NEWSನಮ್ಮರಾಜ್ಯರಾಜಕೀಯ

ರಾಜ್ಯದಲ್ಲಿ ಕಾಂಗ್ರೆಸ್ ಸ್ವಲ್ಪ ಎದ್ದು ಕುಳಿತಿದೆ: ನಾವು ಎಚ್ಚೆತ್ತುಕೊಳ್ಳಬೇಕು ಎಂದ ಮಾಜಿ ಸಿಎಂ ಬಿಎಸ್‌ವೈ

ವಿಜಯಪಥ ಸಮಗ್ರ ಸುದ್ದಿ

ದಾವಣಗೆರೆ: ರಾಜ್ಯದಲ್ಲಿ ಕಾಂಗ್ರೆಸ್ ಸ್ವಲ್ಪ ಎದ್ದು ಕುಳಿತಿರುವುದರಿಂದ ನಾವು ಎಚ್ಚೆತ್ತುಕೊಳ್ಳಬೇಕಾಗಿದೆ. ಮುಂದೆ ನಿರಂತರ ಚುನಾವಣೆಗಳು ಬರುತ್ತಿದ್ದು, ಪ್ರತಿಪಕ್ಷಗಳನ್ನು ಎಂದಿಗೂ ಹಗುರವಾಗಿ ತೆಗೆದುಕೊಳ್ಳಬೇಡಿ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತಮ್ಮ ಪಕ್ಷದ ನಾಯಕರಿಗೆ ಕಿವಿ ಮಾತು ಹೇಳಿದ್ದಾರೆ.

ದಾವಣಗೆರೆಯ ಬಿಜೆಪಿ ಕಾರ್ಯಕಾರಿಣಿ ಸಭೆಯಲ್ಲಿ ಮಾತನಾಡಿದ ಅವರು, ವಿಪಕ್ಷಗಳು ಅವರದೇ ತಂತ್ರಗಾರಿಕೆ ಮಾಡ್ತಿದ್ದಾರೆ. ಅನೇಕ ಬಿಜೆಪಿ ಮುಖಂಡರನ್ನು ಕಾಂಗ್ರೆಸ್ ನಾಯಕರು ಸಂಪರ್ಕ ಮಾಡುತ್ತಿದ್ದಾರೆ. ಹೀಗಾಗಿ, 140 ಸ್ಥಾನಗಳನ್ನು ಗೆಲ್ಲುವ ಪ್ರಾಮಾಣಿಕ ಪ್ರಯತ್ನವನ್ನು ನಾವೆಲ್ಲರೂ ಮಾಡಬೇಕು ಎಂದು ಸಲಹೆ ನೀಡಿದರು.

ಪಕ್ಷ ಸಂಘಟನೆಗೆ ಯಡಿಯೂರಪ್ಪ ಪ್ರವಾಸಕ್ಕೆ ಒಬ್ಬನೇ ಹೋಗುವ ಪರಿಸ್ಥಿತಿ ಇನ್ನೂ ಬಂದಿಲ್ಲ. ಯಡಿಯೂರಪ್ಪ ಪ್ರವಾಸ ಹೊರಟರೇ ಒಬ್ಬನೇ ಹೋಗ್ತಾನೇನು? ನಾನು ಪ್ರವಾಸ ಹೊರಟರೆ ಶಾಸಕರು, ಸಂಸದರು, ಕಾರ್ಯಕರ್ತರು ಎಲ್ಲರೂ ಬರ್ತಾರೆ. ನಾನು ಒಬ್ಬನೇ ಪ್ರವಾಸ ಹೊರಡುವ ಸ್ಥಿತಿ ಬಂದಿಲ್ಲ ಎಂದರು.

ರಾಜ್ಯದಲ್ಲಿ ಕಾಂಗ್ರೆಸ್ ಸ್ವಲ್ಪ ಎದ್ದು ಕುಳಿತಿದೆ. ಹೀಗಾಗಿ ನಮ್ಮ ಸಂಘಟನೆ, ಶ್ರಮ, ಪ್ರಾಮಾಣಿಕ ಪ್ರಯತ್ನದ ಅಗತ್ಯವಿದೆ. ನಮಗೆ ಕೇಂದ್ರದ ಲೋಕಸಭಾ ಚುನಾವಣೆ ಕಷ್ಟವಲ್ಲ. ಆದರೆ ರಾಜ್ಯದಲ್ಲಿ ಕಾಂಗ್ರೆಸ್ ಸ್ವಲ್ಪ ಎದ್ದು ಕುಳಿತಿರುವುದರಿಂದ ನಾವು ಎಚ್ಚೆತ್ತುಕೊಳ್ಳಬೇಕಾಗಿದೆ ಎಂದು ಬಿಜೆಪಿ ಮುಖಂಡರನ್ನು ಮಾಜಿ ಸಿಎಂ ಎಚ್ಚರಿಸಿದರು.

ದಾವಣಗೆರೆಯಲ್ಲಿ ಯಾವತ್ತೇ ಕಾರ್ಯಕ್ರಮ ಮಾಡಿದರೂ 40ರಿಂದ 50 ಸಾವಿರ ಜನರು ಸೇರುತ್ತಿದ್ದರು. ವಿಧಾನಸಭೆಯಲ್ಲಿ ಒಬ್ಬರೇ ಇದ್ದಾಗಲೂ ಹಿಂತಿರುಗಿ ನೋಡಲಿಲ್ಲ. ಜನರ ಸಂಕಷ್ಟಕ್ಕೆ ಸ್ಪಂದಿಸಿದ ಪರಿಣಾಮವಾಗಿ ಇಂದು ನಾವು ಅಧಿಕಾರದಲ್ಲಿ ಇದ್ದೇವೆ ಎಂದರು.

ಇನ್ನು ವಿಶ್ವವೇ ಅಚ್ಚರಿಯಿಂದ ನೋಡುವ ನರೇಂದ್ರ ಮೋದಿ ನಾಯಕತ್ವ ನಮಗೆ ಸಿಕ್ಕಿದ್ದು ನಮ್ಮ ಸೌಭಾಗ್ಯ. ನರೇಂದ್ರ ಮೋದಿ ಯುಗ ಉತ್ಸವ ಕಾರ್ಯಕ್ರಮವನ್ನು ರಾಮದಾಸ್ ಮೈಸೂರಿನಲ್ಲಿ ಅರ್ಥಪೂರ್ಣವಾಗಿ ನಡೆಸಿದ್ದರು. ಇದೇ ತರದ ಕಾರ್ಯಕ್ರಮಗಳನ್ನು ರಾಜ್ಯದ ಉದ್ದಗಲಕ್ಕೂ ನಡೆಸಬೇಕು. ಒಂದು ತಿಂಗಳ ಕಾಲ ನಿರಂತರ ಪ್ರವಾಸ ಮಾಡಿ ಸಂಘಟನೆ ಬಲ ಪಡಿಸಬೇಕು ಎಂದು ಹೇಳಿದರು.

ಎಸ್​ಸಿ, ಎಸ್​ಟಿ, ಹಿಂದುಳಿದ ವರ್ಗದ ಮುಖಂಡರನ್ನು ಬಲಪಡಿಸಬೇಕು. ಪ್ರತಿ ಬೂತ್​ಗಳಲ್ಲಿ 20ರಿಂದ 25 ಮಹಿಳೆಯರ ತಂಡ, ಯುವಮೋರ್ಚಾ ತಂಡ ನಮ್ಮ ಜತೆ ಗಟ್ಟಿಯಾಗಿ ನಿಲ್ಲಬೇಕು. ಈಗಿನಿಂದಲೇ ಸಂಘಟನೆ ಮಾಡಲು ಕಾರ್ಯತತ್ಪರರಾಗಬೇಕು ಎಂದರು.

ರಾಜ್ಯದ ಚುನಾವಣೆ ಸುಲಭವಿಲ್ಲ. ಹಾನಗಲ್, ಸಿಂಧಗಿ ಉಪ ಚುನಾವಣೆ ಸುಲಭವಿಲ್ಲ. ಮಂದಿರ ಕೆಡವಿದ ಬಗ್ಗೆ ಚರ್ಚೆ ಆಗ್ತಿದೆ. ಯಾವುದೇ ಕಾರಣಕ್ಕೆ ಮಂದಿರ ಒಡೆಯಲು ಅವಕಾಶ ಕೊಡುವುದಿಲ್ಲ. ಈಗ ಇರುವ ಆದೇಶ ಸರಿ ಇಲ್ಲ ಅಂತ ಸುಪ್ರಿಂ ಕೋರ್ಟ್ ಗೆ ಮೊರೆ ಹೋಗೋದಕ್ಕೂ ತೀರ್ಮಾನ ಮಾಡಿದ್ದೇವೆ ಎಂದು ತಿಳಿಸಿದರು.

ಇನ್ನು ಕಾರ್ಯಕರ್ತರು ಯಾರೂ ಮನಸ್ಸಿಗೆ ನೋವು ಮಾಡಿಕೊಳ್ಳುವುದು ಬೇಡ. 25 ಎಂಎಲ್​ಸಿ ಚುನಾವಣೆಯಲ್ಲೂ ಹೆಚ್ಚಿನ ಸ್ಥಾನ ಗೆಲ್ಲಬೇಕಿದೆ. ಮುಂದಿನ ವರ್ಷ ಚುನಾವಣೆ ವರ್ಷವಾಗಿರುವುದರಿಂದ ಹೆಚ್ಚು ಎಚ್ಚರಿಕೆಯಿಂದ ಇರಬೇಕಾಗಿದೆ ಎಂದು ಸಲಹೆ ನೀಡಿದರು.

Leave a Reply

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ಕ್ರೀಡಾಪಟುಗಳಿಗೆ ಕೊಡುವ ಏಕಲವ್ಯ ಪ್ರಶಸ್ತಿ ಮುಂದುವರಿಸಲಿ: ಶೋಭಾ ನಾರಾಯಣ್ ಬಿಡದಿಯಿಂದ ಹೆದ್ದಾರಿಯಲ್ಲೇ ಮುಂದೆ ಬಂದರೆ ನಿಮಗೆ ಟೋಲ್‌ ಬರೆ ಗ್ಯಾರಂಟಿ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಹೊತ್ತಿ ಉರಿದ ಸ್ಕಾರ್ಪಿಯೋ ಕಾರು KSRTC ಕನಕಪುರ ಬಸ್‌ ನಿಲ್ದಾಣದಲ್ಲಿ ವಿಕಲ ಚೇತನರಿಂದ ₹700 ವಸೂಲಿ, ಕಂಡಕ್ಟರ್ಸ್‌ ಕೊಡಬೇಕು ₹10 : ಟಿಸಿಗೆ ಡಿಎಂ ಸಾಥ್... ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ BMTC: ಅಪಘಾತದಲ್ಲಿ ಮೃತಪಟ್ಟ ನೌಕರರ ಕುಟುಂಬಕ್ಕೆ ₹1 ಕೋಟಿ ಪರಿಹಾರ ಚೆಕ್‌ ವಿತರಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸಾರಿಗೆ ನಿವೃತ್ತ ನೌಕರರಿಗೆ ಮತ್ತೊಮ್ಮೆ ಮೊಗದೊಮ್ಮೆ ನಿರಾಸೆ: ಭಾರಿ ಆಕ್ರೋಶಗೊಂಡ EPS ನಿವೃತ್ತರು ಕಾರು ಡೋರ್‌ಗೆ ಬೈಕ್‌ ಗುದ್ದಿ ಕೆಳಗೆ ಬಿದ್ದ ಮಹಿಳೆ ಮೇಲೆ ಹರಿದ ಬಿಎಂಟಿಸಿ ಬಸ್‌ ನಾಟಿ ಕೋಳಿ ಸಾರಿನ ಜತೆ ರಾಗಿಮುದ್ದೆ ನುಂಗಿದವರಿಗೆ ಗೊತ್ತು ಅದರ ಗಮ್ಮತ್ತು