NEWSದೇಶ-ವಿದೇಶನಮ್ಮರಾಜ್ಯ

ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ವಿಜಯಾ ಯಾತ್ರೆ ಬನ್ನಿ ಮರಕ್ಕೆ ಪೂಜೆ

ವಿಜಯಪಥ ಸಮಗ್ರ ಸುದ್ದಿ

ಮೈಸೂರು: ಜಗದ್ವಿಖ್ಯಾತ ಮೈಸೂರು ದಸರಾದಲ್ಲಿ ಅತ್ಯಾಕರ್ಷಕ ಜಂಬೂ ಸವಾರಿ, 415 ನೇ ನಾಡಹಬ್ಬ ದಸರಾ ಮೆರವಣಿಗೆ ಇಂದು ವೈಭವಯುತವಾಗಿ ನಡೆಯಲಿದೆ.

ವಿಶ್ವವಿಖ್ಯಾತ ನಾಡಹಬ್ಬ ದಸರಾ ಮೆರವಣಿಗೆಗೆ ಕೆಲವೇ ಕೆಲವು ಗಂಟೆಗಳು ಮಾತ್ರ ಉಳಿದಿದ್ದು, 415ನೇ ನಾಡಹಬ್ಬ ದಸರಾ ಮೆರವಣಿಗೆಗೆ ಇಡೀ ಮೈಸೂರು ಸಜ್ಜಾಗಿದೆ. ವಿಶ್ವದ ದೃಷ್ಟಿ ಇಂದು ಮೈಸೂರಿನ ಮೇಲಿದೆ. ಜಂಬೂಸವಾರಿ ಕಣ್ತುಂಬಿಕೊಳ್ಳಲು ಕರುನಾಡು ಕೂಡ ಕಾತರದಿಂದ ಕಾಯುತ್ತಿದೆ.

ಐತಿಹಾಸಿಕ `ದಸರಾ’: ದಸರಾ ಮೆರವಣಿಗೆ ಆರಂಭಕ್ಕೂ ಮುನ್ನ ಮೈಸೂರು ಅರಮನೆಯಲ್ಲಿ (Mysuru Darasa) ಖಾಸಗಿ ದರ್ಬಾರ್ ಭಾಗವಾಗಿ ವಿಜಯಯಾತ್ರೆ ನಡೆಯಲಿದೆ. ಬೆಳಗ್ಗೆ 10 ಗಂಟೆಗೆ ಅರಮನೆಯ ಕಲ್ಯಾಣ ಮಂಟಪದ ಮುಂಭಾಗ ಜಟ್ಟಿ ಸಮುದಾಯದವರು ಜಟ್ಟಿ ಕಾಳಗ ನಡೆಸಿ ಮಹಾರಾಜರಿಗೆ ತಮ್ಮ ನಿಷ್ಠೆ ಪ್ರದರ್ಶಿಸಲಿದ್ದಾರೆ. ನಂತರ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ವಿಜಯಾ ಯಾತ್ರೆ ನಡೆಸಿ ಬನ್ನಿ ಮರಕ್ಕೆ ಪೂಜೆ ಸಲ್ಲಿಸಲಿದ್ದಾರೆ.

ಮಧ್ಯಾಹ್ನ 1.46ರಿಂದ 2.08ರಲ್ಲಿ ಸಲ್ಲುವ ಶುಭ ಮಕರ ಲಗ್ನದಲ್ಲಿ ನಂದಿಧ್ವಜದ ಪೂಜೆ ನೆರವೇರಲಿದೆ. ನಂತರ ನಾಡಿನ ಕಲೆ ಸಂಸ್ಕೃತಿ, ಪರಂಪರೆಯನ್ನು ಸಾರುವ ಸ್ತಬ್ಧಚಿತ್ರಗಳು, ಕಲಾತಂಡಗಳ ಅದ್ದೂರಿ ಮೆರವಣಿಗೆ ಆರಂಭವಾಗಲಿದೆ. ಸಂಜೆ 4ರಿಂದ 4.30ವರೆಗೆ ಸಲ್ಲುವ ಶುಭ ಕುಂಭ ಮುಹೂರ್ತದಲ್ಲಿ ಜಂಬೂಸವಾರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪುಷ್ಪಾರ್ಚನೆ ಮೂಲಕ ಚಾಲನೆ ನೀಡಲಿದ್ದಾರೆ.

750 ಕೆಜಿ ಚಿನ್ನದ ಅಂಬಾರಿಯಲ್ಲಿ ನಾಡಿನ ಅಧಿದೇವತೆ ಚಾಮುಂಡಿ ಮೂರ್ತಿಯನ್ನು ಹೊತ್ತ ಅಭಿಮನ್ಯು ಸಾಂಸ್ಕೃತಿಕ ನಗರಿಯ ರಾಜಬೀದಿಯಲ್ಲಿ ಸಾಗಲಿದೆ. ಕ್ಯಾಪ್ಟನ್ ಅಭಿಮನ್ಯುಗೆ 9ಆನೆಗಳು ಸಾಥ್ ನೀಡಲಿವೆ. ಈ ಕ್ಷಣಕ್ಕೆ 5 ಲಕ್ಷಕ್ಕೂ ಹೆಚ್ಚು ಮಂದಿ ಸಾಕ್ಷಿಯಾಗಲಿದ್ದಾರೆ.

ಲಕ್ಷಾಂತರ ಜನ ದಸರಾ ಕಣ್ತುಂಬಿಕೊಳ್ಳಲು ಮೈಸೂರಿಗೆ ಈಗಾಗಲೇ ದೇಶ ವಿದೇಶದಿಂದ ಆಗಮಿಸಿದ್ದು, ರಾಜ್ಯ ಅಂತಾರಾಜ್ಯದಿಂದ ಆಗಮಿಸುತ್ತಿದ್ದಾರೆ. ಬರುವ ಎಲ್ಲರೂ ಸುರಕ್ಷಿತವಾಗಿ ದಸರಾ ನೋಡಬೇಕು ಎಂಬ ನಿಟ್ಟಿನಲ್ಲಿ ಪೊಲೀಸರು ಸಕಲ ರೀತಿಯಲ್ಲೂ ಸಿದ್ಧರಾಗಿದ್ದಾರೆ.

Leave a Reply

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ಹಿಂದಿನಿಂದ ವೇಗವಾಗಿ ಬಂದ ಕಾರು ಮುಂದೆ ಹೋಗುತ್ತಿದ್ದ ಕಾರ್‌ ಮೇಲೇರಿತು! ರೈತ ನಾಯಕ ಕುರುಬೂರು ಶಾಂತಕುಮಾರ್‌ಗೆ ಬೆಂಗಳೂರಿನಲ್ಲಿ ಚಿಕಿತ್ಸೆ: ಸಿಎಂ ಸಿದ್ದರಾಮಯ್ಯ ಮಹಾಕುಂಭ ಮೇಳಕ್ಕೆ ತೆರಳುತ್ತಿದ್ದ 18 ಮಂದಿ ದೆಹಲಿ ರೈಲು ನಿಲ್ದಾಣದಲ್ಲಿ ಕಾಲ್ತುಳಿತಕ್ಕೆ ಸಿಲುಕಿ ಮೃತ ಮಳೆ ನೀರು ಕೊಯ್ಲಿನಿಂದ ಅಂತರ್ಜಲ ವೃದ್ಧಿ: ಕೃಷಿ ಇಲಾಖೆ ಉಪ ನಿರ್ದೇಶಕಿ ಗಾಯತ್ರಿ ಗ್ರಾಮೀಣ ಪುನರ್ವಸತಿ ಕಾರ್ಯಕರ್ತರ ನೇಮಕಕ್ಕೆ ಅರ್ಜಿ ಆಹ್ವಾನ ಬಿಬಿಎಂಪಿ: ಕಸ ಬಿಸಾಡುವ ಸ್ಥಳ ನಿರ್ಮೂಲನೆ ಜತೆ ಜೆತೆಗೆ ಸ್ವಚ್ಛತಾ ಅಭಿಯಾನ KSRTC ರಿಯಾಯಿತಿ ದರದ ಪಾಸ್‌ ಇದ್ದರೂ ತಾರತಮ್ಯತೆ: ನಿವೃತ್ತರಾದ ಮೇಲೆ ಅಧಿಕಾರಿಗಳಿಗೆ ಬಡತನ- ನೌಕರರಿಗೆ ಸಿರಿತನ !! ಪಂಜಾಬ್‌ನಲ್ಲಿ ಕುರುಬೂರು ಶಾಂತಕುಮಾರ್ ಇದ್ದ ಕಾರು ಅಪಘಾತ: ಆಸ್ಪತ್ರೆಗೆ ದಾಖಲು ಬಿಬಿಎಂಪಿ: 1.84 ಲಕ್ಷ ಬೀದಿ ನಾಯಿಗಳಿಗೆ "ಸಂಯುಕ್ತ ಲಸಿಕೆ" ಹಾಕುವ ಗುರಿ- ತುಷಾರ್ ಗಿರಿನಾಥ್ ಮೈಕ್ರೋಫೈನಾನ್ಸ್ ಸಂಸ್ಥೆಗಳ ಕಿರುಕುಳ ನಿಯಂತ್ರಣಕ್ಕೆ ಸರ್ಕಾರಿ ಆಧ್ಯಾದೇಶ ಜಾರಿ