NEWSನಮ್ಮಜಿಲ್ಲೆ

ಮುಖ್ಯಮಂತ್ರಿ ಪರಿಹಾರ ನಿಧಿಗೆ 10 ಲಕ್ಷ ರೂ. ದೇಣಿಗೆ

ವಿಜಯಪಥ ಸಮಗ್ರ ಸುದ್ದಿ

ಹೊಸಕೋಟೆ: ಕೊರೊನಾ ಹಿನ್ನೆಲೆ ದೇಶವೇ ಲಾಕ್ ಡೌನ್ ಆಗಿರವ ಕಾರಣ ಸಿಎಂ ಕೊರೊನಾ ಪರಿಹಾರ ನಿಧಿಗೆ ಭಾರತೀಯ ಆಹಾರ ನಿಗಮದ ಮಾಜಿ ಸದಸ್ಯ ಹಾಗೂ ನಾಡ ರತ್ನ ಪ್ರಶಸ್ತಿ ಪುರಸ್ಕೃತ ಡಾ.ವಿ.ವಿ.ಸದಾನಂದ್ ಅವರು 10 ಲಕ್ಷ ರೂ. ದೇಣಿಗೆಯನ್ನು ಬೆಂಗಳೂರಿನ ಗೃಹ ಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ನೀಡಿದರು.

ಬಳಿಕ ಮಾತನಾಡಿದ ಅವರು, ಕೊರೊನಾ ಹಿನ್ನೆಲೆ ದೇಶವೇ ಲಾಕ್ ಡೌನ್ ಆಗಿರುವ ಪರಿಣಾಮ ಸಾವಿರಾರು ಬಡ ಕೂಲಿ ಕಾರ್ಮಿಕರು ನಿರಾಶ್ರಿತರು ಒಪ್ಪೊತ್ತಿನ ಊಟಕ್ಕೂ ಸಂಕಷ್ಟ ಎದುರಿಸುವಂತಾಗಿದೆ. ಪ್ರಧಾನಿ ಮೋದಿ ಹಾಗೂ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸಮರೋಪಾದಿಯಲ್ಲಿ ಬಡವ ನೆರವಿಗೆ ನಿಂತಿದ್ದಾರೆ. ಈ ಹಿನ್ನೆಲೆ ಸಮಾಜದಲ್ಲಿ ಉಳ್ಳವರು ನೆರವು ನೀಡುವುದರ ಮೂಲಕ ದೇಶದ ಏಳಿಗೆಗೆ ಶ್ರಮಿಸಿ ಮಾನವೀಯತೆ ಮೆರೆಯಬೇಕು ಎಂದರು.

ಯಲಹಂಕ ಶಾಸಕ ವಿಶ್ವನಾಥ್, ಬೆಂಗಳೂರು ನಗರ ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಮರಿಸ್ವಾಮಿ, ಸವಿತಾ ಸಮಾಜದ ರಾಜ್ಯಾಧ್ಯಕ್ಷ ಎನ್.ಸಂಪತ್ ಕುಮಾರ್, ಮುಖಂಡರಾದ ಕಿರಣ್ ಕುಮಾರ್,ಕಾರ್ತಿಕ್,ಬಸವಶ್ರೀ ಚಾರಿಟೇಬಲ್ ಕಾರ್ಯಾಧ್ಯಕ್ಷ ಎಸ್.ನಾಗೇಂದ್ರ ಆರಾಧ್ಯ ಹಾಜರಿದ್ದರು.

ಅತಿ ಹಿಂದುಳಿದ ಜಾತಿಗಳಲ್ಲಿ ಒಂದಾದ ಸವಿತಾ ಸಮುದಾಯದ ಕರ್ನಾಟಕ ರಾಜ್ಯ ಸವಿತಾ ಸಮಾಜದ ವತಿಯಿಂದ ರಾಜ್ಯದ 30 ಜಿಲ್ಲೆಗಳಿಗೆ ದಿನಸಿ ನೀಡಲು ಪದಾಧಿಕಾರಿಗಳು ತೀರ್ಮಾನಿಸಿದ್ದು, ಸಮಾಜದ ಈ ಕಾರ್ಯಕ್ಕೆ ಮೆಚ್ಚಿ ತಮ್ಮ ಸಮಾಜದ ರಾಜ್ಯ ಸವಿತಾ ಸಮಾಜಕ್ಕೆ 1 ಲಕ್ಷ ರೂ. ಚೆಕ್ ನ್ನು ಸಮಾಜದ ಹೇಳಿಗೆಗಾಗಿ  ರಾಜ್ಯಾಧ್ಯಕ್ಷ ಎನ್.ಸಂಪತ್ ಕುಮಾರ್ ಅವರಿಗೆ ಹಸ್ತಾಂತರಿಸಿದ್ದಾರೆ.

ಕೊರೊನಾ ಲಾಕ್ ಡೌನ್ ಟೈಮ್ ನಲ್ಲಿ ಪ್ರಾಣದ ಹಂಗು ತೊರೆದು ದುಡಿಯುತ್ತಿರುವ ವೈದ್ಯರು, ಪೊಲೀಸರು ಹಾಗೂ ಸ್ವಯಂ ಸೇವಕರಿಗೆ ಡಾ.ವಿ.ವಿ.ಸದಾನಂದ್ ಕೃತಜ್ಞತೆ ತಿಳಿಸಿದರು.

Leave a Reply

error: Content is protected !!
LATEST
ಪತ್ನಿ ಜೊತೆ 40 ವರ್ಷಗಳ ಹಿಂದೆ ಕೋಪ ಮಾಡಿಕೊಂಡಿದ್ದ ಪತಿ- ಸಾಯುವ ವೇಳೆಯೂ ಮಾತಾಡಲಿಲ್ಲ ! ಬೆಳಗಾವಿ: ಸವದತ್ತಿ ಯಲ್ಲಮ್ಮ ದೇವಿಯ ಹುಂಡಿಯಲ್ಲಿ 2 ತಿಂಗಳಲ್ಲೇ₹ 1.96 ಕೋಟಿ ಕಾಣಿಕೆ ಸಂಗ್ರಹ ಕಡ್ಡಾಯವಾಗಿ ಮಣ್ಣಿನ ಪರೀಕ್ಷೆ ಮಾಡಿಸಿ: ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಪ್ರಸಾದ್ ಕೆ.ಆರ್‌.ಪೇಟೆ: ಚೌಡೇಶ್ವರಿ ಅಮ್ಮನವರ ದೇಗುಲದಲ್ಲಿ ಆಷಾಢ ಶುಕ್ರವಾರ ಸಂಭ್ರಮ ಸಂಸತ್‌ನಲ್ಲಿ ಕನ್ನಡಿಗರ ಪರ ಧ್ವನಿ ಎತ್ತಿ: ರಾಜ್ಯದ ಎನ್‌ಡಿಎ ಸಂಸದರಿಗೆ ಎಎಪಿಯ ಡಾ. ಮುಖ್ಯಮಂತ್ರಿ ಚಂದ್ರು ಆಗ್ರಹ “ಶಕ್ತಿ" ಯೋಜನೆಯಿಂದ ಸಾರಿಗೆ ನಿಗಮಗಳ ಆದಾಯ ಹೆಚ್ಚಾಗಿದೆ- ಆದರೆ ನೌಕರರಿಗೆ ವೇತನಕೊಡಲು ಹಣವಿಲ್ಲ- ಎಂಥಾ ಹೇಳಿಕೆ ಇದು ಸಾ... KRS ಭರ್ತಿ: ಅಣೆಕಟ್ಟೆಯಿಂದ ಒಂದು ಲಕ್ಷ ಕ್ಯುಸೆಕ್‌ಗೂ ಅಧಿಕ ಪ್ರಮಾಣದ ನೀರು ಬಿಡುಗಡೆ- ಕಾವೇರಿ ಕೊಳ್ಳದ ಜನರಿಗೆ ಎಚ್ಚರಿ... ಪೊಲೀಸರ ಮೇಲೆ ಹಲ್ಲೆ ಮಾಡಿ ಪರಾರಿಗೆ ಯತ್ನ: ಕಳ್ಳನ ಹೆಡೆಮುರಿಕಟ್ಟಿದ ಮಹಿಳಾ ಎಸ್‌ಐ ಕೃಷ್ಣರಾಜಪೇಟೆ: ಶ್ರೀ ಚೌಡೇಶ್ವರಿ ಅಮ್ಮನವರ ಕರಗ ಮಹೋತ್ಸವ ಅದ್ದೂರಿ ಬೆಳಗಾವಿ: ಸವದತ್ತಿ ಯಲ್ಲಮ್ಮ ದೇವಿಯ ಹುಂಡಿಗೆ ಹರಿದು ಬಂತು ಕೋಟಿ ಕೋಟಿ ಹಣ