸಾಂಪ್ರದಾಯಿಕವಾಗಿ ನಡೆಯಲಿದ್ದು, ರಾಜ್ಯ ಹಾಗೂ ಹೊರರಾಜ್ಯದ ಭಕ್ತ ಸಮೂಹ ದೇವಾಲಯದ ಆಡಳಿತದೊಂದಿಗೆ ಸಹಕರಿಸಬೇಕೆಂದು ಪ್ರಾಥಮಿಕ, ಪ್ರೌಢ ಶಿಕ್ಷಣ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್. ಸುರೇಶ್ ಕುಮಾರ್ ಮನವಿ ಮಾಡಿದ್ದಾರೆ.

ಪ್ರತಿ ವರ್ಷದಂತೆ ಈ ವರ್ಷವೂ ಯುಗಾದಿ ಜಾತ್ರೆ ನಡೆಯುತ್ತದೆ. ಆದರೆ ದೇಶಾದ್ಯಂತ ಹರಡುತ್ತಿರುವ ಕೊರೊನಾ ಸೋಂಕಿನ ಹಿನ್ನೆಲೆಯಲ್ಲಿ ಅತ್ಯಂತ ಸರಳವಾಗಿ ಹಾಗೂ ಸಾಂಪ್ರದಾಯಿಕವಾಗಿ ಆಚರಿಸಲು ನಿರ್ಧರಿಸಲಾಗಿದೆ ಎಂದರು.

ಯುಗಾದಿ ಜಾತ್ರೆಗೆ ನಾಡಿನ ಹಾಗೂ ಹೊರರಾಜ್ಯಗಳ ಭಕ್ತರು ಸಾಲು-ಸಾಲಾಗಿ ನಡೆದು ಪಾದಯಾತ್ರೆ ಮೂಲಕ ಬರುವುದು ವಾಡಿಕೆ. ಅವರೆಲ್ಲಾ ರಾತ್ರಿ ವೇಳೆ ರಸ್ತೆಬದಿಯಲ್ಲಿ ವಿಶ್ರಾಂತಿ ಪಡೆದುಕೊಳ್ಳುತ್ತಾರೆ. ಹಾಗೆಯೇ ದೇವಾಲಯದ ಸುತ್ತಮುತ್ತ ಮಲಗಿ ವಿಶ್ರಾಂತಿ ಪಡೆಯುತ್ತಾರೆ. ಆದರೆ ಈ ಬಾರಿ ರಸ್ತೆಬದಿ ಇಲ್ಲವೇ ದೇವಾಲಯದ ಸುತ್ತಮುತ್ತ ಮತ್ತು ಶ್ರೀಕ್ಷೇತ್ರದಲ್ಲಿ ಎಲ್ಲೆಂದರಲ್ಲಿ ಮಲಗಲು ಅವಕಾಶ ನಿರಾಕರಿಸಲಾಗಿದೆ. ಹಾಗೆಯೇ ದೇವಾಲಯದ ವಸತಿಗೃಹಗಳಲ್ಲಿಯೂ ಭಕ್ತರ ವಸತಿಗೆ ಅವಕಾಶ ನಿಷೇಧಿಸಲಾಗಿದೆ ಎಂದು ತಿಳಿಸಿದ್ದಾರೆ.

ಈಗಾಗಲೇ ಜಾತ್ರೆ, ಪರಿಷೆ, ಉತ್ಸವ ಹಾಗೂ ಹೆಚ್ಚು ಜನರು ಸೇರುವ ಮದುವೆಗಳನ್ನು ನಿಷೇಧಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಆದರೆ ಮಲೆಮಹದೇಶ್ವರ ಬೆಟ್ಟದ ಯುಗಾದಿ ಜಾತ್ರೆ ನೂರಾರು ವರ್ಷಗಳಿಂದ ನಡೆಯುತ್ತಿರುವುದರಿಂದ ಅದನ್ನು ನಿಲ್ಲಿಸಲು ಸಾಧ್ಯವಿಲ್ಲ. ಹೀಗಾಗಿ ಸಾಂಪ್ರದಾಯಿಕವಾಗಿ ಆಚರಿಸಲಾಗುತ್ತಿರುವುದರಿಂದ ಶ್ರೀಕ್ಷೇತ್ರದಲ್ಲಿ ಆರೋಗ್ಯಕರ ಪರಿಸರ ನಿರ್ಮಾಣ ಮತ್ತು ಯಾವುದೇ ಸೋಂಕು ಹರಡುವುದನ್ನು ತಡೆಯುವ ನಿಟ್ಟಿನಲ್ಲಿ ಮತ್ತು ಭಕ್ತರ ಹಿತದೃಷ್ಟಿಯಿಂದ ಈ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಸಚಿವರು ತಿಳಿಸಿದ್ದಾರೆ.

Leave a Reply

error: Content is protected !!
LATEST
ಮೈತ್ರಿ ತೆಕ್ಕೆಗೆ ಬನ್ನೂರು ಪುರಸಭೆ: ಜೆಡಿಎಸ್‌ಗೆ ಅಧ್ಯಕ್ಷ ಗದ್ದುಗೆ, ಬಿಜೆಪಿಗೆ ಉಪಾಧ್ಯಕ್ಷ ಗಾದಿ ರಾಜ್ಯದ ಆರು ಪ್ರತ್ಯೇಕ ಸ್ಥಳಗಳಲ್ಲಿ ಅಪಘಾತ: 13 ಮಂದಿ ಸಾವು, ಹಲವರಿಗೆ ಗಾಯ ಯಡಿಯೂರು ಕೆರೆ: ಗಣಪತಿ ವಿಸರ್ಜನಾ ಕಲ್ಯಾಣಿಗೆ ನೀರು ತುಂಬಿಸಿದ ಬಿಬಿಎಂಪಿ ತಂದೆ ನಿಧನರಾದ ದುಃಖದಲ್ಲಿರುವ ನೌಕರನಿಗೆ ರಜೆ ಕೊಡದೆ ಗೈರು ತೋರಿಸಿದ್ದು ಅಲ್ಲದೆ ಕಾರಣ ಕೇಳಿ ನೋಟಿಸ್‌ ಕೊಟ್ಟ ಅಧಿಕಾರಿ... KKRTC ಬಸ್‌-ಶಾಲಾ ಬಸ್‌ ಮುಖಾಮುಖಿ ಡಿಕ್ಕಿ: ಇಬ್ಬರು ಮೃತ- 25ಕ್ಕೂ ಹೆಚ್ಚು ಮಕ್ಕಳಿಗೆ ಗಾಯ KSRTC: 38 ತಿಂಗಳ ವೇತನ ಹೆಚ್ಚಳ ಹಿಂಬಾಕಿಗೆ ಆಗ್ರಹಿಸಿ BMS ಪ್ರತಿಭಟನೆ- ಸರ್ಕಾರದ ವಿರುದ್ಧ ಕಿಡಿ MSRTC: ನೌಕರರ ಮುಷ್ಕರಕ್ಕೆ ಮಣಿದು 6500 ರೂ. ವೇತನ ಹೆಚ್ಚಳಕ್ಕೆ ಒಪ್ಪಿದ ಸರ್ಕಾರ- ಧರಣಿ ವಾಪಸ್‌ MSRTC: ತೀವ್ರಗೊಂಡ ನೌಕರರ ಮುಷ್ಕರ- 11 ಸಂಘಟನೆಗಳ ಒಗ್ಗಟ್ಟು- ನಿಗಮಕ್ಕೆ ನಡುಕ ಚಾಮುಂಡಿಬೆಟ್ಟದಲ್ಲಿ ಧೂಮಪಾನ, ಮದ್ಯಪಾನ, ಗುಟ್ಕಾ ನಿಷೇಧ: ಸಿಎಂ ಘೋಷಣೆ ಪೋಡಿ ಮುಕ್ತ ಅಭಿಯಾನ, ಪೌತಿ ಖಾತೆ ಆಂದೋಲನಕ್ಕೆ ಕ್ರಮ: ಕಂದಾಯ ಸಚಿವ ಕೃಷ್ಣ ಬೈರೇಗೌಡ