NEWSನಮ್ಮಜಿಲ್ಲೆ

ಮೈಸೂರು ಜಿಲ್ಲೆಯವರೇ ಆಗಿದ್ದರೆ ಕಟ್ಟಡ ಕೆಲಸಕ್ಕೆ ಅನುಮತಿ

ಜಿಲ್ಲಾ ಉಸ್ತುವಾರಿ ಸಚಿವ ಸೋಮಶೇಖರ್‌ ಹೇಳಿಕೆ

ವಿಜಯಪಥ ಸಮಗ್ರ ಸುದ್ದಿ

ಮೈಸೂರು: ಕಟ್ಟಡ ಕಾರ್ಮಿಕರು ಮೈಸೂರು ಜಿಲ್ಲೆಯವರಾಗಿದ್ದು, ಇಲ್ಲೇ ಇದ್ದರೆ ಮಾತ್ರ ಕೆಲಸ ಮಾಡಬಹುದು. ಹೊರ ಜಿಲ್ಲೆ ಅಥವಾ ರಾಜ್ಯಗಳಿಂದ ಈ ಸಂದರ್ಭದಲ್ಲಿ ಇಲ್ಲಿಗೆ ಬಂದು ಕೆಲಸ ಮಾಡಲು ಅನುಮತಿ ಇಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ತಿಳಿಸಿದರು.

ನಿನ್ನೆ ಮೈಸೂರಿನಲ್ಲಿ ಮಾತನಾಡಿ, ಕೃಷಿ ಚಟುವಟಿಕೆಗೆ ಈಗಾಗಲೇ ಅನುಮತಿ ಕೊಡಲಾಗಿದೆ. ಉಳಿದಂತೆ ಈ ಹಿಂದಿನ ಕ್ರಮವೇ ಮುಂದುವರಿಯುತ್ತದೆ. ಐಟಿ-ಬಿಟಿಗೆ ಅಗತ್ಯವಿರುವಷ್ಟು ಮಾತ್ರ ಅನುಮತಿ ಕೊಡಲಾಗಿದ್ದು, ಪರಿಸ್ಥಿತಿಗೆ ಅನುಗುಣವಾಗಿ ಕ್ರಮ ತೆಗೆದುಕೊಳ್ಳಲಾಗುತ್ತದೆ ಎಂದು ತಿಳಿಸಿದರು.

ಮೈಸೂರು ರೆಡ್ ಝೋನ್ ಎಂದು ಪರಿಗಣಿಸಿರುವ ಹಿನ್ನೆಲೆ ಜಿಲ್ಲೆಯಲ್ಲಿ ಸಡಿಲಿಕೆ ಇಲ್ಲ. ವೈದ್ಯಕೀಯ ತುರ್ತು ಪರಿಸ್ಥಿತಿಗಳಿಗೆ ಮಾತ್ರ ಓಡಾಟಕ್ಕೆ ಅನುಮತಿ ಕೊಡಲಾಗಿದೆ. ಇನ್ನು ಕಟ್ಟಡ ಕಾಮಗಾರಿಗಳಿಗೆ ಸಂಬಂಧಪಟ್ಟಂತೆ ತೀರಾ ತುರ್ತು ಇದ್ದವರು ಅನುಮತಿ ಪಡೆದು ಕೆಲಸ ಮಾಡಿಸಿಕೊಳ್ಳಬಹುದು ಎಂದರು.

ಕಬ್ಬಿಣ ಹಾರ್ಡ್‍ವೇರ್ ಅಂಗಡಿಗಳು ತೆರೆಯುವಂತಿಲ್ಲ. ಪ್ಲಂಬರ್ ಎಲೆಕ್ಟ್ರಿಕ್ ಕೆಲಸಗಳಿಗೆ ಪೊಲೀಸ್ ಅನುಮತಿ ಅವಶ್ಯಕ. ಉಳಿದ ವಿಷಯಗಳಿಗೆ ಮೇ 3 ರವರೆಗೆ ಯಾವುದೇ ಕಾರಣಕ್ಕೂ ಅನುಮತಿ ಇಲ್ಲ. ಈ ಬಗ್ಗೆ ಪರಿಶೀಲನೆ ನಡೆಸಿ ಮುಂದೆ ಏನು ಮಾಡಬಹುದು ಎಂದು ತೀರ್ಮಾನ ಮಾಡಲಾಗುವುದು ಎಂದು ತಿಳಿಸಿದರು.

ಮೈಸೂರಲ್ಲಿ ಇಷ್ಟು ಸೋಂಕು ಜ್ಯೂಬಿಲಿಯೆಂಟ್ ಹಾಗೂ ತಬ್ಲಿಘೀ ಜಮಾತ್‍ನವರಿಂದ ಹೆಚ್ಚಾಗಿ ಬಂದಿದೆ. ಆದರೆ, ಇಲ್ಲಿಗೆ ಬಂದಿರುವುದು ಕೇವಲ 3 ರಿಂದ 4 ಮಾತ್ರ. ಹೀಗಾಗಿ ಇಲ್ಲಿಯವರೆಗೆ ಸಹಕಾರ ನೀಡಿದ ಮಾನ್ಯ ಜನತೆ ಮುಂದೆಯೂ ಇದೇರೀತಿ ಸಹಕಾರ ನೀಡಲಿ ಎಂದು ಕೋರಿಕೊಳ್ಳುವೆ ಎಂದರು.

ರೈತರು ತಮ್ಮ ಹಳೇ ಸಾಲವನ್ನು ತೀರಿಸುವ ಸಲುವಾಗಿ ಸುಸ್ತಿ ಮನ್ನಾ ಮಾಡಲಾಗುವುದು. ಇದಕ್ಕೆ ಮಾರ್ಚ್ 31ರ ವರೆಗೆ ಗಡುವು ನೀಡಲಾಗಿತ್ತು. ಈ ಗಡುವನ್ನು ಮತ್ತೆ ಮೂರು ತಿಂಗಳ ಅವಧಿಗೆ ವಿಸ್ತರಿಸಲಾಗುವುದು. ಅವಧಿ ವಿಸ್ತರಣೆಯಿಂದ 14 ಕೋಟಿ ರೂ. ಬಡ್ಡಿ ಹೊರೆ ಬರುತ್ತದೆ. ಅದನ್ನು ನಾವೇ ಭರಿಸುವುದಾಗಿ ಮುಖ್ಯಮಂತ್ರಿಗಳು ಹೇಳಿದ್ದಾರೆ ಎಂದು ಸಚಿವರು ತಿಳಿಸಿದರು.

ನಾಗರಿಕರು ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು, ಯಾವುದೇ ಕಾರಣಕ್ಕೂ ಅನಾವಶ್ಯಕವಾಗಿ ಮನೆಯಿಂದ ಆಚೆ ಬರಕೂಡದು ಎಂದು ಮನವಿ ಮಾಡಿದರು.

Leave a Reply

error: Content is protected !!
LATEST
ಪತ್ನಿ ಜೊತೆ 40 ವರ್ಷಗಳ ಹಿಂದೆ ಕೋಪ ಮಾಡಿಕೊಂಡಿದ್ದ ಪತಿ- ಸಾಯುವ ವೇಳೆಯೂ ಮಾತಾಡಲಿಲ್ಲ ! ಬೆಳಗಾವಿ: ಸವದತ್ತಿ ಯಲ್ಲಮ್ಮ ದೇವಿಯ ಹುಂಡಿಯಲ್ಲಿ 2 ತಿಂಗಳಲ್ಲೇ₹ 1.96 ಕೋಟಿ ಕಾಣಿಕೆ ಸಂಗ್ರಹ ಕಡ್ಡಾಯವಾಗಿ ಮಣ್ಣಿನ ಪರೀಕ್ಷೆ ಮಾಡಿಸಿ: ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಪ್ರಸಾದ್ ಕೆ.ಆರ್‌.ಪೇಟೆ: ಚೌಡೇಶ್ವರಿ ಅಮ್ಮನವರ ದೇಗುಲದಲ್ಲಿ ಆಷಾಢ ಶುಕ್ರವಾರ ಸಂಭ್ರಮ ಸಂಸತ್‌ನಲ್ಲಿ ಕನ್ನಡಿಗರ ಪರ ಧ್ವನಿ ಎತ್ತಿ: ರಾಜ್ಯದ ಎನ್‌ಡಿಎ ಸಂಸದರಿಗೆ ಎಎಪಿಯ ಡಾ. ಮುಖ್ಯಮಂತ್ರಿ ಚಂದ್ರು ಆಗ್ರಹ “ಶಕ್ತಿ" ಯೋಜನೆಯಿಂದ ಸಾರಿಗೆ ನಿಗಮಗಳ ಆದಾಯ ಹೆಚ್ಚಾಗಿದೆ- ಆದರೆ ನೌಕರರಿಗೆ ವೇತನಕೊಡಲು ಹಣವಿಲ್ಲ- ಎಂಥಾ ಹೇಳಿಕೆ ಇದು ಸಾ... KRS ಭರ್ತಿ: ಅಣೆಕಟ್ಟೆಯಿಂದ ಒಂದು ಲಕ್ಷ ಕ್ಯುಸೆಕ್‌ಗೂ ಅಧಿಕ ಪ್ರಮಾಣದ ನೀರು ಬಿಡುಗಡೆ- ಕಾವೇರಿ ಕೊಳ್ಳದ ಜನರಿಗೆ ಎಚ್ಚರಿ... ಪೊಲೀಸರ ಮೇಲೆ ಹಲ್ಲೆ ಮಾಡಿ ಪರಾರಿಗೆ ಯತ್ನ: ಕಳ್ಳನ ಹೆಡೆಮುರಿಕಟ್ಟಿದ ಮಹಿಳಾ ಎಸ್‌ಐ ಕೃಷ್ಣರಾಜಪೇಟೆ: ಶ್ರೀ ಚೌಡೇಶ್ವರಿ ಅಮ್ಮನವರ ಕರಗ ಮಹೋತ್ಸವ ಅದ್ದೂರಿ ಬೆಳಗಾವಿ: ಸವದತ್ತಿ ಯಲ್ಲಮ್ಮ ದೇವಿಯ ಹುಂಡಿಗೆ ಹರಿದು ಬಂತು ಕೋಟಿ ಕೋಟಿ ಹಣ