NEWSನಮ್ಮರಾಜ್ಯ

ಲಂಚಾರೋಪ: ಕೆಕೆಆರ್‌ಟಿಸಿ ವಿಜಯಪುರ ವಿಭಾಗದ ಡಿಸಿ ನಾರಾಯಣಪ್ಪ ಕುರಬರ ಕರ್ತವ್ಯದಿಂದ ಬಿಡುಗಡೆ

ವಿಜಯಪಥ ಸಮಗ್ರ ಸುದ್ದಿ

ವಿಜಯಪುರ: ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ವಿಜಯಪುರ ವಿಭಾಗದ ವಿಭಾಗೀಯ ನಿಯಂತ್ರಣಾಧಿಕಾರಿ ನಾರಾಯಣಪ್ಪ ಕುರುಬರ ಅವರು ಈ ಕೂಡಲೇ ಜಾರಿಗೆ ಬರುವಂತೆ ಕರ್ತವ್ಯದಿಂದ ಬಿಡುಗಡೆಗೊಳ್ಳಬೇಕು ಎಂದು ಶನಿವಾರ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕರು ಆದೇಶ ಹೊರಡಿಸಿದ್ದಾರೆ.

ನಿಗಮದ ವಿಜಯಪುರ ವಿಭಾಗದ ಡಿಸಿ ನಾರಾಯಣಪ್ಪ ಕುರಬರ ಲಂಚವಿಲ್ಲದೆ ಯಾವುದೇ ಕೆಲಸ ಮಾಡಿಕೊಡುವುದಿಲ್ಲ ಎಂಬ ಆರೋಪ ಕೇಳಿಬಂದಿದೆ. ಅಲ್ಲದೆ ಅವರು ನೌಕರರಿಂದ ಲಂಚ ಪಡೆದಿದ್ದಾರೆ ಎಂಬ ಆಡಿಯೋ ಮತ್ತು ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲೂ ಹರಿದಾಡುತ್ತಿದ್ದು, ಈ ಸಂಬಂಧ ವಿಜಯಪಥ ವೆಬ್‌ ನ್ಯೂಸ್‌ ಕೂಡ ಶನಿವಾರ ವರದಿ ಮಾಡಿತ್ತು.

ವಿಜಯಪಥದಲ್ಲಿ ವರದಿ ಬರುತ್ತಿದ್ದಂತೆ ನಾರಾಯಣಪ್ಪ ಕುರುಬರ ಅವರನ್ನು ಆಡಳಿತಾತ್ಮಕ ಕಾರಣಗಳ ಮೇರೆಗೆ ನಿಗಮದ ಹಾಗೂ ಸಾರ್ವಜನಿಕ ಹಿತದೃಷ್ಟಿಯಿಂದ ಈ ಕೂಡಲೇ ಜಾರಿಗೆ ಬರುವಂತೆ ಸೂಕ್ತ ಅಧಿಕಾರಿಗಳ ಆದೇಶದ ಮೇರೆಗೆ ಹುದ್ದೆ ನಿರೀಕ್ಷಣೆಯಲ್ಲಿರಿಸಿ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದಿಂದ ಬಿಡುಗಡೆಗೊಳಿಸಲಾಗಿದೆ ಎಂದು ಮುಖ್ಯ ಸಿಬ್ಬಂದಿ ವ್ಯವಸ್ಥಾಪಕರು ಆದೇಶ ಹೊರಡಿಸಿದ್ದಾರೆ.

ನಾರಾಯಣಪ್ಪ ಅವರು ಶನಿವಾರ ಮಧ್ಯಾಹ್ನವೇ ವಿಭಾಗಿಯ ಸಂಚಾರ ಅಧಿಕಾರಿಗಳಿಗೆ ತಮ್ಮ ಕಾರ್ಯಭಾರವನ್ನು ವಹಿಸಿ ಬಿಡುಗಡೆಗೊಳ್ಳಲು ಹಾಗೂ ಮುಂದಿನ ಆದೇಶಕ್ಕಾಗಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಬೆಂಗಳೂರು ಕೇಂದ್ರ ಕಚೇರಿಯಲ್ಲಿ ವ್ಯವಸ್ಥಾಪಕ ನಿರ್ದೇಶಕರ ಮುಂದೆ ಹಾಜರಾಗಲು ಆದೇಶಿಸಲಾಗಿದೆ.

ಕೆಕೆಆರ್‌ಟಿಸಿ ವಿಜಯಪುರ ವಿಭಾಗದ ಡಿಸಿ ನಾರಾಯಣಪ್ಪ ಕುರಬರ ಲಂಚಾವತಾರ : ಸಾಮಾಜಿಕ ಜಾಲತಾಣದಲ್ಲಿ ಭಾರಿ ಸೌಂಡ್‌

Leave a Reply

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ಕ್ರೀಡಾಪಟುಗಳಿಗೆ ಕೊಡುವ ಏಕಲವ್ಯ ಪ್ರಶಸ್ತಿ ಮುಂದುವರಿಸಲಿ: ಶೋಭಾ ನಾರಾಯಣ್ ಬಿಡದಿಯಿಂದ ಹೆದ್ದಾರಿಯಲ್ಲೇ ಮುಂದೆ ಬಂದರೆ ನಿಮಗೆ ಟೋಲ್‌ ಬರೆ ಗ್ಯಾರಂಟಿ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಹೊತ್ತಿ ಉರಿದ ಸ್ಕಾರ್ಪಿಯೋ ಕಾರು KSRTC ಕನಕಪುರ ಬಸ್‌ ನಿಲ್ದಾಣದಲ್ಲಿ ವಿಕಲ ಚೇತನರಿಂದ ₹700 ವಸೂಲಿ, ಕಂಡಕ್ಟರ್ಸ್‌ ಕೊಡಬೇಕು ₹10 : ಟಿಸಿಗೆ ಡಿಎಂ ಸಾಥ್... ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ BMTC: ಅಪಘಾತದಲ್ಲಿ ಮೃತಪಟ್ಟ ನೌಕರರ ಕುಟುಂಬಕ್ಕೆ ₹1 ಕೋಟಿ ಪರಿಹಾರ ಚೆಕ್‌ ವಿತರಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸಾರಿಗೆ ನಿವೃತ್ತ ನೌಕರರಿಗೆ ಮತ್ತೊಮ್ಮೆ ಮೊಗದೊಮ್ಮೆ ನಿರಾಸೆ: ಭಾರಿ ಆಕ್ರೋಶಗೊಂಡ EPS ನಿವೃತ್ತರು ಕಾರು ಡೋರ್‌ಗೆ ಬೈಕ್‌ ಗುದ್ದಿ ಕೆಳಗೆ ಬಿದ್ದ ಮಹಿಳೆ ಮೇಲೆ ಹರಿದ ಬಿಎಂಟಿಸಿ ಬಸ್‌ ನಾಟಿ ಕೋಳಿ ಸಾರಿನ ಜತೆ ರಾಗಿಮುದ್ದೆ ನುಂಗಿದವರಿಗೆ ಗೊತ್ತು ಅದರ ಗಮ್ಮತ್ತು