CrimeNEWSಸಿನಿಪಥ

ಮಹಿಳೆಗೆ ಶ್ವಾನ ಕಚ್ಚಿದ ಪ್ರಕರಣ: ಚಾಲೆಂಜಿಂಗ್ ಸ್ಟಾರ್​ಗೆ ನೋಟಿಸ್ ನೀಡಲು ಪೊಲೀಸರ ಸಿದ್ಧತೆ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಇತ್ತೀಚೆಗಷ್ಟೇ ನಟ ದರ್ಶನ ಮನೆ ಮುಂದೆ ಕಾರು ನಿಲ್ಲಿಸಿದ ವಿಚಾರ ಮಹಿಳೆಗೆ ಶ್ವಾನ ಕಚ್ಚಿದ ಆರೋಪ ಭಾರಿ ಸೌಂಡ್‌ ಮಾಡಿತ್ತು. ಬಳಿಕ ತಣ್ಣಗಾಗಿತ್ತು. ಆದರೆ, ಅದರ ಹೊಗೆ ಮಾತ್ರ ಆಡುತ್ತಲೇ ಇದೆ. ಹೀಗಾಗಿ ಈ ಪ್ರಕರಣ ಸಂಬಂಧ ಚಾಲೆಂಜಿಂಗ್ ಸ್ಟಾರ್​ಗೆ ಪೊಲೀಸರು ನೋಟಿಸ್ ನೀಡಲು ಸಿದ್ಧತೆ ನಡೆಸಿದ್ದಾರೆ ಎಂಬ ಮಾಹಿತಿ ಇದೆ.

ಪೊಲೀಸ್ ಠಾಣೆಗೆ ಹಾಜರಾಗುವಂತೆ ನೋಟಿಸ್ ನೀಡಲಿದ್ದಾರೆ. ಪ್ರಕರಣದಲ್ಲಿ ದರ್ಶನ್ ಎ-2 ಆರೋಪಿಯಾಗಿದ್ದಾರೆ. ಈಗಾಗಲೇ ದೂರುದಾರೇ ಅಮಿತ ಜಿಂದಾಲ್ ಆರ್​ಆರ್ ನಗರ ಠಾಣೆಯಲ್ಲಿ ಹೇಳಿಕೆ ದಾಖಲಿಸಿದ್ದಾರೆ. ದರ್ಶನ್ ಮನೆಯ ಶ್ವಾನ ನೋಡಿಕೊಳ್ತಿದ್ದ ಸಿಬ್ಬಂದಿ ಹೇಮಂತ್ ಕೂಡ ಹೇಳಿಕೆ ನೀಡಿದ್ದಾರೆ.

ಪೊಲೀಸರು ನಟ ದರ್ಶನ್ ಹೇಳಿಕೆಯಷ್ಟೇ ದಾಖಲಿಸಬೇಕಾಗಿದೆ. ಹೀಗಾಗಿ ನಟ ದರ್ಶನ್​ಗೆ ನೋಟಿಸ್ ನೀಡಿ ಹೇಳಿಕೆ ದಾಖಲಿಸಲು ಸಿದ್ಧತೆ ಮಾಡಿಕೊಂಡಿದ್ದಾರೆ. ಉದ್ದೇಶ ಪೂರ್ವಕವಾಗಿ ಶ್ವಾನ ಬಿಟ್ಟಿಲ್ಲ. ಆಕಸ್ಮಿಕವಾಗಿ ನಡೆದಿರೋ ಘಟನೆ ಎಂದು ಶ್ವಾನದ ಕೇರ್ ಟೇಕರ್ ಹೇಮಂತ್ ಹೇಳಿಕೆ ನೀಡಿದ್ದಾರೆ. ಅಷ್ಟೇ ಅಲ್ಲದೇ ಆ ಶ್ವಾನ ದರ್ಶನ್ ಅವರದ್ದಲ್ಲ ಗಿಫ್ಟ್ ಆಗಿ ಬಂದಿರೋದು. ಗಿಫ್ಟ್ ಕೊಟ್ಟು ಶ್ವಾನವನ್ನು ತಾನೇ ನೋಡಿಕೊಳ್ಳುತ್ತಿದ್ದಾಗಿ ಹೇಮಂತ್ ಹೇಳಿಕೊಂಡಿದ್ದಾರೆ.

ಮತ್ತೊಂದೆಡೆ ದರ್ಶನ್ ವಿರುದ್ಧ ಮಹಿಳೆ ಗಂಭೀರ ಆರೋಪ ಮಾಡಿದ್ದಾರೆ. ದರ್ಶನ್ ದೊಡ್ಡ ವ್ಯಕ್ತಿ, ಪೊಲೀಸರ ಮೇಲೆ ಒತ್ತಡ ಹೇರಿದ್ದಾರೆ. ಹೀಗಾಗಿ ಅವರ ಮನೆಯವರನ್ನು ವಿಚಾರಣೆ ಮಾಡಿಲ್ಲ. ಶ್ವಾನವನ್ನ ಬೇಕು ಅಂತಾನೆ ನನ್ನ ಮೇಲೆ ಅಟ್ಯಾಕ್ ಮಾಡಿಸಿದ್ದಾರೆ. ಪ್ರಕರಣದಲ್ಲಿ 307 ಸೆಕ್ಷನ್ ನನ್ನು ಪೊಲೀಸರು ಸೇರಿಸಿಲ್ಲ ಎಂದು ಆರೋಪ ಮಾಡಿದ್ದಾರೆ. ಸದ್ಯ ದರ್ಶನ್ ಹೇಳಿಕೆ ದಾಖಲಿಸಿ ಆರೋಪಗಳಿಗೆ ತೆರೆ ಎಳೆಯಲು ಪೊಲೀಸರು ಸಿದ್ಧತೆ ನಡೆಸಿದ್ದಾರೆ.

ಏನಿದು ಪ್ರಕರಣ..?: ಅಕ್ಟೋಬರ್​​ ಕೊನೆಯಲ್ಲಿ ದರ್ಶನ್​ ಮನೆ ಮುಂದೆ ಅಮಿತ್ ಜಿಂದಾಲ್ ಎಂಬ ಮಹಿಳೆ ತನ್ನ ಕಾರ್​ ಪಾರ್ಕ್​ ಮಾಡಿದ್ದರು. ತಮ್ಮ ಕಾರ್​​ ತೆಗೆಯುವ ವೇಳೆ ಮಹಿಳೆ, ನಾಯಿ ನೋಡಿಕೊಳ್ಳುತ್ತಿದ್ದ ವ್ಯಕ್ತಿ ಮಧ್ಯೆ ಜಗಳ ಆಗಿದೆ. ಇದರ ಪರಿಣಾಮ ದರ್ಶನ್​ ವಿರುದ್ಧ ಮಹಿಳೆ ದೂರು ನೀಡಿದ್ದಾರೆ.

ಮಹಿಳೆ ಆರೋಪ ಏನು..?: ಅಂದು ನಾನು ಖಾಸಗಿ ಆಸ್ಪತ್ರೆಯೊಂದಕ್ಕೆ ಭೇಟಿ ಕೊಟ್ಟಿದ್ದೆ. ನನ್ನ ಕಾರನ್ನು ದರ್ಶನ್ ಮನೆ ಬಳಿ ಖಾಲಿ ಸೈಟಿನಲ್ಲಿ ನಿಲ್ಲಿಸಿದ್ದೆ. ಕಾರ್​ ತೆಗೆದುಕೊಳ್ಳಲು ಬಂದಾಗ ಅದೇ ಜಾಗದಲ್ಲಿ ನಾಯಿ ಇತ್ತು. ಆಗ ಆ ನಾಯಿಯನ್ನು ಕಟ್ಟಿ ಎಂದು ಕೇಳಿದೆ. ಅದಕ್ಕೆ ನಾಯಿಯನ್ನು ನೋಡಿಕೊಳ್ಳುತ್ತಿದ್ದ ನಿರ್ಲಕ್ಷ್ಯ ತೋರಿದ. ಆಗ ಮಾತಿಗೆ ಮಾತು ಬೆಳೆದಾಗ ನಾಯಿ ನನ್ನ ಮೈಮೇಲೆ ಎಗರಿ ಕಚ್ಚಿದ್ದು, ಹೊಟ್ಟೆಯ ಭಾಗಕ್ಕೆ ಗಾಯವಾಗಿದೆ ಎಂದು ಆರೋಪಿಸಿದ್ದಾರೆ.

Leave a Reply

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ BMTC: ಅಪಘಾತದಲ್ಲಿ ಮೃತಪಟ್ಟ ನೌಕರರ ಕುಟುಂಬಕ್ಕೆ ₹1 ಕೋಟಿ ಪರಿಹಾರ ಚೆಕ್‌ ವಿತರಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸಾರಿಗೆ ನಿವೃತ್ತ ನೌಕರರಿಗೆ ಮತ್ತೊಮ್ಮೆ ಮೊಗದೊಮ್ಮೆ ನಿರಾಸೆ: ಭಾರಿ ಆಕ್ರೋಶಗೊಂಡ EPS ನಿವೃತ್ತರು ಕಾರು ಡೋರ್‌ಗೆ ಬೈಕ್‌ ಗುದ್ದಿ ಕೆಳಗೆ ಬಿದ್ದ ಮಹಿಳೆ ಮೇಲೆ ಹರಿದ ಬಿಎಂಟಿಸಿ ಬಸ್‌ ನಾಟಿ ಕೋಳಿ ಸಾರಿನ ಜತೆ ರಾಗಿಮುದ್ದೆ ನುಂಗಿದವರಿಗೆ ಗೊತ್ತು ಅದರ ಗಮ್ಮತ್ತು ನೀವು ಗಬಗಬನೆ ಊಟ ಮಾಡುವವರಿದ್ದೀರಾ? ಹಾಗಿದ್ದರೆ ನಿಮಗೆ ಈ ಸಮಸ್ಯೆ ಕಾಡದಿರದು! BMTC ನೌಕರರಿಗೆ ಆನ್-ಲೈನ್ ಮೂಲಕ ವೇತನ ಚೀಟಿ ಪಡೆಯುವ ವ್ಯವಸ್ಥೆ- ಜಾರಿ ಸ್ಕೂಟರ್‌ಗೆ ಕಾರು ಡಿಕ್ಕಿ- ಮೊಪೆಡ್‌ನಲ್ಲಿ ತೆರಳುತ್ತಿದ್ದ ಮಾವ-ಸೊಸೆ ದಾರುಣ ಸಾವು ಪೊಲೀಸ್‌ ಠಾಣೆ ಮೆಟ್ಟಿಲೇರಿದ ಹಿಟ್‌ ಧಾರಾವಾಹಿಗಳ ನಿರ್ದೇಶಕ, ನಿರ್ಮಾಪಕ ರಾಮ್​ಜೀ