NEWS

ರಾಜ್ಯದಲ್ಲಿ 511ಕ್ಕೇರಿದ ಕೊರೊನಾ ಸೋಂಕಿತ ಸಂಖ್ಯೆ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ರಾಜ್ಯದಲ್ಲಿ ಮತ್ತೆ ಎಂಟು ಮಂದಿಗೆ ಕೊರೋನಾ ಪಾಸಿಟಿವ್‌ ಪ್ರಕರಣ ಸೋಮವಾರ ದೃಢಪಟ್ಟಿದೆ. ಈ ವೇಳೆ ರಾಜ್ಯದ ಒಟ್ಟಾರೆ ಸೋಂಕಿತರ ಸಂಖ್ಯೆ 511ಕ್ಕೆ ಏರಿದೆ.

ರಾಜಧಾನಿಯಲ್ಲಿ 13 ವರ್ಷದ ಬಾಲಕನಲ್ಲಿ ಕೊರೋನಾ ಸೋಂಕು ಪತ್ತೆಯಾಗಿದೆ. ಈತ ಜ್ವರದ ಲಕ್ಷಣಗಳಿಂದ ಆಸ್ಪತ್ರೆಗೆ ದಾಖಲಾಗಿದ್ದನು ಎಂದು ತಿಳಿದುಬಂದಿದೆ.

ಇದರ ಜತೆಗೆ ಮಂಡ್ಯದಲ್ಲಿ 1, ದಕ್ಷಿಣ ಕನ್ನಡದಲ್ಲಿ 2, ಬಾಗಲಕೋಟೆಯ ಜಮಖಂಡಿಯಲ್ಲಿ 2, ವಿಜಯಪುರದಲ್ಲಿ 2 ಪ್ರಕರಣಗಳು ಪತ್ತೆಯಾಗಿವೆ.

ಮುಂಬೈಗೆ ಪ್ರಯಾಣ ಬೆಳೆಸಿದ್ದ ಇತಿಹಾಸ ಹೊಂದಿದ್ದ ಮಂಡ್ಯದ ನಾಗಮಂಗಲದ 50 ವರ್ಷದ ವ್ಯಕ್ತಿ, 432 ರೋಗಿಯೊಂದಿಗೆ ಸಂಪರ್ಕ ಹೊಂದಿದ್ದ, ದಕ್ಷಿಣ ಕನ್ನಡ ಜಿಲ್ಲೆಯ 80 ವರ್ಷದ ಮಹಿಳೆ ಮತ್ತು 45 ವರ್ಷದ ವ್ಯಕ್ತಿಯಲ್ಲಿ ಸೋಂಕು ದೃಢಪಟ್ಟಿದೆ.

ಬಾಗಲಕೋಟೆಯ ಜಮಖಂಡಿಯಲ್ಲಿ 32 ಮತ್ತು 21 ವರ್ಷದ ಮಹಿಳೆಯರಲ್ಲಿ ಸೋಂಕು ಪತ್ತೆಯಾಗಿದೆ. ವಿಜಯಪುರದ 45 ಹಾಗೂ 27 ವರ್ಷದ ವ್ಯಕ್ತಿಗಳಲ್ಲಿ ಸೋಂಕು ದೃಢಪಟ್ಟಿದೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.

ಇಲ್ಲಿಯವರೆಗೆ ಕೊರೊನಾದಿಂದ ಮೃತಪಟ್ಟವರ ಸಂಖ್ಯೆ 19ಕ್ಕೆ ಏರಿಕೆ ಆಗಿದ್ದು, ಈ ನಡುವೆ, ಉಸಿರಾಟದ ತೊಂದರೆ ಹಾಗೂ ನ್ಯುಮೋನಿಯಾದಿಂದ ಆಸ್ಪತ್ರೆಗೆ ದಾಖಲಾಗಿದ್ದ 50 ವರ್ಷದ ಬೆಂಗಳೂರು ನಿವಾಸಿ ಇಂದು ವಿಕ್ಟೋರಿಯಾ ಆಸ್ಪತ್ರೆಯ ಕಟ್ಟಡದಿಂದ ಜಿಗಿದು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.
ಒಟ್ಟಾರೆ ಇಂದು ಒಂದು ಮಧ್ಯಾಹ್ನದ ವರೆಗೆ 8 ಮಂದಿಗೆ ಕೊರೊನಾ ಪಾಸಿಟಿವ್‌ ಇರುವುದು ದೃಢಪಟ್ಟಿದ್ದು, ಈ ಹಿನ್ನೆಲೆಯಲ್ಲಿ ಇಂದು ಬೆಳಗ್ಗೆ 11ಗಂಟೆಗೆ ಪ್ರಧಾನಿ ಮೋದಿ ಅವರೊಂದಿಗೆ ನಡೆದ ವಿಡಿಯೋ ಕಾನ್ಫರೆನ್ಸ್‌ನಲ್ಲಿ ರಾಜ್ಯದ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರು ಲಾಕ್‌ಡೌನ್‌ ಅನ್ನು ಮೇ 15ರವರೆಗೆ ವಿಸ್ತರಿಸುವಂತೆ ಮನವಿ ಮಾಡಿದ್ದಾರೆ.

Leave a Reply

error: Content is protected !!
LATEST
ಪತ್ನಿ ಜೊತೆ 40 ವರ್ಷಗಳ ಹಿಂದೆ ಕೋಪ ಮಾಡಿಕೊಂಡಿದ್ದ ಪತಿ- ಸಾಯುವ ವೇಳೆಯೂ ಮಾತಾಡಲಿಲ್ಲ ! ಬೆಳಗಾವಿ: ಸವದತ್ತಿ ಯಲ್ಲಮ್ಮ ದೇವಿಯ ಹುಂಡಿಯಲ್ಲಿ 2 ತಿಂಗಳಲ್ಲೇ₹ 1.96 ಕೋಟಿ ಕಾಣಿಕೆ ಸಂಗ್ರಹ ಕಡ್ಡಾಯವಾಗಿ ಮಣ್ಣಿನ ಪರೀಕ್ಷೆ ಮಾಡಿಸಿ: ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಪ್ರಸಾದ್ ಕೆ.ಆರ್‌.ಪೇಟೆ: ಚೌಡೇಶ್ವರಿ ಅಮ್ಮನವರ ದೇಗುಲದಲ್ಲಿ ಆಷಾಢ ಶುಕ್ರವಾರ ಸಂಭ್ರಮ ಸಂಸತ್‌ನಲ್ಲಿ ಕನ್ನಡಿಗರ ಪರ ಧ್ವನಿ ಎತ್ತಿ: ರಾಜ್ಯದ ಎನ್‌ಡಿಎ ಸಂಸದರಿಗೆ ಎಎಪಿಯ ಡಾ. ಮುಖ್ಯಮಂತ್ರಿ ಚಂದ್ರು ಆಗ್ರಹ “ಶಕ್ತಿ" ಯೋಜನೆಯಿಂದ ಸಾರಿಗೆ ನಿಗಮಗಳ ಆದಾಯ ಹೆಚ್ಚಾಗಿದೆ- ಆದರೆ ನೌಕರರಿಗೆ ವೇತನಕೊಡಲು ಹಣವಿಲ್ಲ- ಎಂಥಾ ಹೇಳಿಕೆ ಇದು ಸಾ... KRS ಭರ್ತಿ: ಅಣೆಕಟ್ಟೆಯಿಂದ ಒಂದು ಲಕ್ಷ ಕ್ಯುಸೆಕ್‌ಗೂ ಅಧಿಕ ಪ್ರಮಾಣದ ನೀರು ಬಿಡುಗಡೆ- ಕಾವೇರಿ ಕೊಳ್ಳದ ಜನರಿಗೆ ಎಚ್ಚರಿ... ಪೊಲೀಸರ ಮೇಲೆ ಹಲ್ಲೆ ಮಾಡಿ ಪರಾರಿಗೆ ಯತ್ನ: ಕಳ್ಳನ ಹೆಡೆಮುರಿಕಟ್ಟಿದ ಮಹಿಳಾ ಎಸ್‌ಐ ಕೃಷ್ಣರಾಜಪೇಟೆ: ಶ್ರೀ ಚೌಡೇಶ್ವರಿ ಅಮ್ಮನವರ ಕರಗ ಮಹೋತ್ಸವ ಅದ್ದೂರಿ ಬೆಳಗಾವಿ: ಸವದತ್ತಿ ಯಲ್ಲಮ್ಮ ದೇವಿಯ ಹುಂಡಿಗೆ ಹರಿದು ಬಂತು ಕೋಟಿ ಕೋಟಿ ಹಣ