CrimeNEWSನಮ್ಮರಾಜ್ಯ

ಲವ್ವಿ ಡವ್ವಿಗೆ ಪತಿ ಅಡ್ಡಿ ಎಂದು ಕೊಲೆ ಮಾಡಿದ್ದ ಐನಾತಿ ಪತ್ನಿ ಸೇರಿ ಮೂವರು ಅರೆಸ್ಟ್‌

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಲವ್ವಿ ಡವ್ವಿಗೆ ಪತಿ ಅಡ್ಡಿ ಆಗುತ್ತಿದ್ದಾನೆಂದು ಪ್ರಿಯಕರನಿಗೆ ಹೇಳಿ ಕೊಲೆ ಮಾಡಿಸಿ ನವರಂಗಿ ಆಟವಾಡಿ ಏನು ಕಾಣದಂತೆ ಇದ್ದ ಐನಾತಿ ಸುಂದರಿ ಸೇರಿ ಮೂವರನ್ನು ಕೆ.ಜಿ. ನಗರ ಪೊಲೀಸರು ಬಂಧಿಸಿದ್ದಾರೆ.

ಆಟೋ ಚಾಲಕನ ಕೊಲೆ ಪ್ರಕರಣವನ್ನು ಬೇಧಿಸಿರುವ ಪೊಲೀಸರು ಹತ್ಯೆಯಾದ ಆಟೋ ಚಾಲಕ ಕಾರ್ತಿಕ್‌ ಪತ್ನಿ ರಂಜಿತಾ ಸೇರಿ ಮಂಡ್ಯದ ಕೆಆರ್ ಪೇಟೆ ಮೂಲದ ಸಂಜು ಮತ್ತು ಆತನ ಸಂಬಂಧಿ ಹಾಸನ ಜಿಲ್ಲೆ ಅರಕಲಗೂಡು ನಿವಾಸಿ ಸುಬ್ರಮಣ್ಯ ಬಂಧಿತ ಆರೋಪಿಗಳು.

ರಂಜಿತಾ ಐದು ವರ್ಷದ ಹಿಂದೆ ಆಟೋ ಚಾಲಕ ಕಾರ್ತಿಕ್ ಎಂಬತಾನನ್ನು ಪ್ರೀತಿಸಿ ಮದುವೆ ಆಗಿದ್ದಳು. ಇಬ್ಬರ ಮದುವೆಗೆ ಸಾಕ್ಷಿ ಎಂಬಂತೆ ನಾಲ್ಕು ವರ್ಷದ ಹೆಣ್ಣು ಮಗುವಿದೆ. ಕೊಲೆಯಾದ ಕಾರ್ತಿಕ್ ಸ್ನೇಹಿತ ಸಂಜೀವ್ ಗೆ ತನ್ನದೇ ಮನೆಯಲ್ಲಿ ಆಸರೆ ನೀಡಿದ್ದ. ಆರೋಪಿ ಸಂಜೀವ್ ಸ್ನೇಹ ಮರೆತು ಗೆಳೆಯನ ಪತ್ನಿ ರಂಜಿತಾ ಜೊತೆಯಲ್ಲಿ ಲವ್ವಿ ಡವ್ವಿ ಶುರು ಮಾಡಿಕೊಂಡಿದ್ದನು.

ಕಾರ್ತಿಕ್ ಮದ್ದೂರು ತಾಲೂಕಿನವರಾಗಿದ್ದು, ಶ್ರೀನಗರ ಸಮೀಪದ ಬೃಂದಾವನ ನಗರದಲ್ಲಿ ವಾಸವಿದ್ದರು. ಕಾರ್ತಿಕ್ ಮತ್ತು ರಂಜಿತಾ 2016 ರಲ್ಲಿ ಮದುವೆಯಾಗಿದ್ದರು. ಆತನ ಆಪ್ತ ಸ್ನೇಹಿತನಾಗಿದ್ದ ಸಂಜು ಕೂಡ ಆಟೋ ಚಾಲಕನಾಗಿದ್ದು ದಂಪತಿ ಜೊತೆಯಲ್ಲಿಯೇ ಇದ್ದ. ಕಾರ್ತಿಕ್ ಮತ್ತು ಸಂಜು ಒಂದೇ ಆಟೋವನ್ನು ಓಡಿಸುತ್ತಿದ್ದರು.

ಈ ನಡುವೆ ಕದ್ದುಮುಚ್ಚಿ ಆಡುತ್ತಿದ್ದ ರಂಜಿತಾ ಮತ್ತು ಸಂಜೀವ್ ಕಾಮದಾಟ ಪ್ರೀತಿಯಾಗಿ ತಿರುಗಿ ಮದುವೆ ಹಂತಕ್ಕೆ ಹೊಗುತ್ತಿದ್ದಂತೆ ಕಾರ್ತಿಕ್ ತಮಗೆ ಅಡ್ಡಿ ಆಗಬಹುದೆಂದು ತಿಳಿದು ಕೊಲೆಗೆ ಸ್ಕೆಚ್ ಹಾಕುತ್ತಾರೆ. ಜುಲೈ 29 ರಂದು ಕಾರ್ತಿಕ್ ನನ್ನ ಆರೋಪಿ ಸಂಜೀವ್, ಸುಬ್ರಮಣ್ಯ ಇಬ್ಬರು ಸೇರಿ ಚನ್ನಪಟ್ಟಣ ಕಡೆ ಕರೆದುಕೊಂಡು ಹೋಗಿದ್ದಾರೆ. ದಾರಿ ಮಧ್ಯೆ ಪಾರ್ಟಿ ಹೆಸರಲ್ಲಿ ಕಾರ್ತಿಕ್‍ಗೆ ಕಂಠ ಪೂರ್ತಿ ಮದ್ಯ ಕುಡಿಸಿ, ಬಳಿಕ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿ ಕೊಲೆ ಮಾಡಿ ವೃಷಭವತಿ ನದಿಗೆ ಮೂಟೆ ಕಟ್ಟಿ ಎಸೆದು ಬಂದಿದ್ದರು.

ಕೊಲೆ ಬಳಿಕ ಪತ್ನಿ ರಂಜಿತಾ ನನ್ನ ಪತಿ ಕಾರ್ತಿಕ್ ಮಿಸ್ಸಿಂಗ್ ಆಗಿದ್ದಾರೆಂದು ಕೆಂಪೇಗೌಡ ನಗರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಳು. ಪೊಲೀಸರು ರಂಜಿತಾಳ ಬಗ್ಗೆ ಅನುಮಾನ ಬಂದು ತನಿಖೆಗೆ ಒಳಪಡಿಸಿದ್ದಾರೆ. ಆಗ ಕೊಲೆಯ ರಹಸ್ಯ ಬಯಲಾಗಿದೆ. ಸದ್ಯ ಘಟನೆ ಸಂಬಂಧ ಕೊಲೆಯಾದ ಕಾರ್ತಿಕ್ ಪತ್ನಿ ರಂಜಿತಾ, ಪ್ರಿಯಕರ ಸಂಜೀವ್, ಸುಬ್ರಮಣ್ಯ ಮೂವರನ್ನು ಬಂಧಿಸಿ ಜೈಲಿಗೆ ಕಳುಹಿಸಿದ್ದಾರೆ.

Leave a Reply

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ಕ್ರೀಡಾಪಟುಗಳಿಗೆ ಕೊಡುವ ಏಕಲವ್ಯ ಪ್ರಶಸ್ತಿ ಮುಂದುವರಿಸಲಿ: ಶೋಭಾ ನಾರಾಯಣ್ ಬಿಡದಿಯಿಂದ ಹೆದ್ದಾರಿಯಲ್ಲೇ ಮುಂದೆ ಬಂದರೆ ನಿಮಗೆ ಟೋಲ್‌ ಬರೆ ಗ್ಯಾರಂಟಿ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಹೊತ್ತಿ ಉರಿದ ಸ್ಕಾರ್ಪಿಯೋ ಕಾರು KSRTC ಕನಕಪುರ ಬಸ್‌ ನಿಲ್ದಾಣದಲ್ಲಿ ವಿಕಲ ಚೇತನರಿಂದ ₹700 ವಸೂಲಿ, ಕಂಡಕ್ಟರ್ಸ್‌ ಕೊಡಬೇಕು ₹10 : ಟಿಸಿಗೆ ಡಿಎಂ ಸಾಥ್... ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ BMTC: ಅಪಘಾತದಲ್ಲಿ ಮೃತಪಟ್ಟ ನೌಕರರ ಕುಟುಂಬಕ್ಕೆ ₹1 ಕೋಟಿ ಪರಿಹಾರ ಚೆಕ್‌ ವಿತರಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸಾರಿಗೆ ನಿವೃತ್ತ ನೌಕರರಿಗೆ ಮತ್ತೊಮ್ಮೆ ಮೊಗದೊಮ್ಮೆ ನಿರಾಸೆ: ಭಾರಿ ಆಕ್ರೋಶಗೊಂಡ EPS ನಿವೃತ್ತರು ಕಾರು ಡೋರ್‌ಗೆ ಬೈಕ್‌ ಗುದ್ದಿ ಕೆಳಗೆ ಬಿದ್ದ ಮಹಿಳೆ ಮೇಲೆ ಹರಿದ ಬಿಎಂಟಿಸಿ ಬಸ್‌ ನಾಟಿ ಕೋಳಿ ಸಾರಿನ ಜತೆ ರಾಗಿಮುದ್ದೆ ನುಂಗಿದವರಿಗೆ ಗೊತ್ತು ಅದರ ಗಮ್ಮತ್ತು