NEWSನಮ್ಮರಾಜ್ಯರಾಜಕೀಯ

ಯಾವುದೇ ಮಠಾಧೀಶರು ರಾಜಕಾರಣಕ್ಕೆ ಕೈ ಹಾಕಬಾರದು: ಸಿದ್ದರಾಮಯ್ಯ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಯಾವುದೇ ಮಠಾಧೀಶರು ರಾಜಕಾರಣಕ್ಕೆ ಕೈ ಹಾಕಬಾರದು.‌ ಇಲ್ಲಿ ಜನಾಭಿಪ್ರಾಯವೇ ಅಂತಿಮ. ಮಠಾಧೀಶರು ರಾಜಕೀಯ ಚಟುವಟಿಕೆಗಳಲ್ಲಿ ತೊಡಗುವುದರಿಂದ ಮಠಗಳ ಬಗ್ಗೆ ಜನರಿಗಿರುವ ಧಾರ್ಮಿಕ ನಂಬಿಕೆಗಳಿಗೆ ಧಕ್ಕೆಯಾಗುತ್ತದೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ತಿಳಿಸಿದ್ದಾರೆ.

2019ರಲ್ಲಿ ಬಂದ ಪ್ರವಾಹದಿಂದ ಸಂತ್ರಸ್ತರಾದವರಿಗೇ ಇನ್ನೂ ರಾಜ್ಯ ಬಿಜೆಪಿ ಸರ್ಕಾರ ಪರಿಹಾರ ಕೊಟ್ಟಿಲ್ಲ. ಈಗ ಎಲ್ಲಾ ಕಡೆ ಮಳೆ ಬಂದು ಜನ, ಜಾನುವಾರಗಳ ಪ್ರಾಣ ಹಾನಿಯಾಗಿದೆ, ಮನೆಗಳು ಬಿದ್ದಿವೆ. ಇಂತಹಾ ಸಮಯದಲ್ಲಿ ಸರ್ಕಾರ ಯುದ್ದೋಪಾದಿಯಲ್ಲಿ ಕೆಲಸ ಮಾಡೋ ಬದಲು ಸಿಎಂ ಬದಲಾವಣೆ ಮಾಡುವ ಕೆಲಸದಲ್ಲಿ ಮುಳುಗಿದೆ ಎಂದು ವ್ಯಂಗ್ಯವಾಡಿದರು.

ಸಿದ್ದರಾಮಯ್ಯ ದಲಿತರನ್ನು ಸಿಎಂ ಮಾಡಲಿ ಎಂದು ನಳಿನ್‌ ಕುಮಾರ್‌ ಕಟೀಲ್‌ ನನಗೆ ಹೇಳಿದ್ದರು. ನಮ್ಮ ಪಕ್ಷದಲ್ಲಿ ದಲಿತರು ಸಿಎಂ ಆಗಿದ್ದಾರೆ.‌ ಹೀಗಾಗಿ ಸದ್ಯ ಬಿಜೆಪಿಗೆ ಆ ಅವಕಾಶ ಇದೆ, ನಳಿನ್ ಕುಮಾರ್ ಕಟೀಲ್ ಅವರು ಈಗ ದಲಿತರನ್ನು ಸಿಎಂ ಮಾಡಿ, ಸಾಮಾಜಿಕ ನ್ಯಾಯ ಎತ್ತಿಹಿಡಿಯಲಿ ಎಂದು ಕಾಲೆಳೆದಿದ್ದಾರೆ.

ದಲಿತರ ಬಗ್ಗೆ ರಾಜ್ಯ ಬಿಜೆಪಿ ಅವರಿಗೆ ನೈಜ ಕಾಳಜಿ ಇದ್ದರೆ ಬಿಎಸ್‌ವೈ ಅವರು ರಾಜೀನಾಮೆ ನೀಡಿದ ಬಳಿಕ ದಲಿತರನ್ನೇ ಮುಖ್ಯಮಂತ್ರಿ ಮಾಡಲಿ. ಇದು ಬಿಜೆಪಿ ರಾಜ್ಯಾಧ್ಯಕ್ಷ ಕಟೀಲ್ ಅವರಿಗೆ ನನ್ನ ಸವಾಲು ಎಂದು ಸವಾಲು ಹಾಕಿದ್ದಾರೆ.

ವಲಸಿಗ ಸಚಿವರನ್ನು ಮತ್ತೆ ಕಾಂಗ್ರೆಸ್ ಗೆ ಸೇರಿಸಿಕೊಳ್ಳುವ ವಿಚಾರಕ್ಕೆ ಸಂಬಂಧಿಸಿದಂತೆ ಅವರು ನಮ್ಮ‌ ಪಕ್ಷಕ್ಕೆ ಬರುತ್ತಾರೋ, ಇಲ್ಲವೋ ಎನ್ನುವುದು ನನಗಂತೂ ಗೊತ್ತಿಲ್ಲ. ಪಕ್ಷಕ್ಕೆ ಅವರನ್ನು ವಾಪಾಸು ಸೇರಿಸಿಕೊಳ್ಳುವುದಿಲ್ಲ ಎಂದು ಈ ಹಿಂದೆ ಸದನದಲ್ಲೇ ಹೇಳಿದ್ದೇನೆ. ಅದಕ್ಕೆ ನಾನು ಈಗಲೂ ಬದ್ಧನಿದ್ದೇನೆ ಎಂದು ಪುನರ್‌ ಉಚ್ಚರಿಸಿದ್ದಾರೆ.

Leave a Reply

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ಕ್ರೀಡಾಪಟುಗಳಿಗೆ ಕೊಡುವ ಏಕಲವ್ಯ ಪ್ರಶಸ್ತಿ ಮುಂದುವರಿಸಲಿ: ಶೋಭಾ ನಾರಾಯಣ್ ಬಿಡದಿಯಿಂದ ಹೆದ್ದಾರಿಯಲ್ಲೇ ಮುಂದೆ ಬಂದರೆ ನಿಮಗೆ ಟೋಲ್‌ ಬರೆ ಗ್ಯಾರಂಟಿ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಹೊತ್ತಿ ಉರಿದ ಸ್ಕಾರ್ಪಿಯೋ ಕಾರು KSRTC ಕನಕಪುರ ಬಸ್‌ ನಿಲ್ದಾಣದಲ್ಲಿ ವಿಕಲ ಚೇತನರಿಂದ ₹700 ವಸೂಲಿ, ಕಂಡಕ್ಟರ್ಸ್‌ ಕೊಡಬೇಕು ₹10 : ಟಿಸಿಗೆ ಡಿಎಂ ಸಾಥ್... ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ BMTC: ಅಪಘಾತದಲ್ಲಿ ಮೃತಪಟ್ಟ ನೌಕರರ ಕುಟುಂಬಕ್ಕೆ ₹1 ಕೋಟಿ ಪರಿಹಾರ ಚೆಕ್‌ ವಿತರಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸಾರಿಗೆ ನಿವೃತ್ತ ನೌಕರರಿಗೆ ಮತ್ತೊಮ್ಮೆ ಮೊಗದೊಮ್ಮೆ ನಿರಾಸೆ: ಭಾರಿ ಆಕ್ರೋಶಗೊಂಡ EPS ನಿವೃತ್ತರು ಕಾರು ಡೋರ್‌ಗೆ ಬೈಕ್‌ ಗುದ್ದಿ ಕೆಳಗೆ ಬಿದ್ದ ಮಹಿಳೆ ಮೇಲೆ ಹರಿದ ಬಿಎಂಟಿಸಿ ಬಸ್‌ ನಾಟಿ ಕೋಳಿ ಸಾರಿನ ಜತೆ ರಾಗಿಮುದ್ದೆ ನುಂಗಿದವರಿಗೆ ಗೊತ್ತು ಅದರ ಗಮ್ಮತ್ತು