NEWSದೇಶ-ವಿದೇಶನಮ್ಮರಾಜ್ಯರಾಜಕೀಯ

ರಾಜ್ಯಗಳ ನೋವಿನ ಮೇಲೆ ಕೇಂದ್ರದ ಜಿಎಸ್‌ಟಿ ಸಂಭ್ರಮ: ಮಾಜಿ ಸಿಎಂ ಎಚ್‌ಡಿಕೆ ಆಕ್ರೋಶ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಜಿಎಸ್‌ಟಿಗೆ 4 ವರ್ಷವಾಗಿದ್ದಕ್ಕೆ ಕೇಂದ್ರ ಸರ್ಕಾರ ಸಂಭ್ರಮಿಸುತ್ತಿದೆ. ತೆರಿಗೆ ಮೇಲಿದ್ದ ರಾಜ್ಯಗಳ ಹಕ್ಕು, ಸ್ವಾತಂತ್ರ್ಯ ಕಸಿದು, ಹೊಟ್ಟೆ ತುಂಬಿಸಿಕೊಂಡಿದ್ದಕ್ಕೆ ಕೇಂದ್ರ ಸಂಭ್ರಮಿಸಲೇಬೇಕು. ಜಿಎಸ್‌ಟಿಗೆ ರಾಜ್ಯಗಳನ್ನು ಸೇರಿಸಿಕೊಳ್ಳುವಾಗ ಪರಿಹಾರ ನೀಡುವುದಾಗಿ ಹೇಳಿದ್ದ ಕೇಂದ್ರ, ರಾಜ್ಯಗಳನ್ನು ವಂಚಿಸಿದೆ. ಇದಕ್ಕಾಗಿ ರಾಜ್ಯಗಳು ಸಂಭ್ರಮಿಸಬೇಕೆ ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಕೇಂದ್ರ ಸರ್ಕಾರ ವಿರುದ್ಧ ಕಿಡಿಕಾರಿದ್ದಾರೆ.

ನಗರದಲ್ಲಿ ಇಂದು  ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯಕ್ಕೆ 9 ಸಾವಿರ ಕೋಟಿ ರೂ.ಗಳಷ್ಟು ಜಿಎಸ್‌ಟಿ ಪರಿಹಾರ ಬರಬೇಕು. ಈ ಸಂಭ್ರಮದ ವೇಳೆಯಲ್ಲೇ ಪರಿಹಾರ ಬಿಡುಗಡೆ ಆಗಿದ್ದರೆ ಕರ್ನಾಟಕವೂ ಸಂಭ್ರಮಿಸುತ್ತಿತ್ತು. ಕೋವಿಡ್‌ ಕಾಲದಲ್ಲಿ ಆದಾಯವಿಲ್ಲದೇ ನಲುಗಿರುವ ರಾಜ್ಯಕ್ಕೆ ಪರಿಹಾರದ ಸಿಕ್ಕಿದ್ದಿದ್ದರೆ ಅನುಕೂಲವಾಗುತ್ತಿತ್ತು. ಆದರೆ, ಪರಿಹಾರ ನೀಡದ ಕೇಂದ್ರ ರಾಜ್ಯಗಳ ನೋವಿನ ಮೇಲೆ ಸಂಭ್ರಮಿಸುತ್ತಿದೆ ಎಂದು ಕಿಡಿಕಾರಿದರು.

ರಾಜ್ಯಗಳ ಅದಾಯವನ್ನು ಕೇಂದ್ರಕ್ಕೆ ತಿರುಗಿಸಿಕೊಳ್ಳುವುದು, ಅನುದಾನಕ್ಕಾಗಿ ರಾಜ್ಯಗಳು ಕೇಂದ್ರದ ಮುಂದೆ ಗುಲಾಮರಂತೆ ನಿಲ್ಲುವಂತೆ ಮಾಡುವುದು ಜಿಎಸ್‌ಟಿಯ ಉದ್ದೇಶ. ಇಂಥ ಗುಲಾಮಗಿರಿಯನ್ನು ಕಾಂಗ್ರೆಸ್‌ ರೂಪಿಸಿತು, ಬಿಜೆಪಿ ಜಾರಿಗೆ ತಂದಿತು. ಈಗ ರಾಜ್ಯಗಳು ಪರಿಹಾರಕ್ಕಾಗಿ ಬೇಡುವಂತಾಗಿದೆ. ಪೆಟ್ರೋಲಿಯಂಅನ್ನು ಜಿಎಸ್‌ಟಿಗೆ ಸೇರಿಸದಂತೆ ಹೋರಾಡುವಂತಾಗಿದೆ ಎಂದು ಆಕ್ರೋಶ ಹೊರಹಾಕಿದರು.

ಜಿಎಸ್‌ಟಿ ರಾಜ್ಯಗಳ ಅನುದಾನ ಕಸಿಯಿತು. ಆದಕ್ಕೆ ಪರಿಹಾರವಾಗಿ ಸಾಮಾನ್ಯರ ಬದುಕನ್ನೇನಾದರೂ ಹಸನಾಗಿಸಿತೇ? ನವ ಉದ್ಯಮಿಗಳನ್ನು ಪ್ರೋತ್ಸಾಹಿಸಿದೆಯೇ? ಅದ್ಯಾವುದೂ ಆಗಿಲ್ಲ. ವ್ಯಾಪಾರಿಗಳ ಪರಿಸ್ಥಿತಿ ಹಿಂದಿಗಿಂತಲೂ ಈಗ ಏನಾದರೂ ಉತ್ತಮವಾಗಿದೆಯೇ? ಆದರೆ, ಪರಿಸ್ಥಿತಿ ಮಾತ್ರ ಭಿನ್ನವಾಗಿದೆ. ಇಂಥ ಜಿಎಸ್‌ಟಿ ವ್ಯವಸ್ಥೆಯಲ್ಲಿ ಸಂಭ್ರಮಿಸುವುದೇನಿದೆ ಎಂದು ಪ್ರಶನಿಸಿದರು.

ಒಕ್ಕೂಟದಲ್ಲಿ ರಾಜ್ಯಗಳ ಆರ್ಥಿಕ ಸ್ವಾಯತ್ತತೆಯನ್ನು ಹರಣ ಮಾಡಿದ್ದಕ್ಕೆ ದ್ಯೋತಕವಾಗಿ ಜಿಎಸ್‌ಟಿ ವ್ಯವಸ್ಥೆ ದೈತ್ಯವಾಗಿ ನಿಂತಿದೆ. ರಾಜ್ಯಗಳನ್ನು ಶೋಷಿಸಿ ಕೇಂದ್ರವನ್ನು ಪೋಷಿಸಿದ ಅರ್ಥವ್ಯವಸ್ಥೆಯಾಗಿ ಜಿಎಸ್‌ಟಿ ಕಾಣಿಸುತ್ತಿದೆ. ಇಂಥ ಜಿಎಸ್‌ಟಿಯಿಂದ ರಾಜ್ಯಗಳು ಸಂಭ್ರಮಿಸುವುದು ಏನೂ ಇಲ್ಲ. ಇದು ಕಾಂಗ್ರೆಸ್‌–ಬಿಜೆಪಿಯ ಯಜಮಾನಿಕೆ ಸಂಕೇತ ಎಂದು ಅಸಮಾಧಾನ ವ್ಯಕ್ತಪಡಿಸಿದರು.

Leave a Reply

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ಕ್ರೀಡಾಪಟುಗಳಿಗೆ ಕೊಡುವ ಏಕಲವ್ಯ ಪ್ರಶಸ್ತಿ ಮುಂದುವರಿಸಲಿ: ಶೋಭಾ ನಾರಾಯಣ್ ಬಿಡದಿಯಿಂದ ಹೆದ್ದಾರಿಯಲ್ಲೇ ಮುಂದೆ ಬಂದರೆ ನಿಮಗೆ ಟೋಲ್‌ ಬರೆ ಗ್ಯಾರಂಟಿ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಹೊತ್ತಿ ಉರಿದ ಸ್ಕಾರ್ಪಿಯೋ ಕಾರು KSRTC ಕನಕಪುರ ಬಸ್‌ ನಿಲ್ದಾಣದಲ್ಲಿ ವಿಕಲ ಚೇತನರಿಂದ ₹700 ವಸೂಲಿ, ಕಂಡಕ್ಟರ್ಸ್‌ ಕೊಡಬೇಕು ₹10 : ಟಿಸಿಗೆ ಡಿಎಂ ಸಾಥ್... ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ BMTC: ಅಪಘಾತದಲ್ಲಿ ಮೃತಪಟ್ಟ ನೌಕರರ ಕುಟುಂಬಕ್ಕೆ ₹1 ಕೋಟಿ ಪರಿಹಾರ ಚೆಕ್‌ ವಿತರಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸಾರಿಗೆ ನಿವೃತ್ತ ನೌಕರರಿಗೆ ಮತ್ತೊಮ್ಮೆ ಮೊಗದೊಮ್ಮೆ ನಿರಾಸೆ: ಭಾರಿ ಆಕ್ರೋಶಗೊಂಡ EPS ನಿವೃತ್ತರು ಕಾರು ಡೋರ್‌ಗೆ ಬೈಕ್‌ ಗುದ್ದಿ ಕೆಳಗೆ ಬಿದ್ದ ಮಹಿಳೆ ಮೇಲೆ ಹರಿದ ಬಿಎಂಟಿಸಿ ಬಸ್‌ ನಾಟಿ ಕೋಳಿ ಸಾರಿನ ಜತೆ ರಾಗಿಮುದ್ದೆ ನುಂಗಿದವರಿಗೆ ಗೊತ್ತು ಅದರ ಗಮ್ಮತ್ತು