NEWSನಮ್ಮಜಿಲ್ಲೆಬೆಂಗಳೂರು

ರಾಜಕಾಲುವೆ ಒತ್ತುವರಿ ತೆರವುಗೊಳಿಸಿ, ನೆರೆ ಭೀತಿಯಿಂದ ಬೆಂಗಳೂರಿಗರ ರಕ್ಷಿಸಿ: ಡಿಸಿಎಂಗೆ ಎಎಪಿ ರಾಜ್ಯಾಧ್ಯಕ್ಷ ಆಗ್ರಹ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಈ ತಿಂಗಳಿನಲ್ಲಿ ಬೀಳುತ್ತಿರುವ ಸಣ್ಣ ಪ್ರಮಾಣದ ಮಳೆಗೇ ರಸ್ತೆಗಳಲ್ಲಿ ನೀರು ನಿಲ್ಲುತ್ತಿರುವುದು, ರಾಜ ಕಾಲುವೆಗಳು ಉಕ್ಕಿ ಹರಿಯುತ್ತಿರುವುದನ್ನು ನೋಡಿದರೆ ಪುನಃ ಎರಡು ವರ್ಷಗಳ ಹಿಂದಿನ ಭಾರಿ ನೆರೆ ಪರಿಸ್ಥಿತಿಯೇ ಬೆಂಗಳೂರಿಗೆ ಬಂದೊದಗಲಿದೆ ಎಂಬ ಆತಂಕ ಸೃಷ್ಟಿಯಾಗಿದೆ. ಕಾರಣ ಇನ್ನೂ ತೆರವಾಗದ ರಾಜಕಾಲುವೆ ಒತ್ತುವರಿ. ಹೀಗಾಗಿ ಕೂಡಲೇ ರಾಜಕಾಲುವೆ ಒತ್ತುವರಿ ತೆರವುಗೊಳಿಸಬೇಕು ಎಂದು ಆಮ್‌ ಆದ್ಮಿ ಪಾರ್ಟಿ ರಾಜ್ಯಾಧ್ಯಕ್ಷ ಡಾ. ಮುಖ್ಯಮಂತ್ರಿ ಚಂದ್ರು ಆಗ್ರಹಿಸಿದ್ದಾರೆ.

ಬಿಸಿಲ ಬೇಗೆಯಿಂದ ಕಂಗೆಟ್ಟಿದ್ದ ಬೆಂಗಳೂರಿಗರು ಮೇನಲ್ಲಿ ಸುರಿಯುತ್ತಿರುವ ಅಲ್ಪಸ್ವಲ್ಪ ಮಳೆಯಿಂದ ತುಸು ನಿರಾಳರಾಗಿದ್ದಾರೆ. ಆದರೆ, ರಾಜಕಾಲುವೆಗಳ ಒತ್ತುವರಿಯಿಂದ ಆತಂಕ ಎದುರಾಗಿದೆ. ಆದ್ದರಿಂದ ಶೀಘ್ರವಾಗಿ ಒತ್ತುವರಿ ತೆರವುಗೊಳಿಸಬೇಕು, ನೆರೆ ಭೀತಿಯಿಂದ ಬೆಂಗಳೂರಿಗರನ್ನು ರಕ್ಷಿಸಬೇಕು ಎಂದು ಉಪಮುಖ್ಯಮಂತ್ರಿ ಹಾಗೂ ಬೆಂಗಳೂರು ನಗರಾಭಿವೃದ್ಧಿ ಸಚಿವ ಡಿ.ಕೆ. ಶಿವಕುಮಾರ್‌ ಅವರಿಗೆ ಒತ್ತಾಯಿಸಿರುವ ಮುಖ್ಯಮಂತ್ರಿ ಚಂದ್ರು ಪತ್ರ ಬರೆಯುವ ಮೂಲಕ ತಾಕೀತು ಮಾಡಿದ್ದಾರೆ.

ಎರಡು ವರ್ಷಗಳ ಹಿಂದೆ ಐಟಿ ಹಬ್‌ ಮಹದೇವಪುರ ಕ್ಷೇತ್ರದ ಹೊರ ವರ್ತುಲ ರಸ್ತೆಯ ಎಕೋಸ್ಪೇಸ್‌, ರೈನ್‌ಬೋ ಡೈವ್‌ ಬಡಾವಣೆ, ಟಿ.ಝಡ್‌ ಅಪಾರ್ಟ್‌ಮೆಂಟ್‌ ಸೇರಿದಂತೆ ವಿವಿಧೆಡೆ ಭಾರಿ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿತ್ತು. ಜೆಸಿಬಿಗಳ ಮೂಲಕ ರಕ್ಷಣಾ ಕಾರ್ಯ ನಡೆಸಲಾಗಿತ್ತು. ಶಾಶ್ವತ ಪರಿಹಾರದ ನಿಟ್ಟಿನಲ್ಲಿ ಒತ್ತುವರಿ ತೆರವುಗೊಳಿಸಬೇಕು ಎಂದು ಎಎಪಿ ಸೇರಿದಂತೆ ಅನೇಕ ಸಂಘಟನೆಗಳು ತೀವ್ರ ಹೋರಾಟ ನಡೆಸಿದ್ದವು.

ಅಲ್ಲದೆ ರಾಜಕಾಲುವೆ ಒತ್ತುವರಿ ತೆರವಿಗೆ ವಿಳಂಬ ನೀತಿ ಅನುಸರಿಸಿದ ಕಾರಣಕ್ಕೆ ತಹಸೀಲ್ದಾರ್‌ ಒಬ್ಬರನ್ನು ಅಮಾನತುಗೊಳಿಸುವ ಮೂಲಕ ಅಂದಿನ ಬಿಜೆಪಿ ಸರ್ಕಾರ ಹೋರಾಟವನ್ನು ತಣಿಸುವ ಪ್ರಯತ್ನವನ್ನು ನಡೆಸಿತ್ತು. ಅಂದು ವಿಪಕ್ಷ ಸ್ಥಾನದಲ್ಲಿದ್ದ ನೀವು (ಕಾಂಗ್ರೆಸ್‌) ಒತ್ತುವರಿ ತೆರವುಗೊಳಿಸದೆ ಬೆಂಗಳೂರಿಗರ ಜೀವದ ಜತೆ ಚೆಲ್ಲಾಟವಾಡುತ್ತಿರುವ 40% ಕಮಿಷನ್‌ ಸರ್ಕಾರ ಎಂದು ಬಿಜೆಪಿ ಸರ್ಕಾರದ ವಿರುದ್ಧ ಆಪಾದಿಸಿದ್ದೀರಿ.

ಆದರೆ ನೀವು ಅಧಿಕಾರಕ್ಕೆ ಬಂದು ಒಂದು ವರ್ಷ ಕಳೆದರೂ ಒತ್ತುವರಿ ತೆರವು ನಿಟ್ಟಿನಲ್ಲಿ ನಿಮ್ಮ ಕಾಂಗ್ರೆಸ್‌ ಸರ್ಕಾರ ಯಾವುದೇ ಕ್ರಮ ಕೈಗೊಂಡಿಲ್ಲ ಏಕೆ? ಒತ್ತುವರಿ ತೆರವು ಎಂಬುದು ಬಡವರ ಮನೆಗಷ್ಟೇ ಸೀಮಿತವೇ? ರಾಜಕಾರಣಿಗಳು, ಹಣ ಹೊಂದಿರುವವರು, ಬಿಲ್ಡರ್‌ ಸಂಸ್ಥೆಗಳ ಕಟ್ಟಡಗಳನ್ನು ಏಕೆ ತೆರವುಗೊಳಿಸಿಲ್ಲ ಎಂದು ಮುಖ್ಯಮಂತ್ರಿ ಚಂದ್ರು ಪತ್ರದಲ್ಲಿ ಪ್ರಶ್ನಿಸಿದ್ದಾರೆ.

ಬೆಂಗಳೂರಿನಲ್ಲಿ ಮಳೆಯಿಂದ ಪ್ರವಾಹ ಉಂಟಾಗುವುದನ್ನು ತಡೆಗಟ್ಟುವ ನಿಟ್ಟಿನಲ್ಲಿ ಕೆಎಸ್‌ಎನ್‌ಡಿಎಂಸಿ ವತಿಯಿಂದ ರಾಜಕಾಲುವೆಗಳಿಗೆ 124 ಸೆನ್ಸಾರ್‌ಗಳನ್ನು ಅಳವಡಿಸಲಾಗಿದೆ. ಬಿಬಿಎಂಪಿ ರಾಜಕಾಲುವೆಗಳಿಗೆ 24×7 ಕಾರ್ಯನಿರ್ವಹಿಸುವ 455ಕ್ಕೂ ಅಧಿಕ ಕ್ಯಾಮೆರಾಗಳನ್ನು ಅಳವಡಿಸುತ್ತಿದೆ.

ಆದರೆ, ಇವೆಲ್ಲವೂ ತಾತ್ಕಾಲಿಕ ಪರಿಹಾರ ಉಪಾಯಗಳಾಗಿವೆ. ಶಾಶ್ವತ ಪರಿಹಾರದ ಭಾಗವಾಗಿ ಯಾವ ಪ್ರಭಾವಿ ವ್ಯಕ್ತಿಗಳಿಗೂ ಸೊಪ್ಪು ಹಾಕದೆ ರಾಜಕಾಲುವೆ ತೆರವುಗೊಳಿಸಬೇಕು. ಈ ನಿಟ್ಟಿನಲ್ಲಿ ಸೂಕ್ತ ಕ್ರಮ ಕೈಗೊಳ್ಳದಿದ್ದರೆ ಎಎಪಿ ತೀವ್ರ ಹೋರಾಟವನ್ನು ಸಂಘಟಿಸಲಿದೆ ಎಂದು ಎಚ್ಚರಿಕೆ ನೀಡಿದ್ದಾರೆ.

Leave a Reply

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ಕ್ರೀಡಾಪಟುಗಳಿಗೆ ಕೊಡುವ ಏಕಲವ್ಯ ಪ್ರಶಸ್ತಿ ಮುಂದುವರಿಸಲಿ: ಶೋಭಾ ನಾರಾಯಣ್ ಬಿಡದಿಯಿಂದ ಹೆದ್ದಾರಿಯಲ್ಲೇ ಮುಂದೆ ಬಂದರೆ ನಿಮಗೆ ಟೋಲ್‌ ಬರೆ ಗ್ಯಾರಂಟಿ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಹೊತ್ತಿ ಉರಿದ ಸ್ಕಾರ್ಪಿಯೋ ಕಾರು KSRTC ಕನಕಪುರ ಬಸ್‌ ನಿಲ್ದಾಣದಲ್ಲಿ ವಿಕಲ ಚೇತನರಿಂದ ₹700 ವಸೂಲಿ, ಕಂಡಕ್ಟರ್ಸ್‌ ಕೊಡಬೇಕು ₹10 : ಟಿಸಿಗೆ ಡಿಎಂ ಸಾಥ್... ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ BMTC: ಅಪಘಾತದಲ್ಲಿ ಮೃತಪಟ್ಟ ನೌಕರರ ಕುಟುಂಬಕ್ಕೆ ₹1 ಕೋಟಿ ಪರಿಹಾರ ಚೆಕ್‌ ವಿತರಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸಾರಿಗೆ ನಿವೃತ್ತ ನೌಕರರಿಗೆ ಮತ್ತೊಮ್ಮೆ ಮೊಗದೊಮ್ಮೆ ನಿರಾಸೆ: ಭಾರಿ ಆಕ್ರೋಶಗೊಂಡ EPS ನಿವೃತ್ತರು ಕಾರು ಡೋರ್‌ಗೆ ಬೈಕ್‌ ಗುದ್ದಿ ಕೆಳಗೆ ಬಿದ್ದ ಮಹಿಳೆ ಮೇಲೆ ಹರಿದ ಬಿಎಂಟಿಸಿ ಬಸ್‌ ನಾಟಿ ಕೋಳಿ ಸಾರಿನ ಜತೆ ರಾಗಿಮುದ್ದೆ ನುಂಗಿದವರಿಗೆ ಗೊತ್ತು ಅದರ ಗಮ್ಮತ್ತು