NEWSಕೃಷಿನಮ್ಮಜಿಲ್ಲೆ

ರೈತರ ಜಮೀನುಗಳಿಗೆ ವಾರದೊಳಗೆ ನೀರು ಹರಿಸದಿದ್ದರೆ ಉಗ್ರ ಹೋರಾಟ: ಕರೋಹಟ್ಟಿ ಕುಮಾರಸ್ವಾಮಿ ಎಚ್ಚರಿಕೆ

ವಿಜಯಪಥ ಸಮಗ್ರ ಸುದ್ದಿ

ತಿ. ನರಸೀಪುರ: ಜಮೀನಿಗೆ ಈ ವಾರದಲ್ಲಿ ನೀರು ಬಿಡದಿದ್ದರೆ ನೀರಾವರಿ ಇಲಾಖೆ ಕಚೇರಿ ಮುಂದೆ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದೆಂದು ಕರ್ನಾಟಕ ರೈತ ಸಂಘದ ತಾಲೂಕು ಅಧ್ಯಕ್ಷ ಕರೋಹಟ್ಟಿ ಕುಮಾರಸ್ವಾಮಿ ತಿಳಿಸಿದ್ದಾರೆ.

ಪಟ್ಟಣದ ಕಬಿನಿ ಅತಿಥಿ ಗೃಹದಲ್ಲಿ ಸಂಘದ ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯುದ್ಧ ಕಾಲದಲ್ಲಿ ಶಸ್ತ್ರಾಭ್ಯಾಸ ಎಂಬಂತ್ತೆ ಜಮೀನಿಗೆ ನೀರು ಬಿಡುವ ಸಮಯದಲ್ಲಿ ಹೂಳೆತ್ತುವ ಕೆಲಸ ಮಾಡಿಸುತ್ತಿದ್ದಾರೆ ಇದು ಅಧಿಕಾರಿಗಳ ಬೇಜವಾಬ್ದಾರಿತನಕ್ಕೆ ಸಾಕ್ಷಿಯಾಗಿದೆ ಎಂದು ಕಿಡಿಕಾರಿದರು.

ಇನ್ನು ಒಂದು ತಿಂಗಳಿಂದಲ್ಲೂ ಕಾವೇರಿ ಮತ್ತು ಕಬಿನಿ ಜಲಾಶಯಗಳಿಂದ ನೀರು ಹರಿದು ಮೆಟ್ಟೂರ್ ಡ್ಯಾಮ್ ತುಂಬಿ ಸಮುದ್ರಕ್ಕೆ ನೀರು ಹೋಗುತ್ತಿದೆ. ಆದರೆ, ಇದೇ ರಾಜ್ಯದ ರೈತರ ಜಮೀನಿಗೆ ನೀರು ಬಿಡದಿರುವುದು ದುರಾದೃಷ್ಟಕರ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಅಧಿಕಾರಿಗಳು ಸರ್ಕಾರಕ್ಕೆ ವರದಿ ನೀಡದ ಕಾರಣ ಹೂಳೆತ್ತುವ ಕೆಲಸ ಈಗ ಶುರುವಾಗಿದೆ. ಶೀಘ್ರದಲ್ಲಿ ಹೂಳೆತ್ತುವ ಕೆಲಸವನ್ನು ಮುಗಿಸಿ ಈ ವಾರದಲ್ಲಿ ನೀರು ಬಿಡದಿದ್ದರೆ ಕಚೇರಿಗಳ ಮುಂದೆ ಉಗ್ರ ಹೋರಾಟ ಮಾಡಬೇಕಾಗುತ್ತದೆ ಎಂದು ಎಚ್ಚರಿಸಿದರು.

ಇತ್ತ ತಲಕಾಡು ಹೋಬಳಿ ತಡಿಮಾಲಂಗಿ ಗ್ರಾಮ ಪ್ರವಾಹಕ್ಕೆ ತುತ್ತಾಗಿ ಜನರು ಸಂಕಷ್ಟದಲ್ಲಿದ್ದಾರೆ ಆದ್ದರಿಂದ ಅವರಿಗೆ ಪರಿಹಾರ ಮತ್ತು ಬೆಳೆ ನಷ್ಟಕ್ಕೆ ಪರಿಹಾರ ನೀಡಬೇಕೆಂದು ಆಗ್ರಹಿಸಿದರು.

ಕರ್ನಾಟಕ ರೈತ ಸಂಘ ತಾಲೂಕು ಘಟಕದ ಮಹಿಳಾ ಅಧ್ಯಕ್ಷರಾಗಿ ಗೀತಾ ಶಿವಶಂಕರ್ ಅವರನ್ನು ಸಭೆಯಲ್ಲಿ ಒಮ್ಮತದಿಂದ ಆಯ್ಕೆ ಮಾಡಲಾಯಿತು. ಇವರು ಮೂರು ವರ್ಷ ತಾಲೂಕು ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸಿದ ಅನುಭವವಿದೆ ಎಂದರು.

ಕಾರ್ಯಾಧ್ಯಕ್ಷ ಈ ರಾಜು, ತಲಕಾಡು ದಿನೇಶ್, ಪರಮೇಶ್, ಪುಟ್ಟೇಗೌಡ ನಾರಾಯಣ ಟೈಲರ್, ಆಲಗೂಡು ಮಹದೇವ, ಶಾಂತ ಮೂರ್ತಿ, ಮಾಡ್ರಳ್ಳಿ, ನಂಜುಂಡಸ್ವಾಮಿ , ಶಿವಣ್ಣ, ಯೋಗೇಶ್, ಮಹೇಶ,ಕಾಂತರಾಜ್ ಸೇರಿದಂತೆ ಮತ್ತಿತರರು ಇದ್ದರು.

ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ರೈತರು ತಮ್ಮ ಜಮೀನಿನ ಪಕ್ಕದ ನಾಲೆಗಳಿಂದ ಪಂಪ್ ಸೇಟ್ ಬಳಸಿ ಬೆಳಗೆ ನೀರು ತೆಗೆದುಕೊಂಡರೆ ಅಂತ ರೈತರ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುವುದು ಎಂದು ರೈತ ವಿರೋಧಿ ಹೇಳಿಕೆ ನೀಡಿರುವುದನ್ನು ಖಂಡಿಸುತ್ತೇವೆ. ಇದೇ ಹೇಳಿಕೆ ಮುಂದುವರಿದರೆ ಮುಂದಿನ ದಿನಗಳಲ್ಲಿ ಹೋರಾಟ ಹಮ್ಮಿಕೊಳ್ಳಲಾಗುವುದು.

l ಕರೋಹಟ್ಟಿ ಕುಮಾರಸ್ವಾಮಿ, ಅಧ್ಯಕ್ಷರು ಕರ್ನಾಟಕ ರಾಜ್ಯ ರೈತ ಸಂಘ ತಿ.ನರಸೀಪುರ ತಾಲೂಕು

Leave a Reply

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ BMTC: ಅಪಘಾತದಲ್ಲಿ ಮೃತಪಟ್ಟ ನೌಕರರ ಕುಟುಂಬಕ್ಕೆ ₹1 ಕೋಟಿ ಪರಿಹಾರ ಚೆಕ್‌ ವಿತರಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸಾರಿಗೆ ನಿವೃತ್ತ ನೌಕರರಿಗೆ ಮತ್ತೊಮ್ಮೆ ಮೊಗದೊಮ್ಮೆ ನಿರಾಸೆ: ಭಾರಿ ಆಕ್ರೋಶಗೊಂಡ EPS ನಿವೃತ್ತರು ಕಾರು ಡೋರ್‌ಗೆ ಬೈಕ್‌ ಗುದ್ದಿ ಕೆಳಗೆ ಬಿದ್ದ ಮಹಿಳೆ ಮೇಲೆ ಹರಿದ ಬಿಎಂಟಿಸಿ ಬಸ್‌ ನಾಟಿ ಕೋಳಿ ಸಾರಿನ ಜತೆ ರಾಗಿಮುದ್ದೆ ನುಂಗಿದವರಿಗೆ ಗೊತ್ತು ಅದರ ಗಮ್ಮತ್ತು ನೀವು ಗಬಗಬನೆ ಊಟ ಮಾಡುವವರಿದ್ದೀರಾ? ಹಾಗಿದ್ದರೆ ನಿಮಗೆ ಈ ಸಮಸ್ಯೆ ಕಾಡದಿರದು! BMTC ನೌಕರರಿಗೆ ಆನ್-ಲೈನ್ ಮೂಲಕ ವೇತನ ಚೀಟಿ ಪಡೆಯುವ ವ್ಯವಸ್ಥೆ- ಜಾರಿ ಸ್ಕೂಟರ್‌ಗೆ ಕಾರು ಡಿಕ್ಕಿ- ಮೊಪೆಡ್‌ನಲ್ಲಿ ತೆರಳುತ್ತಿದ್ದ ಮಾವ-ಸೊಸೆ ದಾರುಣ ಸಾವು ಪೊಲೀಸ್‌ ಠಾಣೆ ಮೆಟ್ಟಿಲೇರಿದ ಹಿಟ್‌ ಧಾರಾವಾಹಿಗಳ ನಿರ್ದೇಶಕ, ನಿರ್ಮಾಪಕ ರಾಮ್​ಜೀ