NEWSಕೃಷಿನಮ್ಮರಾಜ್ಯ

ರೈತರ ಜಮೀನುಗಳಿಗೆ ನುಗ್ಗುವ ಆನೆಗಳಿಗೆ ರೇಡಿಯೋ ಕಾಲರ್ ಅಳವಡಿಕೆ ಆರಂಭ

ವಿಜಯಪಥ ಸಮಗ್ರ ಸುದ್ದಿ

ಬೇಲೂರು: ತಾಲೂಕಿನಲ್ಲಿ ಕಾಡಾನೆಗಳ ಉಪಟಳ ಹೆಚ್ಚಾಗಿದ್ದು ಕಾಫಿ ತೋಟ ಸೇರಿದಂತೆ ರೈತರ ಜಮೀನುಗಳಿಗೆ ನುಗ್ಗುತ್ತಿರುವ ಕಾಡಾನೆಗಳಿಗೆ ರೇಡಿಯೋ ಕಾಲರ್ ಅಳವಡಿಕೆ ಕಾರ್ಯಕ್ಕೆ ಅರಣ್ಯ ಇಲಾಖೆ ಮುಂದಾಗಿದ್ದು, ಕಾರ್ಯಾಚರಣೆಗಾಗಿ ಒಂಬತ್ತು ಸಾಕಾನೆಗಳನ್ನು ತರಲಾಗಿದ್ದು, ಅವು ಕಾರ್ಯಾಚರಣೆ ಆರಂಭಿಸಿವೆ.

ಬೇಲೂರು ತಾಲೂಕು ವ್ಯಾಪ್ತಿಯಲ್ಲಿ ಕಾಡಾನೆಗಳ ಹಾವಳಿಯಿಂದ ಜನ ತತ್ತರಿಸಿದ್ದು, ಈ ಹಿನ್ನೆಲೆಯಲ್ಲಿ ಸಾಕಾನೆಗಳ ಮೂಲಕ ಕಾಡಾನೆಗಳಿಗೆ ರೇಡಿಯೋ ಕಾಲರ್ ಅಳವಡಿಸಲು ಮುಂದಾಗಿದ್ದು, ಈ ಕಾರ್ಯಾಚರಣೆಗೆ ತಾಲೂಕಿನ ಬಿಕ್ಕೋಡು ಸಮೀಪ ಶಾಸಕ ಎಚ್.ಕೆ.ಸುರೇಶ್ ಹಾಗೂ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ರವಿ ಶಂಕರ್ ನೇತೃತ್ವದಲ್ಲಿ ಸಾಕಾನೆಗಳಿಗೆ ಪೂಜೆ ಸಲ್ಲಿಸುವ ಮೂಲಕ ಚಾಲನೆ ನೀಡಿದರು.

ಹಿಂಡು ಹಿಂಡಾಗಿ ಕಾಡಿನಿಂದ ಬರುತ್ತಿರುವ ಕಾಡಾನೆಗಳು ಸಾಕಷ್ಟು ಬೆಳೆ ನಷ್ಟ ಮಾಡಿರುವುದಲ್ಲದೆ, ಪ್ರಾಣ ಹಾನಿಗೂ ಕಾರಣವಾಗಿವೆ. ಜತೆಗೆ ಕಾಡಾನೆಗಳು ಜಮೀನು ತೋಟಗಳಲ್ಲಿ ಬೀಡು ಬಿಡುತ್ತಿರುವುದರಿಂದ ಬೆಳೆಗಾರರು, ರೈತರು, ಕೂಲಿ ಕಾರ್ಮಿಕರು ಹಾಗೂ ಅರಣ್ಯ ಇಲಾಖೆ ಅಧಿಕಾರಿಗಳು ಆನೆಗಳ ಉಪಟಳದಿಂದ ರೋಸಿ ಹೋಗಿದ್ದಾರೆ.

ರೈತರು ಸೇರಿದಂತೆ ಸಾರ್ವಜನಿಕರು ಮೇಲಿಂದ ಮೇಲೆ ಪ್ರತಿಭಟನೆ ನಡೆಸಿ ಕಾಡಾನೆಗಳ ಉಪಟಳದಿಂದ ಮುಕ್ತಿ ನೀಡುವಂತೆ ಸರ್ಕಾರವನ್ನು ಒತ್ತಾಯಿಸುತ್ತಲೇ ಬರುತ್ತಿದ್ದಾರೆ. ಇದೀಗ ಎಚ್ಚೆತ್ತುಕೊಂಡಿರುವ ಸರ್ಕಾರ ತೋಟಗಳಲ್ಲಿ ಬೀಡು ಬಿಟ್ಟಿರುವ ಆನೆಗಳ ಪೈಕಿ 9 ಆನೆಗಳಿಗೆ ರೇಡಿಯೋ ಕಾಲರ್ ಅಳವಡಿಸುವ ಉದ್ದೇಶದಿಂದ ಸಾಕಾನೆಗಳನ್ನು ಕರೆ ತಂದು ಕಾರ್ಯಾಚರಣೆ ಆರಂಭಿಸಿದ್ದಾರೆ.

ಈ ಕುರಿತು ಮಾತನಾಡಿದ ಶಾಸಕ ಎಚ್.ಕೆ.ಸುರೆಶ್ ಅವರು, ಬೇಲೂರು ತಾಲೂಕಿನಲ್ಲಿ ಕಾಡಾನೆಗಳ ಹಾವಳಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇವೆ. ಇದರಿಂದಾಗಿ ರೈತರು ಬೆಳೆಗಳು ನಷ್ಟವಾಗುತ್ತಿದ್ದು, ಬೆಳೆದ ಬೆಳೆಯನ್ನು ತಿಂದು, ತುಳಿದು ಹಾನಿಮಾಡುತ್ತಿವೆ. ಜತೆಗೆ ಜನರ ಜೀವಕ್ಕೂ ಕಂಟಕವಾಗಿವೆ. ಹೀಗಾಗಿ ಕಾಡಾನೆಗಳಿಗೆ ರೇಡಿಯೋ ಕಾಲರ್ ಅಳವಡಿಸಲಾಗುತ್ತಿದೆ. ಇದರಿಂದ ಅವುಗಳ ಮಾಹಿತಿ ದೊರೆಯಲಿದೆ. ಆದರೆ ಇಷ್ಟಕ್ಕೆ ಸುಮ್ಮನಾಗದೆ ಮುಂದಿನ ದಿನಗಳಲ್ಲಿ ಯಾವುದೇ ಪ್ರಾಣ ಹಾನಿಯಾಗದಂತೆ ಎಚ್ಚರ ವಹಿಸಬೇಕಿದೆ ಎಂದರು.

ಅರಣ್ಯ ಇಲಾಖೆ ಕಾಡಾನೆಗಳನ್ನು ಶಾಶ್ವತವಾಗಿ ಸ್ಥಳಾಂತರ ಮಾಡುವ ಮೂಲಕ ತಾಲೂಕಿನ ಮಲೆನಾಡು ಭಾಗದ ಬೆಳೆಗಾರರು, ರೈತರು, ಕೂಲಿ ಕಾರ್ಮಿಕರು ನೆಮ್ಮದಿಯಿಂದ ಬದುಕಲು ಅನುವು ಮಾಡಿಕೊಡಲು ಅಧಿಕಾರಿಗಳು ಸೂಕ್ತ ಕ್ರಮಕ್ಕೆ ಮುಂದಾಗಬೇಕು ಎಂದು ಹೇಳಿದರು.

Leave a Reply

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ಕ್ರೀಡಾಪಟುಗಳಿಗೆ ಕೊಡುವ ಏಕಲವ್ಯ ಪ್ರಶಸ್ತಿ ಮುಂದುವರಿಸಲಿ: ಶೋಭಾ ನಾರಾಯಣ್ ಬಿಡದಿಯಿಂದ ಹೆದ್ದಾರಿಯಲ್ಲೇ ಮುಂದೆ ಬಂದರೆ ನಿಮಗೆ ಟೋಲ್‌ ಬರೆ ಗ್ಯಾರಂಟಿ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಹೊತ್ತಿ ಉರಿದ ಸ್ಕಾರ್ಪಿಯೋ ಕಾರು KSRTC ಕನಕಪುರ ಬಸ್‌ ನಿಲ್ದಾಣದಲ್ಲಿ ವಿಕಲ ಚೇತನರಿಂದ ₹700 ವಸೂಲಿ, ಕಂಡಕ್ಟರ್ಸ್‌ ಕೊಡಬೇಕು ₹10 : ಟಿಸಿಗೆ ಡಿಎಂ ಸಾಥ್... ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ BMTC: ಅಪಘಾತದಲ್ಲಿ ಮೃತಪಟ್ಟ ನೌಕರರ ಕುಟುಂಬಕ್ಕೆ ₹1 ಕೋಟಿ ಪರಿಹಾರ ಚೆಕ್‌ ವಿತರಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸಾರಿಗೆ ನಿವೃತ್ತ ನೌಕರರಿಗೆ ಮತ್ತೊಮ್ಮೆ ಮೊಗದೊಮ್ಮೆ ನಿರಾಸೆ: ಭಾರಿ ಆಕ್ರೋಶಗೊಂಡ EPS ನಿವೃತ್ತರು ಕಾರು ಡೋರ್‌ಗೆ ಬೈಕ್‌ ಗುದ್ದಿ ಕೆಳಗೆ ಬಿದ್ದ ಮಹಿಳೆ ಮೇಲೆ ಹರಿದ ಬಿಎಂಟಿಸಿ ಬಸ್‌ ನಾಟಿ ಕೋಳಿ ಸಾರಿನ ಜತೆ ರಾಗಿಮುದ್ದೆ ನುಂಗಿದವರಿಗೆ ಗೊತ್ತು ಅದರ ಗಮ್ಮತ್ತು