NEWSಉದ್ಯೋಗದೇಶ-ವಿದೇಶನಮ್ಮಜಿಲ್ಲೆ

ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಸಾವಿರಕ್ಕೂ ಹೆಚ್ಚು ಹುದ್ದೆಗಳು ಖಾಲಿ: ಈಗಲೇ ಅರ್ಜಿ ಹಾಕಿ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ (ಯುಬಿಐ) ಸಾವಿರಕ್ಕೂ ಹೆಚ್ಚು ಹುದ್ದೆಗಳನ್ನು ನೇಮಕಾತಿ ಮಾಡುತ್ತಿದೆ. ಈ ಸಂಬಂಧ ಆನ್​ಲೈನ್​ ಮೂಲಕ ಅರ್ಜಿ ಆಹ್ವಾನ ಮಾಡಲಾಗಿದ್ದು ಆಸಕ್ತ, ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಕೆ ಮಾಡಬಹುದು. ಅಕ್ಟೋಬರ್ 23 ರಂದು ಬ್ಯಾಂಕ್ ನೋಟಿಫಿಕೇಶನ್ ಅನ್ನು ರಿಲೀಸ್ ಮಾಡಿ ಎಲ್ಲ ಮಾಹಿತಿ ನೀಡಿತ್ತು. ಆದರೆ ಇದೀಗ ಅಧಿಕೃತವಾಗಿ ಉದ್ಯೋಗಗಳನ್ನ ತುಂಬಲು ಅರ್ಜಿಗಳನ್ನು ಆಹ್ವಾನ ಮಾಡಿದೆ.

ಕರ್ನಾಟಕದಲ್ಲೂ ಯುಬಿಐ ಬ್ರ್ಯಾಂಚ್​ಗಳಿದ್ದು ಇಲ್ಲಿಯು ಹುದ್ದೆಗಳನ್ನು ತುಂಬಲಾಗುತ್ತಿದೆ. ರಾಜ್ಯದಲ್ಲಿ ಒಟ್ಟು 300 ಉದ್ಯೋಗಗಳು ಖಾಲಿ ಇವೆ. ಇವುಗಳಲ್ಲಿ ಎಸ್​ಸಿ 45, ಎಸ್​ಟಿ 22, ಒಬಿಸಿ 81, ಎಡಬ್ಲುಎಸ್​ 30, ಯುಆರ್ 122 ಉದ್ಯೋಗಗಳು ಮೀಸಲಿವೆ.

ದೇಶದ ವಿವಿಧ ಭಾಗಗಳಲ್ಲಿರುವ ಯುಬಿಐ ಬ್ರ್ಯಾಂಚ್​ಗಳಿದ್ದು  ಖಾಲಿ ಹುದ್ದೆಗಳನ್ನು ಭರ್ತಿ ಮಾಡುತ್ತಿದೆ. ಸ್ಥಳೀಯ ಬ್ಯಾಂಕ್ ಅಧಿಕಾರಿ ಹುದ್ದೆ ಇದಾಗಿದ್ದು ಆನ್​​ಲೈನ್​ ಅಪ್ಲಿಕೇಶನ್ ಪ್ರಕ್ರಿಯೆ ಆರಂಭಿಸಿದೆ. ಆನ್‌ಲೈನ್ ನೋಂದಣಿ, ಕೊನೆ ದಿನಾಂಕ, ಅರ್ಹತಾ ಮಾನದಂಡಗಳು, ಆಯ್ಕೆ ಪ್ರಕ್ರಿಯೆ, ಪರೀಕ್ಷೆ ಯಾವ ರೀತಿ ನಡೆಯುತ್ತದೆ, ಸಂಬಳ, ಅರ್ಜಿ ಶುಲ್ಕ ಇತ್ಯಾದಿಗಳನ್ನು ಈ ಕೆಳಗೆ ವಿವರಿಸಲಾಗಿದೆ.

ತಿಂಗಳ ಸ್ಯಾಲರಿ- 48,480 ರೂ.ಗಳು

ಹುದ್ದೆಯ ಹೆಸರು ಏನು?: ಲೋಕಲ್ ಬ್ಯಾಂಕ್ ಆಫೀಸರ್ (ಎಲ್​ಬಿಒ)

ಒಟ್ಟು ಹುದ್ದೆಗಳು: ಎಸ್​ಸಿ- 224, ಎಸ್​​​ಟಿ- 109, ಒಬಿಸಿ- 404, EWS- 150, ಯುಆರ್- 613. ಒಟ್ಟು ಹುದ್ದೆಗಳು- 1,500.

ವಿದ್ಯಾರ್ಹತೆ- ಯಾವುದಾದರೂ ಪದವಿ ಪೂರ್ಣಗೊಳಿಸಿರಬೇಕು. ವಯಸ್ಸಿನ ಮಿತಿ- 20 ವರ್ಷದಿಂದ 30.

ಅರ್ಜಿ ಶುಲ್ಕ ಎಷ್ಟಿದೆ..?: ಜನರಲ್​, EWS, ಒಬಿಸಿ- 850 ರೂ.ಗಳು. ಎಸ್​ಸಿ, ಎಸ್​​​ಟಿ, ವಿಶೇಷ ಚೇತನರು- 175 ರೂ.ಗಳು

ಹೇಗೆ ಆಯ್ಕೆ ಮಾಡಲಾಗುತ್ತದೆ?: ಲಿಖಿತ ಪರೀಕ್ಷೆ (ಆನ್​ಲೈನ್). ಗ್ರೂಪ್ ಡಿಸ್ಕಷನ್. ಸಂದರ್ಶನ. ಭಾಷಾ ಪ್ರಾವೀಣ್ಯತೆ ಪರೀಕ್ಷೆ (ಎಲ್​​​ಪಿಟಿ). ದಾಖಲಾತಿ ಪರಿಶೀಲನೆ

ಅರ್ಜಿ ಸಲ್ಲಿಕೆಗೆ ಕೊನೆ ದಿನಾಂಕ- ನವೆಂಬರ್- 13. ಆನ್​ಲೈನ್​​ನಲ್ಲಿ ಅರ್ಜಿ ಸಲ್ಲಿಸುವ ಲಿಂಕ್- https://ibpsonline.ibps.in/ubilbooct24/

Leave a Reply

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ಕ್ರೀಡಾಪಟುಗಳಿಗೆ ಕೊಡುವ ಏಕಲವ್ಯ ಪ್ರಶಸ್ತಿ ಮುಂದುವರಿಸಲಿ: ಶೋಭಾ ನಾರಾಯಣ್ ಬಿಡದಿಯಿಂದ ಹೆದ್ದಾರಿಯಲ್ಲೇ ಮುಂದೆ ಬಂದರೆ ನಿಮಗೆ ಟೋಲ್‌ ಬರೆ ಗ್ಯಾರಂಟಿ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಹೊತ್ತಿ ಉರಿದ ಸ್ಕಾರ್ಪಿಯೋ ಕಾರು KSRTC ಕನಕಪುರ ಬಸ್‌ ನಿಲ್ದಾಣದಲ್ಲಿ ವಿಕಲ ಚೇತನರಿಂದ ₹700 ವಸೂಲಿ, ಕಂಡಕ್ಟರ್ಸ್‌ ಕೊಡಬೇಕು ₹10 : ಟಿಸಿಗೆ ಡಿಎಂ ಸಾಥ್... ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ BMTC: ಅಪಘಾತದಲ್ಲಿ ಮೃತಪಟ್ಟ ನೌಕರರ ಕುಟುಂಬಕ್ಕೆ ₹1 ಕೋಟಿ ಪರಿಹಾರ ಚೆಕ್‌ ವಿತರಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸಾರಿಗೆ ನಿವೃತ್ತ ನೌಕರರಿಗೆ ಮತ್ತೊಮ್ಮೆ ಮೊಗದೊಮ್ಮೆ ನಿರಾಸೆ: ಭಾರಿ ಆಕ್ರೋಶಗೊಂಡ EPS ನಿವೃತ್ತರು ಕಾರು ಡೋರ್‌ಗೆ ಬೈಕ್‌ ಗುದ್ದಿ ಕೆಳಗೆ ಬಿದ್ದ ಮಹಿಳೆ ಮೇಲೆ ಹರಿದ ಬಿಎಂಟಿಸಿ ಬಸ್‌ ನಾಟಿ ಕೋಳಿ ಸಾರಿನ ಜತೆ ರಾಗಿಮುದ್ದೆ ನುಂಗಿದವರಿಗೆ ಗೊತ್ತು ಅದರ ಗಮ್ಮತ್ತು