NEWSನಮ್ಮಜಿಲ್ಲೆ

ಮೈಸೂರು ಜಿಲ್ಲೆಯಲ್ಲಿ 35ಕ್ಕೇರಿದ ಸೋಂಕಿತರ ಸಂಖ್ಯೆ

ಬನ್ನೂರಿನಲ್ಲಿ ಭಾರಿ ಕಟ್ಟೆಚ್ಚರ ವಹಿಸಲು ಜಿಲ್ಲಾಡಳಿತ ಕ್ರಮ l ಪೊಲೀಸ್‌ ಬಂದೋಬಸ್ತ್‌

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ಮೈಸೂರು: ಜಿಲ್ಲೆಯಲ್ಲಿ ಕೊರೊನಾ ಪೀಡಿತರ ಸಂಖ್ಯೆ ಹೆಚ್ಚಾಗುತ್ತಿದ್ದು, ಇಂದು ಒಂದೇದಿನ 7ಮಂದಿಯಲ್ಲಿ ಪಾಸಿಟಿವ್‌ ಎಂದು ದೃಢಪಟ್ಟಿದೆ.  ಈ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಭಾರಿ ಕಟ್ಟೆಚ್ಚರ ವಹಿಸಲು ಸಿದ್ಧತೆ ಮಾಡಿಕೊಂಡಿದೆ.

ಅದರಲ್ಲೂ ತಿ.ನರಸೀಪುರ ತಾಲೂಕಿನ ಬನ್ನೂರಿನ ಮಸೀದಿಗೆ ಬಂದು ಹೋದ ಒಂಬತ್ತು ಜನರಲ್ಲಿ ದೃಢಪಟ್ಟಿದೆ. ಹೀಗಾಗಿ ಸುತ್ತಮುತ್ತಲಿನ ನಿವಾಸಿಗಳು ಗ್ರಾಮಸ್ಥರು ಭಾರಿ ಎಚ್ಚರಿಕೆ ವಹಸಿದಬೇಕಿದೆ.

ಇಂದು ದೃಢಪಟ್ಟಿರು ಸೋಂಕಿತರನ್ನು ಸೇರಿದಂತೆ ಮೈಸೂರು ಜಿಲ್ಲೆಯಲ್ಲಿ ಒಟ್ಟು 35 ಮಂದಿ ಕೊರೊನಾ ಸೋಂಕಿತರಾಗಿದ್ದಾರೆ. ಹೀಗಾಗಿ ಜಿಲ್ಲಾಡಿತವು ಹೆಚ್ಚಿನ ಕೇರ್‌ ತೆಗೆದುಕೊಳ್ಳುತ್ತಿದ್ದು ಜಿಲ್ಲೆಯ ಯಾವುದೇ ಗ್ರಾಮಸ್ಥರು ತಮ್ಮ ಪಕ್ಕದ ಗ್ರಾಮಗಳಿಗೂ ಹೋಗದಂತೆ ನೋಡಿಕೊಳ್ಳಬೇಕು ಎಂದು ಸಲಹೆ ನೀಡಿದ್ದಾರೆ.

ಕೊರೊನಾ ಸೋಂಕು ಪೀಡಿತರ ಸಂಪರ್ಕದಲ್ಲಿದ್ದವರು ಸ್ವಯಂ ಪ್ರೇರಿತರಾಗಿ ಆಸ್ಪತ್ರೆಗೆ ಬಂದು ಪರೀಕ್ಷೆ ಮಾಡಿಸಿಕೊಳ್ಳುವ ಮೂಲಕ ಹೆಚ್ಚಿನ ಅನಾಹುತವನ್ನು ತಡೆಯಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ವಿ. ಸೋಮಣ್ಣ ಮನವಿ ಮಾಡಿದ್ದಾರೆ.

ಇನ್ನು ಮೈಸೂರಿನಲ್ಲಿ ಶಾಸಕ ಎಸ್‌.ಎ. ರಾಮದಾಸ್‌ ಅವರು ಕೊರೊನಾ ಬಗ್ಗೆ ಜಾಗೃತಿ ಮೂಡಿಸಲು ಕರಪತ್ರಗಳನ್ನು ಹಂಚುತ್ತಿದ್ದಾರೆ. ಜತೆಗೆ ಸುಖಸುಮ್ಮನೆ ಯಾರು ಮನೆಯಿಂದ ಹೊರಬರಬೇಡಿ ಎಂದು ಸಲಹೆ ನೀಡುತ್ತಿದ್ದಾರೆ.

ಇನ್ನು ಬೆಂಗಳೂರಿನಲ್ಲಿ ಒಟ್ಟು 59 ಸೋಂಕಿತರು ಎಂದು ದೃಢಪಟ್ಟಿದ್ದು, ಬಿಬಿಎಂಪಿ ವ್ಯಾಪ್ತಿಯಲ್ಲಿಯೂ ಭಾರಿ ಕಾಳಜಿ ವಹಿಸಲಾಗುತ್ತಿದೆ.

ಕೊರೊನಾ ಭೀತಿಯಿಂದ ಯಾವುದೇ ಕೆಲಸವಿಲ್ಲದೆ ನಿರ್ಗತಿಕರಾಗಿರುವವರಿಗೆ ಪಾಲಿಕೆ ಮತ್ತು ಆಯಾಯ ಕ್ಷೇತ್ರದ ಶಾಸಕರು ಊಟದ ವ್ಯವಸ್ಥೆಯನ್ನು ಮಾಡುತ್ತಿದ್ದಾರೆ.

ಇನ್ನು ರಾಜ್ಯಾದ್ಯಂತ ಈವರೆಗೆ ಕೊರೊನಾಗೆ ನಾಲ್ವರು ಬಲಿಯಾಗಿದ್ದು 149ಕ್ಕೂ ಹೆಚ್ಚು ಜನರಿಗೆ ಸೋಂಕು ಇರುವುದು ದೃಢಪಟ್ಟಿದೆ.

 

Leave a Reply

error: Content is protected !!
LATEST
KSRTC ಚಾಲನಾ ಸಿಬ್ಬಂದಿ ತಮ್ಮ ಜೀವವನ್ನು ಪಣಕ್ಕಿಟ್ಟು ಸಲ್ಲಿಸುವ ಸೇವೆ ಅವಿಸ್ಮರಣೀಯ- ಶ್ರೀ ಸೌಮ್ಯನಾಥ ಸ್ವಾಮೀಜಿ ಶ್ಲಾಘ... ಬನ್ನೂರು: ಸ್ಮಶಾನ ರಸ್ತೆಗಾಗಿ ಶವವಿಟ್ಟು ಮುಖ್ಯರಸ್ತೆ ಬಂದ್‌ಮಾಡಿ ಪ್ರತಿಭಟನೆ ದೀಪಾವಳಿಗೂ ಮುನ್ನ ಸರ್ಕಾರಿ ನೌಕರರಿಗೆ ಗಿಫ್ಟ್‌: ಶೇ.3ರಷ್ಟು ತುಟ್ಟಿಭತ್ಯೆ ಹೆಚ್ಚಳ KSRTC: ಒಂದೇ ಆಧಾರ್‌ನ 3ಜೆರಾಕ್ಸ್‌ ಪ್ರತಿ ಹಿಡಿದು ಟಿಕೆಟ್‌ ಕೇಳಿದ ನಾರಿಮಣಿಗಳು- ಪರಿಶೀಲಿಸಿದ ಕಂಡಕ್ಟರ್‌ಗೆ ನಾನು ಸರ... ಅ.21 ರಿಂದ ನ.20 ರವರೆಗೆ 6ನೇ ಸುತ್ತಿನ ಕಾಲುಬಾಯಿ ಲಸಿಕೆ: DC ಡಾ.ಶಿವಶಂಕರ ಪೋಕ್ಸೋ ಕಾಯ್ದೆಯನ್ವಯ ಸಂತ್ರಸ್ತ ಮಕ್ಕಳಿಗೆ ಸೇವೆ ಸಲ್ಲಿಸಲು ಅರ್ಜಿ ಆಹ್ವಾನ ಬೆಂ.ಗ್ರಾಂ.ಜಿಲ್ಲೆ: ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಮಹೇಶ್ವರಿಗೆ 1 ಲಕ್ಷ ರೂ. ಪ್ರೋತ್ಸಾಹ ಧ... BBMP: ಮಳೆಯಿಂದ ಸಮಸ್ಯೆ ಆಗಿದ್ದರೆ ಕೂಡಲೇ 1533ಕ್ಕೆ ಕರೆ ಮಾಡಿ ದೂರು ನೀಡಿ ದೀಪಾವಳಿ ಹಬ್ಬ ಹಿನ್ನೆಲೆ KKRTC ನೌಕರರಿಗೆ ಅ.29ರಂದೇ ವೇತನ ಕೊಡಲು ಎಂಡಿ ರಾಚಪ್ಪ ನಿರ್ದೇಶನ ನಿರಂತರ ಮಳೆ- BBMP ಎಲ್ಲ ಅಧಿಕಾರಿಗಳು ಸನ್ನದ್ಧರಾಗಿ: ತುಷಾರ್ ಗಿರಿನಾಥ್