CrimeNEWSನಮ್ಮಜಿಲ್ಲೆ

ರೈತನ ಮೇಲೆ ಕಾಡಂದಿ ದಾಳಿ- ಆಸ್ಪತ್ರೆಗೆ ದಾಖಲು: ಪರಿಹಾರಕ್ಕೆ ಆಗ್ರಹ

ವಿಜಯಪಥ ಸಮಗ್ರ ಸುದ್ದಿ

ಪಿರಿಯಾಪಟ್ಟಣ: ತಾಲೂಕಿನ ಐಚನಹಳ್ಳಿ  ಗ್ರಾಮದ ವೆಂಕಟೇಶ್ ನಾಯಕ್ ಎಂಬುವವರು ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ಸಂದರ್ಭದಲ್ಲಿ ಕಾಡುಹಂದಿಯೊಂದು ದಾಳಿ ಮಾಡಿದ ಪರಿಣಾಮ ವೆಂಕಟೇಶ್ ಮುಖ ಮತ್ತಿತರ ಭಾಗಗಳಿಗೆ ತೀವ್ರವಾದ ಗಾಯಗಳಾಗಿದ್ದು  ಸಾವು ಬದುಕಿನ ನಡುವೆ ಹೋರಾಟ ಮಾಡುತ್ತಿದ್ದಾರೆ.

ಗಾಯಗೊಂಡ ವೆಂಕಟೇಶ್ ಅವರನ್ನು  ದಾಳಿ ಮಾಡಿದ ತಕ್ಷಣವೇ ಹುಣಸೂರು ತಾಲೂಕಿನ ಹನಗೋಡು ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ನೀಡಿಲಾಗುತ್ತಿದೆ.

ಕಡುಬಡವರಾದ ಅವರ ಬಳಿ ಹೆಚ್ಚಿನ ಚಿಕಿತ್ಸೆಗೆ ಹಣಕಾಸಿನ ತೊಂದರೆ ಇರುವ ಕಾರಣ ಸರ್ಕಾರದಿಂದ ಮತ್ತು ಅರಣ್ಯ ಇಲಾಖೆಯವರು ಹಣಕಾಸು ಸೌಲಭ್ಯವನ್ನು ನೀಡಿ, ಅವರ ಕುಟುಂಬಕ್ಕೆ ಸಹಕಾರ ಮಾಡಿಕೊಡಬೇಕೆಂದು ಭಾರತೀಯ ಕಿಸಾನ್ ಸಂಘದ ತಾಲೂಕು ಅಧ್ಯಕ್ಷ ಚಂದ್ರೇಗೌಡ ಆಗ್ರಹಿಸಿದ್ದಾರೆ.

ಈ ಬಗ್ಗೆ ವಲಯ ಅರಣ್ಯ ಇಲಾಖೆ ಅಧಿಕಾರಿ ಮತ್ತು ತಹಸೀಲ್ದಾರರಿಗೆ ಮನವಿ ಪತ್ರ ನೀಡಿದ್ದು ಕೂಡಲೇ ದಾಳಿಗೊಳಗಾದ ವೆಂಕಟೇಶ್ ಅವರಿಗೆ ಸಹಾಯ ಮಾಡಬೇಕೆಂದು ಮನವಿ ಮಾಡಿದ್ದಾರೆ.

Leave a Reply

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ಕ್ರೀಡಾಪಟುಗಳಿಗೆ ಕೊಡುವ ಏಕಲವ್ಯ ಪ್ರಶಸ್ತಿ ಮುಂದುವರಿಸಲಿ: ಶೋಭಾ ನಾರಾಯಣ್ ಬಿಡದಿಯಿಂದ ಹೆದ್ದಾರಿಯಲ್ಲೇ ಮುಂದೆ ಬಂದರೆ ನಿಮಗೆ ಟೋಲ್‌ ಬರೆ ಗ್ಯಾರಂಟಿ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಹೊತ್ತಿ ಉರಿದ ಸ್ಕಾರ್ಪಿಯೋ ಕಾರು KSRTC ಕನಕಪುರ ಬಸ್‌ ನಿಲ್ದಾಣದಲ್ಲಿ ವಿಕಲ ಚೇತನರಿಂದ ₹700 ವಸೂಲಿ, ಕಂಡಕ್ಟರ್ಸ್‌ ಕೊಡಬೇಕು ₹10 : ಟಿಸಿಗೆ ಡಿಎಂ ಸಾಥ್... ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ BMTC: ಅಪಘಾತದಲ್ಲಿ ಮೃತಪಟ್ಟ ನೌಕರರ ಕುಟುಂಬಕ್ಕೆ ₹1 ಕೋಟಿ ಪರಿಹಾರ ಚೆಕ್‌ ವಿತರಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸಾರಿಗೆ ನಿವೃತ್ತ ನೌಕರರಿಗೆ ಮತ್ತೊಮ್ಮೆ ಮೊಗದೊಮ್ಮೆ ನಿರಾಸೆ: ಭಾರಿ ಆಕ್ರೋಶಗೊಂಡ EPS ನಿವೃತ್ತರು ಕಾರು ಡೋರ್‌ಗೆ ಬೈಕ್‌ ಗುದ್ದಿ ಕೆಳಗೆ ಬಿದ್ದ ಮಹಿಳೆ ಮೇಲೆ ಹರಿದ ಬಿಎಂಟಿಸಿ ಬಸ್‌ ನಾಟಿ ಕೋಳಿ ಸಾರಿನ ಜತೆ ರಾಗಿಮುದ್ದೆ ನುಂಗಿದವರಿಗೆ ಗೊತ್ತು ಅದರ ಗಮ್ಮತ್ತು