NEWSನಮ್ಮರಾಜ್ಯ

ಲಾಕ್‌ಡೌನ್ ನಡುವೆಯು ರಕ್ತದಾನ ಮಾಡಿದ ಯುವ ಜನತೆ

ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಯುವಸಬಲೀಕರಣ ಸಚಿವ ಸಿ.ಟಿ ರವಿ ಮೆಚ್ಚುಗೆ

ವಿಜಯಪಥ ಸಮಗ್ರ ಸುದ್ದಿ

ಚಿಕ್ಕಮಗಳೂರು: ದೇಶಾದ್ಯಂತ ಲಾಕ್‌ಡೌನ್ ನಲ್ಲಿಯು ಜಿಲ್ಲೆಯಲ್ಲಿ ತುರ್ತು ಸಂದರ್ಭ ರಕ್ತನಿಧಿಗಳಲ್ಲಿ ರಕ್ತದ ಕೊರತೆಯಾಗದಂತೆ ಮುನ್ನೆಚ್ಚರಿಕಾ ಕ್ರಮವಾಗಿ ರಕ್ತದಾನ ಶಿಬಿರವನ್ನು ಏರ್ಪಡಿಸಿರುವುದು ಸಂತಸ ವಿಷಯ ಎಂದು ಪ್ರವಾಸೋದ್ಯಮ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಯುವಸಬಲೀಕರಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸಿ.ಟಿ ರವಿ ಹೇಳಿದರು.

ಬುಧವಾರ ನಗರದ ಬಸವನಹಳ್ಳಿ ಮುಖ್ಯ ರಸ್ತೆಯ ರಂಗಣ್ಣನವರ ಛತ್ರದಲ್ಲಿ ಚಿಕ್ಕಮಗಳೂರು ಯುವಕರ ಸಂಘದಿಂದ ಆಯೋಜಿಸಲಾಗಿದ್ದ ರಕ್ತದಾನ ಶಿಬಿರ ಕಾರ್ಯಕ್ರಮದಲ್ಲಿ ಮಾತನಾಡಿದರು.

ನಗರದಲ್ಲಿ ರಾಷ್ಟೋತ್ತನ ಬಳಗದಿಂದ ರಕ್ತದಾನ ಶಿಬಿರ ಮಾಡುವ ಸಂದೇಶ ಬಂದ ಹಿನ್ನೆಲೆ ಜಿಲ್ಲೆಯ ಯುವಕರ ಸಂಘವು ಇಂತಹ ಸಂಕಷ್ಟದ ತುರ್ತು ಸಂದರ್ಭದಲ್ಲಿಯೂ ಶಿಬಿರವನ್ನು ಏರ್ಪಡಿಸಿದ್ದು ಜತೆಗೆ ಹೆಚ್ಚಿನ ಸಂಖ್ಯೆಯಲ್ಲಿ ಸ್ವಯಂ ರಕ್ತದಾನಿಗಳು ಭಾಗಿಯಾಗಿರುವುದು ಖುಷಿಯ ವಿಚಾರ ಎಂದರು.

ರಕ್ತದಾನ ಮಹಾದಾನವಾಗಿದ್ದು ರಾಜ್ಯಾದ್ಯಂತ ಪ್ರತಿಯೊಂದು ಜಿಲ್ಲೆಗಳಲ್ಲಿಯೂ ರಕ್ತದಾನ ಶಿಬಿರವನ್ನು ಏರ್ಪಡಿಸುವುದು ಒಳಿತು. ಸಂಕಷ್ಟದ ಸಂದರ್ಭಗಳಲ್ಲಿ ಇಂತಹ ಶಿಬಿರಗಳು ಅನುಕೂಲವಾಗಲಿದ್ದು ಯಾವುದೇ ಸಮಯದಲ್ಲೂ ರಕ್ತದ ಕೊರತೆಯಾಗದಂತೆ ನೋಡಿಕೊಳ್ಳುವುದು ಸೂಕ್ತ ಎಂದರು.

ಜಿಲ್ಲಾಸ್ಪತ್ರೆಯ ರಕ್ತನಿಧಿ ಕೇಂದ್ರದ ಹಿರಿಯ ವೈದ್ಯಾಧಿಕಾರಿ ಮುರಳಿಧರ್ ಮಾತನಾಡಿ ಕೊರೋನಾ ಸೋಂಕು ಹರಡುತ್ತಿರುವ ಹಿನ್ನೆಲೆ ಹೆಚ್ಚು ಜನರು ಒಂದೆಡೆ ಸೇರಬಾರದು ಎನ್ನುವ ಕಾರಣದಿಂದ ಕೆಲದಿನಗಳ ಕಾಲ ರಕ್ತದಾನ ಶಿಬಿರಗಳು ಸ್ಥಗಿತಗೊಂಡಿದ್ದವು ಇದೀಗ ಜಿಲ್ಲೆಯ ಯುವಕರ ಸಂಘ ಸ್ವಯಂ ಇಚ್ಚೆಯಿಂದ ರಕ್ತದಾನ ಶಿಬಿರ ಏರ್ಪಡಿಸಿರುವುದು ಒಳ್ಳೆಯ ಸಂಗತಿ ಎಂದ ಅವರು ರಕ್ತದ ಕೊರತೆ ಸಂದರ್ಭದಲ್ಲಿ ಇಂತಹ ಶಿಬಿರಗಳು ಹೆಚ್ಚು ಅನುಕೂಲವಾಗಲಿದ್ದು ಬಡವರು, ಸಂಕಷ್ಟದಲ್ಲಿರುವವರಿಗೆ ಮತ್ತಷ್ಟು ಪ್ರಯೋಜನವಾಗಲಿದೆ ಎಂದರು.

ರಕ್ತದಾನದ ಸಂದರ್ಭದಲ್ಲಿ ಪ್ರತಿಯೊಬ್ಬರಿಗೂ ಸಾಮಾಜಿಕ ಅಂತರ ಕಾಯ್ದುಕೊಳ್ಳುವಂತೆ ತಿಳಿಸಲಾಗಿದೆ ಅಲ್ಲದೇ ಆರೋಗ್ಯ ಸ್ವಚ್ಚತೆಯ ಬಗ್ಗೆ ಹೆಚ್ಚು ಗಮನಹರಿಸಿ ಸೋಂಕು ಬರದಂತೆ ತಡೆಯಲು ಅರಿವು ಮೂಡಿಸಲಾಗಿದೆ ಎಂದರು.

ಸ್ವಯಂ ಸೇವಕರಾದ ಭರತ್, ರಘು, ಧನಂಜಯ್‌ಗೌಡ, ಪ್ರದೀಪ್‌ರಾಜ್  ಮತ್ತಿತರರು ಉಪಸ್ಥಿತರಿದ್ದರು.

Leave a Reply

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ನಾನು ಕಾದು ಕುಳಿತಿದ್ದರೂ ಬಸ್‌ ನಿಲ್ಲಿಸಿಲ್ಲ - ಚಾಲಕ, ಕಂಡಕ್ಟರ್‌ ತಿಂಗಳ ಸಂಬಳ ನನಗೆ ನಷ್ಟಪರಿಹಾರ ಕೊಡಿ: ವಕೀಲನ ಒತ್ತ... ಕೆಎಂಎಫ್ ಸಿಬ್ಬಂದಿಗೆ 7ನೇ ವೇತನ ಆಯೋಗ ಜಾರಿ- 2024ರ ಆ.1ರಿಂದಲೇ ಪೂರ್ವಾನ್ವಯ KSRTC ಏಕಸ್ವಾಮ್ಯಕ್ಕೆ ಮೂಗುದಾರ ಹಾಕಿ- ಸರ್ಕಾರದ ಕಾಯ್ದೆ ಸರಿ ಎಂದ ಕೋರ್ಟ್ ಸ್ಮಶಾನ ಜಾಗ ಭೂಗಳ್ಳನಿಗೆ ಬಿಟ್ಟುಕೊಡಲು ಟಿಪ್ಪಣಿ ಮಂಡಿಸಿರುವ ಭ್ರಷ್ಟ ಅಧಿಕಾರಿಗಳು: ಎನ್.ಆರ್.ರಮೇಶ್ ಆರೋಪ ಕ್ರೀಡಾಪಟುಗಳಿಗೆ ಕೊಡುವ ಏಕಲವ್ಯ ಪ್ರಶಸ್ತಿ ಮುಂದುವರಿಸಲಿ: ಶೋಭಾ ನಾರಾಯಣ್ ಬಿಡದಿಯಿಂದ ಹೆದ್ದಾರಿಯಲ್ಲೇ ಮುಂದೆ ಬಂದರೆ ನಿಮಗೆ ಟೋಲ್‌ ಬರೆ ಗ್ಯಾರಂಟಿ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಹೊತ್ತಿ ಉರಿದ ಸ್ಕಾರ್ಪಿಯೋ ಕಾರು KSRTC ಕನಕಪುರ ಬಸ್‌ ನಿಲ್ದಾಣದಲ್ಲಿ ವಿಕಲ ಚೇತನರಿಂದ ₹700 ವಸೂಲಿ, ಕಂಡಕ್ಟರ್ಸ್‌ ಕೊಡಬೇಕು ₹10 : ಟಿಸಿಗೆ ಡಿಎಂ ಸಾಥ್... ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ