NEWSನಮ್ಮಜಿಲ್ಲೆನಮ್ಮರಾಜ್ಯ

ಲಂಚಾರೋಪದಡಿ ಸೇವೆಯಿಂದ ಬಿಡುಗಡೆಗೊಳಿಸಿ, ಸಾರಿಗೆ ಮುಖ್ಯ ಕಾರ್ಮಿಕ ಕಲ್ಯಾಣ ಅಧಿಕಾರಿ ಹುದ್ದೆ ಕೊಟ್ರು: ಏನೂ ತಪ್ಪು ಮಾಡದ ನೌಕರರಿಗೆ ವಜಾ, ಅಮಾನತು ವರ್ಗಾವಣೆ ಶಿಕ್ಷೆ

ವಿಜಯಪಥ ಸಮಗ್ರ ಸುದ್ದಿ

ವಿಜಯಪುರ: ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ನೌಕರರಿಂದ ಲಂಚ ಪಡೆದ ಆರೋಪ ಹೊತ್ತಿರುವ ಅಧಿಕಾರಿಯನ್ನು ಸೇವೆಯಿಂದ ಇದೇ ಆಗಸ್ಟ್‌ 21ರಂದು ತರಾತುರಿಯಲ್ಲಿ ಬಿಡುಗಡೆಗೊಳಿಸಲಾಗಿತ್ತು.

ಆದರೆ ಅಂತಹ ಲಂಚಕೋರ ಅಧಿಕಾರಿಯ ವಿರುದ್ಧ ಕ್ರಮ ಕೈಗೊಳ್ಳುವುದನ್ನು ಬಿಟ್ಟು ಆ ಅಧಿಕಾರಿಯನ್ನು ಇಂದು (ಆ.30) ಸಾರಿಗೆಯ ಮುಖ್ಯ ಕಾರ್ಮಿಕ ಕಲ್ಯಾಣ ಅಧಿಕಾರಿಯಾಗಿ ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ.

ಯಾವುದೇ ತಪ್ಪು ಮಾಡದ ಸಾವಿರಾರು ಸಾರಿಗೆ ನೌಕರರನ್ನು ವಿಚಾರಣೆಗೂ ಒಳಪಡಿಸದೆ ಏಕಾಏಕಿ ವಜಾ, ವರ್ಗಾವಣೆ ಮತ್ತು ಅಮಾನತಿನ ಶಿಕ್ಷೆ ನೀಡಿದ ಮುಖ್ಯ ಸಿಬ್ಬಂದಿ ವ್ಯವಸ್ಥಾಪಕರು ಇಂದು ಲಂಚಾರೋಪ ಇರುವ ಅಧಿಕಾರಿಯನ್ನು ಮುಖ್ಯ ಕಾರ್ಮಿಕ ಕಲ್ಯಾಣ ಅಧಿಕಾರಿಯಾಗಿ ನೇಮಕ ಮಾಡಿ ಆದೇಶ ಹೊರಡಿಸಿರುವುದು ಇಲ್ಲಿ ಬೇಲಿಯೇ ಎದ್ದು ಹೊಲ ಮೇಯ್ದಂತೆ ಕಾಣುತ್ತಿದೆ.

ಹೌದು! ಸಕ್ಷಮ ಪ್ರಾಧಿಕಾರಿಗಳ ಆದೇಶದನ್ವಯ ಉಪಮುಖ್ಯ ಕಾನೂನು ಅಧಿಕಾರಿ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ವಿಭಾಗೀಯ ನಿಯಂತ್ರಣಾಧಿಕಾರಿ (ವಿಜಯಪುರ ವಿಭಾಗದ ಧಾರಣಾಧಿಕಾರದಲ್ಲಿರುವವರು) ನಾರಾಯಣಪ್ಪ ಕುರುಬರ ಅವರನ್ನು ಆಡಳಿತಾತ್ಮಕ ಕಾರಣಗಳ ಮೇಲೆ ಹಾಗೂ ಸಾರ್ವಜನಿಕ ಹಿತದೃಷ್ಟಿಯಿಂದ ಈ ಕೂಡಲೇ ಜಾರಿಗೆ ಬರುವಂತೆ ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯಲ್ಲಿ ಖಾಲಿ ಇರುವ ಮುಖ್ಯ ಕಾರ್ಮಿಕ ಕಲ್ಯಾಣ ಅಧಿಕಾರಿ ಹುದ್ದೆಗೆ ನಿಯಮ 17/1 ರಡಿಯಲ್ಲಿ ಅವರ ಹುದ್ದೆ ಮತ್ತು ವೇತನ ಶ್ರೇಣಿ ಯೊಂದಿಗೆ ಪ್ರತಿನಿಯೋಜಿಸಲಾಗಿದೆ.

ನಾರಾಯಣಪ್ಪ ಕುರುಬರ ಅವರ ನಿಯೋಜನೆಯು ಆಡಳಿತಾತ್ಮಕ ಕಾರಣಗಳ ಮೇರೆಗೆ ಮಾಡಲಾಗಿದ್ದು, ಕಾರ್ಯಸ್ಥಾನದಲ್ಲಿ ಬದಲಾವಣೆ ಇರುವುದರಿಂದ ನಿಯಮಾನುಸಾರ ವರ್ಗಾವಣೆ ಸೌಲಭ್ಯಗಳಿಗೆ ಅರ್ಹರಿರುತ್ತಾರೆ. ನಿಯೋಜನೆಗೊಂಡ ಸ್ಥಳದಲ್ಲಿ ಕರ್ತವ್ಯಕ್ಕೆ ವರದಿ ಮಾಡಿಕೊಳ್ಳತಕ್ಕದ್ದು ಎಂದು ಆಗಸ್ಟ್‌ 30ರಂದು ಮುಖ್ಯ ಸಿಬ್ಬಂದಿ ವ್ಯವಸ್ಥಾಪಕರು ಆದೇಶ ಹೊರಡಿಸಿದ್ದಾರೆ.

ನೋಡಿ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ವಿಜಯಪುರ ವಿಭಾಗದ ವಿಭಾಗೀಯ ನಿಯಂತ್ರಣಾಧಿಕಾರಿಯಾಗಿದ್ದ ನಾರಾಯಣಪ್ಪ ಕುರಬರ ಲಂಚವಿಲ್ಲದೆ ಯಾವುದೇ ಕೆಲಸ ಮಾಡಿಕೊಡುವುದಿಲ್ಲ ಎಂಬ ಆರೋಪವನ್ನು ನೌಕರರೆ ಮಾಡಿದ್ದು ಆ ಬಗ್ಗೆ ಅಡಿಯೋ ಮತ್ತು ವಿಡಿಯೋಗಳು ಇವೆ.

ಆದರೂ ಅಂಥ ಅಧಿಕಾರಿಯನ್ನು ಅಮಾನತಿನಲ್ಲಿಟ್ಟು ವಿಚಾರಣೆ ಮಾಡದೆ ಅವರನ್ನು ಮತ್ತೊಂದು ಸ್ಥಳಕ್ಕೆ ಅದೂ ಕಾರ್ಮಿಕರ ಮುಖ್ಯ ಕಲ್ಯಾಣಾಧಿಕಾರಿಯಾಗಿ ನೇಮಕ ಮಾಡಿರುವುದು ಎಷ್ಟು ಸರಿ ಎಂದು ನೌಕರರು ಆತಂಕದಿಂದಲೇ ಕೇಳುತ್ತಿದ್ದಾರೆ.

ನಮ್ಮಿಂದಲೇ ಲಂಚ ಪಡೆಯುವ ಅಧಿಕಾರಿ ಕಾರ್ಮಿಕರಾದ ನಮ್ಮ ಕಷ್ಟಗಳನ್ನು ಕೇಳುತ್ತಾರೆಯೇ ಎಂದು ಆತಂಕ ವ್ಯಕ್ತಪಡಿಸುತ್ತಿದ್ದಾರೆ. ಇನ್ನು ಒಬ್ಬ ಅಧಿಕಾರಿ ಮೇಲೆ ಲಂಚಾರೋಪ ಕೇಳಿ ಬಂದರೂ ಅವರನ್ನು ಅಮಾನತು ಮಾಡದಿರುವುದು ಸಂಶಯಕ್ಕೆ ಎಡೆಮಾಡಿಕೊಡುತ್ತಿದೆ.

ಇಂಥ ಅಧಿಕಾರಿಗಳ ವಿರುದ್ಧ ಕ್ರಮ ತೆಗೆದುಕೊಳ್ಳಬೇಕಾದ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕರೆ ಅವರನ್ನು ಮುಖ್ಯ ಕಾರ್ಮಿಕ ಕಲ್ಯಾಣ ಅಧಿಕಾರಿಯಾಗಿ ನೇಮಕ ಮಾಡಲು ಆದೇಶಿಸಿದ್ದಾರೆ ಎಂದರೆ ಏನು ಅರ್ಥ.

ಯಾವುದೇ ತಪ್ಪು ಮಾಡದೆ ಕಳೆದ ಏಪ್ರಿಲ್‌ನಿಂದ ವಜಾ, ವರ್ಗಾವಣೆ ಮತ್ತು ಅಮಾನತಿನ ಶಿಕ್ಷೆ ಕೊಟ್ಟಿದ್ದೀರಲ್ಲ ಮುಖ್ಯ ಸಿಬ್ಬಂದಿ ವ್ಯವಸ್ಥಾಪಕರೆ ಆ ನೌಕರರ ಜತೆ ಒಮ್ಮೆಯಾದರೂ ಮಾತನಾಡಿದ್ದೀರ ಅವರು ಏನು ತಪ್ಪು ಮಾಡಿರುವುದಕ್ಕೆ ನೀವು ಶಿಕ್ಷೆ ಕೊಟ್ಟಿದ್ದೀರಿ ಎಂಬುದನ್ನು ನಮಗೂ ಸ್ವಲ್ಪ ಹೇಳುತ್ತೀರಾ?

ನಿಮ್ಮ ಈ ಇಬ್ಬಗೆಯ ನಡೆ ಸಮ ಸಮಾಜದಲ್ಲಿ ಅದರಲ್ಲೂ ಇಂಥ ಪ್ರಜಾಪ್ರಭುತ್ವ ವ್ಯವಸ್ಥೆ ಇರುವ ದೇಶದಲ್ಲಿ ಸರಿಯಲ್ಲ. ಮೊದಲು ವಜಾ, ವರ್ಗಾವಣೆ ಮತ್ತು ಅಮಾನತುಗೊಂಡವರ ಬಗ್ಗೆಯೂ, ಈಗ ನೀವು ಲಂಚ ಆರೋಪ ಹೊತ್ತ ಅಧಿಕಾರಿಯ ಬಗ್ಗೆ ನಡೆದುಕೊಂಡಂತೆ ನಡೆದುಕೊಳ್ಳಬೇಕಿದೆ.

ಇಲ್ಲದಿದ್ದರೆ ನೀವು ಮುಖ್ಯ ಸಿಬ್ಬಂದಿ ವ್ಯವಸ್ಥಾಪಕ ಹುದ್ದೇಗೆ ಅವಮಾನ ಮಾಡಿದಂತಾಗುತ್ತದೆ. ನಿಷ್ಠೆಯಿಂದ ದುಡಿದು ಸಂಸ್ಥೆಯನ್ನು ಮುನ್ನಡೆಸುವ ಜವಾಬ್ದಾರಿಯನ್ನು ನಿಮಗಿಂತ ಹೆಚ್ಚಾಗಿ ಹೊರುತ್ತಿರುವ ಈ ನೌಕರರ ವಿರುದ್ಧ ನಿಮ್ಮ ಅಧಿಕಾರ ದುರುಪಯೋಗ ಮಾಡಿಕೊಳ್ಳುತ್ತಿರುವುದು ಸರಿಯಲ್ಲ ಎಂದು ಜನಸಾಮಾನ್ಯರು ಹೇಳುವಂತಾಗಿರುವುದು ದುರದೃಷ್ಟಕರ ಸಂಗತಿ.

ಇನ್ನಾದರೂ ಇತ್ತ ರಾಜ್ಯದ ಮುಖ್ಯಮಂತ್ರಿಳು ಮತ್ತು ಈಗ ಸಾರಿಗೆ ಸಂಸ್ಥೆಯ ಯಜಮಾನರಾಗಿರುವ ಸಚಿವ ಬಿ.ಶ್ರೀರಾಮುಲು ಅವರು ಗಮನಹರಿಸಿ ತಪ್ಪು ಮಾಡಿದವರನ್ನು ಕಾನೂನು ರೀತಿ ಶಿಕ್ಷೆಗೆ ಒಳಪಡಿಸಿ, ಕೆಲಸ ಕಳೆದುಕೊಂಡಿರುವ ಪ್ರಾಮಾಣಿಕ ನೌಕರರನ್ನು ಮತ್ತೆ ಕೆಲಸಕ್ಕೆ ತೆಗೆದುಕೊಂಡು ನಮ್ಮ ಸಂವಿಧಾನಾತ್ಮಕ ಕಾನೂನನ್ನು ಗೌರವಿಸಿ ಎಂಬುವುದು ನಮ್ಮ ಬಲವಾದ ಆಗ್ರಹವಾಗಿದೆ.

Leave a Reply

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ಕ್ರೀಡಾಪಟುಗಳಿಗೆ ಕೊಡುವ ಏಕಲವ್ಯ ಪ್ರಶಸ್ತಿ ಮುಂದುವರಿಸಲಿ: ಶೋಭಾ ನಾರಾಯಣ್ ಬಿಡದಿಯಿಂದ ಹೆದ್ದಾರಿಯಲ್ಲೇ ಮುಂದೆ ಬಂದರೆ ನಿಮಗೆ ಟೋಲ್‌ ಬರೆ ಗ್ಯಾರಂಟಿ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಹೊತ್ತಿ ಉರಿದ ಸ್ಕಾರ್ಪಿಯೋ ಕಾರು KSRTC ಕನಕಪುರ ಬಸ್‌ ನಿಲ್ದಾಣದಲ್ಲಿ ವಿಕಲ ಚೇತನರಿಂದ ₹700 ವಸೂಲಿ, ಕಂಡಕ್ಟರ್ಸ್‌ ಕೊಡಬೇಕು ₹10 : ಟಿಸಿಗೆ ಡಿಎಂ ಸಾಥ್... ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ BMTC: ಅಪಘಾತದಲ್ಲಿ ಮೃತಪಟ್ಟ ನೌಕರರ ಕುಟುಂಬಕ್ಕೆ ₹1 ಕೋಟಿ ಪರಿಹಾರ ಚೆಕ್‌ ವಿತರಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸಾರಿಗೆ ನಿವೃತ್ತ ನೌಕರರಿಗೆ ಮತ್ತೊಮ್ಮೆ ಮೊಗದೊಮ್ಮೆ ನಿರಾಸೆ: ಭಾರಿ ಆಕ್ರೋಶಗೊಂಡ EPS ನಿವೃತ್ತರು ಕಾರು ಡೋರ್‌ಗೆ ಬೈಕ್‌ ಗುದ್ದಿ ಕೆಳಗೆ ಬಿದ್ದ ಮಹಿಳೆ ಮೇಲೆ ಹರಿದ ಬಿಎಂಟಿಸಿ ಬಸ್‌ ನಾಟಿ ಕೋಳಿ ಸಾರಿನ ಜತೆ ರಾಗಿಮುದ್ದೆ ನುಂಗಿದವರಿಗೆ ಗೊತ್ತು ಅದರ ಗಮ್ಮತ್ತು