CrimeNEWSಸಿನಿಪಥ

ಲವ್ ಯೂ ರಚ್ಚು : ನಾಯಕ ಅಜಯ್ ರಾವ್ ಇದ್ದರೂ ಏಕೆ ಈ ರೀತಿ ಹೇಳಿಕೆ ನೀಡಿದರೋ ಗೊತ್ತಿಲ್ಲ ಎಂದ ಗಾಯಾಳು ಫೈಟರ್

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ನಿನ್ನೆ ಬಿಡದಿಯಲ್ಲಿ ಲವ್ ಯೂ ರಚ್ಚು ಸಿನಿಮಾದ ಸಾಹಸ ದೃಶ್ಯಗಳ ಚಿತ್ರೀಕರಣ ವೇಳೆ ಅವಘಡ ಸಂಭವಿಸಿ ವಿವೇಕ್ ಎಂಬ ಫೈಟರ್ ಸಾವನ್ನಪ್ಪಿದ್ದರು. ಮತ್ತೊಬ್ಬ ಫೈಟರ್ ರಂಜಿತ್ ಗಾಯಗೊಂಡು ಇದೀಗ ಆಸ್ಪತ್ರೆಯಲ್ಲಿದ್ದಾರೆ.

ಈ ದುರಂತ ನಡೆದಾಗ ನಾನು ಸ್ಪಾಟ್​ನಲ್ಲಿ ಇರಲಿಲ್ಲ. ನಾನು ಅಲ್ಲಿ ಇದ್ದಿದ್ದರೆ ಎಚ್ಚರಿಕೆ ವಹಿಸುವಂತೆ ಹೇಳುತ್ತಿದ್ದೆ ಎಂದು ಲವ್ ಯೂ ರಚ್ಚು ಚಿತ್ರದ ನಾಯಕನಟ ಅಜಯ್ ರಾವ್ ಹೇಳಿಕೆ ನೀಡಿದ ಬೆನ್ನಲ್ಲೇ ಗಾಯಾಳು ಫೈಟರ್ ರಂಜಿತ್ ನಾಯಕನಟನ ಹೇಳಿಕೆಯನ್ನು ತಳ್ಳಿಹಾಕಿದ್ದಾರೆ.

ಆಸ್ಪತ್ರೆಯಲ್ಲಿ ಮಾತನಾಡಿದ ಫೈಟರ್ ರಂಜಿತ್, ತಾನು ಪೆಟ್ಟಾಗಿ ಬಿದ್ದಾಗ ಹೀರೋ ಅಲ್ಲೇ 10-15 ಮೀಟರ್ ದೂರದಲ್ಲೇ ಇದ್ದರು. ನನ್ನ ಸಹಾಯಕ್ಕೆ ಬರದೇ ಸುಮ್ಮನೆ ನೋಡುತ್ತಾ ಕೂತಿದ್ದರು. ಘಟನೆ ಸ್ಥಳದಲ್ಲಿ ತಾನು ಇರಲಿಲ್ಲ ಅಂತ ಮಾಧ್ಯಮದ ಮುಂದೆ ಯಾಕೆ ಹೇಳಿದ್ದಾರೋ ಗೊತ್ತಿಲ್ಲ ಎಂದು ಅಜಯ್ ರಾವ್ ಹೇಳಿಕೆ ಬಗ್ಗೆ ಬೇಸರ ವ್ಯಕ್ತಪಡಿಸಿದ್ದಾರೆ.

ಮೆಟಲ್ ರೋಪ್ ಬಳಸಿ ಸಾಹಸ ಚಿತ್ರೀಕರಣ ನಡೆಸಲಾಗುತ್ತಿತ್ತು. ಈ ವೇಳೆ ಕ್ರೇನ್ ಆಕಸ್ಮಿಕವಾಗಿ ಹೈ ಟೆನ್ಷನ್ ವೈರ್​ಗೆ ತಾಕಿದ ಪರಿಣಾಮ ಇಬ್ಬರು ಫೈಟರ್​ಗಳಿಗೆ ಶಾಕ್ ಹೊಡೆದಿದೆ. ವಿವೇಕ್ ಈ ಸಂದರ್ಭದಲ್ಲಿ ಮೆಟಲ್ ರೋಪ್ ಎಳೆಯುತ್ತಿದ್ದರೆನ್ನಲಾಗಿದೆ.

ಈ ಘಟನೆ ಬಗ್ಗೆ ನಾಯಕನಟ ಅಜಯ್ ರಾವ್ ಆಕ್ರೋಶ ವ್ಯಕ್ತಪಡಿಸಿದ್ದರು. ಸರಿಯಾದ ಮುಂಜಾಗ್ರತೆ ಇಲ್ಲದೇ ಚಿತ್ರೀಕರಣ ನಡೆಯುತ್ತಿತ್ತೆಂದು ಅವರು ಪರೋಕ್ಷವಾಗಿ ಅಸಮಾಧಾನ ವ್ಯಕ್ತಪಡಿಸಿದ್ದರು.

ಮೆಟಲ್ ರೋಪ್ ಬಳಕೆಯಿಂದ ಈ ದುರಂತ ಸಂಭವಿಸಿದೆ. ಸಾಹಸ ದೃಶ್ಯ ಚಿತ್ರೀಕರಣ ವೇಳೆ ಮುಂಜಾಗ್ರತೆ ವಹಿಸಬೇಕೆಂದು ನಾನು ಯಾವಾಗಲೂ ಹೇಳುತ್ತಿರುತ್ತೇನೆ. ಹೀಗಾಗಿ ಎಲ್ಲದರಲ್ಲೂ ಮೂಗು ತೂರಿಸುತ್ತೇನೆಂದು ದೂರುತ್ತಾರೆ. ಮೆಟಲ್ ರೋಪ್ ಬಳಸಬಾರದು ಎಂದು ಹೇಳಿ ನಾನು ಕೆಟ್ಟವನಾಗಿ ಹೋಗಿದ್ದೆ. ಈಗ ದುರಂತ ಆಗಿ ಹೋಗಿದೆ. ಮೃತ ವಿವೇಕ್​ಗೆ ನ್ಯಾಯ ಸಿಗುವವರೆಗೂ ಶೂಟಿಂಗ್​ಗೆ ಹೋಗುವುದಿಲ್ಲ ಎಂದು ಅಜಯ್ ರಾವ್ ಹೇಳಿದ್ದರು.

ಈ ಪ್ರಕರಣದಲ್ಲಿ ಪೊಲೀಸರು ಚಿತ್ರದ ನಿರ್ದೇಶಕ ಶಂಕರ್ ರಾಜು, ಸ್ಟಂಟ್ ಮಾಸ್ಟರ್ ವಿನೋದ್, ಶೂಟಿಂಗ್ ಸ್ಪಾಟ್​ನ ಜಮೀನು ಮಾಲೀಕ ಪುಟ್ಟರಾಜು ಹಾಗೂ ಕ್ರೇನ್ ಚಾಲಕ ಮುನಿಯಪ್ಪ ಈ ನಾಲ್ವರನ್ನ ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಇಂದು ಬಿಡದಿ ಠಾಣೆಯಲ್ಲಿ ಮೃತ ವಿವೇಕ್ ಕುಟುಂಬದವರಿಂದ ದೂರು ದಾಖಲಾಗುವ ಸಾಧ್ಯತೆ ಇದೆ.

ಸ್ಟಂಟ್ ಮಾಸ್ಟರ್ ವಿನೋದ್ ಅವರ ಬೇಜವಾಬ್ದಾರಿತನದಿಂದ ಈ ಘಟನೆ ಆಗಿ ಹೋಗಿದೆ ಎಂಬಂತಹ ದೂರುಗಳು ಕೇಳಿಬರುತ್ತಿವೆ. ಆದರೆ, ಗಾಯಗೊಂಡಿರುವ ಫೈಟರ್ ರಂಜಿತ್ ಅವರು ಈ ಅಭಿಪ್ರಾಯಗಳನ್ನ ತಳ್ಳಿಹಾಕಿದ್ದಾರೆ.

ಸ್ಟಂಟ್ ಮಾಸ್ಟರ್ ಜೊತೆ ಏಳೆಂಟು ವರ್ಷಗಳಿಂದ ತಾನು ಕೆಲಸ ಮಾಡುತ್ತಿದ್ದೇನೆ. ಅವರಷ್ಟು ಕೇರ್ ಮಾಡುವ ಮಾಸ್ಟರ್ ಅನ್ನು ನಾನು ನೋಡಿಯೇ ಇಲ್ಲ. ಅವರ ಬಗ್ಗೆ ಊಹಾಪೋಹ ಹರಿದಾಡುತ್ತಿರುವುದನ್ನು ನಾನು ಒಪ್ಪಲ್ಲ. ಕ್ರೇನ್ ಆಪರೇಟರ್ ಮಿಸ್ಟೇಕ್​ನಿಂದ ಮಾತ್ರ ಈ ಘಟನೆ ಆಗಿದೆ. ಅದು ಬಿಟ್ಟರೆ ಬೇರೆ ಯಾರೂ ಇದಕ್ಕೆ ಹೊಣೆಯಲ್ಲ ಎಂದು ರಂಜಿತ್ ಹೇಳಿದ್ದಾರೆ.

Leave a Reply

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ಕ್ರೀಡಾಪಟುಗಳಿಗೆ ಕೊಡುವ ಏಕಲವ್ಯ ಪ್ರಶಸ್ತಿ ಮುಂದುವರಿಸಲಿ: ಶೋಭಾ ನಾರಾಯಣ್ ಬಿಡದಿಯಿಂದ ಹೆದ್ದಾರಿಯಲ್ಲೇ ಮುಂದೆ ಬಂದರೆ ನಿಮಗೆ ಟೋಲ್‌ ಬರೆ ಗ್ಯಾರಂಟಿ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಹೊತ್ತಿ ಉರಿದ ಸ್ಕಾರ್ಪಿಯೋ ಕಾರು KSRTC ಕನಕಪುರ ಬಸ್‌ ನಿಲ್ದಾಣದಲ್ಲಿ ವಿಕಲ ಚೇತನರಿಂದ ₹700 ವಸೂಲಿ, ಕಂಡಕ್ಟರ್ಸ್‌ ಕೊಡಬೇಕು ₹10 : ಟಿಸಿಗೆ ಡಿಎಂ ಸಾಥ್... ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ BMTC: ಅಪಘಾತದಲ್ಲಿ ಮೃತಪಟ್ಟ ನೌಕರರ ಕುಟುಂಬಕ್ಕೆ ₹1 ಕೋಟಿ ಪರಿಹಾರ ಚೆಕ್‌ ವಿತರಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸಾರಿಗೆ ನಿವೃತ್ತ ನೌಕರರಿಗೆ ಮತ್ತೊಮ್ಮೆ ಮೊಗದೊಮ್ಮೆ ನಿರಾಸೆ: ಭಾರಿ ಆಕ್ರೋಶಗೊಂಡ EPS ನಿವೃತ್ತರು ಕಾರು ಡೋರ್‌ಗೆ ಬೈಕ್‌ ಗುದ್ದಿ ಕೆಳಗೆ ಬಿದ್ದ ಮಹಿಳೆ ಮೇಲೆ ಹರಿದ ಬಿಎಂಟಿಸಿ ಬಸ್‌ ನಾಟಿ ಕೋಳಿ ಸಾರಿನ ಜತೆ ರಾಗಿಮುದ್ದೆ ನುಂಗಿದವರಿಗೆ ಗೊತ್ತು ಅದರ ಗಮ್ಮತ್ತು