NEWSವಿಜ್ಞಾನ

ಮೃಗಾಲಯಕ್ಕೆ ಎಸ್.ಟಿ.ಸೋಮಶೇಖರ್ ಬಳಗದಿಂದ  1.19 ಕೋಟಿ ರೂ. ದೇಣಿಗೆ

ವಿಜಯಪಥ ಸಮಗ್ರ ಸುದ್ದಿ

ಮೈಸೂರು: ಈಗಾಗಲೇ ಮೈಸೂರು ಮೃಗಾಲಯಕ್ಕೆ 73.60 ಲಕ್ಷ ರೂ. ದೇಣಿಗೆ ನೀಡಿದ್ದ ಜಿಲ್ಲಾ ಉಸ್ತುವಾರಿ ಸಚಿವರು ಶನಿವಾರ ಎರಡನೇ ಬಾರಿಗೆ 45.30 ಲಕ್ಷ ರೂಪಾಯಿ ಚೆಕ್ ನೀಡಿದ್ದು, ಈ ಮೂಲಕ ಒಟ್ಟು 1 ಕೋಟಿ 18 ಲಕ್ಷ 90 ಸಾವಿರ ರೂಪಾಯಿಯನ್ನು ಮೃಗಾಲಯಕ್ಕೆ ಹಸ್ತಾಂತರ ಮಾಡಿದ್ದಾರೆ.

ಮೃಗಾಲಯದ ಸ್ಥಿತಿ-ಗತಿ ಪರಿಶೀಲನೆ ನಡೆಸಲು  ಆಹಾರ ಸಚಿವ ಗೋಪಾಲಯ್ಯ ನವರ ಜೊತೆ ಎಸ್.ಟಿ.ಸೋಮಶೇಖರ್ ಭೇಟಿ ನೀಡಿದ್ದು, ಈ ವೇಳೆ ತಮ್ಮ ಕ್ಷೇತ್ರದ ಜನರಿಂದ ಸಂಗ್ರಹಿಸಿದ 45.30 ಲಕ್ಷ ರೂ. ಚೆಕ್ ಅನ್ನು ಮೃಗಾಲಯದ ಕಾರ್ಯನಿರ್ವಾಹಕ ನಿರ್ದೇಶಕರಾದ ಅಜಿತ್ ಕುಲಕರ್ಣಿ ಅವರಿಗೆ ಹಸ್ತಾಂತರ ಮಾಡಿದರು.

ಈ ವೇಳೆ ಮಾತನಾಡಿದ ಅವರು, ಮೈಸೂರು ಮೃಗಾಲಯದ ನಿರ್ವಹಣೆಗೆ ಸಾರ್ವಜನಿಕರ ಸಹಕಾರ ಅಗತ್ಯವಾಗಿದ್ದು, ಈ ನಿಟ್ಟಿನಲ್ಲಿ ನಾನು ಎಲ್ಲ ಸಚಿವರು, ವಿಧಾನಪರಿಷತ್ ಸದಸ್ಯರು ಹಾಗೂ ಶಾಸಕರು ಸೇರಿದಂತೆ ಸಮಾಜದ ಗಣ್ಯರು ಮತ್ತು ನಾಗರಿಕರಿಗೆ ಮನವಿ ಮಾಡಿ ಆರ್ಥಿಕ ಸಹಾಯ ಮಾಡುವಂತೆ ಈಗಾಗಲೇ ಕೋರಿದ್ದೇನೆ. ಅಲ್ಲದೆ, ನನ್ನ ಕ್ಷೇತ್ರದಿಂದ ಈಗ 2ನೇ ಬಾರಿ 45.30 ಲಕ್ಷ ರೂಪಾಯಿಯನ್ನು ಸಂಗ್ರಹಿಸಿ ಮೃಗಾಲಯಕ್ಕೆ ನೀಡುತ್ತಿದ್ದೇನೆ ಎಂದು ತಿಳಿಸಿದರು.

 8 ಲಕ್ಷ ರೂ. ದೇಣಿಗೆ ನೀಡಿದ ಸಚಿವ ಗೋಪಾಲಯ್ಯ
ಆಹಾರ ಸಚಿವ ಕೆ.ಗೋಪಾಲಯ್ಯ  ವೈಯಕ್ತಿಕವಾಗಿ ಮೈಸೂರು ಜಯಚಾಮರಾಜೇಂದ್ರ ಮೃಗಾಲಯದ ನಿರ್ವಹಣಿಗೆ 8 ಲಕ್ಷ ರೂ. ಹಾಗೂ ಮೃಗಾಲಯದ 300 ಮಂದಿ ಸಿಬ್ಬಂದಿಗೆ ತಲಾ 25 ಕೆ.ಜಿ. ಅಕ್ಕಿಯನ್ನು ನೀಡಿದರು.

ಮೈಸೂರು ಜಯಚಾಮರಾಜೇಂದ್ರ ಮೃಗಾಲಯ ಪರಿಶೀಲನೆಗೆ ಶನಿವಾರ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಅವರೊಡನೆ ಭೇಟಿ ನೀಡಿದ ಸಚಿವ ಗೋಪಾಲಯ್ಯ ಅವರು, ಮೃಗಾಲಯವನ್ನು ಪರಿಶೀಲಿಸಿ ಅಲ್ಲಿನ ಸ್ಥಿತಿಗತಿ ಬಗ್ಗೆ ಮಾಹಿತಿ ಪಡೆದ ಬಳಿಕ ಅವರು 8 ಲಕ್ಷ ರೂಪಾಯಿ ಹಾಗೂ ಮೃಗಾಲಯದ 300 ಮಂದಿ ಸಿಬ್ಬಂದಿಗೆ ತಲಾ 25 ಕೆ.ಜಿ. ಅಕ್ಕಿಯನ್ನು ದೇಣಿಗೆಯಾಗಿ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಅವರ ಮೂಲಕ ಹಸ್ತಾಂತರಿಸಿದರು.

Leave a Reply

error: Content is protected !!
LATEST
ಚಾಮುಂಡಿ ಹುಟ್ಟುಹಬ್ಬ: ಬೆಳ್ಳಿ ಪಲ್ಲಕ್ಕಿ ಉತ್ಸವಕ್ಕೆ ರಾಜವಂಶಸ್ಥ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಚಾಲನೆ ನಾಡ ಅಧಿದೇವತೆ ಚಾಮುಂಡಿ ತಾಯಿಯ ವರ್ಧಂತಿ ಸಂಭ್ರಮ: ಬೆಟ್ಟಕ್ಕೆ ಹರಿದು ಬರುತ್ತಿದೆ ಭಕ್ತ ಸಾಗರ KRSನಿಂದ ಕಾವೇರಿ ನದಿಗೆ 1.30 ಲಕ್ಷ ಕ್ಯುಸೆಕ್ ನೀರು ಬಿಡುಗಡೆ ಪತ್ನಿ ಜೊತೆ 40 ವರ್ಷಗಳ ಹಿಂದೆ ಕೋಪ ಮಾಡಿಕೊಂಡಿದ್ದ ಪತಿ- ಸಾಯುವ ವೇಳೆಯೂ ಮಾತಾಡಲಿಲ್ಲ ! ಬೆಳಗಾವಿ: ಸವದತ್ತಿ ಯಲ್ಲಮ್ಮ ದೇವಿಯ ಹುಂಡಿಯಲ್ಲಿ 2 ತಿಂಗಳಲ್ಲೇ₹ 1.96 ಕೋಟಿ ಕಾಣಿಕೆ ಸಂಗ್ರಹ ಕಡ್ಡಾಯವಾಗಿ ಮಣ್ಣಿನ ಪರೀಕ್ಷೆ ಮಾಡಿಸಿ: ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಪ್ರಸಾದ್ ಕೆ.ಆರ್‌.ಪೇಟೆ: ಚೌಡೇಶ್ವರಿ ಅಮ್ಮನವರ ದೇಗುಲದಲ್ಲಿ ಆಷಾಢ ಶುಕ್ರವಾರ ಸಂಭ್ರಮ ಸಂಸತ್‌ನಲ್ಲಿ ಕನ್ನಡಿಗರ ಪರ ಧ್ವನಿ ಎತ್ತಿ: ರಾಜ್ಯದ ಎನ್‌ಡಿಎ ಸಂಸದರಿಗೆ ಎಎಪಿಯ ಡಾ. ಮುಖ್ಯಮಂತ್ರಿ ಚಂದ್ರು ಆಗ್ರಹ “ಶಕ್ತಿ" ಯೋಜನೆಯಿಂದ ಸಾರಿಗೆ ನಿಗಮಗಳ ಆದಾಯ ಹೆಚ್ಚಾಗಿದೆ- ಆದರೆ ನೌಕರರಿಗೆ ವೇತನಕೊಡಲು ಹಣವಿಲ್ಲ- ಎಂಥಾ ಹೇಳಿಕೆ ಇದು ಸಾ... KRS ಭರ್ತಿ: ಅಣೆಕಟ್ಟೆಯಿಂದ ಒಂದು ಲಕ್ಷ ಕ್ಯುಸೆಕ್‌ಗೂ ಅಧಿಕ ಪ್ರಮಾಣದ ನೀರು ಬಿಡುಗಡೆ- ಕಾವೇರಿ ಕೊಳ್ಳದ ಜನರಿಗೆ ಎಚ್ಚರಿ...