ಕೃಷಿನಮ್ಮರಾಜ್ಯ

ಮಾವಿನಲ್ಲಿ ಹೀಚು ಉದುರುವುನ್ನು ತಡೆಗಟ್ಟಲು ರೈತರು ತೆಗೆದುಕೊಳ್ಳಬೇಕಾದ ಕ್ರಮ

ವಿಜಯಪಥ ಸಮಗ್ರ ಸುದ್ದಿ

ಚಿಕ್ಕಮಗಳೂರು: ಜಿಲ್ಲೆಯಲ್ಲಿ ಮಾವು ಒಂದು ತೋಟಗಾರಿಕಾ ಬೆಳೆಯಾಗಿದ್ದು ಪ್ರಸ್ತುತ ಹಂಗಾಮಿನಲ್ಲಿ ಮಾವಿನ ಸಂರಕ್ಷಣೆ ಕ್ರಮಗಳ ಕುರಿತು ರೈತರು ತಿಳಿಯುವುದು ಅತ್ಯವಶ್ಯಕವಾಗಿದೆ.

ಪ್ರಸ್ತುತ ಹಂಗಾಮಿನಲ್ಲಿ ಅಧಿಕ ಉಷ್ಣಾಂಶ ಮತ್ತು ಪ್ರಖರ ಬಿಸಿಲಿನ ತೀಕ್ಷ್ಣತೆ ಕಾರಣ ಹೂ. ಹೀಚುಗಳು ಉದುರುವುನ್ನು ತಡೆಗಟ್ಟಲು ಹೂಬಿಟ್ಟಿರುವ ಮರಗಳಿಗೆ 2-3 ಬಾರಿ ಪೂರಕ ನೀರಾವರಿ ಕೈಗೊಳ್ಳುವುದು ಅವಶ್ಯಕವಾಗಿದೆ.

ಹೊಸ ಎಲೆ ಚಿಗುರು ಹೊರಟಿರುವ ಮರಗಳಿಗೆ ನೀರು ಹಾಯಿಸುವ ಅವಶ್ಯಕತೆ ಇರುವುದಿಲ್ಲ, ಹೂ ಬಿಟ್ಟಿರುವ ಗಿಡಗಳ ಪಾತಿಗೆ ಸಾವಯವ ಹೊದಿಕೆ ಕೈಗೊಳ್ಳುವುದರಿಂದ ಮಣ್ಣಿನಲ್ಲಿ ತೇವಾಂಶ ಕಾಪಾಡಿಕೊಂಡು ಗುಣಮಟ್ಟದ ಇಳುವರಿ ಪಡೆಯಬಹುದು.

ಕಾಯಿ ಕಚ್ಚುವ ಪ್ರಮಾಣವನ್ನು ಹೆಚ್ಚಿಸಲು ಹಾಗೂ ಎಳೆಕಾಯಿಗಳ ಉದುರುವಿಕೆ ತಡೆಯಲು ಪ್ಲಾನೋಫಿಕ್ಸ್ 0.5 ಮಿ.ಲಿ ಅನ್ನು ಪ್ರತಿ ಲೀಟರ್ ನೀರಿನಲ್ಲಿ ಬೆರೆಸಿ ಸಿಂಪಡಿಸಿ ಗೋಲಿ ಗಾತ್ರದ ಹಂತದಲ್ಲಿದ್ದಾಗ ಲಘು ಪೋಷಕಾಂಶ ಮಿಶ್ರಣ ಮ್ಯಾಂಗೋಸ್ಪೆಷಲ್ ಸಿಂಪಡಣೆ ಕೈಗೊಳ್ಳಬೇಕಾಗುತ್ತದೆ.

ಫಸಲನ್ನು ಹಣ್ಣಿನ ನೊಣದ ಭಾದೆಯಿಂದ ರಕ್ಷಿಸಲು ಹಣ್ಣಿನ ನೊಣದ ಮೋಹಕ ಬಲೆ ಅಳವಡಿಸಿಕೊಳ್ಳವುದು, ಜಿಗಿಹುಳು ನಿರ್ವಹಣೆಗೆ ಥಯೋಫನೇಟ್ ಮಿಥೈಲ್ 1 ಮಿ.ಲಿ ಅಥವಾ ಡೈನೋಕ್ಯಾಪ್ 1 ಮಿ.ಲೀ* ಮ್ಯಾಂಕೋಜಿಬ್ 2 ಗ್ರಾಂ ಅನ್ನು ಪ್ರತಿ ಲೀಟರ್‌ನಲ್ಲಿ ಬೆರೆಸಿ ಸಿಂಪಡಣೆ ಮಾಡಬೇಕು. ಸಿಂಪಡಣಾ ದ್ರಾವಣಗಳಿಗೆ ೦.೫ ಮಿ.ಲೀ ಶಾಂಪು ಅಥವಾ ಅಂಟನ್ನು ನೀರಿನಲ್ಲಿ ಸಿಂಪಡಿಸಬೇಕು.

ಚಿಕ್ಕ ಕಾಯಿಗಳು ಬೆಳೆಯುತ್ತಿರುವ ಹಂತದಲ್ಲಿ ಭಾರತೀಯ ತೋಟಗಾರಿಕೆ ಸಂಶೋಧನಾ ಸಂಸ್ಥೆ ಹೊರತಂದಿರುವ ಮಾವು ಸ್ಪೆಷಲ್ ಅನ್ನು ಪ್ರತಿ ಲೀಟರ್ ನೀರಿನಲ್ಲಿ ೫೦ ಗ್ರಾಂ ಪ್ರಮಾಣದಲ್ಲಿ ಕರಗಿಸಿ ಸಿಂಪಡಿಸಿವುದು, ಈ ಸಿಂಪಡಣೆ ದ್ರಾವಣಕ್ಕೆ  ಸೋಪು ದ್ರಾವಣವನ್ನು 0.5 ಮಿ.ಲಿ ಮತ್ತು ಅರ್ಧ ಹೋಳು ನಿಂಬೆ ರಸ ಬೆರಸಿ ಸಿಂಪಡಿಸಿದರೆ ಅದು ಪರಿಣಾಮಕಾರಿಯಾಗಿ ಕಾಯಿಗಳಿಗೆ ಅಂಟಿಕೊಳ್ಳುವುದು ಯಾವುದೇ ಸಿಂಥೆಟಿಕ್ ಪೈರೆಥ್ರಾಯಿಟ್ ಕೀಟನಾಶಕ ಬಳಸಬಾರದು.

ಹೆಚ್ಚಿನ ಮಾಹಿತಿಗಾಗಿ ರೈತರು ಹಾರ್ಟಿ ಕ್ಲಿನಿಕ್ ತೋಟಗಾರಿಕೆ ವಿಭಾಗದ ವಿಷಯ ತಜ್ಞರನ್ನು ಅಥವಾ ಹೋಬಳಿ ಮಟ್ಟದ ಸಹಾಯಕ ತೋಟಗಾರಿಕೆ ಅಧಿಕಾರಿಯವರನ್ನು  ಭೇಟಿಯಾಗಿ ಅಥವಾ ದೂ.ಸಂ 08262- 295043, 9110607092  ಮೂಲಕ  ಮಾಹಿತಿ ಪಡೆಯಬಹುದಾಗಿದೆ.

Leave a Reply

error: Content is protected !!
LATEST
ಚಾಮುಂಡಿ ಹುಟ್ಟುಹಬ್ಬ: ಬೆಳ್ಳಿ ಪಲ್ಲಕ್ಕಿ ಉತ್ಸವಕ್ಕೆ ರಾಜವಂಶಸ್ಥ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಚಾಲನೆ ನಾಡ ಅಧಿದೇವತೆ ಚಾಮುಂಡಿ ತಾಯಿಯ ವರ್ಧಂತಿ ಸಂಭ್ರಮ: ಬೆಟ್ಟಕ್ಕೆ ಹರಿದು ಬರುತ್ತಿದೆ ಭಕ್ತ ಸಾಗರ KRSನಿಂದ ಕಾವೇರಿ ನದಿಗೆ 1.30 ಲಕ್ಷ ಕ್ಯುಸೆಕ್ ನೀರು ಬಿಡುಗಡೆ ಪತ್ನಿ ಜೊತೆ 40 ವರ್ಷಗಳ ಹಿಂದೆ ಕೋಪ ಮಾಡಿಕೊಂಡಿದ್ದ ಪತಿ- ಸಾಯುವ ವೇಳೆಯೂ ಮಾತಾಡಲಿಲ್ಲ ! ಬೆಳಗಾವಿ: ಸವದತ್ತಿ ಯಲ್ಲಮ್ಮ ದೇವಿಯ ಹುಂಡಿಯಲ್ಲಿ 2 ತಿಂಗಳಲ್ಲೇ₹ 1.96 ಕೋಟಿ ಕಾಣಿಕೆ ಸಂಗ್ರಹ ಕಡ್ಡಾಯವಾಗಿ ಮಣ್ಣಿನ ಪರೀಕ್ಷೆ ಮಾಡಿಸಿ: ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಪ್ರಸಾದ್ ಕೆ.ಆರ್‌.ಪೇಟೆ: ಚೌಡೇಶ್ವರಿ ಅಮ್ಮನವರ ದೇಗುಲದಲ್ಲಿ ಆಷಾಢ ಶುಕ್ರವಾರ ಸಂಭ್ರಮ ಸಂಸತ್‌ನಲ್ಲಿ ಕನ್ನಡಿಗರ ಪರ ಧ್ವನಿ ಎತ್ತಿ: ರಾಜ್ಯದ ಎನ್‌ಡಿಎ ಸಂಸದರಿಗೆ ಎಎಪಿಯ ಡಾ. ಮುಖ್ಯಮಂತ್ರಿ ಚಂದ್ರು ಆಗ್ರಹ “ಶಕ್ತಿ" ಯೋಜನೆಯಿಂದ ಸಾರಿಗೆ ನಿಗಮಗಳ ಆದಾಯ ಹೆಚ್ಚಾಗಿದೆ- ಆದರೆ ನೌಕರರಿಗೆ ವೇತನಕೊಡಲು ಹಣವಿಲ್ಲ- ಎಂಥಾ ಹೇಳಿಕೆ ಇದು ಸಾ... KRS ಭರ್ತಿ: ಅಣೆಕಟ್ಟೆಯಿಂದ ಒಂದು ಲಕ್ಷ ಕ್ಯುಸೆಕ್‌ಗೂ ಅಧಿಕ ಪ್ರಮಾಣದ ನೀರು ಬಿಡುಗಡೆ- ಕಾವೇರಿ ಕೊಳ್ಳದ ಜನರಿಗೆ ಎಚ್ಚರಿ...