NEWSನಮ್ಮಜಿಲ್ಲೆ

ಯೋಗ ಜೀವನದ ಒಂದು ಭಾಗವಾಗಲಿ : ಅಪರ ಜಿಲ್ಲಾ ನ್ಯಾ.ಟಿ.ಗೋಪಾಲ ಕೃಷ್ಣ ರೈ ಕರೆ

ವಿಜಯಪಥ ಸಮಗ್ರ ಸುದ್ದಿ

ಶ್ರೀರಂಗಪಟ್ಟಣ: ಅಂತಾರಾಷ್ಟ್ರೀಯ ಯೋಗ ದಿನದ ಅಂಗವಾಗಿ ಶ್ರೀರಂಗಪಟ್ಟಣದ ಜೆಎಂಎಫ್‌ಸಿ ನ್ಯಾಯಾಲಯದ ಆವರಣದಲ್ಲಿ ವಕೀಲರದ ಸಂಘದಿಂದ ಆಯೋಜಿಸಿದ್ದ 10ನೇ ಅಂತಾರಾಷ್ಟ್ರೀಯ ಯೋಗ ಆಚರಣೆಲ್ಲಿ ನ್ಯಾಯಾಧೀಶರು ಹಾಗೂ ವಕೀಲರು ಯೋಗ ಪ್ರದರ್ಶನ ಮಾಡಿ ಯೋಗದ ಮಹತ್ವವನ್ನು ಜಗತ್ತಿಗೆ ಸಾರಿದರು.

ಈ ವೇಳೆ ಮಾತನಾಡಿದ ಮೂರನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಟಿ.ಗೋಪಾಲ ಕೃಷ್ಣ ರೈ ಅವರು, ಯೋಗವು ರೋಗವನ್ನು ದೂರ ಮಾಡುವ ಶಕ್ತಿ ಹೊಂದಿದೆ. ಹೀಗಾಗಿ ಪ್ರತಿಯೊಬ್ಬರೂ ಜೀವನದ ಒಂದು ಭಾಗವಾಗಿ ಯೋಗ ಅಳವಡಿಸಿಕೊಳ್ಳುವ ಮೂಲಕ ಆರೋಗ್ಯ ಕಾಪಾಡಿಕೊಳ್ಳಬೇಕು ಎಂದು ಕರೆ ನೀಡಿದರು.

ಯೋಗಾಸನ ಅನ್ನೋದು ಜೂನ್ 21 ಕ್ಕೆ ಮಾತ್ರ ಸೀಮಿತವಾಗಬಾರದು. ಪ್ರತಿ ದಿನವೂ ನಮ್ಮೆಲ್ಲರ ಜೀವನದ ಭಾಗವಾಗಿ ಅಳವಡಿಸಿಕೊಂಡಾಗ ಯಾವುದೇ ರೋಗವೂ ನಮ್ಮ ಹತ್ತಿರ ಸುಳಿಯದು. ಅದರಂತೆ ಮನಸ್ಸು ಶುದ್ಧವಾಗಿ, ದೇಹ ಸದೃಢವಾಗಿ ಇಟ್ಟುಕೊಳ್ಳಲು ಯೋಗವೂ ಸಹಕಾರಿಯಾಗಲಿದೆ ಎಂದು ತಿಳಿಸಿದರು.

ಹಿರಿಯ ಸಿವಿಲ್‌ ನ್ಯಾಯಾಧೀಶರಾದ ಡಿ.ರೂಪಾ ಮಾತನಾಡಿ, ಅಂತಾರಾಷ್ಟ್ರೀಯ ಯೋಗ ದಿನಾಚರಣೆಯು ನಮ್ಮ ದೇಶದ ಸಾಂಸ್ಕೃತಿಕ ಸಂಪತ್ತನ್ನು ಸೂಚಿಸುತ್ತದೆ. ಆಧುನಿಕ ಯುಗದಲ್ಲಿ ಪ್ರತಿಯೊಬ್ಬರಿಗೂ ಯೋಗಾಭ್ಯಾಸ ಅತ್ಯವಶ್ಯಕ. ಯೋಗವೂ ಒಂದು ಕ್ರೀಡೆ, ಇದರಲ್ಲೂ ಅನೇಕ ರೀತಿಯಲ್ಲಿ ಸಾಧನೆಗೈದ ಸಾಧಕರನ್ನು ಕಾಣಬಹುದು ಎಂದರು.

ಈ ವೇಳೆ ‘ಸ್ವಯಂ ಮತ್ತು ಸಮಾಜಕ್ಕಾಗಿ ಯೋಗ’ ಎಂಬ ಈ ಬಾರಿಯ ಘೋಷವಾಕ್ಯದೊಂದಿಗೆ ಸಾಮೂಹಿಕವಾಗಿ ನ್ಯಾಯಾಧೀಶರು ಮತ್ತು ವಕೀಲರು ವಿವಿಧ ಯೋಗಾಸನವವನ್ನು ಮಾಡಿದರು.

ಪ್ರಧಾನ ಕಿರಿಯ ನ್ಯಾಯಾಧೀಶರಾದ ಹರೀಶ್‌ ಕುಮಾರ್‌, ಕಿರಿಯ ಸಿವಿಲ್‌ ನ್ಯಾಯಾಧೀಶರಾದ ಹನುಮಂತರಾಯಪ್ಪ, ವಕೀಲರ ಸಂಘದ ಅಧ್ಯಕ್ಷ ಸತ್ಯನಾರಾಯಣ, ಪ್ರಧಾನ ಕಾರ್ಯದರ್ಶಿ ಡಿ.ಪವನ್‌ ಕುಮಾರ್‌ ಸೇರಿದಂತೆ ಹಲವಾರು ನಾಯವಾದಿಗಳು ಭಾಗವಹಿಸಿದ್ದರು.

Leave a Reply

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ಮೆಟ್ರೋ ದರ ಏರಿಕೆಗೆ ಕೇಂದ್ರ ಸರ್ಕಾರವೇ ಹೊಣೆ: ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ವ್ಯಾಪಾರ ವಹಿವಾಟು ಹೆಚ್ಚಿಸಿ, ಉತ್ಪಾದನೆ ಉತ್ತೇಜಿಸುವ ಸರ್ಕಾರದ ಬದ್ಧತೆ ಶ್ಲಾಘನೀಯ: ಕಾಸಿಯಾ ಅಧ್ಯಕ್ಷ ರಾಜಗೋಪಾಲ್ ಮೈಕ್ರೊ ಫೈನಾನ್ಸ್ ಸುಗ್ರಿವಾಜ್ಞೆಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅಂಕಿತ ಗ್ರೇಟರ್ ಬೆಂಗಳೂರು ಆಡಳಿತ ವಿಧೇಯಕ ಕರಡಿಗೆ ನಾಗರೀಕರಿಂದ ಬರುವ ಸಲಹೆಗಳ ಸೇರಿಸಿ ಅಂತಿಮ: ರಿಜ್ವಾನ್ ಹರ್ಷದ್ ಎಸ್ಸಿಎಸ್‌ಪಿ, ಟಿಎಸ್ಪಿ ವಿಶೇಷ ಯೋಜನೆ ಫೆ. ಅಂತ್ಯದೊಳಗೆ ಶೇ.100 ರಷ್ಟು ಪ್ರಗತಿ ಸಾಧಿಸಿರಬೇಕು: ಅಧಿಕಾರಿಗಳಿಗೆ ಡಿಸಿ ಆ... ರೈತರ ನಿರಂತರ ಹೋರಾಟಕ್ಕೆ ನಾಳೆಗೆ ವರ್ಷ: ಆದರೂ ಕಿವಿಗೊಡದ ಸರ್ಕಾರ KSRTC: ಫೇಕ್ ಫೋನ್‌ ಪೇ/ UPI ಆಪ್‌ಗಳಿಂದ ದಿನನಿತ್ಯ ನಿರ್ವಾಹಕರಿಗೆ ಆರ್ಥಿಕ ಬರೆ!! KKRTC ಬಸ್‌ನಲ್ಲಿ ಲೈಂಗಿಕ ಕಿರುಕುಳ ನೀಡಿದ ಕಂಡಕ್ಟರ್‌ನಿಂದ ದೂರು ಹಿಂಪಡೆಯುವಂತೆ ಬೆದರಿಕೆ-ಆರೋಪ KSRTC ಅಭಿವೃದ್ಧಿಗೆ ಬಜೆಟ್‌ನಲ್ಲಿ ಅನುದಾನ - ಸಿಎಂ ಜತೆ ಸಚಿವ ರಾಮಲಿಂಗಾರೆಡ್ಡಿ ಚರ್ಚೆ ಬಜೆಟ್‌ನಲ್ಲಿ ನಿಮಗೆ ಸಿಹಿ ಸುದ್ದಿ ಇದೆ: KSRTC ಅಧಿಕಾರಿಗಳಿಗೆ ಸಾರಿಗೆ ಸಚಿವರ ಭರವಸೆ